• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಧಮ್, ತಾಕತ್ ಅನ್ನು ಪ್ರಧಾನಿ ಹತ್ತಿರ ತೋರಿಸಿ: ಕುಮಾರಸ್ವಾಮಿ

Any Mind by Any Mind
December 26, 2022
in Top Story, ರಾಜಕೀಯ
0
ಧಮ್, ತಾಕತ್ ಅನ್ನು ಪ್ರಧಾನಿ ಹತ್ತಿರ ತೋರಿಸಿ: ಕುಮಾರಸ್ವಾಮಿ
Share on WhatsAppShare on FacebookShare on Telegram


ಮಂಡ್ಯ: ʼಬೆನ್ನು ಇಲ್ಲ, ಮೂಳೆಯೂ ಇಲ್ಲದʼ ರಾಜ್ಯ ಸರ್ಕಾರಕ್ಕೆ ಮಹಾರಾಷ್ಟ್ರದ ನಾಯಕರ ಚಿತಾವಣೆಗೆ ತಿರುಗೇಟು ನೀಡುವ ಶಕ್ತಿ ಸಹ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ADVERTISEMENT


ಮಂಡ್ಯದಲ್ಲಿ ನಡೆದ ಪಂಚರತ್ನ ರಥಯಾತ್ರೆ ಸಂದರ್ಭದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದ ನಾಯಕರ ಚಿತಾವಣೆಗೆ ತಿರುಗೇಟು ನೀಡುವ ಶಕ್ತಿ ಈ ಬಿಜೆಪಿ ಸರಕಾರಕ್ಕೆ ಇಲ್ಲ. ಈ ಬಿಜೆಪಿ ಸರ್ಕಾರಕ್ಕೆ ಬೆನ್ನು ಇಲ್ಲ, ಮೂಳೆನೂ ಇಲ್ಲ. ಬೆಳಗಾವಿ ವಿಷಯದಲ್ಲಿ ಧಮ್, ತಾಕತ್ ಅನ್ನು ಪ್ರಧಾನಿ ಹತ್ತಿರ ತೋರಿಸಿ ಬನ್ನಿ ಎಂದು ಮುಖ್ಯಮಂತ್ರಿಗಳಿಗೆ ಸವಾಲು ಹಾಕಿದರು.


ದೆಹಲಿಯ ಡಬಲ್ ಎಂಜಿನ್ ಸರ್ಕಾರ ಕರ್ನಾಟಕದವರನ್ನು ಲೆಕ್ಕಕ್ಕೆ ಇಟ್ಟಿಲ್ಲ. 25 ಜನ ಲೋಕಸಭಾ ಸದಸ್ಯರು ಇದ್ದಾರೆ, ಅವರನ್ನು ಮೋದಿ, ಅಮಿತ್ ಶಾ ಎಲ್ಲಿಟ್ಟಿದ್ದಾರೆ ಗೊತ್ತಿದೆ. ಧಮ್, ತಾಕತ್ ಬಗ್ಗೆ ಸಿಎಂ ಪ್ರತಿನಿತ್ಯ ಭಾಷಣ ಮಾಡ್ತಾರೆ. ಈ ವಿಷಯದಲ್ಲಿ ಧಮ್, ತಾಕತ್ ಅನ್ನು ಪ್ರಧಾನಿ ಹತ್ತಿರ ತೋರಿಸಿ ಬನ್ನಿ. ವೃಥಾ ಮಾತನಾಡುವುದನ್ನು ನಿಲ್ಲಿಸಿ. ಅಮಿತ್ ಶಾ ಅವರನ್ನು ಭೇಟಿಯಾಗಿ ನಿಮ್ಮ ಧಮ್, ತಾಕತ್ ಬಗ್ಗೆ ಹೇಳಿ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಟಾಂಗ್ ಕೊಟ್ಟರು.

ಎಚ್ ಡಿಕೆ ಗೆ ಅಭಿಮಾನಿಗಳಿಂದ ಬೃಹತ್ ಗಾತ್ರದ ಕೊಬ್ಬರಿ ಹಾರ ಹಾಕಿ ಸ್ವಾಗತ


ಇತ್ತೀಚಿಗೆ ಮಹಾರಾಷ್ಟ್ರದ ಹಲವು ಪಕ್ಷಗಳು ಮತ್ತು ಸರ್ಕಾರದ ಜೊತೆಗೆ ಬಿಜೆಪಿ ಸಹ ಬೆಳಗಾವಿ ಜಿಲ್ಲೆಯನ್ನ ಮಹಾರಾಷ್ಟ್ರ ಸೇರ್ಪಡೆಗೆ ಒತ್ತಾಯ ಮಾಡುತ್ತಿರುವುದು ದೊಡ್ಡ ಕುತಂತ್ರ. ಇದು ದೇಶದ ಒಕ್ಕೂಟದ ವ್ಯವಸ್ಥೆಯನ್ನೆ ಹಾಳು ಮಾಡುವಂತ ಅನಾಹುತ. ಒಂದು ದೇಶ ಒಂದು ಭಾಷೆ, ಒಂದು ದೇಶ ಒಂದು ಚುನಾವಣೆ ಎನ್ನುವ ಬಿಜೆಪಿ ನಾಯಕರು ಬೆಳಗಾವಿಯನ್ನು ಲಪಟಾಯಿಸಿ ಮಹಾರಾಷ್ಟ್ರಕ್ಕೆ ಕೊಡಲು ಹೊರಟಿದ್ದಾರೆ. ಆ ಮೂಲಕ ಗಡಿ ವಿಷಯದಲ್ಲಿ ಬಿಜೆಪಿ ಎರಡು ರೀತಿ ಮಾತನಾಡುತ್ತಿದೆ. ಮುಂಬೈಗೆ ಹೋದರೆ ಒಂದು ರೀತಿ, ಬೆಂಗಳೂರಿಗೆ ಬಂದರೆ ಇನ್ನೊಂದು ರೀತಿ ಬಿಜೆಪಿ ನಾಯಕರು ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.


ಇದೇ ವೇಳೆ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕು ಎಂಬ ಮಹಾರಾಷ್ಟ್ರ ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಹೇಳಿಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ಸಾಮಾನ್ಯ ಪ್ರಜ್ಞೆ ಇರುವ ಯಾವೊಬ್ಬ ವ್ಯಕ್ತಿಯೂ ಹೀಗೆ ಮಾತನಾಡುವುದಿಲ್ಲ. ಸ್ವಲ್ಪ ಕಾಮನ್ ಸೆನ್ಸ್ ಇದ್ದವರು ಇಂತಹ ವಿಷಯಗಳನ್ನು ಇಟ್ಟುಕೊಂಡು ಪ್ರಚೋದನೆ ಮಾಡುವುದು ಸೂಕ್ತವಲ್ಲ. ಈಗಾಗಲೇ ಬೆಳಗಾವಿ ಕರ್ನಾಟಕದ ಸ್ವತ್ತು, ನಮ್ಮ ಅವಿಭಾಜ್ಯ ಅಂಗ. ಇಲ್ಲಿ ಯಾವುದೇ ವಿವಾದ ಇಲ್ಲ. ನಮ್ಮ ಮುಖ್ಯಮಂತ್ರಿ ಪದೇ ಪದೆ ಬೆಳಗಾವಿ ವಿವಾದ ಅಂತ ಪದ ಬಳಸಿದ್ದಾರೆ. ತಕ್ಷಣವೇ ಅವರು ವಿವಾದ ಎನ್ನುವ ಪದವನ್ನು ವಾಪಸು ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಅವರು ಒತ್ತಾಯ ಮಾಡಿದರು.


ಇದು ಬೆಳಗಾವಿ ವಿವಾದ ಅಲ್ಲ, ಬೆಳಗಾವಿ ವಿಷಯವಷ್ಟೆ. ಬೆಳಗಾವಿ ವಿಷಯವನ್ನು ಮಹಾರಾಷ್ಟ್ರದವರು ಎತ್ತಿಕೊಂಡಿದ್ದಾರೆ. ಅವರು ವಿವಾದ ಸೃಷ್ಟಿ ಮಾಡಿ ಕುತಂತ್ರ ಮಾಡಿದರೆ ನಾವು ಯಾಕೆ ವಿವಾದ ಎಂದುಕೊಳ್ಳೋಣ? ಕರ್ನಾಟಕದ ಏಕೀಕರಣದಲ್ಲಿ ಬೆಳಗಾವಿ ಕರ್ನಾಟಕದ ಭಾಗ ಎಂದು ತೀರ್ಮಾನವಾಗಿದೆ ಎಂದು ಅವರು ಹೇಳಿದರು.

Tags: ಉದ್ಧವ್ ಠಾಕ್ರೆಎಚ್.ಡಿ. ಕುಮಾರಸ್ವಾಮಿಪಂಚರತ್ನ ರಥಯಾತ್ರೆಮಹಾರಾಷ್ಟ್ರ ಸರ್ಕಾರ
Previous Post

ಮಗಳ ಅಶ್ಲೀಲ ವಿಡಿಯೋ ಪ್ರಸಾರ ಮಾಡಿದ್ದನ್ನು ಪ್ರಶ್ನಿಸಿದ ಬಿಎಸ್‌ಎಫ್‌ ಯೋಧನನ್ನು ಥಳಿಸಿ ಕೊಂದ ದುಷ್ಕರ್ಮಿಗಳು

Next Post

ಲೋಕಾಯುಕ್ತ ದಾಳಿ: ರೈತನಿಂದ ಲಂಚ ಪಡೆಯುತ್ತಿದ್ದ ಭೂ ದಾಖಲೆ ಅಧೀಕ್ಷಕನ ಬಂಧನ

Related Posts

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
0

----ನಾ ದಿವಾಕರ---- ಡಿಜಿಟಲ್‌ ಯುಗದಲ್ಲೂ ಅಮಾನವೀಯ ಸಾಂಪ್ರದಾಯಿಕತೆ ಜೀವಂತವಾಗಿರುವುದು ದುರಂತ 2047ರ ವೇಳೆಗೆ ಪೂರ್ಣ ವಿಕಾಸದ ಕನಸು ಕಾಣುತ್ತಿರುವ ಡಿಜಿಟಲ್‌ ಭಾರತ ತಾನು ಪರಿಭಾವಿಸಿಕೊಂಡಿರುವ ʼಪ್ರಗತಿ-ಆಧುನಿಕತೆ-ನಾಗರಿಕತೆʼಯ ಪರಿಕಲ್ಪನೆಗಳನ್ನು...

Read moreDetails

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025
Next Post
ಲೋಕಾಯುಕ್ತ ದಾಳಿ: ರೈತನಿಂದ ಲಂಚ ಪಡೆಯುತ್ತಿದ್ದ ಭೂ ದಾಖಲೆ ಅಧೀಕ್ಷಕನ ಬಂಧನ

ಲೋಕಾಯುಕ್ತ ದಾಳಿ: ರೈತನಿಂದ ಲಂಚ ಪಡೆಯುತ್ತಿದ್ದ ಭೂ ದಾಖಲೆ ಅಧೀಕ್ಷಕನ ಬಂಧನ

Please login to join discussion

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada