• Home
  • About Us
  • ಕರ್ನಾಟಕ
Thursday, January 8, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನಿಫಾ ವೈರಸ್‌ : ಗೋವಾದಿಂದ ಮಂಗಳೂರಿಗೆ ಬಂದ ವ್ಯಕ್ತಿಯಲ್ಲಿ ನಿಫಾ ಸೋಂಕಿನ ಗುಣಲಕ್ಷಣಗಳು ಪತ್ತೆ !

ಕರ್ಣ by ಕರ್ಣ
September 15, 2021
in ಕರ್ನಾಟಕ
0
ಕೇರಳದಲ್ಲಿ ನಿಫಾ ಸೋಂಕು ಹಿನ್ನೆಲೆ ರಾಜ್ಯ ಸರ್ಕಾರದಿಂದ ಸೋಂಕಿನ ಗುಣ ಲಕ್ಷಣಗಳ ಪಟ್ಟಿ ಬಿಡುಗಡೆ!
Share on WhatsAppShare on FacebookShare on Telegram

ನೆರೆಯ ರಾಜ್ಯ ಕೇರಳದಲ್ಲಿ ಹೆಚ್ಚಾಗುತ್ತಿರುವ ನಿಫಾ ವೈರಸ್ ಸೋಂಕು ಕರ್ನಾಟಕದಲ್ಲೂ ಆತಂಕ ಉಂಟುಮಾಡಿದೆ.  ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ 12 ವರ್ಷದ ಬಾಲಕ ನಿಫಾ ವೈರಸ್ ಗೆ ಬಲಿಯಾದ ಒಂದು ವಾರದ ನಂತರ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗೆ ಸೋಂಕು ಇರುವುದಾಗಿ ಶಂಕಿಸಲಾಗಿದೆ ಮತ್ತು ಆತನ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ.

ADVERTISEMENT

ಆರೋಗ್ಯ ಇಲಾಖೆ ಆಯುಕ್ತ ಕೆ.ವಿ. ತ್ರಿಲೋಕ್ ಚಂದ್ರ ಅವರ ಪ್ರಕಾರ, ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುವ ವ್ಯಕ್ತಿ ಸ್ಯಾಂಪಲ್ ಅನ್ನು ಪುಣೆಯಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯಲ್ಲಿ (NIV) ಪರೀಕ್ಷೆಗೆ ಕಳುಹಿಸುವವರೆಗೂ ಅವರಲ್ಲಿ ಯಾವುದೇ ತೀವ್ರ ಲಕ್ಷಣಗಳು ಕಂಡು ಬಂದಿರಲಿಲ್ಲ ಎನ್ನಲಾಗಿದೆ. ನಾವು ಜಾಗರೂಕರಾಗಿರಬೇಕು ಆದರೆ ಭಯಪಡುವ ಅಗತ್ಯವಿಲ್ಲ. ವ್ಯಕ್ತಿಯು ಇಲ್ಲಿಯವರೆಗೆ ಯಾವುದೇ ತೀವ್ರವಾದ ರೋಗಲಕ್ಷಣಗಳನ್ನು ವರದಿ ಮಾಡಿಲ್ಲ ಎಂದು ಅವರು ಹೇಳಿದರು.

ದಕ್ಷಿಣ ಕನ್ನಡ ಉಪ ಆಯುಕ್ತ ಡಾ.ಕೆ.ವಿ.ರಾಜೇಂದ್ರ ಅವರು ಮಂಗಳವಾರ (ಸೆಪ್ಟೆಂಬರ್ 14) ಸುದ್ದಿಗಾರರೊಂದಿಗೆ ಮಾತನಾಡಿ, ಇದು ಕೇವಲ ಶಂಕಿತ ಪ್ರಕರಣ, ಆದರೆ ನಿರ್ಲಕ್ಷಿಸಲಾಗದು ಎಂದು ತಿಳಿಸಿದ್ದಾರೆ. ಶಂಕಿತ ವ್ಯಕ್ತಿಯು ಕಾರವಾರ ಮೂಲದವರಾಗಿದ್ದು ಅವರು ಗೋವಾದ ಆರ್‌ಟಿ-ಪಿಸಿಆರ್ ಪರೀಕ್ಷಾ ಕಿಟ್ ತಯಾರಿಕಾ ಘಟಕದಲ್ಲಿ ಕೆಲಸ ಮಾಡುತ್ತಿದ್ದಾರೆ. ಆ ವ್ಯಕ್ತಿ ಸೆಪ್ಟೆಂಬರ್ 8 ರಂದು ಮಳೆಯಲ್ಲಿ ತನ್ನ ದ್ವಿಚಕ್ರ ವಾಹನದಲ್ಲಿ ಗೋವಾದಿಂದ ತನ್ನ ಊರಾದ ಕಾರವಾರಕ್ಕೆ ಬಂದಿದ್ದರು. ಈ ವೇಳೆ ಅವರು ಕೇವಲ ಜ್ವರ ಮತ್ತು ತಲೆನೋವಿನಿಂದ ಬಳಲುತ್ತಿದ್ದರು. ಇದಾದ ಬಳಿಕ ಅವರಲ್ಲಿ ನಿಫಾ ಸೋಂಕಿನ ಮಾದರಿಯಲ್ಲಿ ಕೆಲ ಲಕ್ಷಣಗಳು ಗೋಚರಿಸಿದೆ. ಹೀಗಾಗಿ ರಾಜ್ಯದಲ್ಲೂ ನಿಫಾ ಆತಂಕ ಮನೆ ಮಾಡಿದೆ. ಸದ್ಯ ಈ ಶಂಕಿತ ನಿಫಾ ಸೋಂಕಿತನ ಸ್ಯಾಂಪಲ್‌ ಅನ್ನು ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಪರೀಕ್ಷೆಗೆ ಕಳುಹಿಸಿ ವರದಿಗಾಗಿ ಕಾಯಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಉಪ ಆಯುಕ್ತ ಡಾ.ಕೆ.ವಿ.ರಾಜೇಂದ್ರ ಮಾಹಿತಿ ನೀಡಿದ್ದಾರೆ.

ಆದಾಗ್ಯೂ, ಮುನ್ನೆಚ್ಚರಿಕೆಯ ಕ್ರಮವಾಗಿ, ಈ ಶಂಕಿತ ಸೋಂಕಿತನ ಆದ್ಯ ಸಂಪರ್ಕಿತರ ಪಟ್ಟಿಯಲ್ಲಿ ಆತನ ತಂದೆ ತಾಯಿಯನ್ನು ಗುರುತಿಸಿದ್ದು, ಇವರ ಸ್ಯಾಂಪಲ್‌ಗಳನ್ನು ಎನ್‌ಐವಿ ಗೆ ರವಾನಿಸಲಾಗಿದೆ. ಈ ಸ್ಯಾಂಪಲ್‌ಗಳ ವರದಿ ಬರುವವರೆಗೆ ಇವರನ್ನು ಕ್ವಾರಂಟೈನ್‌ ಮಾಡುವಂತೆ, ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ವಾಸ್ತವವಾಗಿ, ಕೇರಳದಲ್ಲಿ ನಿಫಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೇರಳದಿಂದ ಬರುವವರ ಮೇಲೆ ಹದ್ದಿನ ಕಣ್ಣಿಡಲಾಗುತ್ತಿದೆ. ಅದ್ಯಾವಾಗ ಕೇರಳದಲ್ಲಿ ನಿಫಾ ಸೋಂಕು ದೃಢವಾಯಿತೋ ಆಗಲೇ ರಾಜ್ಯ ಸರ್ಕಾರ ಕೇರಳದ ಗಡಿ ಜಿಲ್ಲೆಗಳಲ್ಲಿ ವಿಶೇಷ ಕಣ್ಗಾವಲು ರೂಪಿಸಲು ಸೂಚನೆ ನೀಡಿತು. ಅದ್ರಲ್ಲೂ ಮುಖ್ಯವಾಗಿ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾವಹಿಸಲು ಸೂಚಿಸಲಾಗಿತ್ತು

Tags: Covid 19Dakshina Kannada Districtkarnataka-kerala borderKodagu Districtnipha virusQuarantineQuarantine CentreUdupi Districtಕೋವಿಡ್-19
Previous Post

ತರಾತುರಿಯಲ್ಲಿ ದೇವಸ್ಥಾನಗಳನ್ನು ನೆಲಸಮ ಮಾಡಬೇಡಿ – ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

Next Post

ಓವೈಸಿ ಮತ್ತು ಬಿಜೆಪಿ ಒಂದೇ ತಂಡ: ರೈತ ನಾಯಕ ರಾಕೇಶ್ ಟಿಕಾಯತ್ ಆರೋಪ

Related Posts

KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!
Top Story

KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!

by ಪ್ರತಿಧ್ವನಿ
January 8, 2026
0

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ.ಅನ್ನು ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ...

Read moreDetails
ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

January 8, 2026
Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌

Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌

January 8, 2026
ಹುಬ್ಬಳ್ಳಿ ಮಹಿಳೆ ವಿವಸ್ತ್ರ: ರಾಷ್ಟ್ರೀಯ ಮಹಿಳಾ ಆಯೋಗದಿಂದ ಸ್ವ ಪ್ರೇರಿತ ಕೇಸ್

ಹುಬ್ಬಳ್ಳಿ ಮಹಿಳೆ ವಿವಸ್ತ್ರ: ರಾಷ್ಟ್ರೀಯ ಮಹಿಳಾ ಆಯೋಗದಿಂದ ಸ್ವ ಪ್ರೇರಿತ ಕೇಸ್

January 8, 2026
ಬಹುನಿರೀಕ್ಷಿತ ಚಿತ್ರ ‘ರಾಜಾ ಸಾಬ್’ ಚಿತ್ರದ  ವಿತರಣಾ ಹಕ್ಕನ್ನು ಪಡೆದುಕೊಂಡ ಹೊಂಬಾಳೆ ಫಿಲಂಸ್ ..

ಬಹುನಿರೀಕ್ಷಿತ ಚಿತ್ರ ‘ರಾಜಾ ಸಾಬ್’ ಚಿತ್ರದ ವಿತರಣಾ ಹಕ್ಕನ್ನು ಪಡೆದುಕೊಂಡ ಹೊಂಬಾಳೆ ಫಿಲಂಸ್ ..

January 8, 2026
Next Post
ರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿರುದ್ಧ ಬಂಧನ ವಾರೆಂಟ್!

ಓವೈಸಿ ಮತ್ತು ಬಿಜೆಪಿ ಒಂದೇ ತಂಡ: ರೈತ ನಾಯಕ ರಾಕೇಶ್ ಟಿಕಾಯತ್ ಆರೋಪ

Please login to join discussion

Recent News

KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!
Top Story

KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!

by ಪ್ರತಿಧ್ವನಿ
January 8, 2026
ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ
Top Story

ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

by ಪ್ರತಿಧ್ವನಿ
January 8, 2026
Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌
Top Story

Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌

by ಪ್ರತಿಧ್ವನಿ
January 8, 2026
ಬಹುನಿರೀಕ್ಷಿತ ಚಿತ್ರ ‘ರಾಜಾ ಸಾಬ್’ ಚಿತ್ರದ  ವಿತರಣಾ ಹಕ್ಕನ್ನು ಪಡೆದುಕೊಂಡ ಹೊಂಬಾಳೆ ಫಿಲಂಸ್ ..
Top Story

ಬಹುನಿರೀಕ್ಷಿತ ಚಿತ್ರ ‘ರಾಜಾ ಸಾಬ್’ ಚಿತ್ರದ ವಿತರಣಾ ಹಕ್ಕನ್ನು ಪಡೆದುಕೊಂಡ ಹೊಂಬಾಳೆ ಫಿಲಂಸ್ ..

by ಪ್ರತಿಧ್ವನಿ
January 8, 2026
ಬೈಲಹೊಂಗಲ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ
Top Story

ಬೈಲಹೊಂಗಲ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ

by ಪ್ರತಿಧ್ವನಿ
January 8, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!

KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!

January 8, 2026
ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

January 8, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada