ಮಹಾರಾಷ್ಟ್ರದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಂಭ್ರಮಾಚರಣೆಗೆ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗೈರಾಗಿದ್ದಾರೆ.
ಮಹಾ ವಿಕಾಸ್ ಅಘಾಡಿ ಸರ್ಕಾರ ಪತನವಾಗಿ ಎರಡೂವರೆ ವರ್ಷಗಳ ನಂತರ ಬಿಜೆಪಿ ಅಧಿಕಾರಕ್ಕೇರಿದ ನಂತರ ದಕ್ಷಿಣ ಮುಂಬೈನಲ್ಲಿರುವ ಪಕ್ಷದ ಕಚೇರಿಯಲ್ಲಿ ಸಂಭ್ರಮಾಚರಣೆ ಏರ್ಪಡಿಸಲಾಗಿತ್ತು.
ಆದರೆ, ಫಡ್ನವೀಸ್ ಗೈರು ಹಾಜರಿ ಬಗ್ಗೆ ಪ್ರತಿಕ್ರಿಯಿಸಿರುವ ಅವರ ಆಪ್ತರೊಬ್ಬರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸದ ನಂತರ ಅವರು ತಮ್ಮ ಮನೆಯಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ ಆದ ಕಾರಣ ಅವರಿಗೆ ಬರಲು ಸಾಧ್ಯವಾಗಿಲ್ಲ ಎಂದು ಸಬೂಬು ಹೇಳಿದ್ದಾರೆ.
ಆರಂಭದಲ್ಲಿ ಫಡ್ನವೀಸ್ ತಾವು ಹೊಸ ಸರ್ಕಾರದಲ್ಲಿ ಯಾವುದೇ ಪಾತ್ರವನ್ನ ನಿಭಾಯಿಸುವುದಿಲ್ಲ ಎಂದಿದ್ದರು ನಂತರ ವರಿಷ್ಠರ ಒತ್ತಾಯದ ಮೇರೆಗೆ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.