
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ದರ್ಶನ್ಗೆ ಐಟಿ ಸಂಕಷ್ಟ ಎದುರಾಗಿದೆ. ಹೈ ಸೆಕ್ಯುರಿಟಿ ಸೆಲ್ನಿಂದ ಜೈಲು ಅಧೀಕ್ಷಕರ ಕಚೇರಿಗೆ ದರ್ಶನ್ ಕರೆತಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಿಚಾರಣೆ ಮಾಡಿದ್ದಾರೆ. ಲೆಕ್ಕ ಪರಿಶೋಧಕರು, ಜೈಲು ಅಧೀಕ್ಷಕಿ ಲತಾ ಸಮ್ಮುಖದಲ್ಲಿ ದರ್ಶನ್ ವಿಚಾರಣೆ ನಡೆಸಿದ್ದಾರೆ.

ಐಟಿ ವಿಚಾರಣೆ ಮಧ್ಯೆ ದರ್ಶನ್ ಭೇಟಿ ಮಾಡಲು ಆಪ್ತರು ಜೈಲಿಗೆ ಭೇಟಿ ನೀಡಿದ್ದಾರೆ. ಬೆಳಗ್ಗೆ ಭೇಟಿಗೆ ಪರ್ಮಿಷನ್ ಪಡೆದಿದ್ದರು. ಆದರೆ ಐಟಿ ಅಧಿಕಾರಿಗಳು ವಿಚಾರಣೆಗೆ ಬಂದಿದ್ರಿಂದ ಸಂಜೆ ಭೇಟಿ ಮಾಡಿದ್ದಾರೆ. ಜೆ.ಬಿ ಪ್ರಕಾಶ್, ಸುನೀಲ್ ಕುಮಾರ್ ಮತ್ತು ಶ್ರೀನಿವಾಸ್ ದರ್ಶನ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ದರ್ಶನ್ ಕುಟುಂಬದ ಒಪ್ಪಿಗೆ ಪಡೆದು ದರ್ಶನ್ ಭೇಟಿ ಮಾಡಿದ್ದಾರೆ. ಈ ಮೂಲಕ ನಿರ್ದೇಶಕರು ಮತ್ತು ನಿರ್ಮಾಪಕರು ದರ್ಶನ್ಗೆ ನೈತಿಕ ಬೆಂಬಲ ನೀಡಿದ್ದಾರೆ.

ಬಳ್ಳಾರಿ ಜೈಲಲ್ಲಿ ದರ್ಶನ್ ವಿಚಾರಣೆ ನಡೆಯುತ್ತಿರುವ ಈ ಸಮಯದಲ್ಲೇ ದರ್ಶನ್ಗೆ 40 ಲಕ್ಷ ಹಣ ನೀಡಿದ್ದ ಬಗ್ಗೆ ಹೇಳಿಕೆ ನೀಡಿದ್ದ ಮಾಜಿ ಉಪ ಮೇಯರ್ ಮೋಹನ್ ರಾಜ್ಗೂ ಐಟಿ ವಿಚಾರಣೆ ಎದುರಾಗುವ ಸಾಧ್ಯತೆ ಇದೆ. ಕೇವಲ ದರ್ಶನ್ ವಿಚಾರಣೆ ಮಾತ್ರವಲ್ಲದೆ ಬೆಂಗಳೂರಿನ ಆರ್.ಆರ್.ನಗರದ ದರ್ಶನ್ ನಿವಾಸ ಸೇರಿ ಆಪ್ತರ ನಿವಾಸಗಳಲ್ಲೂ ಶೋಧ ಕಾರ್ಯ ನಡೆಸುವ ಸಾಧ್ಯತೆ ಹೆಚ್ಚಾಗಿದೆ.
