• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Basavaraja Bommai | ಕೇಂದ್ರದಲ್ಲಿ ಮೋದಿ ಸರ್ಕಾರದ ಪ್ರಚಾರದ ಪ್ಲ್ಯಾನ್ ಬಳಸಿಕೊಂಡ್ರಾ ಬಸವರಾಜ ಬೊಮ್ಮಾಯಿ?

ಕೃಷ್ಣ ಮಣಿ by ಕೃಷ್ಣ ಮಣಿ
May 31, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
Basavaraja Bommai | ಕೇಂದ್ರದಲ್ಲಿ ಮೋದಿ ಸರ್ಕಾರದ ಪ್ರಚಾರದ ಪ್ಲ್ಯಾನ್ ಬಳಸಿಕೊಂಡ್ರಾ ಬಸವರಾಜ ಬೊಮ್ಮಾಯಿ?
Share on WhatsAppShare on FacebookShare on Telegram

ಮೇ 13 ರಂದು ಮತ ಎಣಿಕೆ ಮುಗಿದ ಕೂಡಲೇ ಬಿಜೆಪಿ ಸರ್ಕಾರ (BJP) ಅಸ್ತಿತ್ವ ಕಳೆದುಕೊಂಡಿತ್ತು. ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿ (Basavaraja Bommai) ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಕೆ ಮಾಡಿದ್ದರು. ಆದರೆ ನಾನು ಜನಸಾಮಾನ್ಯರ ಸಿಎಂ, ಕಾಮನ್ ಮ್ಯಾನ್ ಸಿಎಂ ಎಂದು ಸ್ವಯಂ ಘೋಷಣೆ ಮಾಡಿಕೊಂಡಿದ್ದ ಬಸವರಾಜ್ ಬೊಮ್ಮಾಯಿ (Basavaraja Bommai) ಜನಸಾಮಾನ್ಯರ ತೆರಿಗೆ ಹಣವನ್ನು ದುಂದುವೆಚ್ಚ ಮಾಡಿರುವುದು ಬಯಲಾಗಿದೆ. ಕೇವಲ ತಿಂಗಳ ಅವಧಿಯಲ್ಲಿ ಪ್ರಚಾರಕ್ಕಾಗಿ 44 ಕೋಟಿ ರೂಪಾಯಿ ಹಣವನ್ನು ವೆಚ್ಚ ಮಾಡಿದ್ದಾರೆ. ಮಾಹಿತಿ ಹಕ್ಕು ಕಾಯ್ದೆಯ ಅರ್ಜಿಗೆ ರಾಜ್ಯ ಸರ್ಕಾರವೇ ಅಧಿಕೃತವಾಗಿ ಕೊಟ್ಟಿರುವ ಮಾಹಿತಿ ಜನಸಾಮಾನ್ಯರ ಸಿಎಂ ಜಾಹೀರಾತು ಪ್ರೇಮವನ್ನು ಬಯಲು ಮಾಡಿದೆ.

ADVERTISEMENT

ಬಸವರಾಜ ಬೊಮ್ಮಾಯಿ 4 ತಿಂಗಳ ಜಾಹೀರಾತು ಲೆಕ್ಕ

ಬಸವರಾಜ ಬೊಮ್ಮಾಯಿ ಹಾಗು ಬಿಎಸ್​ ಯಡಿಯೂರಪ್ಪ ಸರ್ಕಾರ ಇಡೀ ಮೂರೂವರೆ ವರ್ಷದಲ್ಲಿ ಎಷ್ಟು ಜಾಹೀರಾತು ನೀಡಿದೆ ಎನ್ನುವ ಸಂಪೂರ್ಣ ಲೆಕ್ಕ ಇಲ್ಲದೆ ಇದ್ದರೂ ಕಳೆದ ನಾಲ್ಕು ತಿಂಗಳಲ್ಲಿ ಜಾಹಿರಾತಿಗೆ ಎಷ್ಟು ವೆಚ್ಚ ಮಾಡಿದೆ ಅನ್ನೋ ಮಾಹಿತಿ ಪ್ರತಿಧ್ವನಿಗೆ ಲಭ್ಯವಾಗಿದೆ. ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಸರ್ಕಾರವೇ ಕೊಟ್ಟಿರುವ ಮಾಹಿತಿಯಂತೆ ಡಿಸೆಂಬರ್​ 1, 2022ರಿಂದ ಮಾರ್ಚ್​ 29, 2023ರ ಅವಧಿಯಲ್ಲಿ ಬರೋಬ್ಬರಿ 44 ಕೋಟಿ 42 ಲಕ್ಷ ರೂಪಾಯಿ ಹಣವನ್ನು ಜಾಹೀರಾತಿಗೆ ವಿನಿಯೋಗಿಸಿದೆ. ಅದರಲ್ಲಿ ಪತ್ರಿಕಾ ಮಾಧ್ಯಮಕ್ಕೆ 27 ಕೋಟಿ 46 ಲಕ್ಷ ರೂಪಾಯಿ ಹಾಗು ಇನ್ನುಳಿದ 16 ಕೋಟಿ 96 ಲಕ್ಷ ಹಣ ದೃಶ್ಯ ಮಾಧ್ಯಮಗಳಿಗೆ ಸೇರಿಕೊಂಡಿದೆ. ಮಾಧ್ಯಮಗಳಿಗೆ ಜಾಹೀರಾತು ನೀಡುವುದು ಅಪರಾಧವಲ್ಲ, ಸರ್ಕಾರ ತನ್ನ ದುರಾಡಳಿತವನ್ನು ಮುಚ್ಚಿಟ್ಟು ಜನರಿಗೆ ಉತ್ತಮ ರೀತಿಯಲ್ಲಿ ತೋರಿಸುವ ಉದ್ದೇಶಕ್ಕೆ ಬಳಕೆ ಮಾಡಿಕೊಂಡಿರುವುದು ಅಕ್ಷಮ್ಯ ಅಪರಾಧ ಎನ್ನಲಾಗ್ತಿದೆ.

ಮಾಧ್ಯಮಗಳು ಪೇಯ್ಡ್​ ನ್ಯೂಸ್​ ಮಾಡಿದ್ದು ಸರೀನಾ..?

ಮಾಧ್ಯಮಗಳಲ್ಲಿ ಜಾಹೀರಾತನ್ನು ಜಾಹೀರಾತು ಅಂತಾನೇ ತೋರಿಸಬೇಕು. ಒಂದು ವೇಳೆ ಪ್ರಾಯೋಜಿತ ಕಾರ್ಯಕ್ರಮ ಆಗಿದ್ದರೆ, ಜಾಹೀರಾತು ಅಥವಾ ಪ್ರಾಯೋಜಿತ ಕಾರ್ಯಕ್ರಮ ಎಂದು ಪ್ರದರ್ಶನ ಮಾಡಬೇಕು ಎನ್ನುವ ನಿಯಮವಿದೆ. ಆದರೆ ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿ ಅವರ ಬಳಿಕ ಕೋಟಿ ಕೋಟಿ ಜಾಹೀರಾತು ಪಡೆದು, ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆಯಲ್ಲೂ ಬಸವರಾಜ ಬೊಮ್ಮಾಯಿ ಅವರನ್ನೇ ತೋರಿಸುತ್ತಾ, ವೀಕ್ಷಕರಿಗೂ ವಂಚಿಸಿ ಪತ್ರಿಕಾ ಧರ್ಮವನ್ನು ಮಣ್ಣು ಪಾಲು ಮಾಡಿದ್ದಾರೆ. ಕಾಸಿಗಾಗಿ ಸುದ್ದಿ ಅನ್ನೋದು ಈ ಹಿಂದೆ ಭಾರೀ ಚರ್ಚೆಯನ್ನ ಹುಟ್ಟು ಹಾಕಿತ್ತು. ಈ ಹಿಂದೆ ಕಾಸಿಗಾಗಿ ಸುದ್ದಿ ಪ್ರಸಾರ ಮಾಡುವುದನ್ನು ತಡೆಯುವ ಉದ್ದೇಶದಿಂದಲೇ ಮಾಧ್ಯಮ ಪ್ರಮಾಣೀಕರಣ ಮತ್ತು ನಿಯಂತ್ರಣ ಸಮಿತಿ ಅಸ್ತಿತ್ವಕ್ಕೆ ಬಂದಿತ್ತು. ಸರ್ಕಾರದ ಖಜಾನೆಯಿಂದಲೇ ಹಣದ ಹೊಳೆ ಹರಿಸಿ ಪ್ರಚಾರ ತೆಗೆದುಕೊಂಡಿರುವ ಜನಸಾಮಾನ್ಯರಿಗೆ ಮಾಡಿದ ದ್ರೋಹ ಎನ್ನಬಹುದು.

ಬಿಜೆಪಿಯಲ್ಲಿ ಯಥಾ ರಾಜ ತಥಾ ಪ್ರಜಾ ಎನ್ನುವಂತಾಗಿದೆ..

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಪ್ರಚಾರ ಪ್ರಿಯರಾಗಿದ್ದು, ಪ್ರವಾಸ ಮತ್ತು ಪ್ರಚಾರಕ್ಕೆ ಕೋಟಿ ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತದೆ. ಕಳೆದ ವರ್ಷ 2022ರ ಡಿಸೆಂಬರ್ ವರದಿಯ ಪ್ರಕಾರ ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ₹6491 ಕೋಟಿ ರೂಪಾಯಿ ಹಣವನ್ನು ಕೇವಲ ಜಾಹೀರಾತು ನೀಡುವ ಉದ್ದೇಶಕ್ಕೆ ಬಳಸಲಾಗಿದೆ ಎನ್ನುವ ವರದಿ ಬಂದಿತ್ತು. ಅದರಲ್ಲಿ ₹3260.79 ಕೋಟಿ ರೂಪಾಯಿ ಹಣವನ್ನು ದೃಶ್ಯ ಮಾಧ್ಯಮಗಳಿಗೂ ₹3230.70 ಕೋಟಿ ಹಣವನ್ನು ಪತ್ರಿಕಾ ಮಾಧ್ಯಮಗಳಿಗೂ ನೀಡಲಾಗಿದೆ ಎನ್ನುವುದು ವರದಿಯಲ್ಲಿ ಉಲ್ಲೇಖವಾಗಿದ್ದ ಅಂಶ. ಈ ಮಾಹಿತಿಯನ್ನು ಸ್ವತಃ ಕೇಂದ್ರ ಸಚಿವ ಅನುರಾಗ್ ಠಾಕೂರ್ ಲೋಕಸಭೆಗೆ ಅಧಿಕೃತ ಮಾಹಿತಿ ನೀಡಿದ್ದರು. ಇದೀಗ ಕೇಂದ್ರದ ಹಾದಿಯಲ್ಲೇ ಸಾಗಿರುವ ಬಸವರಾಜ ಬೊಮ್ಮಾಯಿ ಕೇವಲ 4 ತಿಂಗಳಲ್ಲಿ ₹44 ಕೋಟಿ ಹಣವನ್ನು ಪ್ರಚಾರಕ್ಕೆ ಬಳಸಿಕೊಳ್ಳುವ ಮೂಲಕ ಜನಸಾಮಾನ್ಯರ ಸಿಎಂ ಎನ್ನುವುದಕ್ಕೆ ಅಪವಾದ ಎನ್ನುವಂತೆ ಮಾಡಿದ್ದಾರೆ ಎನ್ನಬಹುದು.

ಕೃಷ್ಣಮಣಿ

Tags: #pmmodi #narendramodi #bangalore #pmmodiinbengaluru pmnarendranodi4 months advertisement calculationadvertising among the massesBasavaraj BommaiBasavaraja BommaiBJPbjpkarnatakabreakingnewsBS YeddyurappabsbommaiCMSiddaramaiahcmsiddaramiahDCM DK Shivakumarlivenewsmedia is not a crimeModi GovernmentpaidnewsPMModipress mediaRs 44 crore 42 lakh has been spent on advertisementಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

Chetan Ahimsa : ಕುಸ್ತಿಪಟುಗಳ ಬಗ್ಗೆ ಏಕಿಷ್ಟು ಮೌನ?

Next Post

congress gurantees | ಮನೆ ಯಜಮಾನಿ.. ಮನೆ ಇಬ್ಭಾಗ.. ಮತ ಇಬ್ಭಾಗ.. ಕಾಂಗ್ರೆಸ್‌‌ಗೆ ಭೀತಿ..!

Related Posts

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ
ಇತರೆ / Others

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

by ಪ್ರತಿಧ್ವನಿ
January 28, 2026
0

ಬೆಂಗಳೂರು: ಮನೆಗೆಲಸಕ್ಕೆ ಇದ್ದ ನೇಪಾಳಿ ದಂಪತಿ ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ಮೌಲ್ಯದ ಚಿನ್ನ, ವಜ್ರ, ಬೆಳ್ಳಿ, ನಗದು ದರೋಡೆ ನಡೆಸಿದ್ದಾರೆ. ಮಾರತ್ ಹಳ್ಳಿಯ...

Read moreDetails
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
Next Post
congress gurantees | ಮನೆ ಯಜಮಾನಿ.. ಮನೆ ಇಬ್ಭಾಗ.. ಮತ ಇಬ್ಭಾಗ.. ಕಾಂಗ್ರೆಸ್‌‌ಗೆ ಭೀತಿ..!

congress gurantees | ಮನೆ ಯಜಮಾನಿ.. ಮನೆ ಇಬ್ಭಾಗ.. ಮತ ಇಬ್ಭಾಗ.. ಕಾಂಗ್ರೆಸ್‌‌ಗೆ ಭೀತಿ..!

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada