
ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರು ಇಂದು ಕೆ.ಆರ್.ಎಸ್ ಬೃಂದಾವನದಲ್ಲಿ ಸೆಪ್ಟೆಂಬರ್ 26 ರಿಂದ ನಡೆಯಲಿರುವ ಸಾಂಕೇತಿಕ ಕಾವೇರಿ ಆರತಿ ಕುರಿತಂತೆ ಸ್ಥಳ ಪರಿಶೀಲನೆ ನಡೆಸಿದರು.
ವೇದಿಕೆ, ಕಾವೇರಿ ಆರತಿ ನಡೆಯುವ ಸ್ಥಳ ಮತ್ತು ವೀಕ್ಷಕರಿಗೆ ಆಸನ ವ್ಯವಸ್ಥೆ ಕುರಿತಂತೆ ಪರಿಶೀಲನೆ ನಡೆಸಿದ ಉಪ ಮುಖ್ಯ ಮಂತ್ರಿಗಳು ಅಧಿಕಾರಿಗಳಿಗೆ ಕಾರ್ಯಕ್ರಮ ಯಾವುದೇ ಲೋಪವಿಲ್ಲದೆ ನಡೆಸಲು ಸೂಚನೆಗಳನ್ನು ನೀಡಿದರು.

ಬೆಂಗಳೂರು ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಆಯುಕ್ತರಾದ ರಾಮ್ ಪ್ರಸಾದ್ ಮನೋಹರ್ ಅವರು ಕಾವೇರಿ ಆರತಿಯ ರೂಪುರೇಷು ಕುರಿತು ವಿವರಿಸಿದರು.
ಉಪಮುಖ್ಯಮಂತ್ರಿಗಳು ಕಾವೇರಿ ಆರತಿ ಪೂರ್ವ ತಾಲೀಮು ಕುರಿತು ವೀಕ್ಷಣೆ ನಡೆಸಿದರು

ಪರಿಶೀಲನೆ ವೇಳೆ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಚೆಸ್ಕಾಂ ಅಧ್ಯಕ್ಷರಾದ ರಮೇಶ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ, ಮಂಡ್ಯ ವಿಧಾನ ಸಭಾ ಶಾಸಕ ಪಿ. ರವಿಕುಮಾರ್, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಆರ್ ನಂದಿನಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ರಾಮ್ ಪ್ರಸಾದ್ ಮನೋಹರ್

