• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಧ್ಯಾನ್ ಚಂದ್ ದೇಶದ ಆಸ್ತಿ, ಆದರೆ ಖೇಲ್ ರತ್ನ ಪ್ರಶಸ್ತಿ ಮರುನಾಮಕರಣ ದ್ವೇಷದ ರಾಜಕಾರಣ – ಡಿ.ಕೆ ಶಿವಕುಮಾರ್

Any Mind by Any Mind
August 7, 2021
in ಕರ್ನಾಟಕ
0
ಧ್ಯಾನ್ ಚಂದ್ ದೇಶದ ಆಸ್ತಿ, ಆದರೆ ಖೇಲ್ ರತ್ನ ಪ್ರಶಸ್ತಿ ಮರುನಾಮಕರಣ ದ್ವೇಷದ ರಾಜಕಾರಣ – ಡಿ.ಕೆ ಶಿವಕುಮಾರ್
Share on WhatsAppShare on FacebookShare on Telegram

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರಿನಲ್ಲಿದ್ದ ಖೇಲ್ ರತ್ನ ಪ್ರಶಸ್ತಿಯನ್ನು ಕೇಂದ್ರ ಸರಕಾರ ಮರುನಾಮಕರಣ ಮಾಡಿದ್ದು ಖಂಡನೀಯ. ಇಡೀ ದೇಶದ ಯುವಕರಿಗೆ ಮತದಾನದ ಹಕ್ಕು, ಅವರ ಪ್ರೋತ್ಸಾಹಕ್ಕೆ ರಾಜೀವ್ ಗಾಂಧಿ ಅವರು ಕೊಟ್ಟ ಕಾರ್ಯಕ್ರಮ, ಯುವಕರ ಕ್ರಾಂತಿಕಾರಿ ಚಿಂತನೆಗೆ ಅವರು ಕೊಟ್ಟ ಅವಕಾಶ, ಕಾರ್ಯಕ್ರಮ ಅವಿಸ್ಮರಣೀಯ. ಇದೆಲ್ಲವನ್ನು ಗಮನಿಸಿ ಅವರ ಹೆಸರಲ್ಲಿ ಖೇಲ್ ರತ್ನ ಪ್ರಶಸ್ತಿ ನೀಡಲಾಗುತ್ತಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ADVERTISEMENT

ಧ್ಯಾನ್ ಚಂದ್ ಅವರು ದೇಶದ ಆಸ್ತಿ. ಅದರಲ್ಲಿ ಎರಡು ಮಾತಿಲ್ಲ. ಅವರ ಹೆಸರಲ್ಲಿ ಸರ್ಕಾರ ಹೊಸದಾಗಿ ಬೇರೆ ಪ್ರಶಸ್ತಿ ನೀಡಲಿ, ಬೇರೆ ಕಾರ್ಯಕ್ರಮ ಮಾಡಲಿ ಅಥವಾ ವಿಶ್ವವಿದ್ಯಾಲಯ ಸ್ಥಾಪಿಸಲಿ. ನಮ್ಮ ಅಭ್ಯಂತರವಿಲ್ಲ. ಜನಪರ ಕಾರ್ಯಕ್ರಮಗಳಲ್ಲಿ ಗಾಂಧಿ ಕುಟುಂಬದ ಹೆಸರಿದೆ ಎಂಬ ಕಾರಣಕ್ಕೆ ಈ ದೇಶದ ಐಕ್ಯತೆ, ಸಮಗ್ರತೆ, ಶಾಂತಿಗಾಗಿ ಪ್ರಾಣತ್ಯಾಗ ಮಾಡಿದ ನಮ್ಮ ಧೀಮಂತ ನಾಯಕರ ಹೆಸರನ್ನು ಬದಲಾಯಿಸಲು ಬಿಜೆಪಿ ಸರ್ಕಾರ ಹಾಗೂ ನಾಯಕರು ಮುಂದಾಗಿದ್ದಾರೆ. ಇದು ದ್ವೇಷದ ರಾಜಕಾರಣ. ಇದನ್ನು ನೋಡಿಕೊಂಡು ಕಾಂಗ್ರೆಸ್ ಪಕ್ಷ ಸುಮ್ಮನೆ ಕೂರಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

“ಕೇಂದ್ರ ಸರ್ಕಾರ ತಮಗೆ ಯಾವ ಕಾರ್ಯಕ್ರಮ ಬೇಕೋ ಅದನ್ನು ಮಾಡಿಕೊಳ್ಳಲಿ. ಆದರೆ ಈ ದ್ವೇಷದ ರಾಜಕಾರಣವನ್ನು ನಿಲ್ಲಿಸಲಿ. ಪ್ರಧಾನಿ ಮೋದಿ ಅವರು ತವರು ರಾಜ್ಯದಲ್ಲಿ ಈ ದೇಶದ ಆಸ್ತಿಯಾಗಿರುವ ಸರ್ದಾರ್ ಪಟೇಲ್ ಅವರ ಪ್ರತಿಮೆಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡಿದರು. ಆದರೆ ಪಟೇಲ್ ಅವರ ಹೆಸರಲ್ಲಿದ್ದ ಕ್ರೀಡಾಂಗಣಕ್ಕೆ ತಮ್ಮ ಹೆಸರನ್ನು ಮರುನಾಮಕರಣ ಮಾಡಿಕೊಂಡದ್ದು ಎಷ್ಟು ಸರಿ? ಇದು ದೇಶಭಕ್ತಿನಾ? ಸರ್ದಾರ್ ಪಟೇಲ್ ಅವರನ್ನು ಉಕ್ಕಿನ ಮನುಷ್ಯ ಎಂದು ಕರೆದಿದ್ದು ನೀವಲ್ಲ, ಈ ದೇಶದ ಜನ

“2024ಕ್ಕೆ ಕೇಂದ್ರದಲ್ಲಿ ಯುಪಿಎ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವಿದೆ. ಇದು ಜನರ ಅಭಿಪ್ರಾಯವೂ ಹೌದು. ಜನರ ಅಭಿಪ್ರಾಯ, ಒತ್ತಡದ ಮೇರೆಗೆ ಈ ಪ್ರಶಸ್ತಿ ಹೆಸರು ಮರುನಾಮಕರಣ ಮಾಡಲಾಗುತ್ತಿದೆ ಎಂದು ಪ್ರಧಾನಮಂತ್ರಿಗಳು ಟ್ವೀಟ್ ಮಾಡಿದ್ದಾರೆ. ಹಾಗಾದರೆ, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಇಳಿಸಬೇಕು ಎಂದು ದೇಶದ ಜನ ಒತ್ತಾಯ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಅವರು ಈ ಒತ್ತಡಕ್ಕೆ ಮಣಿದು ಯಾಕೆ ಬೆಲೆ ಇಳಿಸುತ್ತಿಲ್ಲ? ರೈತರು ಕಾರ್ಮಿಕರ ಕಾಯ್ದೆ ಬೇಡ ಎಂದು ಕಳೆದೊಂದು ವರ್ಷದಿಂದ ಅನ್ನದಾತ, ದೇಶದ ಜನ  ಹೋರಾಡುತ್ತಿದ್ದಾರೆ. ಅವರ ಒತ್ತಡಕ್ಕೆ ಯಾಕೆ ಮಣಿಯುತ್ತಿಲ್ಲ?” ಎಂದು ಅವರು ಪ್ರಶ್ನಿಸಿದ್ದಾರೆ.

ಇಂದಿರಾ ಕ್ಯಾಂಟೀನ್‌ ಹೆಸರು ಬದಲಾವಣೆ ಹಿಂದೆ ರಾಜಕೀಯ ಧ್ವೇಷವಿದೆ -ಸಿದ್ದರಾಮಯ್ಯ

 “ರಾಜೀವ್ ಗಾಂಧಿ, ಇಂದಿರಾ ಗಾಂಧಿ ಅವರು ಈ ದೇಶ ಕಂಡ ಅಪ್ರತಿಮ ನಾಯಕರು. ಅವರ ನಾಯಕತ್ವ ಇತರರಿಗೆ ಸ್ಫೂರ್ತಿಯಾಗಲಿ, ಅವರೂ ನಾಯಕರಾಗಿ ಬೆಳೆಯಲಿ ಎಂದು ಕಾರ್ಯಕ್ರಮಗಳಿಗೆ ಅವರ ಹೆಸರು ಇಡಲಾಗಿದೆ. ಬಿಜೆಪಿ ನಾಯಕರ ಹೆಸರಿನಲ್ಲೂ ಅನೇಕ ಕಾರ್ಯಕ್ರಮಗಳಿವೆ. ನಮ್ಮ ರಾಜ್ಯದಲ್ಲಿ ಅಟಲ್ ಸಾರಿಗೆ ಎಂದು ಕಾರ್ಯಕ್ರಮ ಮಾಡಿದ್ದರು. ನಾವು ಅಧಿಕಾರದಲ್ಲಿದ್ದಾಗ ಅದನ್ನು ಬದಲಿಸಲಿಲ್ಲ. ನಮಗೆ ಆ ಉದ್ದೇಶವಿಲ್ಲ.”

“ನಮ್ಮ ನಾಯಕರ ಹೆಸರನ್ನು ಜನರು ಸ್ಮರಿಸುವುದನ್ನು ಸಹಿಸಲಾಗದೇ ರಾಜಕೀಯ ದ್ವೇಷದಿಂದ ಬಿಜೆಪಿ ನಾಯಕರು ಈ ರೀತಿ ಹೆಸರು ಬದಲಾವಣೆಗೆ ಮುಂದಾಗಿದ್ದಾರೆ. ರಾಜೀವ್ ಗಾಂಧಿ, ಇಂದಿರಾ ಗಾಂಧಿ ಅವರು ಈ ದೇಶಕ್ಕೆ ಏನೂ ಮಾಡಲೇ ಇಲ್ಲವಾ? ರಾಜೀವ್ ಗಾಂಧಿ ಅವರು 18 ವರ್ಷದ ಯುವಕರಿಗೆ ಮತದಾನದ ಹಕ್ಕು ನೀಡುವ ಸಂದರ್ಭದಲ್ಲಿ ಅವರು ಆಡಿದ ಮಾತುಗಳು, ಅದಕ್ಕೆ ಯಾರೆಲ್ಲಾ ವಿರೋಧ ವ್ಯಕ್ತಪಡಿಸಿ, ಏನೆಲ್ಲಾ ಮಾತನಾಡಿದ್ದರು ಎಂಬುದನ್ನು ದಾಖಲೆ ತೆಗೆದು ನೋಡಿ.”

“ಯಾವುದೇ ಸರ್ಕಾರ ದೇಶದ ಯಾವುದೇ ಪಕ್ಷದ ನಾಯಕರ ಹೆಸರಿನಲ್ಲಿ ಯೋಜನೆ ರೂಪಿಸಿದಾಗ ಅದನ್ನು ಬದಲಾವಣೆ ಮಾಡುವುದು ಸೂಕ್ತವಲ್ಲ. ಬಿಜೆಪಿ ಈ ಕೆಟ್ಟ ಪರಂಪರೆ ಆರಂಭಿಸುತ್ತಿದ್ದು, ಇದರಿಂದ ದ್ವೇಷದ ಮನೋಭಾವ ಹೆಚ್ಚುತ್ತದೆ. ಹೀಗಾಗಿ ಕೇಂದ್ರ ಸರ್ಕಾರ ಕೂಡಲೇ ತಮ್ಮ ನಿರ್ಧಾರ ಹಿಂಪಡೆಯಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಿದರೆ ಪರಿಣಾಮ ನೆಟ್ಟಗಿರುವುದಿಲ್ಲ:

ಇಂದಿರಾ ಗಾಂಧಿ ಕ್ಯಾಂಟೀನ್ ಹೆಸರು ಬದಲಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ಮುಖ್ಯಮಂತ್ರಿಗೆ ಸಲಹೆ ಕೊಟ್ಟಿದ್ದಾರೆ. ಇದನ್ನು ನೋಡಿಕೊಂಡು ಕೂರಲು ನಾವ್ಯಾರೂ ಕೈಗೆ ಬಳೆ ತೊಟ್ಟಿಲ್ಲ. ಇಂದಿರಾಗಾಂಧಿ ಅವರು ದೇಶಕ್ಕೆ ಮಾಡಿದ ತ್ಯಾಗ, ಬಡವರಿಗಾಗಿ ಕೊಟ್ಟ ಕಾರ್ಯಕ್ರಮವನ್ನು ಪ್ರತಿಯೊಬ್ಬ ಪ್ರಜ್ಞಾವಂತ ನಾಗರೀಕರು ಸ್ಮರಿಸುತ್ತಾರೆ. ಬಿಜೆಪಿ ಸರ್ಕಾರ ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಲು ಮುಂದಾಗಲಿ, ಆಮೇಲೆ ಕಾಂಗ್ರೆಸಿಗರು ಏನು ಮಾಡುತ್ತಾರೆ ಎಂಬುದನ್ನು ತೋರಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಚಿಕ್ಕಮಗಳೂರಿನ ಜನ ಇಂದಿರಾ ಗಾಂಧಿ ಅವರಿಗೆ ಸುಮ್ಮನೆ ಮತಹಾಕಿ, ಅವರು ಪ್ರಧಾನಿಯಾಗಲು ಆಯ್ಕೆ ಮಾಡಿ ಕಳುಹಿಸಲಿಲ್ಲ. ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಲು ಮುಂದಾದರೆ ಪರಿಸ್ಥಿತಿ ಏನಾಗಲಿದೆ ಎಂದು ಈಗಲೇ ನಾನು ಹೇಳುವುದಿಲ್ಲ. ಇಂದಿರಾ ಕ್ಯಾಂಟೀನ್ ಗೆ ಶೀಘ್ರದಲ್ಲೇ ಭೇಟಿ ನೀಡಿ, ಅಲ್ಲಿನ ಆಹಾರ ಗುಣಮಟ್ಟವನ್ನು ಪರಿಶೀಲಿಸುತ್ತೇನೆ. ಬಿಜೆಪಿ ಇಂತಹ ಕೆಟ್ಟ ಆಲೋಚನೆಗಳನ್ನು ಕೈಬಿಡಬೇಕು. ಈ ಗಿಮಿಕ್ ರಾಜಕಾರಣ ನಿಲ್ಲಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯ ಮಾಡುತ್ತೇನೆ.

ಸರ್ಕಾರಕ್ಕೆ ಬದ್ಧತೆ ಇದ್ದರೆ, ಕೇಂದ್ರದ ಮೇಲೆ ಒತ್ತಡ ಹಾಕಿ ಲಸಿಕೆ ತರಲಿ:

ರಾಜ್ಯ ಸರ್ಕಾರ ಯಾರನ್ನಾದರೂ ಸಚಿವರನ್ನಾಗಿ ಮಾಡಿಕೊಳ್ಳಲಿ, ಯಾವ ಖಾತೆ ಬೇಕಾದರೂ ನೀಡಲಿ. ನಮಗೂ ಅದಕ್ಕೂ ಸಂಬಂಧವಿಲ್ಲ. ನೂತನ ಮುಖ್ಯಮಂತ್ರಿಗಳಿಗೆ ನಾನು ಕಾಂಗ್ರೆಸ್ ಪಕ್ಷದ ಪರವಾಗಿ ಒಂದು ಮನವಿ ಮಾಡಿಕೊಳ್ಳುತ್ತೇನೆ. ಈ ನೈಟ್ ಕರ್ಫ್ಯೂ, ವೀಕೆಂಡ್ ಲಾಕ್ ಡೌನ್ ನಿಂದ ಯಾವುದೇ ಪ್ರಯೋಜನವಿಲ್ಲ. ನಿಮಗೆ ಬದ್ಧತೆ ಇದ್ದರೆ, ನೀವು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಕೂಡಲೇ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ತಂದು ಒಂದು ಅಥವಾ ಎರಡು ತಿಂಗಳ ಕಾಲಮಿತಿಯಲ್ಲಿ ಎಲ್ಲರಿಗೂ ಲಸಿಕೆ ನೀಡಲಿ. ಆಗ ಮಾತ್ರ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತದೆ.

ಕೇಂದ್ರದವರು ಲಸಿಕೆ ಪೂರೈಸುತ್ತಿಲ್ಲ, ನಿಮ್ಮ ಕೈಲಿ ಪರಿಸ್ಥಿತಿ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಲಸಿಕೆಗಾಗಿ ಜನ ಇಂದಿಗೂ ಸರದಿ ಸಾಲಿನಲ್ಲಿ ನಿಂತು ಪರದಾಡುತ್ತಿದ್ದಾರೆ.  ಎಂದು ಅವರು ಹೇಳಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿಬಿಜೆಪಿಸಿದ್ದರಾಮಯ್ಯ
Previous Post

ಇಂದಿರಾ ಕ್ಯಾಂಟೀನ್‌ ಹೆಸರು ಬದಲಾವಣೆ ಹಿಂದೆ ರಾಜಕೀಯ ಧ್ವೇಷವಿದೆ -ಸಿದ್ದರಾಮಯ್ಯ

Next Post

ಟೋಕಿಯೋ ಒಲಿಂಪಿಕ್ಸ್: ಶತಮಾನದ ದಾಖಲೆ ಮುರಿದ ಭಾರತ: ಜಾವೆಲಿನ್ ಎಸೆತದಲ್ಲಿ ಛೋಪ್ರಾಗೆ ಚಿನ್ನ

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
Next Post
ಟೋಕಿಯೋ ಒಲಿಂಪಿಕ್ಸ್: ಶತಮಾನದ ದಾಖಲೆ ಮುರಿದ ಭಾರತ: ಜಾವೆಲಿನ್ ಎಸೆತದಲ್ಲಿ ಛೋಪ್ರಾಗೆ ಚಿನ್ನ

ಟೋಕಿಯೋ ಒಲಿಂಪಿಕ್ಸ್: ಶತಮಾನದ ದಾಖಲೆ ಮುರಿದ ಭಾರತ: ಜಾವೆಲಿನ್ ಎಸೆತದಲ್ಲಿ ಛೋಪ್ರಾಗೆ ಚಿನ್ನ

Please login to join discussion

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada