• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸ್ಟಾರ್ ನಾಯಕರ ಮಾತೇ ಮುಳುವಾಯಿತಾ? ಬಾಗಲಕೋಟೆಯಲ್ಲಿ ಬಿಜೆಪಿ ಸೋಲಿನ ಹಿಂದೆ ‘ನಾಲಿಗೆಯ ದೋಷ’ ಚರ್ಚೆ

ಪ್ರತಿಧ್ವನಿ by ಪ್ರತಿಧ್ವನಿ
May 5, 2026
in Top Story
0
ಸ್ಟಾರ್ ನಾಯಕರ ಮಾತೇ ಮುಳುವಾಯಿತಾ? ಬಾಗಲಕೋಟೆಯಲ್ಲಿ ಬಿಜೆಪಿ ಸೋಲಿನ ಹಿಂದೆ ‘ನಾಲಿಗೆಯ ದೋಷ’ ಚರ್ಚೆ
Share on WhatsAppShare on FacebookShare on Telegram

ಸುಲಭವಾಗಿ ಗೆಲ್ಲಬಹುದಾಗಿದ್ದ ಕ್ಷೇತ್ರದಲ್ಲಿ ಬಿಜೆಪಿ ಸೋಲು ಕಂಡ ಹಿನ್ನೆಲೆ ಬಾಗಲಕೋಟೆ ಪಕ್ಷ ಪಾಳಯದಲ್ಲಿ ತೀವ್ರ ಆತ್ಮಾವಲೋಕನ ಆರಂಭವಾಗಿದೆ. ಭದ್ರಕೋಟೆಯಲ್ಲೇ ಕಮಲ ಬಾಡಲು ಕಾರಣವೇನು ಎಂಬ ಪ್ರಶ್ನೆ ನಾಯಕರನ್ನೇ ಕಾಡುತ್ತಿದೆ.ಈ ಸೋಲಿಗೆ ವಿರೋಧ ಪಕ್ಷದ ಬಲಿಷ್ಠ ಪ್ರಚಾರಕ್ಕಿಂತಲೂ ಸ್ವಪಕ್ಷದ ಸ್ಟಾರ್ ನಾಯಕರ ವಿವಾದಾತ್ಮಕ ಹೇಳಿಕೆಗಳೇ ಪ್ರಮುಖ ಕಾರಣ ಎನ್ನುವ ಆರೋಪಗಳು ಕೇಳಿಬರುತ್ತಿವೆ.

ADVERTISEMENT
TVK Vijay : ಎಲ್ಲೆಲ್ಲೂ ಬ್ಯಾರಿಕೇಡ್, ಖಾಕಿ ಹದ್ದಿನ ಕಣ್ಗಾವಲು..! #vijay #tvk #pratidhvani

ಪ್ರಚಾರಕ್ಕೆ ಬಂದ ಕೆಲ ನಾಯಕರ ಮಾತುಗಳು ಅಹಿಂದ ಮತಗಳನ್ನು ದೂರ ಮಾಡಿದ್ದು, ಬಿಜೆಪಿಗೆ ಬರಬೇಕಿದ್ದ ಮತಗಳು ಕೈತಪ್ಪುವಂತಾಗಿದೆ ಎಂದು ಸ್ಥಳೀಯ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಪ್ರಚಾರದ ವೇಳೆ ನೀಡಿದ ಹೇಳಿಕೆಗಳಿಂದಲೇ ಸೋಲು ಸಂಭವಿಸಿತೇ ಎಂಬ ಚರ್ಚೆ ಜೋರಾಗಿದೆ. ವಿಶೇಷವಾಗಿ ಸಿಸಿ ಪಾಟೀಲ್, ಪ್ರತಾಪ್ ಸಿಂಹ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗಳು ಪಕ್ಷಕ್ಕೆ ಮುಳುವಾಯಿತೇ ಎಂಬ ಪ್ರಶ್ನೆ ಎದ್ದಿದೆ.ಮಾಜಿ ಸಚಿವ ಸಿಸಿ ಪಾಟೀಲ್ ನೀಡಿದ ಕೆಲವು ಹೇಳಿಕೆಗಳು ಎರಡು ಪ್ರಮುಖ ಸಮುದಾಯಗಳನ್ನು ಬಿಜೆಪಿ ವಿರುದ್ಧ ತಿರುಗಿಸಿವೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಕುರಿತು ನೀಡಿದ ಟೀಕೆಗಳು ಕುರುಬ ಸಮುದಾಯದ ಅಸಮಾಧಾನಕ್ಕೆ ಕಾರಣವಾದರೆ, ಅಲ್ಪಸಂಖ್ಯಾತರ ಬಗ್ಗೆ ಮಾಡಿದ ಹೇಳಿಕೆಗಳು ಮತಗಳ ಮೇಲೆ ಪರಿಣಾಮ ಬೀರಿವೆ ಎಂದು ಹೇಳಲಾಗುತ್ತಿದೆ.

TVK leader Vijay : ಟಿವಿಕೆ ಪಕ್ಷದ ಕಚೇರಿಗೆ ಬಂದ ನಟ ವಿಜಯ್‌..! #vijay #tvk #thalapathy #pratidhvani

ಇನ್ನೊಂದೆಡೆ ಪ್ರತಾಪ್ ಸಿಂಹ ಅವರ ವೈಯಕ್ತಿಕ ಟೀಕೆಗಳು ಸುಮಾರು 35 ಸಾವಿರ ಕುರುಬ ಮತಗಳನ್ನು ಬಿಜೆಪಿ ವಿರುದ್ಧ ಕೊಂಡೊಯ್ದವು ಎಂಬ ವಿಶ್ಲೇಷಣೆ ಕೇಳಿಬರುತ್ತಿದೆ. ಸಮುದಾಯದ ಮತದಾರರು ಒಗ್ಗಟ್ಟಾಗಿ ಕಾಂಗ್ರೆಸ್ ಪರ ನಿಂತ ಪರಿಣಾಮ ಬಿಜೆಪಿ ಹಿನ್ನಡೆ ಅನುಭವಿಸಿತು ಎನ್ನಲಾಗುತ್ತಿದೆ.ಬಸನಗೌಡ ಪಾಟೀಲ್ ಯತ್ನಾಳ್ ಅವರ ನಡೆ ಕೂಡ ಪಕ್ಷದೊಳಗಿನ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರಚಾರದ ವೇಳೆ ಸ್ವಪಕ್ಷ ನಾಯಕರನ್ನೇ ಟೀಕಿಸಿದ ಹೇಳಿಕೆಗಳು ಹಾಗೂ ಹಿರಿಯ ನಾಯಕರ ವಿರುದ್ಧ ಕಿಡಿಕಾರಿದ ಮಾತುಗಳು ಮತದಾರರಿಗೆ ತಪ್ಪು ಸಂದೇಶ ನೀಡಿವೆ. ಇದರಿಂದ ಲಿಂಗಾಯತ ಮತಗಳ ಮೇಲೂ ಪರಿಣಾಮ ಬೀರಿದೆ ಎಂದು ಪಕ್ಷದ ಒಳವಲಯದಲ್ಲಿ ಮಾತುಕತೆ ನಡೆಯುತ್ತಿದೆ.

Siddaramaiah : ಮಾಧ್ಯಮದವರ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಉತ್ತರ ಹೇಗಿತ್ತು ನೋಡಿ..!

ಸ್ಥಳೀಯ ನಾಯಕರು ನಡೆಸಿದ ಒಳಚರ್ಚೆಗಳಲ್ಲಿ ಈ ಅಸಮಾಧಾನ ಸ್ಪಷ್ಟವಾಗಿ ಹೊರಬಂದಿದ್ದು, “ಪ್ರಚಾರಕ್ಕೆ ಬಂದ ನಾಯಕರು ಗೆಲುವಿಗೆ ನೆರವಾಗುವ ಬದಲು ಸೋಲಿಗೆ ಕಾರಣರಾದರು” ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಇದೀಗ ಈ ‘ಸೆಲ್ಫ್ ಗೋಲ್’ ಕುರಿತು ಬಿಜೆಪಿ ಹೈಕಮಾಂಡ್ ಯಾವ ಕ್ರಮ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

Tags: #bjp#CongressVictory#ElectionAnalysis#electionresults#KarnatakaPolitics#StarCampaignersBagalkotByElectionPoliticalDebatePoliticalSpeech
Previous Post

ಬೆಂಗಳೂರು ಜಾಗತಿಕ ನಗರಗಳ ಜತೆ ಸ್ಪರ್ಧಿಸುವಂತೆ ಮಾಡಲಾಗುವುದು: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಪೋಕ್ಸೋ ಆರೋಪಿಗೆ ಕೊಲೆ: ಮಗಳ ತಂದೆಯೇ ಸೂತ್ರಧಾರ? ಬೆಂಗಳೂರಿನಲ್ಲಿ ಭೀಕರ ಘಟನೆ

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
Next Post
ಸ್ಟಾರ್ ನಾಯಕರ ಮಾತೇ ಮುಳುವಾಯಿತಾ? ಬಾಗಲಕೋಟೆಯಲ್ಲಿ ಬಿಜೆಪಿ ಸೋಲಿನ ಹಿಂದೆ ‘ನಾಲಿಗೆಯ ದೋಷ’ ಚರ್ಚೆ

ಪೋಕ್ಸೋ ಆರೋಪಿಗೆ ಕೊಲೆ: ಮಗಳ ತಂದೆಯೇ ಸೂತ್ರಧಾರ? ಬೆಂಗಳೂರಿನಲ್ಲಿ ಭೀಕರ ಘಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada