
ವಾಲ್ಮೀಕಿ ನಿಗಮದ ಹಗರಣ ದಿನಕ್ಕೊಂದು ಟರ್ನ್ ಅಂಡ್ ಟ್ವಿಸ್ಟ್ ಪಡೀತಿದೆ. ವಿಚಾರಣೆ ವೇಳೆ ಮಾಜಿ ಸಚಿವ ನಾಗೇಂದ್ರ ಹೆಸರನ್ನು ಹೇಳುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಒತ್ತಡ ಹಾಕಿದರು ಮತ್ತು ಮಾನಸಿಕವಾಗಿ ಚಿತ್ರಹಿಂಸೆ ನೀಡಿದರು ಎಂದು ಆರೋಪಿಸಿ ನಿಗಮದ ಹಿಂದಿನ ಎಂಡಿ ಕಲ್ಲೇಶ್, ಇಡಿ ಅಧಿಕಾರಿಗಳ ವಿರುದ್ಧವೇ ಪೊಲೀಸರಿಗೆ ದೂರು ನೀಡಿದ್ದಾರೆ.
ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಜಾರಿ ನಿರ್ದೇಶನಾಲಯ Enforcement Directorate ವಿರುದ್ಧ FIR ದಾಖಲಾಗಿದೆ. ಮುರಳಿ ಕಣ್ಣನ್, ಮಿತ್ತಲ್ ಎಂಬ ಅಧಿಕಾರಿಗಳ ವಿರುದ್ಧ ಕಲ್ಲೇಶ್ ಆರೋಪ ಮಾಡಿದ್ದಾರೆ. ಜುಲೈ 16 ರಂದು ನಡೆದ ವಿಚಾರಣೆ ವೇಳೆ ಕಣ್ಣನ್ 17 ಪ್ರಶ್ನೆಗಳನ್ನು ಕೇಳಿದ್ದು, ಅದಕ್ಕೆ ಅವರು ತಕ್ಷಣವೇ ಉತ್ತರ ನೀಡಿರುವುದಾಗಿ ಕಲ್ಲೇಶ್ ಹೇಳಿದ್ದಾರೆ. ಇದೇ ವೇಳೆ ಪ್ರಕರಣದಲ್ಲಿ ಸಿಲುಕಿಸುವುದಾಗಿ ಮಿತ್ತಲ್ ಬೆದರಿಕೆ ಹಾಕಿದ್ದಾರೆ ಎಂದು ಕಲ್ಲೇಶ್ ದೂರಿದ್ದಾರೆ.
ಜಾರಿ ನಿರ್ದೇಶನಾಯಲ ಸಹಾಯ ಬೇಕಾದರೆ ಮಾಜಿ ಸಚಿವ ನಾಗೇಂದ್ರ ಮತ್ತು ಹಣಕಾಸು ಇಲಾಖೆ ಹೆಸರು ಹೇಳುವಂತೆ ಹೇಳಿದ್ದಾರೆ ಅಂತ ದೂರಿನಲ್ಲಿ ತಿಳಿಸಲಾಗಿದೆ. ಈ ವಿಚಾರ ರಾಜ್ಯ ಸರ್ಕಾರ ವರ್ಸಸ್ ಇಡಿ ಅಧಿಕಾರಿಗಳ ನಡುವೆ ಸಂಘರ್ಷಕ್ಕೆ ಕಾರಣವಾಗುವ ಎಲ್ಲಾ ಲಕ್ಷಣಗಳನ್ನು ಈ ಆರೋಪ ತೋರಿಸುತ್ತಿದೆ. ಈ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸ್ರು ತನಿಖೆಯನ್ನು ಹೇಗೆ ಮಾಡ್ತಾರೆ ಅನ್ನೋ ಕುತೂಹಲ ಹೆಚ್ಚಾಗಿದೆ.
ಈ ನಡುವೆ ವಾಲ್ಮೀಕಿ ನಿಗಮದ ಹರಣದಲ್ಲಿ ಜೈಲು ಸೇರಿರೋ ಮಾಜಿ ಸಚಿವ ಬಿ. ನಾಗೇಂದ್ರ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾತ್ರಿ ಕಳೆದಿದ್ದಾರೆ. ಜೈಲಿನಲ್ಲಿ ನಾಗೇಂದ್ರಗೆ 7140 ಯುಟಿಪಿ ನಂಬರ್ ನೀಡಲಾಗಿದೆ. ಇಡಿ ಕಸ್ಟಡಿ ಅಂತ್ಯವಾಗಿದ್ರಿಂದ ನಿನ್ನೆ ನಾಗೇಂದ್ರ ಅವ್ರನ್ನ ಜನಪ್ರತಿನಿಧಿಗಳ ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ನಾಗೇಂದ್ರಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿತ್ತು.




