• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

ಪ್ರತಿಧ್ವನಿ by ಪ್ರತಿಧ್ವನಿ
February 7, 2026
in Top Story, ಕರ್ನಾಟಕ, ರಾಜಕೀಯ, ಸಿನಿಮಾ
0
BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು
Share on WhatsAppShare on FacebookShare on Telegram

ಬೆಂಗಳೂರು: ಹಿರಿಯ ನಿರ್ಮಾಪಕ ಕನಕಪುರ ಶ್ರೀನಿವಾಸ್(Kanakapura Srinivas) ಅವರು ತಮ್ಮ ವಿರುದ್ಧ ಆರೋಪ ಮಾಡಿದ ಹಿನ್ನೆಲೆಯಲ್ಲಿ ಕನ್ನಡ ಚಿತ್ರರಂಗದ ನಿರ್ದೇಶಕ ಪ್ರೇಮ್(Director Prem) ಫಿಲಂ ಚೇಂಬರ್‌ಗೆ ಲಿಖಿತ ದೂರು ಸಲ್ಲಿಸಿದ್ದಾರೆ.

ADVERTISEMENT
D K Shivakumar : ಕನಕಪುರಕ್ಕೆ ಮೆಡಿಕಲ್ ಕಾಲೇಜು ತಗೊಂಡು ಬಂದೆ ಬರ್ತಿನಿ  #pratidhvani #dkshivakumar #budget

ಇತ್ತೀಚೆಗೆ ನಡೆದ ಸಿನಿಮಾ ಸಂಬಂಧಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕನಕಪುರ ಶ್ರೀನಿವಾಸ್, ನಿರ್ದೇಶಕ ಪ್ರೇಮ್ ಸೇರಿದಂತೆ ಕೆಲವರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದರು. ಪ್ರೇಮ್ ಹಣ ಪಡೆದು ಸಿನಿಮಾ ಮಾಡಿಕೊಡದೇ ವಂಚಿಸಿದ್ದಾರೆ ಎನ್ನುವ ಅರ್ಥದಲ್ಲಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ನಿರ್ದೇಶಕ ಪ್ರೇಮ್ ಇದೀಗ ಅಧಿಕೃತವಾಗಿ ದೂರು ನೀಡಿದ್ದಾರೆ.́

ಖುದ್ದಾಗಿ ಫಿಲಂ ಚೇಂಬರ್‌ಗೆ ಆಗಮಿಸಿದ ಪ್ರೇಮ್, ನೂತನ ಅಧ್ಯಕ್ಷೆ ಜಯಮಾಲ ಅವರನ್ನು ಭೇಟಿ ಮಾಡಿ ಕನಕಪುರ ಶ್ರೀನಿವಾಸ್ ವಿರುದ್ಧ ಲಿಖಿತ ದೂರು ನೀಡಿದ್ದಾರೆ.

ದೂರಿನಲ್ಲಿ ಪ್ರೇಮ್ ಅವರು, ʼನಾನು ಕಳೆದ 25 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕ, ನಟ ಹಾಗೂ ನಿರ್ಮಾಪಕರಾಗಿ ಸೇವೆ ಸಲ್ಲಿಸುತ್ತಿದ್ದು, ನನ್ನ ವೃತ್ತಿ ಜೀವನದಲ್ಲಿ ಯಾವುದೇ ಕಪ್ಪುಚುಕ್ಕೆ ಇಲ್ಲದೆ ಕೆಲಸ ಮಾಡಿದ್ದೇನೆ. 2004ರಲ್ಲಿ ನಿರ್ಮಾಪಕ ಆರ್.ಎಸ್. ಶ್ರೀನಿವಾಸ್ ಅವರು ನನ್ನನ್ನು ಸಂಪರ್ಕಿಸಿ ಸಿನಿಮಾ ನಿರ್ದೇಶನ ಮಾಡಲು ಕೇಳಿಕೊಂಡು, ಮುಂಗಡವಾಗಿ 9 ಲಕ್ಷ ರೂ. ನೀಡಿದ್ದರು. ನಂತರ ಅವರಿಗಾಗಿ ಆಫೀಸ್ ತೆರೆಯಲಾಗಿದ್ದು, ತಂಡ ಕಟ್ಟಿಕೊಂಡು ಕಥೆ ಹಾಗೂ ಚಿತ್ರಕಥೆ ಮಾಡಲಾಯಿತು. ಆದರೆ ನಂತರ ಅವರು ಯಾವುದೇ ಪ್ರತಿಕ್ರಿಯೆ ನೀಡದೆ ಒಂದು ವರ್ಷ ಕಾಲ ನನ್ನ ಹಾಗೂ ನನ್ನ ತಂಡದ ಸಮಯವನ್ನು ವ್ಯರ್ಥ ಮಾಡಿದರುʼ.

Krishna Byre Gowda : ಅಧಿಕಾರಿಗಳಿಗೆ ಗಡುವು ನೀಡಿದ  ಕೃಷ್ಣಬೈರೇಗೌಡ #pratidhvani #krishnabyregowda

ʼಹಲವು ಬಾರಿ ಸಂಪರ್ಕಿಸಿದಾಗ ಅವರಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಸಿಗದೇ ಇದ್ದಾಗ ಒಂದು ವರ್ಷಗಳ ಕಾಲ ನನ್ನ ಹಾಗೂ ನನ್ನ ತಂಡದ ಸಮಯವನ್ನು ವ್ಯರ್ಥ ಮಾಡಿದ್ದಲ್ಲದೆ ಯಾವುದೇ ರೀತಿಯ ಹಣ ಕಾಸನ್ನು ನನ್ನ ಆಫೀಸ್‌ನ ವೆಚ್ಚಕ್ಕಾಗಲಿ, ನನ್ನ ಸಹ ನಿರ್ದೇಶಕರಿಗೆ ಹಾಗೂ ತಂಡಕ್ಕಾಗಲಿ ನೀಡಲಿಲ್ಲ. ಒಂದು ವರ್ಷಗಳ ಕಾಲ ಆಫೀಸ್‌ನ ಹಾಗೂ ತಂಡದ ಖರ್ಚು-ವೆಚ್ಚಗಳನ್ನು ನಾನೇ ಬರಿಸಿರುತ್ತೇನೆ, ಇದರಿಂದ ನನಗೆ ವೈಯಕ್ತಿಕವಾಗಿ 15 ರಿಂದ 20 ಲಕ್ಷ ಖರ್ಚು ಮಾಡಿದ್ದೇನೆ ಹಾಗೂ ನನಗೆ ಈ ಸಮಯದಲ್ಲಿ ಹಲವಾರು ನಿರ್ಮಾಪಕರು ನನಗೆ ನಿರ್ದೇಶಿಸಲು ಹಾಗೂ ನನಗೆ ಅವಕಾಶಗಳು ಬಂದಿದ್ದವು ನಾನು ಇವರ ಚಿತ್ರ ನಿರ್ದೇಶನ ಮಾಡಲು ಬಂದಂತಹ ಈ ಎಲ್ಲಾ ಅವಕಾಶಗಳನ್ನು ಕಳೆದುಕೊಂಡಿದ್ದಲ್ಲದೆ ಕೋಟಿಗಟ್ಟಲೆ ನಷ್ಟವನ್ನು ಅನುಭವಿಸಿದ್ದೇನೆʼ ಎಂದರು.

Lakshmi Hebbalkar - Satish Jarkiholi | ಲಕ್ಷ್ಮಿ ಬೌಲಿಂಗ್​​ಗೆ ಬೋಲ್ಡ್​ ಆದ ಸತೀಶ್ ಜಾರಕಿಹೊಳಿ  #pratidhvani

ಅದೇ ಅವಧಿಯಲ್ಲಿ ಆಫೀಸ್ ಹಾಗೂ ತಂಡದ ಖರ್ಚುಗಳನ್ನು ತಾವೇ ಭರಿಸಿದ್ದು, ಸುಮಾರು 15 ರಿಂದ 20 ಲಕ್ಷ ರೂ. ವೈಯಕ್ತಿಕ ನಷ್ಟವಾಗಿದೆ ಎಂದು ಪ್ರೇಮ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಕಾರಣದಿಂದ ಬೇರೆ ಸಿನಿಮಾಗಳ ಅವಕಾಶಗಳನ್ನು ಕೂಡ ಕಳೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ. ಕನಕಪುರ ಶ್ರೀನಿವಾಸ್ ಅವರು ಸಾರ್ವಜನಿಕವಾಗಿ ಆರೋಪ ಮಾಡಿದ ಹಿನ್ನೆಲೆ ಇದೀಗ ಈ ವಿಷಯ ಫಿಲಂ ಚೇಂಬರ್ ಮಟ್ಟಕ್ಕೆ ತಲುಪಿದ್ದು, ಮುಂದಿನ ಕ್ರಮದ ಬಗ್ಗೆ ಕುತೂಹಲ ಮೂಡಿಸಿದೆ.

Tags: Director PremFilm ChamberKanakapura SrinivasKannadakannada moviessandalwoodSocial MediaViral Video
Previous Post

ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

Next Post

Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

Related Posts

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ
Top Story

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

by ಪ್ರತಿಧ್ವನಿ
February 8, 2026
0

ರಾಯಚೂರು: ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪೂರ ಅವರ ಪುತ್ರನ ಮದುವೆ ಸಮಾರಂಭಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅಧಿಕಾರಿಗಳ ಎಡವಟ್ಟಿನಿಂದಾಗಿ ಲಿಂಗಸುಗೂರಿನಲ್ಲಿ...

Read moreDetails
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

February 8, 2026
Next Post
Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada