ಮೈಸೂರು: ವಿಮಾನ ಪ್ರಯಾಣದ ಸಂದರ್ಭದಲ್ಲಿ ವಿಮಾನಗಳು ತುರ್ತು ಭೂ ಸ್ಪರ್ಶಗೊಂಡು, ಆಗಬಹುದಾದ ಸಂಭವನೀಯ ಅನಾಹುತಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಮೈಸೂರಿನಲ್ಲಿ ಪ್ರಯಾಣಿಕರ ರಕ್ಷಣೆಯ ಅಣುಕು ಪ್ರದರ್ಶನ ನಡೆಸಲಾಯಿತು
ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಬುಧವಾರ ನಡೆದ ಅಣಕು ಪ್ರದರ್ಶನದಲ್ಲಿ ವಿಮಾನ ಅಪಘಾತ ಸಂಭವಿಸಿದ ವೇಳೆಯಲ್ಲಿ ವಿಮಾನ ಸಿಬ್ಬಂದಿ ಒಗ್ಗೂಡಿ ಕಾರ್ಯನಿರ್ವಹಿಸಿ, ಪ್ರಯಾಣಿಕರ ಜೀವ ರಕ್ಷಣೆಗೆ ಮುಂದಾಗುವ ಕಾರ್ಯಕ್ಷಮತೆ ಕುರಿತು ಅಣುಕು ಪ್ರದರ್ಶನ ನಡೆಸಲಾಯಿತು.
ವಿಮಾನ ನಿಲ್ದಾಣದ ಆವರಣದಲ್ಲಿ ವಿಮಾನ ನಿಲ್ದಾಣ ರಕ್ಷಣಾ ಪಡೆ, ಅಗ್ನಿಶಾಮಕ ತಂಡ, ಪೊಲೀಸ್ ರಕ್ಷಣಾ ತಂಡ, ವೈದ್ಯಕೀಯ ತಂಡ ಸೇರಿದಂತೆ ವಿವಿಧ ರಕ್ಷಣಾ ತಂಡಗಳು ಪ್ರದರ್ಶನದಲ್ಲಿ ಪಾಲ್ಗೊಂಡು ಪ್ರಯಾಣಿಕರ ಜೀವಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿ ಅಣುಕು ಪ್ರದರ್ಶನ ನಡೆಸಿದರು.