• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಿಫಾ ವೈರಸ್‌ : ಗೋವಾದಿಂದ ಮಂಗಳೂರಿಗೆ ಬಂದ ವ್ಯಕ್ತಿಯಲ್ಲಿ ನಿಫಾ ಸೋಂಕಿನ ಗುಣಲಕ್ಷಣಗಳು ಪತ್ತೆ !

ಕರ್ಣ by ಕರ್ಣ
September 15, 2021
in ಕರ್ನಾಟಕ
0
ಕೇರಳದಲ್ಲಿ ನಿಫಾ ಸೋಂಕು ಹಿನ್ನೆಲೆ ರಾಜ್ಯ ಸರ್ಕಾರದಿಂದ ಸೋಂಕಿನ ಗುಣ ಲಕ್ಷಣಗಳ ಪಟ್ಟಿ ಬಿಡುಗಡೆ!
Share on WhatsAppShare on FacebookShare on Telegram

ನೆರೆಯ ರಾಜ್ಯ ಕೇರಳದಲ್ಲಿ ಹೆಚ್ಚಾಗುತ್ತಿರುವ ನಿಫಾ ವೈರಸ್ ಸೋಂಕು ಕರ್ನಾಟಕದಲ್ಲೂ ಆತಂಕ ಉಂಟುಮಾಡಿದೆ.  ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ 12 ವರ್ಷದ ಬಾಲಕ ನಿಫಾ ವೈರಸ್ ಗೆ ಬಲಿಯಾದ ಒಂದು ವಾರದ ನಂತರ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗೆ ಸೋಂಕು ಇರುವುದಾಗಿ ಶಂಕಿಸಲಾಗಿದೆ ಮತ್ತು ಆತನ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ.

ADVERTISEMENT

ಆರೋಗ್ಯ ಇಲಾಖೆ ಆಯುಕ್ತ ಕೆ.ವಿ. ತ್ರಿಲೋಕ್ ಚಂದ್ರ ಅವರ ಪ್ರಕಾರ, ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುವ ವ್ಯಕ್ತಿ ಸ್ಯಾಂಪಲ್ ಅನ್ನು ಪುಣೆಯಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯಲ್ಲಿ (NIV) ಪರೀಕ್ಷೆಗೆ ಕಳುಹಿಸುವವರೆಗೂ ಅವರಲ್ಲಿ ಯಾವುದೇ ತೀವ್ರ ಲಕ್ಷಣಗಳು ಕಂಡು ಬಂದಿರಲಿಲ್ಲ ಎನ್ನಲಾಗಿದೆ. ನಾವು ಜಾಗರೂಕರಾಗಿರಬೇಕು ಆದರೆ ಭಯಪಡುವ ಅಗತ್ಯವಿಲ್ಲ. ವ್ಯಕ್ತಿಯು ಇಲ್ಲಿಯವರೆಗೆ ಯಾವುದೇ ತೀವ್ರವಾದ ರೋಗಲಕ್ಷಣಗಳನ್ನು ವರದಿ ಮಾಡಿಲ್ಲ ಎಂದು ಅವರು ಹೇಳಿದರು.

ದಕ್ಷಿಣ ಕನ್ನಡ ಉಪ ಆಯುಕ್ತ ಡಾ.ಕೆ.ವಿ.ರಾಜೇಂದ್ರ ಅವರು ಮಂಗಳವಾರ (ಸೆಪ್ಟೆಂಬರ್ 14) ಸುದ್ದಿಗಾರರೊಂದಿಗೆ ಮಾತನಾಡಿ, ಇದು ಕೇವಲ ಶಂಕಿತ ಪ್ರಕರಣ, ಆದರೆ ನಿರ್ಲಕ್ಷಿಸಲಾಗದು ಎಂದು ತಿಳಿಸಿದ್ದಾರೆ. ಶಂಕಿತ ವ್ಯಕ್ತಿಯು ಕಾರವಾರ ಮೂಲದವರಾಗಿದ್ದು ಅವರು ಗೋವಾದ ಆರ್‌ಟಿ-ಪಿಸಿಆರ್ ಪರೀಕ್ಷಾ ಕಿಟ್ ತಯಾರಿಕಾ ಘಟಕದಲ್ಲಿ ಕೆಲಸ ಮಾಡುತ್ತಿದ್ದಾರೆ. ಆ ವ್ಯಕ್ತಿ ಸೆಪ್ಟೆಂಬರ್ 8 ರಂದು ಮಳೆಯಲ್ಲಿ ತನ್ನ ದ್ವಿಚಕ್ರ ವಾಹನದಲ್ಲಿ ಗೋವಾದಿಂದ ತನ್ನ ಊರಾದ ಕಾರವಾರಕ್ಕೆ ಬಂದಿದ್ದರು. ಈ ವೇಳೆ ಅವರು ಕೇವಲ ಜ್ವರ ಮತ್ತು ತಲೆನೋವಿನಿಂದ ಬಳಲುತ್ತಿದ್ದರು. ಇದಾದ ಬಳಿಕ ಅವರಲ್ಲಿ ನಿಫಾ ಸೋಂಕಿನ ಮಾದರಿಯಲ್ಲಿ ಕೆಲ ಲಕ್ಷಣಗಳು ಗೋಚರಿಸಿದೆ. ಹೀಗಾಗಿ ರಾಜ್ಯದಲ್ಲೂ ನಿಫಾ ಆತಂಕ ಮನೆ ಮಾಡಿದೆ. ಸದ್ಯ ಈ ಶಂಕಿತ ನಿಫಾ ಸೋಂಕಿತನ ಸ್ಯಾಂಪಲ್‌ ಅನ್ನು ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಪರೀಕ್ಷೆಗೆ ಕಳುಹಿಸಿ ವರದಿಗಾಗಿ ಕಾಯಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಉಪ ಆಯುಕ್ತ ಡಾ.ಕೆ.ವಿ.ರಾಜೇಂದ್ರ ಮಾಹಿತಿ ನೀಡಿದ್ದಾರೆ.

ಆದಾಗ್ಯೂ, ಮುನ್ನೆಚ್ಚರಿಕೆಯ ಕ್ರಮವಾಗಿ, ಈ ಶಂಕಿತ ಸೋಂಕಿತನ ಆದ್ಯ ಸಂಪರ್ಕಿತರ ಪಟ್ಟಿಯಲ್ಲಿ ಆತನ ತಂದೆ ತಾಯಿಯನ್ನು ಗುರುತಿಸಿದ್ದು, ಇವರ ಸ್ಯಾಂಪಲ್‌ಗಳನ್ನು ಎನ್‌ಐವಿ ಗೆ ರವಾನಿಸಲಾಗಿದೆ. ಈ ಸ್ಯಾಂಪಲ್‌ಗಳ ವರದಿ ಬರುವವರೆಗೆ ಇವರನ್ನು ಕ್ವಾರಂಟೈನ್‌ ಮಾಡುವಂತೆ, ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ವಾಸ್ತವವಾಗಿ, ಕೇರಳದಲ್ಲಿ ನಿಫಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೇರಳದಿಂದ ಬರುವವರ ಮೇಲೆ ಹದ್ದಿನ ಕಣ್ಣಿಡಲಾಗುತ್ತಿದೆ. ಅದ್ಯಾವಾಗ ಕೇರಳದಲ್ಲಿ ನಿಫಾ ಸೋಂಕು ದೃಢವಾಯಿತೋ ಆಗಲೇ ರಾಜ್ಯ ಸರ್ಕಾರ ಕೇರಳದ ಗಡಿ ಜಿಲ್ಲೆಗಳಲ್ಲಿ ವಿಶೇಷ ಕಣ್ಗಾವಲು ರೂಪಿಸಲು ಸೂಚನೆ ನೀಡಿತು. ಅದ್ರಲ್ಲೂ ಮುಖ್ಯವಾಗಿ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾವಹಿಸಲು ಸೂಚಿಸಲಾಗಿತ್ತು

Tags: Covid 19Dakshina Kannada Districtkarnataka-kerala borderKodagu Districtnipha virusQuarantineQuarantine CentreUdupi Districtಕೋವಿಡ್-19
Previous Post

ತರಾತುರಿಯಲ್ಲಿ ದೇವಸ್ಥಾನಗಳನ್ನು ನೆಲಸಮ ಮಾಡಬೇಡಿ – ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

Next Post

ಓವೈಸಿ ಮತ್ತು ಬಿಜೆಪಿ ಒಂದೇ ತಂಡ: ರೈತ ನಾಯಕ ರಾಕೇಶ್ ಟಿಕಾಯತ್ ಆರೋಪ

Related Posts

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ
Top Story

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
May 16, 2026
0

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ ಪ್ರಾರಂಭಿಸುವ ಬಗ್ಗೆ ಮತ್ತು...

Read moreDetails
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
Next Post
ರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿರುದ್ಧ ಬಂಧನ ವಾರೆಂಟ್!

ಓವೈಸಿ ಮತ್ತು ಬಿಜೆಪಿ ಒಂದೇ ತಂಡ: ರೈತ ನಾಯಕ ರಾಕೇಶ್ ಟಿಕಾಯತ್ ಆರೋಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada