ಕರ್ನಾಟಕದಲ್ಲೇ ಭಾರಿ ನಿರೀಕ್ಷೆ ಮೂಡಿಸಿದ್ದ ಡೆವಿಲ್ನ “ಇದ್ರೆ ನೆಮ್ಮದಿಯಾಗ್ ಇರ್ಬೇಕ್” ಹಾಡು ಆಗಸ್ಟ್ 24ರಂದು ಬಿಡುಗಡೆ ಆಯಿತು. ದರ್ಶನ್ ಅವರ ಅಭಿಮಾನಿಗಳು ಅಜನೀಶ್ ಲೋಕನಾಥ್ ಅವರು ಸಂಗೀತ ನೀಡಿದ್ದ “ದಿ ಡೆವಿಲ್” ಸಿನಿಮಾದ ಈ ಹಾಡಿನ ಮೇಲೆ ತುಂಬಾ ಭರವಸೆ ಇಟ್ಟುಕೊಂಡಿದ್ದರು.

‘ಸರೆಗಮ ಕನ್ನಡ’ ಯೂಟ್ಯೂಬ್ ಚಾನೆಲ್ ಮೂಲಕ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ ಆಗಿದ 24 ಗಂಟೆಯಲ್ಲಿ ಈ ಹಾಡು ಒಂದು ಕೋಟಿಗೂ ಅಧಿಕ ವೀಕ್ಷಣೆ ಕಂಡಿದೆ. ದರ್ಶನ್ (Darshan) ಫ್ಯಾನ್ಸ್ ಮತ್ತೆ ಮತ್ತೆ ಈ ಹಾಡನ್ನು ನೋಡುತ್ತಿದ್ದಾರೆ.

ಪ್ರಕಾಶ್ ವೀರ್ ಅವರು ‘ದಿ ಡೆವಿಲ್’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಅಜನೀಶ್ ಬಿ. ಲೋಕನಾಥ್ ಅವರ ಸಂಗೀತ ಸಂಯೋಜನೆಯಿಂದ ಹಾಡುಗಳ ಮೇಲೆ ಜನರಿಗೆ ಇರುವ ನಿರೀಕ್ಷೆ ಅಪಾರ. “ಇದ್ರೆ ನೆಮ್ಮದಿಯಾಗ್ ಇರ್ಬೇಕ್” ಹಾಡು ಕೇಳಿ ದರ್ಶನ್ ಅಭಿಮಾನಿಗಳಿಗೆ ಇಷ್ಟ ಆಗಿದೆ. ಕೆಲವರಿಂದ ಈ ಹಾಡಿಗೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ. ಅಜನೀಶ್ ಲೋಕನಾಥ್ ಅವರ ಸಂಗೀತ ಚೆನ್ನಾಗಿದೆ. ಆದರೆ ಸಾಹಿತ್ಯ ಕೊಂಚ ಡಲ್ ಆಯಿತು ಎಂದು ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅನಿರುದ್ಧ ಶಾಸ್ತ್ರಿ ಅವರು ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ‘ಪುಷ್ಪ’ ಸಿನಿಮಾ ಖ್ಯಾತಿಯ ಗಾಯಕ ದೀಪಕ್ ಬ್ಲೂ ಅವರು ಈ ಹಾಡಿಗೆ ಧ್ವನಿ ನೀಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಕೂಡ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು ಟ್ರೆಂಡ್ ಸೃಷ್ಟಿ ಮಾಡುತ್ತಿದೆ. ಅಭಿಮಾನಿಗಳು ಮತ್ತು ಅನೇಕ ಸೆಲೆಬ್ರಿಟಿಗಳು ಈ ಹಾಡಿಗೆ ರೀಲ್ಸ್ ಮಾಡುತ್ತಿದ್ದಾರೆ. ಆ ಮೂಲಕ ಸಿನಿಮಾ ಮೇಲೆ ಇರುವ ಕ್ರೇಜ್ ಎಂಥದ್ದು ಎಂಬುದನ್ನು ಫ್ಯಾನ್ಸ್ ತೋರಿಸುತ್ತಿದ್ದಾರೆ. ಒಂದೇ ದಿನದಲ್ಲಿ 10 ಮಿಲಿಯನ್ಗಿಂತ ಅಧಿಕ ವೀವ್ಸ್ ಆಗಿದ್ದಕ್ಕೆ ಅಭಿಮಾನಿಗಳಿಗೆ ಸಂತಸ ಆಗಿದೆ.





