• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿರಿಗೆರೆ ಶ್ರೀ ತರಳಬಾಳು ಬೃಹನ್ಮಠದ ಸ್ವಾಮೀಜಿ ಪೀಠ ತ್ಯಾಗಕ್ಕೆ ಭಕ್ತರ ಒತ್ತಾಯ..!!

ಪ್ರತಿಧ್ವನಿ by ಪ್ರತಿಧ್ವನಿ
August 5, 2024
in Top Story, ಇದೀಗ, ರಾಜಕೀಯ, ವಿಶೇಷ, ಶೋಧ
0
ಸಿರಿಗೆರೆ ಶ್ರೀ ತರಳಬಾಳು ಬೃಹನ್ಮಠದ ಸ್ವಾಮೀಜಿ ಪೀಠ ತ್ಯಾಗಕ್ಕೆ ಭಕ್ತರ ಒತ್ತಾಯ..!!
Share on WhatsAppShare on FacebookShare on Telegram

ಸಿರಿಗೆರೆ ಶ್ರೀ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ (Sirigere Shivamurthy Shivacharya Swamiji) ಅವರು ಪೀಠ ತ್ಯಾಗ ಮಾಡಿ, ಉತ್ತರಾಧಿಕರಿಯನ್ನು ನೇಮಕ ಮಾಡುವ ವಿಚಾರ ಸದ್ಯ ಚರ್ಚೆಯಲ್ಲಿದೆ. ಶ್ರೀಗಳ ಪೀಠತ್ಯಾಗ, ಉತ್ತರಾಧಿಕಾರಿ ನೇಮಕ ಮತ್ತು ಹಿರಿಯ ಗುರುಗಳ ಅವಧಿಯಲ್ಲಿ ರೂಪಿತವಾದ ಬೈಲಾ ಯಥಾವತ್ತಾಗಿ ಜಾರಿಗೊಳಿಸಬೇಕೆಂದು ರವಿವಾರ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ, ಶಾಸಕ ಡಾ. ಶಾಮನೂರು ಶಿವಶಂಕರಪ್ಪ (Shamanur Shivashankarappa) ಅಧ್ಯಕ್ಷತೆಯಲ್ಲಿ ಸಾದರ ಲಿಂಗಾಯತ ಸಮಾಜದ ಮುಖಂಡರ ಸಭೆ ನಡೆಯಿತು.

ADVERTISEMENT

ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ (Dr Shivamurthy Shivacharya Swamiji) ಅವರು ನಿವೃತ್ತಿ ಘೋಷಿಸಿ ಉತ್ತರಾಧಿಕಾರಿ ಘೋಷಣೆ ಮಾಡಬೇಕು. ಶ್ರೀಮಠದ ಏಕವ್ಯಕ್ತಿ ಡೀಡ್​ ರದ್ದುಪಡಿಸಿ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಗಳ(Dr. Shivakumar Swamiji) ಮೂಲ ಬೈಲಾ ಯಥಾವತ್ತಾಗಿ ಜಾರಿಗೊಳಿಸಬೇಕು ಎಂದು ಸಾದರ ಲಿಂಗಾಯತ ಸಮಾಜ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಸ್ವಾಮೀಜಿಗಳ ಪೀಠತ್ಯಾಗಕ್ಕೆ ಆಗ್ರಹ ಏಕೆ?
ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಗಳಿಂದ ರೂಪಿತವಾದ ನಿಯಮಗಳ ಪ್ರಕಾರ 60 ವರ್ಷದ ನಂತರ ಪೀಠ ತ್ಯಾಗ ಮಾಡಿ ಉತ್ತರಾಧಿಕಾರಿ ನೇಮಿಸಬೇಕು. ಆದರೆ, ಡಾ. ಶಿವಮೂರ್ತಿ ಶ್ರೀಗಳಿಗೆ 78 ವರ್ಷ ವಯಸ್ಸಾಗಿದೆ. ಹಿರಿಯ ಗುರುಗಳ ನಿಯಮ ಪಾಲನೆಯಾಗಿಲ್ಲ ಎಂಬುವುದು ಭಕ್ತರ ಅಸಮಾಧನಕ್ಕೆ ಕಾರಣವಾಗಿದೆ.

ಏಕವ್ಯಕ್ತಿ ಡೀಡ್ ರದ್ದು ಯಾಕೆ?
ಡಾ. ಶಿವಮೂರ್ತ ಶಿವಾಚಾರ್ಯ ಸ್ವಾಮೀಜಿ 30 ವರ್ಷಗಳ ಹಿಂದೆ ಟ್ರಸ್ಟ್​ ರಚಿಸಿ ಏಕ ವ್ಯಕ್ತಿ ಡೀಡ್​ ರಚಿಸಿದ್ದಾರೆ. ಆದರೆ ಇದು ಮಠದ ನಿಯಮದ ಪ್ರಕಾರ ವಿರುದ್ಧವಾದದು ಭಕ್ತರ ತೀರ್ನಾನವೇ ಅಂತಿಮ ಆಗಬೇಕು ಎಂಬುವುದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಪೀಠತ್ಯಾಗ ಚರ್ಚೆ ಈಗ ಮುನ್ನಲೆಗೆ ಬಂದಿರುವುದು ಏಕೆ?
ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ 30 ವರ್ಷಗಳ ಹಿಂದೆ ಟ್ರಸ್ಟ್​ ರಚಿಸಿ ಏಕ ವ್ಯಕ್ತಿ ಡೀಡ್​ ರಚಿಸಿದ್ದು, ಭಕ್ತರಿಗೆ ಈಗ ಗೊತ್ತಾಗಿದೆ. ಈ ವಿಚಾರ ನ್ಯಾಯಾಲಯದ ಮೆಟ್ಟಿಲೇರಿದೆ. ಇದು ಸಹಜವಾಗಿ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಸ್ವಾಮೀಜಿಗಳ ಪೀಠ ತ್ಯಾಗ ಆಗ್ರಹಿಸಿ ಕಳೆದ ಹಲವು ವರ್ಷಗಳಿಂದ ಸಭೆಗಳು ನಡೆಯುತ್ತಿದ್ದವು. ಆದರೆ, ಮುನ್ನಲೆಗೆ ಬಂದಿರಲಿಲ್ಲ. ಇದೀಗ ಶಾಸಕ ಶಾಮನೂರು ಶಿವಶಂಕರಪ್ಪ ಪ್ರವೇಶದಿಂದ ಈ ವಿಚಾರ ಮಹತ್ವ ಪಡೆದುಕೊಂಡಿದೆ.

ದಶಕದ ಹಿಂದೆಯೇ ಪೀಠತ್ಯಾಗಕ್ಕೆ ನಿರ್ಧರಿಸಿದ್ದ ಸ್ವಾಮೀಜಿ
ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ದಶಕದ ಹಿಂದೆಯೇ ಬಹಿರಂಗ ಸಭೆಯಲ್ಲಿ ಪೀಠತ್ಯಾಗ ಮಾಡುವುದಾಗಿ ಹೇಳಿದ್ದರು. ಆದರೆ, ಭಕ್ತರು ಇಂತಹ ನಿರ್ಧಾರ ಕೈಗೊಳ್ಳದಿರಿ. ನೀವೇ ಮುಂದುವರೆಯಬೇಕು ಎಂಬ ಒತ್ತಾಯದ ಮೇರೆಗೆ ಸ್ವಾಮೀಜಿ ಅವರು ಪೀಠದಲ್ಲಿ ಮುಂದುವರೆದಿದ್ದಾರೆ. ಅಲ್ಲದೆ, ಉತ್ತರಾಧಿಕಾರಿ ನೇಮಕ ವಿಚಾರವನ್ನು ಭಕ್ತರಿಗೆ ಬಿಟ್ಟಿದ್ದಾರೆ. ಉತ್ತರಾಧಿಕಾರಿಯನ್ನು ಭಕ್ತರೆ ನೇಮಕ ಮಾಡಿ ಅಂತ ಸ್ವಾಮೀಜಿ ಹೇಳಿದ್ದರು ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.

ಮುಂದೇನಾಗಲಿದೆ?
ಪೀಠತ್ಯಾಗ ಮಾಡಿ, ಉತ್ತರಾಧಿಕಾರಿ ನೇಮಕ ಮಾಡಬೇಕು ಮತ್ತು ಹಿರಿಯ ಗುರುಗಳ ಅವಧಿಯಲ್ಲಿ ರೂಪಿತವಾದ ಬೈಲಾ ಯಥಾವತ್ತಾಗಿ ಜಾರಿಗೊಳಿಸಬೇಕೆಂದು ಶಾಸಕ ಶಾಮನೂರು ಶಿವಶಂಕರಪ್ಪ ನೇತೃತ್ವದ ಸಾದರ ಲಿಂಗಾಯತ ಸಮಾಜದ ಮುಖಂಡರು ಆ.18 ರಂದು ಡಾ. ಶಿವಮೂರ್ತಿ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಮನವಿ ಮಾಡಲಿದ್ದಾರೆ.

Tags: Davanagereshamanur shivashankarappaShivakumar SwamijiShivamurthy Shivacharya SwamijiSirigereTaralabalu Bruhanmatha
Previous Post

ಬೀದರ್ |ದಾಂಪತ್ಯಕ್ಕೆ ಕಾಲಿಟ್ಟ 138 ಜೋಡಿಗಳು

Next Post

ಚಂದನ್ ಶೆಟ್ಟಿ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ಗೋಲ್ಡನ್ ಸ್ಟಾರ್ ಗಣೇಶ್

Related Posts

2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು: AI ತಜ್ಞ
Top Story

2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು: AI ತಜ್ಞ

by ಪ್ರತಿಧ್ವನಿ
February 11, 2026
0

ಬುದ್ಧಿಮತ್ತೆ (AI) ಕ್ಷೇತ್ರದ ಪ್ರಮುಖ ತಜ್ಞರು ಜಾಗತಿಕ ಗಮನ ಸೆಳೆಯುತ್ತಿರುವ ಸಮಸ್ಯೆ ಕುರಿತು ಎಚ್ಚರಿಕೆಯನ್ನು ನೀಡಿದ್ದಾರೆ.ಲಾಟ್ವಿಯನ್ ಮೂಲದ ಕಂಪ್ಯೂಟರ್ ವಿಜ್ಞಾನಿ ಮತ್ತು ಲೂಯಿಸ್‌ವಿಲ್ಲೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ....

Read moreDetails
ಬೆಂಗಳೂರಿಗಾಗಿ ಕೆಂಪೇಗೌಡರ ಸೊಸೆ‌ ಲಕ್ಷ್ಮಿದೇವಿ ಮಾಡಿದ ಆತ್ಮತ್ಯಾಗ ಇದು!

ಬೆಂಗಳೂರಿಗಾಗಿ ಕೆಂಪೇಗೌಡರ ಸೊಸೆ‌ ಲಕ್ಷ್ಮಿದೇವಿ ಮಾಡಿದ ಆತ್ಮತ್ಯಾಗ ಇದು!

February 11, 2026
ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

February 10, 2026
ಪಂಜಾಬ್ ನ ಕಾನೂನು ಕಾಲೇಜಿನಲ್ಲಿ ಭಯಂಕರ ದುರ್ಘಟನೆ

ಪಂಜಾಬ್ ನ ಕಾನೂನು ಕಾಲೇಜಿನಲ್ಲಿ ಭಯಂಕರ ದುರ್ಘಟನೆ

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
Next Post

ಚಂದನ್ ಶೆಟ್ಟಿ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ಗೋಲ್ಡನ್ ಸ್ಟಾರ್ ಗಣೇಶ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada