• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದೇವನೂರು ಸಾಕ್ಷಿ ಸಮೇತ ಬರೆದಿದ್ದಾರೆ ; RSSನವರಿಗೆ ಸತ್ಯ ಹೇಳಿದ್ರೆ ಯಾಕೆ ಕೋಪ? : ಸಿದ್ದರಾಮಯ್ಯ ಪ್ರಶ್ನೆ

ಪ್ರತಿಧ್ವನಿ by ಪ್ರತಿಧ್ವನಿ
July 14, 2022
in ಕರ್ನಾಟಕ
0
ಬಿ.ಸಿ.ನಾಗೇಶ್ ಮಂತ್ರಿ ಆಗಲು ನಾಲಾಯಕ್ : ಸಿದ್ದರಾಮಯ್ಯ
Share on WhatsAppShare on FacebookShare on Telegram

ಆರ್.ಎಸ್.ಎಸ್ ಆಳ ಮತ್ತು ಅಗಲ ಕೃತಿಯನ್ನು ದಾಖಲೆ ಸಮೇತ ಬರೆದಿದ್ದಾರೆ. ಯಾವ ಯಾವ ಕಾಲದಲ್ಲಿ ಹೆಡ್ಗೆವಾರ್, ಗೋಲ್ವಾಲ್ಕರ್, ಸಾವರ್ಕರ್ ಆರ್.ಎಸ್.ಎಸ್ ಸಂಘಟನೆ ಬಗ್ಗೆ ಏನು ಹೇಳಿದ್ದರು ಅದನ್ನೇ ದಾಖಲೆ ಸಹಿತ ಬರೆದಿದ್ದಾರೆ ಎಂದು ಹೇಳಿದ್ದಾರೆ.

ADVERTISEMENT

ಕಲಬುರಗಿ ವಿಮಾನ ನಿಲ್ದಾಣದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,   ಆರ್.ಎಸ್.ಎಸ್ ನವರಿಗೆ ಸತ್ಯ ಹೇಳಿದ್ರೆ ಯಾಕೆ ಕೋಪ? ಸತ್ಯ ಹೇಳಿದವರ ಮೇಲೆ ಕೇಸ್ ಹಾಕಿಸೋದು ಮಾಡ್ತಾರೆ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಇಂದು ಧಕ್ಕೆಯಾಗ್ತಿದೆ. ಸಂವಿಧಾನ ನೀಡಿರುವ ಹಕ್ಕುಗಳಿಗೆ ನಿರ್ಬಂಧ ಹೇರಲು ಇವರು ಯಾರು? ದೇಶದ ಮೂಲಭೂತ ಸ್ವರೂಪ ಬದಲಾವಣೆ ಮಾಡಲು ಸಂಸತ್ತಿಗೂ ಅಧಿಕಾರ ಇಲ್ಲ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರವಾಹ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ಮುಂಚಿತವಾಗಿ ಯಾವ ಕ್ರಮ ತೆಗೆದುಕೊಳ್ಳಲ್ಲ. ಜನರಿಗೆ, ರೈತರಿಗೆ ನಷ್ಟವಾದಮೇಲೆ ಅದನ್ನು ನೋಡೋಕೆ. ಕಳೆದ ಎರಡು ವಾರದಿಂದ ಮಳೆ ಬೀಳುತ್ತಿದೆ ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಯಾರೂ ಜಿಲ್ಲೆಗಳಿಗೆ ಹೋಗಿಲ್ಲ, ಮುಖ್ಯಮಂತ್ರಿಗಳು ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಹೋದಮೇಲೆ ಇವರು ಹೊರಟಿದ್ದಾರೆ. ಪ್ರವಾಹ ಬರಲಿದೆ ಎಂದು ಗೊತ್ತಿದ್ದೂ ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ. ಸರ್ಕಾರ ಕೂಡಲೇ ಪ್ರವಾಹದಿಂದ ಹಾನಿಗೊಳಗಾದ ಜನ, ಜಾನುವಾರು ಜೀವ ನಷ್ಟ, ಬೆಳೆ, ಆಸ್ತಿಪಾಸ್ತಿ ಹಾನಿಯನ್ನು ಲೆಕ್ಕಹಾಕಿ ಪರಿಹಾರ ನೀಡಬೇಕು. 2019 ರ ಪ್ರವಾಹದಲ್ಲಿ ಹಾನಿಗೀಡಾದ ಮನೆಗಳಿಗೇ ಇನ್ನೂ ಪರಿಹಾರ ಕೊಟ್ಟಿಲ್ಲ. 2020 ರಲ್ಲಿ ಬಂದ ಪ್ರವಾಹದಿಂದ ನಷ್ಟಕ್ಕೀಡಾದವರಿಗೂ ಪರಿಹಾರ ಕೊಟ್ಟಿಲ್ಲ. ಹಿಂದೆ ಪ್ರವಾಹ ಬಂದಾಗ ಊರುಗಳ ಸ್ಥಳಾಂತರ ಮಾಡಲು ನಿರ್ಧರಿಸಲಾಗಿತ್ತು, ಆದರೆ ಸ್ಥಳಾಂತರ ಕಾರ್ಯ ಇನ್ನೂ ಮಾಡಿಲ್ಲ, ಹೀಗಾಗಿ ಮತ್ತೆ ಪ್ರವಾಹ ಬಂದಾಗ ಅಲ್ಲಿನ ಜನ ತೊಂದರೆ ಎದುರಿಸುತ್ತಾರೆ. ಇದು ಸರ್ಕಾರದ ಬೇಜವಾಬ್ದಾರಿಯನ್ನು ತೋರಿಸುತ್ತದೆ ಎಂದಿದ್ದಾರೆ.

ನಾನು ಮುಖ್ಯಮಂತ್ರಿ ಆಗಿದ್ದಾಗ ಅಶ್ವತ್ಥ ನಾರಾಯಣ ವಿರೋಧ ಪಕ್ಷದಲ್ಲಿದ್ದರು ಅಲ್ವಾ? ಆಗ ಏನಾದ್ರೂ ನೇಮಕಾತಿಯಲ್ಲಿ ಹಗರಣ ನಡೆದಿದೆ ಎಂದು ಅವರು ಮಾತನಾಡಿದ್ರಾ? ಈಗ ತಮ್ಮ ಕಾಲದಲ್ಲಿ ಹಗರಣ ಬೆಳಕಿಗೆ ಬಂದ ಮೇಲೆ ಸಿದ್ದರಾಮಯ್ಯ ಸರ್ಕಾರದಲ್ಲೂ ಆಗಿತ್ತು ಅಂದರೆ ಹೇಗೆ? ಆಗೇನು ಕಡ್ಲೆಪುರಿ ತಿಂತಿದ್ರಾ? ಮಾಹಿತಿ ಇದ್ದಿದ್ದರೆ ಆಗಲೇ ಸದನದಲ್ಲಿ ಪ್ರಸ್ತಾಪ ಮಾಡಬಹುದಿತ್ತು, ನ್ಯಾಯಾಲಯಕ್ಕೂ ಹೋಗಬಹುದಿತ್ತು.

ನನ್ನ ಹುಟ್ಟು ಹಬ್ಬದ ಆಚರಣೆಗೆ ದಾವಣಗೆರೆಯಲ್ಲಿ ಲಕ್ಷಾಂತರ ಜನ ಸೇರುತ್ತಾರೆಂದು ಬಿಜೆಪಿಗೆ ಸೋಲಿನ ಭಯ ಹತ್ತಿಕೊಂಡಿದೆ. ಯಡಿಯೂರಪ್ಪ ಅವರ 77ನೇ ಹುಟ್ಟುಹಬ್ಬಕ್ಕೆ ನನ್ನನ್ನೂ ಕರೆದಿದ್ರೂ, ಹೇಗಿದ್ರೂ ಇದೇನು ಸರ್ಕಾರಿ ಕಾರ್ಯಕ್ರಮ ಅಲ್ಲ, ಒತ್ತಾಯ ಮಾಡ್ತಿದ್ದಾರೆ ಎಂದು ನಾನೂ ಹೋಗಿದ್ದೆ. ಈಗ ನನಗೆ 75 ವರ್ಷ ತುಂಬುತ್ತಿದೆ ಎಂದು ಸ್ನೇಹಿತರು, ಹಿತೈಷಿಗಳು ಸೇರಿ ಆಚರಣೆ ಮಾಡುತ್ತಿದ್ದಾರೆ. ಈಗ್ಯಾಕಪ್ಪ ಭಯ?

ಸಿದ್ದರಾಮೋತ್ಸವ ಎಂದು ಬರೆದಿದ್ದು ಮಾಧ್ಯಮಗಳು, ನಾವ್ಯಾರು ಅದನ್ನು ಸಿದ್ದರಾಮೋತ್ಸವ ಎಂದು ಹೇಳಿಲ್ಲ. ಇದು “ಸಿದ್ದರಾಮಯ್ಯ 75ನೇ ಅಮೃತೋತ್ಸವ” ಕಾರ್ಯಕ್ರಮ.

Also Read : ರಾಷ್ಟ್ರಪತಿ ಹುದ್ದೆಗೆ ಬುಡಕಟ್ಟು ಅಭ್ಯರ್ಥಿಯ ನಾಮನಿರ್ದೇಶನ ಸಕಾರಾತ್ಮಕ ಹೆಜ್ಜೆ: ದಲಿತ ಚಿಂತಕ ಕಾಂಚ ಐಲಯ್ಯ | ಭಾಗ-1

Also Read : ಹಿಂದೂ ಧರ್ಮದಿಂದ ದಲಿತರ ಪ್ರಗತಿ ಸಾಧ್ಯವಿಲ್ಲ, ಅಲ್ಪಸಂಖ್ಯಾತ, ದಲಿತ ಸಮಸ್ಯೆ ಒಂದೇ ಅಲ್ಲ: ಕಾಂಚ ಐಲಯ್ಯ | ಭಾಗ-2

Also Read :  ಸೆಕ್ಯುಲರ್‌ ಪಕ್ಷಗಳಿಗೆ ದಲಿತ ಅಸ್ಮಿತೆ ರಾಜಕಾರಣ ಮಾತ್ರ ಸಮಸ್ಯೆ ಏಕೆ? : ಕಾಂಚ ಐಲಯ್ಯ | ಭಾಗ -3

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 20139 ಮಂದಿಗೆ ಕರೋನಾ ಕೇಸ್‌ : 38 ಮಂದಿ ಸಾವು!

Next Post

ಪ್ರಧಾನಿ ಮೋದಿ ಹತ್ಯೆಗೆ ಸಂಚು: ಇಬ್ಬರು ಶಂಕಿತ ಉಗ್ರರ ಬಂಧನ

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ಪ್ರಧಾನಿ ಮೋದಿ ರ್ಯಾಲಿ ಸ್ಥಳದ ಸಮೀಪ ಸ್ಪೋಟ: ಪೊಲೀಸರು ದೌಡು!

ಪ್ರಧಾನಿ ಮೋದಿ ಹತ್ಯೆಗೆ ಸಂಚು: ಇಬ್ಬರು ಶಂಕಿತ ಉಗ್ರರ ಬಂಧನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada