ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಐಜಿಪಿ ಪ್ರವೀಣ್ ಸೂದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಪೋಟದ ಬಗ್ಗೆ ಹಾಗೂ ನಂತರದ ಬೆಳವಣಿಗೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.
ಮಂಗಳೂರಿನ ಗರೋಡಿಯಲ್ಲಿ ನವೆಂಬರ್ 19ರಂದು ಆಟೋ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಪೋಟಿಸಲಾಗಿತ್ತು ಮತ್ತು ಆರೋಪಿ ಶಾರಿಖ್ ಪೊಲೀಸ್ ವಶದಲ್ಲಿದ್ದು ಆತನ ಆರೋಗ್ಯ ತೀವ್ರವಾಗಿದೆ ಎಂದು ಹೇಳಲಾಗಿದೆ.