• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಚುನಾವಣಾ ವ್ಯವಸ್ಥೆ ಬದಲಾಗದಿದ್ದರೆ ಪ್ರಜಾಪ್ರಭುತ್ವ ದುರ್ಬಲವಾಗುತ್ತದೆ : ಸಿದ್ದರಾಮಯ್ಯ ಕಳವಳ

ಪ್ರತಿಧ್ವನಿ by ಪ್ರತಿಧ್ವನಿ
March 30, 2022
in ಕರ್ನಾಟಕ
0
ಮತಾಂತರ ನಿಷೇಧ ಕಾಯ್ದೆ ಕುರಿತು ಕಾಂಗ್ರೆಸ್ ನಿಲುವಿಗೂ ಬಿಜೆಪಿ ನಿಲುವಿಗೂ ಅಜಗಜಾಂತರ ವ್ಯತ್ಯಾಸ : ಸಿದ್ದರಾಮಯ್ಯ ಸ್ಪಷ್ಟನೆ
Share on WhatsAppShare on FacebookShare on Telegram

ಚುನಾವಣಾ ವ್ಯವಸ್ಥೆ ಬದಲಾಗಬೇಕು ಎಂಬುದರಲ್ಲಿ ಎರಡು ಮಾತಿಲ್ಲ. ಇದರ ಸುಧಾರಣೆಯಾಗದೆ ಹೋದರೆ ಪ್ರಜಾಪ್ರಭುತ್ವ ದುರ್ಬಲವಾಗುತ್ತೆ, ಪ್ರಜಾಪ್ರಭುತ್ವ ದುರ್ಬಲವಾದರೆ ಸಮಾಜ, ದೇಶ ದುರ್ಬಲವಾಗುತ್ತದೆ. ಎಪ್ಪತ್ತರ ದಶಕದಿಂದ ಈಚೆಗೆ ಚುನಾವಣಾ ವ್ಯವಸ್ಥೆ ಕೆಡಲು ಆರಂಭವಾಯಿತು ಎಂದು ಮಾನ್ಯ ಸಭಾದ್ಯಕ್ಷರು ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಹೇಳಿದ್ದಾರೆ. ಚುನಾವಣಾ ವ್ಯವಸ್ಥೆ ಒಂದು ಚುನಾವಣೆಯಿಂದ ಮತ್ತೊಂದು ಚುನಾವಣೆಗೆ ಬಲಿಷ್ಠವಾಗುತ್ತಾ ಹೋಗಬೇಕಿತ್ತು, ಆದರೆ ನಮ್ಮಲ್ಲಿ ದುರ್ಬಲವಾಗುತ್ತಾ ಹೋಗುತ್ತಿದೆ ಎಂಬ ಒಟ್ಟು ಅಭಿಪ್ರಾಯ ಸದನದಲ್ಲಿ ವ್ಯಕ್ತವಾಗಿದೆ. ಇದು ಅತ್ಯಂತ ಕಳವಳದ ಸಂಗತಿಯಾಗಿದೆ.

ADVERTISEMENT

ಚುನಾವಣಾ ಸುಧಾರಣೆಗಳ ಬಗ್ಗೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದಿನ ಅಧಿವೇಶನದಲ್ಲಿ ಮಾತನಾಡಿ,  1971 ರಿಂದ ನಾನು ರಾಜಕೀಯದಲ್ಲಿ ಭಾಗವಹಿಸಲು ಆರಂಭಿಸಿದ್ದು. ಆ ಸಂದರ್ಭದಲ್ಲಿ ನಾನು ಕಾನೂನು ಕಾಲೇಜಿನಲ್ಲಿ ಓದುತ್ತಿದ್ದೆ ಮತ್ತು ವಿದ್ಯಾರ್ಥಿ ಸಂಘಟನೆಯ ಮುಖಂಡನಾಗಿದ್ದೆ. ಆಗಿನ ಸಂಸತ್ ಚುನಾವಣೆಯಲ್ಲಿ ಹುಣಸೂರಿನ ಡಾ. ಹೆಚ್.ಎಲ್ ತಿಮ್ಮೇಗೌಡರ ಸಂಸ್ಥಾ ಕಾಂಗ್ರೆಸ್ ನಿಂದ ಲೋಕಸಭೆಗೆ ಸ್ಪರ್ಧಿಸಿದ್ದರು. ನಾನು ಆ ವೇಳೆಗೆ ಸಮಾಜವಾದಿ ಪಕ್ಷದ ಸದಸ್ಯನೂ ಆಗಿದ್ದೆ. ಸಮಾಜವಾದಿ ಪಕ್ಷದ ಅಭ್ಯರ್ಥಿ ಇಲ್ಲದಿರುವುದರಿಂದ ಸಂಸ್ಥಾ ಕಾಂಗ್ರೆಸ್ ಅನ್ನು ಬೆಂಬಲಿಸಿ ಎಂದು ಪ್ರೋ. ನಂಜುಂಡಸ್ವಾಮಿ ಅವರು ನಮಗೆ ಹೇಳಿದ್ದರು. ಹಾಗಾಗಿ ನಾನು ನಮ್ಮೂರು ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಪ್ರಚಾರಕ್ಕೆ ಹೋಗಿದ್ದೆ.

ಎಪ್ಪತ್ತರ ದಶಕದಲ್ಲಿ ಹಳ್ಳಿಗಳಲ್ಲಿ ಒಬ್ಬರು, ಇಬ್ಬರು ಮುಖಂಡರು ಇರುತ್ತಿದ್ದರು. ನಾವು ಅವರ ಬಳಿ ಹೋಗಿ ಹಳ್ಳಿಯ ಜನರ ಮತ ನಮಗೆ ಹಾಕಿಸಿ ಎಂದು ಕೇಳುತ್ತಿದ್ದೆವು. ಆ ಮುಖಂಡ ನಮಗೆ ಒಂದು ಸಲ ಮಾತು ಕೊಟ್ಟರೆ ಅಥವಾ ವೀಳ್ಯದೆಲೆ ನೀಡಿದರೆ ಆಮೇಲೆ ಯಾರೇ ಬಂದು ಆಸೆ ಆಮಿಷ ಒಡ್ಡಿದರೂ ಅವರು ಬದಲಾಗ್ತಾ ಇರಲಿಲ್ಲ.

1972 ರ ಚುನಾವಣೆಯಲ್ಲಿ ರಾಜಶೇಖರ ಮೂರ್ತಿಯವರು ಸ್ಪರ್ಧೆ ಮಾಡಿದ್ದರು. ಆಗಲೂ ಪ್ರಚಾರ ಮಾಡಿದ್ದೆ. ಅಂದಿನ ಚುನಾವಣಾ ವ್ಯವಸ್ಥೆಗೂ ಇಂದಿನ ಚುನಾವಣಾ ವ್ಯವಸ್ಥೆಗೂ ಬಹಳಷ್ಟು ಬದಲಾಗಣೆ ಆಗಿದೆ.

1978 ರಲ್ಲಿ ತಾಲೂಕು ಅಭಿವೃದ್ಧಿ ಮಂಡಳಿ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಿದ್ದೆ. ನಾನು ಮತ್ತು ನನ್ನ ಸ್ನೇಹಿತ ವೈ. ಮಹೇಶ್ ಇಬ್ಬರು ಕರಪತ್ರವನ್ನು ಸಿದ್ಧಪಡಿಸಿಕೊಂಡು, ಒಂದೇ ಒಂದು ಸ್ಕೂಟರ್ ನಲ್ಲಿ ಊರೂರಿಗೆ ಹಂಚಿ ಬಂದಿದ್ದೆವು. ಆಗಿನ ಒಟ್ಟು ಖರ್ಚು 3,500 ರೂಪಾಯಿ.

1983 ರಲ್ಲಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾಗ ಜಾರ್ಜ್ ಫರ್ನಾಂಡೀಸ್ ಅವರು 10,000 ರೂಪಾಯಿ ನನಗೆ ಕೊಟ್ಟಿದ್ದರು, ನಮ್ಮೂರ ಜನ 10,000 ರೂಪಾಯಿ ಸಂಗ್ರಹಿಸಿ ಕೊಟ್ಟಿದ್ದರು. ಹಳ್ಳಿಗಳಿಗೆ ಪ್ರಚಾರಕ್ಕೆ ಹೋದಾಗ ಜನ ದುಡ್ಡು ಕೊಡೋರು. ಆ ಚುನಾವಣೆಯಲ್ಲಿ ಒಟ್ಟು ಖರ್ಚಾದ ಹಣ 63,000 ರೂಪಾಯಿ.

ಚುನಾವಣಾ ಆಯೋಗ 40 ಲಕ್ಷ ರೂಪಾಯಿ ವಿಧಾನಸಭೆ ಚುನಾವಣೆಗೆ,  95 ಲಕ್ಷ ರೂಪಾಯಿ ಲೋಕಸಭಾ ಚುನಾವಣೆಗೆ ಖರ್ಚು ಮಾಡಬೇಕು ಎಂದು ನಿಗದಿ ಮಾಡಿದೆ. ಆದರೆ ಚುನಾವಣಾ ಆಯೋಗಕ್ಕೆ ನೀಡುವುದು ರಾಮನ ಲೆಕ್ಕ, ಇದನ್ನು ಬಿಟ್ಟು ಇನ್ನೊಂದು ಕೃಷ್ಣನ ಲೆಕ್ಕವೂ ಇರುತ್ತೆ. ಇಂದಿನ ಚುನಾವಣಾ ವ್ಯವಸ್ಥೆ ಹಾಳಾಗಲು ನಮ್ಮ ಪಾಲು ಎಷ್ಟಿದೆಯೂ ಅಷ್ಟೇ ಪ್ರಜಾಪ್ರಭುತ್ವದ ಉಳಿದ ಅಂಗಗಳ ಪಾಲೂ ಇದೆ. ಸಮಾಜದ ಎಲ್ಲಾ ಶಿಕ್ಷಿತ, ವಿಚಾರವಂತ, ಪ್ರಗತಿಪರ, ಸಾಮಾಜಿಕ ಕಾಳಜಿ ಇರುವ ಜನರ ಜೊತೆಗೆ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಪತ್ರಿಕಾರಂಗ ಒಟ್ಟಾಗಿ ಕೆಲಸ ಮಾಡಿದರೆ ಮಾತ್ರ ಸುಧಾರಣೆ ಸಾಧ್ಯ.

ಅಮೇರಿಕಾದ ನ್ಯಾಯಮೂರ್ತಿ ಲೂಯಿಸ್ ಬ್ರಾಂಡೆಸ್ ಅವರು ” ನಾವೆಲ್ಲ ಪ್ರಜಾಪ್ರಭುತ್ವ ದೇಶದಲ್ಲಿದ್ದೇವೆ, ಈ ದೇಶದಲ್ಲಿ ಅಪಾರ ಸಂಪತ್ತು ಗಳಿಸಿರುವ ಜನರಿದ್ದಾರೆ, ಸಾಮಾನ್ಯ ಜನರೂ ಇದ್ದೇವೆ ಆದರೆ ಇಲ್ಲಿ ಸಿರಿವಂತರು ಮತ್ತು ಪ್ರಭುತ್ವ ಒಟ್ಟಿಗೆ ಸೇರಬಾರದು” ಎಂದು ಹೇಳಿದ್ದಾರೆ. ಇದೇ ರೀತಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅಧಿಕಾರ ಉಳ್ಳವರ ಕೈಯಲ್ಲಿ ಮಾತ್ರವೇ ಇರಬಾರದು ಎಂದು ಹೇಳಿದ್ದರು.

ಇಂದು ರಾಜಕೀಯ ಪಕ್ಷಗಳು ಮತ್ತು ಕಾರ್ಪೊರೇಟ್ ಬಾಡಿಗಳ ಮೈತ್ರಿ ಆರಂಭವಾಗಿದೆ. ಇದರಿಂದ ಕಾರ್ಪೊರೇಟ್ ಬಾಡಿಗಳು ಸರ್ಕಾರವನ್ನು ನಿಯಂತ್ರಿಸುವಷ್ಟು ಪ್ರಬಲವಾಗಿವೆ. 2013 ರಲ್ಲಿ ದೇಶದ ಕೆಲವೇ ಕೆಲವು 142 ಕಾರ್ಪೊರೇಟ್ ಸಂಸ್ಥೆಗಳ‌ ಆಸ್ತಿ 23 ಲಕ್ಷ ಕೋಟಿ ರೂಪಾಯಿ ಇತ್ತು, ಈಗದು 54 ಲಕ್ಷ ಕೋಟಿಗೆ ಹೆಚ್ಚಾಗಿದೆ. ಇದೇ ಕಾರಣಕ್ಕೆ ಕಾರ್ಪೊರೇಟ್ ಕಂಪನಿಗಳೊಂದಿಗೆ ರಾಜಕೀಯ ಪಕ್ಷಗಳು ಮೈತ್ರಿ ಮಾಡಿಕೊಳ್ಳಬಾರದು ಎಂದು ಹೇಳಿದ್ದು.

ದೇಶದಲ್ಲಿ ಸುಮಾರು 19 ಲಕ್ಷ ಇವಿಎಂ ಗಳು ನಾಪತ್ತೆಯಾಗಿವೆ ಎಂಬ ವರದಿಯನ್ನು ಹೆಚ್.ಕೆ ಪಾಟೀಲರು ಓದಿ ಹೇಳಿದರು. ಇದಕ್ಕೆ ಹೊಣೆ ಯಾರು? ಇದೇ ಕಾರಣಕ್ಕೆ ಜನರಿಗೆ ಇವಿಎಂ ಗಳ ಮೇಲೆ ಭರವಸೆ ಕಡಿಮೆಯಾಗುತ್ತಿದೆ.

ನನ್ನ ಬಳಿ ಒಬ್ಬ ತಂತ್ರಜ್ಞ ಬಂದು ಇವಿಎಂ ಗಳನ್ನು ಹೇಗೆ ದುರ್ಬಳಕೆ ಮಾಡಲು ಸಾಧ್ಯ ಎಂದು ಕಣ್ಣೆದುರೇ ಡೆಮೋ ತೋರಿಸಿದ. ತಂತ್ರಜ್ಞಾನದಲ್ಲಿ ನನಗೆ ಹೆಚ್ಚು ಮಾಹಿತಿ ಇಲ್ಲದಿರುವುದರಿಂದ ಸರಿ ಬಿಡಪ್ಪಾ ಅಂತ ಹೇಳಿ ಕಳುಹಿಸಿದೆ. ಆದರೆ ಯಂತ್ರಗಳನ್ನು ದುರ್ಬಳಕೆ ಮಾಡಿಕೊಳ್ಳಲು ಒಂದು ಅವಕಾಶ ಇದ್ದೇ ಇರುತ್ತದೆ ಎಂಬುದು ಸತ್ಯ. ಅದಕ್ಕೆ ಜರ್ಮನಿಯಂತಾ ಮುಂದುವರಿದ ರಾಷ್ಟ್ರ ಕೂಡ ಇವಿಎಂ ಬಿಟ್ಟು ಬ್ಯಾಲೆಟ್ ಪೇಪರ್ ಗೆ ಮರಳಿದೆ.

ಗ್ರಾಮ ಪಂಚಾಯತಿ ಚುನಾವಣೆಗಳು ಪಕ್ಷದ ಚಿಹ್ನೆಯ ಮೇಲೆ ನಡೆಯಲ್ಲ ಅಂದಮೇಲೆ ಚುನಾವಣಾ ನೀತಿ ಸಂಹಿತೆ ಜಾರಿ ಮಾಡುವ ಅಗತ್ಯ ಏನಿದೆ? ಚುನಾವಣೆಯಲ್ಲಿ ವಿಳಂಬವಾದಷ್ಟೂ ಭ್ರಷ್ಟಾಚಾರ ಹೆಚ್ಚಾಗುತ್ತದೆ ಎಂಬುದು ನನ್ನ ಅನಿಸಿಕೆ.

ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯೋಗದ ಆದ್ಯಕ್ಷರ ನೇಮಕವನ್ನು ಸರ್ಕಾರದ ಶಿಫಾರಸಿನ ಮೇಲೆ ರಾಜ್ಯಪಾಲರು, ರಾಷ್ಟ್ರಪತಿಗಳು ಮಾಡುವ ಬದಲು ಪ್ರಧಾನಿಗಳು, ವಿರೋಧ ಪಕ್ಷದ ನಾಯಕರು, ಮೇಲ್ಮನೆಯ ವಿರೋಧ ಪಕ್ಷದ ನಾಯಕ, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳನ್ನು ಒಳಗೊಂಡ ಒಂದು ಮಂಡಳಿ ರಚನೆಯಾಗಬೇಕು. ಅವರ ಮೂಲಕ ಅಧ್ಯಕ್ಷರು ಮತ್ತು ಆಯುಕ್ತರ ನೇಮಕವಾಗಬೇಕು. ಸುಧಾರಣೆಗಳು ಹೀಗೆ ಆರಂಭವಾದಾಗ ಮಾತ್ರ ಬದಲಾವಣೆ ಸಾಧ್ಯ.

1990 ರಲ್ಲಿ ವಿ.ಪಿ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ದಿನೇಶ್ ಗೋಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಯಾಗಿತ್ತು, ಅದರಲ್ಲಿ ಅಡ್ವಾಣಿ ಅವರು ಇದ್ದರು. ಆ ಸಮಿತಿಯ 107 ಶಿಪಾರಸುಗಳಲ್ಲಿ ಹಲವು ಜಾರಿಯಾಗಲೇ ಇಲ್ಲ. 1993 ರಲ್ಲಿ ವೋರಾ ಕಮಿಟಿ ರಚನೆಯಾಯಿತು. ಅದೂ ಶಿಫಾರಸು ಮಾಡಿತ್ತು.

1885 ರಲ್ಲಿ ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಪಕ್ಷಾಂತರ ನಿಷೇಧ ಕಾನೂನು ಜಾರಿಗೆ ತಂದರು. ಆದರೆ ಈಗಲೂ ಪಕ್ಷಾಂತರ ನಡೆಯುತ್ತಿದೆ. ಒಂದು ಪಕ್ಷದಿಂದ ಗೆದ್ದ ನಂತರ ಮಧ್ಯದಲ್ಲಿ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ ವ್ಯಕ್ತಿ ಮುಂದಿನ ಹತ್ತು ವರ್ಷಗಳ ವರೆಗೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡದಂತ ನಿಯಮ ರೂಪಿಸಿ, ಜಾರಿ ಮಾಡಬೇಕು. ಆಗ ಪ್ರಜಾಪ್ರಭುತ್ವಕ್ಕಂಟಿದ ಪಕ್ಷಾಂತರ ಎಂಬ ರೋಗ ಗುಣವಾಗುತ್ತದೆ. ಈ ಕೆಲಸವನ್ನು ಕೇಂದ್ರ ಸರ್ಕಾರ ಏಕೆ ಮಾಡಬಾರದು?

ಒಂದು ದೇಶ, ಒಂದು ಚುನಾವಣೆ ಎಂಬುದು ಭಾರತದಂತ ಒಕ್ಕೂಟ ವ್ಯವಸ್ಥೆಯ ದೇಶದಲ್ಲಿ ಪ್ರಾಯೋಗಿಕವಾಗಿ ಅಸಾಧ್ಯವಾದ ಮಾತು. ಇದಕ್ಕೆ ನೂರಾರು ಕಾರಣಗಳನ್ನು ಕೊಡಬಹುದು.

ಸ್ವಾತಂತ್ರ್ಯ ಬಂದಾಗ ದೇಶದ ಸಾಕ್ಷರತೆ ಪ್ರಮಾಣ 16%, ಈಗ ದೇಶದ ಸಾಕ್ಷರತೆ ಪ್ರಮಾಣ 82%. ಶೈಕ್ಷಣಿಕ ಕ್ಷೇತ್ರದಲ್ಲಿ ಇಷ್ಟು ಬದಲಾವಣೆ ಆದರೂ ಇಂದಿನ ಚುನಾವಣೆಯನ್ನು ಜಾತಿ, ಹಣ ಬಲ, ತೋಳ್ಬಲ ಮತ್ತು ಮಾಫಿಯಾಗಳು ನಿಯಂತ್ರಿಸುತ್ತಿವೆ.

ಎಲ್ಲಾ ರಾಜಕೀಯ ಪಕ್ಷಗಳು ಮತ್ತು ನಾಯಕರು ಆತ್ಮಾವಲೋಕನ ಮಾಡಿಕೊಂಡು, ಸ್ವಯಂ ಶುದ್ದೀಕರಣ ಮಾಡದೆ ಹೋದರೆ ಪ್ರಜಾಪ್ರಭುತ್ವ ವ್ಯವಸ್ಥೆಯ ಉಳಿವು ಕಷ್ಟವಾಗುತ್ತದೆ. ಪ್ರಾಮಾಣಿಕ ಜನಪರ ಕಾಳಜಿ ಇರುವ, ಆರ್ಥಿಕವಾಗಿ ದುರ್ಬಲರಾದ ನಿಷ್ಠಾವಂತ ಜನರು ರಾಜಕೀಯದಿಂದ ದೂರ ಹೋಗದಂತೆ ತಡೆಯಬೇಕು ಎಂಬ ಕಾರಣಕ್ಕೆ ರಾಜಕೀಯ ವ್ಯವಸ್ಥೆಯ ಬದಲಾವಣೆಯನ್ನು ಮಾಡಲೇಬೇಕಾಗಿದೆ ಎಂದು ಹೇಳಿದ್ದಾರೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಚುನಾವಣಾ ವ್ಯವಸ್ಥೆಚುನಾವಣಾ ವ್ಯವಸ್ಥೆ ಬದಲಾಗದಿದ್ದರೆ ಪ್ರಜಾಪ್ರಭುತ್ವ ದುರ್ಬಲವಾಗುತ್ತೆ: ಸಿದ್ದರಾಮಯ್ಯನರೇಂದ್ರ ಮೋದಿಪ್ರಜಾಪ್ರಭುತ್ವಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಚಿವ ಈಶ್ವರಪ್ಪರಿಗೆ ಸಂಕಷ್ಟ : ದ್ವೇಷ ಭಾಷಣ ಮಾಡಿದ್ದಕ್ಕೆ FIR ದಾಖಲಿಸಲು ಕೋರ್ಟ್‌ ಸೂಚನೆ!

Next Post

ಸಮಾಜದ ಶಾಂತಿ ಕದಡುವ ವಿಷಯಳನ್ನು ಮಾಧ್ಯಮಗಳು ಪ್ರಸಾರ ಮಾಡುತ್ತಿದೆ; ರಾಜ್ಯ ಹಾಳಾದರೆ ಇವರೇ ಕಾರಣ! – HDK

Related Posts

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ
ಕರ್ನಾಟಕ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

by ಪ್ರತಿಧ್ವನಿ
February 1, 2026
0

ಬೆಳಗಾವಿ : ರಾಜಕೀಯ ಒತ್ತಡ, ಬೆದರಿಕೆಗಳು, ಗುಂಪು ಗಲಾಟೆಯ ನಡುವೆಯೂ ಅಕ್ರಮ ಗಣಿಗಾರಿಕೆಗೆ ತಲೆಬಾಗದೆ, ಸ್ಥಳದಲ್ಲೇ ಕಠಿಣ ಕ್ರಮ ಕೈಗೊಂಡ ಮಹಿಳಾ ಭೂ ವಿಜ್ಞಾನಿ ಬಿಂದನ್ ಪಾಟೀಲ...

Read moreDetails
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Next Post
ಮಧ್ಯ ಸಂಗ್ರಹಿಸಿದ ಆರೋಪದ ಮೇಲೆ ರಾಮನಗರದ ರೈತ ಅರೆಸ್ಟ್ : SP ವಿರುದ್ದ ಹೆಚ್.ಡಿ.ಕೆ ಕಿಡಿ

ಸಮಾಜದ ಶಾಂತಿ ಕದಡುವ ವಿಷಯಳನ್ನು ಮಾಧ್ಯಮಗಳು ಪ್ರಸಾರ ಮಾಡುತ್ತಿದೆ; ರಾಜ್ಯ ಹಾಳಾದರೆ ಇವರೇ ಕಾರಣ! - HDK

Please login to join discussion

Recent News

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?
Top Story

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada