• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

PSI ಹಗರಣದ ಎಲ್ಲಾ ಆರೋಪಿತ ಮಂತ್ರಿಗಳನ್ನು ವಜಾಗೊಳಿಸಿ : ಸಿಎಂಗೆ ಸಿದ್ದರಾಮಯ್ಯ ಪತ್ರ

Any Mind by Any Mind
May 27, 2022
in ಕರ್ನಾಟಕ
0
ಮೇಕೆದಾಟು ಪಾದಯಾತ್ರೆ 2.0| ನಮೋ ನಮೋ ಎಂದು ಜಪಿಸಿದ ಸಿದ್ದರಾಮಯ್ಯ
Share on WhatsAppShare on FacebookShare on Telegram

ಪಿಎಸ್ಐ ನೇಮಕ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲೇಬೇಕಾದ ಅನಿವಾರ್ಯತೆ ಇರುವುದರಿಂದ ಹಾಲಿ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಿ, ಹಗರಣದಲ್ಲಿ ಎಷ್ಟೇ ಪ್ರಭಾವಿ ವ್ಯಕ್ತಿಯಿದ್ದರೂ ಸಹ ಅವರಿಗೆ ಶಿಕ್ಷೆ ವಿಧಿಸಬೇಕು. ಜೊತೆಗೆ ಯಾವ ಮಂತ್ರಿಗಳ ಮೇಲೆ ಆರೋಪವಿದೆಯೋ ಕೂಡಲೆ ಅವರನ್ನು ಮಂತ್ರಿ ಮಂಡಲದಿಂದ ವಜಾ ಮಾಡಿ, ತನಿಖೆ ನಿಷ್ಪಕ್ಷಪಾತವಾಗಿ ನಡೆಯುವಂತೆ ನೋಡಿಕೊಳ್ಳಬೇಕೆಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ADVERTISEMENT

ಈ ಕುರಿತು ಅವರು ಮುಖ್ಯಮಂತ್ರಿಗಳಿಗೆ ಬರೆದಿರಯವ ಪತ್ರದ ಪೂರ್ಣ ಪಾಠ ಹೀಗಿದೆ,

ಸಬ್ ಇನ್‍ಸ್ಪೆಕ್ಟರ್ ನೇಮಕಾತಿ ಹಗರಣದ ಕುರಿತು ಕೆಲವು ಮಾಧ್ಯಮಗಳು ಮತ್ತು ವಿರೋಧ ಪಕ್ಷಗಳು ದಾಖಲೆಗಳನ್ನು ಬಿಡುಗಡೆ ಮಾಡಿದ ನಂತರ ದಿನಾಂಕ: 10-4-2022 ರಂದು ಸಿಐಡಿ ತನಿಖೆಗೆ ಒಪ್ಪಿಸಲಾಯಿತು. ನಾವು ಆಗಲೂ ಸಿಐಡಿ ತನಿಖೆಯನ್ನು ವಿರೋಧಿಸಿದ್ದೆವು. ಇದಕ್ಕೆ ಮುಖ್ಯ ಕಾರಣ ಈ ಪ್ರಕರಣದಲ್ಲಿ ಸರ್ಕಾರದಲ್ಲಿರುವ ಪ್ರಬಲ ವ್ಯಕ್ತಿಗಳು ಭಾಗಿಯಾಗಿದ್ದಾರೆ. ಅವರನ್ನು ಧೈರ್ಯವಾಗಿ ವಿಚಾರಣೆ ನಡೆಸಿ ಬಂಧಿಸುವ ತಾಕತ್ತು ಸಿಐಡಿಗೆ ಇಲ್ಲ, ಹಾಗಾಗಿ ಈ ಪ್ರಕರಣವನ್ನು ರಾಜ್ಯ ಉಚ್ಛ ನ್ಯಾಯಾಲಯದ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದೆವು. ಈ ಕುರಿತು ಕಳೆದ ಅಧಿವೇಶನದಲ್ಲೂ ಆಗ್ರಸಿದ್ದೆವು. ಆದರೆ ಸರ್ಕಾರಕ್ಕೆ ಒಳಗೊಳಗೆ ಭಯವಿದ್ದ ಕಾರಣಕ್ಕೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲಿಲ್ಲ. ಪ್ರಬಲ ತಿಮಿಂಗಿಲಗಳನ್ನು ಹಿಡಿದು ತನಿಖೆ ನಡೆಸುವ ಶಕ್ತಿ ಸಿಐಡಿಗೆ ಇಲ್ಲ ಎಂದು ನಾವು ಹೇಳಿದ್ದ ಮಾತಿನಂತೆಯೇ ಈಗ ಈ ತನಿಖಾ ಸಂಸ್ಥೆಯು ನಡೆದುಕೊಳ್ಳುತ್ತಿದೆ. ಇಷ್ಟು ದಿನವಾದರೂ ಸಹ ಒಬ್ಬನೆ ಒಬ್ಬ ಪ್ರಭಾವಿಯನ್ನು ಅಥವಾ ವಿಧಾನಸೌಧದಲ್ಲಿ ಕೂತವರನ್ನು ತನಿಖೆಗೆ ಒಳಪಡಿಸಿಲ್ಲ. ಜನರ ಕಣ್ಣ ಮುಂದೆಯೆ ಹಲವಾರು ಸಾಕ್ಷಿಗಳಿದ್ದರೂ ಸಹ ಜನರೆ ಹಲವಾರು ಪ್ರಶ್ನೆಗಳನ್ನು ಕೇಳುತ್ತಿದ್ದರೂ ಸಹ ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿಲ್ಲ. ಇದನ್ನು ನೋಡಿದರೆ ಇಡೀ ಹಗರಣವನ್ನು ನಿಧಾನಕ್ಕೆ ಕತ್ತು ಹಿಸುಕಿ ಮೂಲೆಗೆ ಎಸೆಯುವ ಹುನ್ನಾರ ಕಾಣಿಸುತ್ತಿದೆ.

ಸರ್ಕಾರ ಆರಂಭದಿಂದಲೂ ನೇಮಕಾತಿಯಲ್ಲಿ ಹಗರಣಗಳೆ ನಡೆದಿಲ್ಲವೆಂದು ಪ್ರತಿಪಾದಿಸುವ ಕೆಲಸ ಮಾಡಿತು. ಸ್ವತಃ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪಿಎಸ್‍ಐ ನೇಮಕಾತಿಯಲ್ಲಿ ಯಾವುದೇ ಲೋಪ ನಡೆದಿಲ್ಲ, ಹಗರಣ ಕೂಡ ನಡೆದಿಲ್ಲ ಎಂದು ವಿಧಾನಸಭಾ ಅಧಿವೇಶನದಲ್ಲೇ ಸುಳ್ಳು ಹೇಳಿದರು. ತನಿಖೆಯನ್ನು ಸಿಐಡಿಗೆ ವಹಿಸುವುದು ನಿಮಗೂ ಅನಿವಾರ್ಯ ಆಗುವಷ್ಟು ಸಾಕ್ಷ್ಯಗಳು ಬಹಿರಂಗಗೊಂಡವು. ಹಾಗಾಗಿ ತನಿಖೆಗೆ ವಹಿಸಿದಿರಿ. ಆದರೆ ಇದುವರೆಗೆ ಸಿಐಡಿ ತನಿಖೆಯಿಂದ ಸಾಧಿಸಿದ್ದಾದರೂ ಏನು ?

ಒಬ್ಬೊಬ್ಬ ಪಿಎಸ್‍ಐ ನೇಮಕಕ್ಕೆ 30 ಲಕ್ಷದಿಂದ ಒಂದೂವರೆ ಕೋಟಿ ರೂಪಾಯಿವರೆಗೂ ಹಣ ಪಡೆಯಲಾಗಿದೆ ಎನ್ನುವ ಸಂಗತಿ ಸಿಐಡಿ ತನಿಖೆಯಿಂದ ಹೊರಗೆ ಬಂತು. ನೇಮಕಾತಿಗಾಗಿ ಹಣ ಕೊಟ್ಟ, ಹಣಕ್ಕಾಗಿ ಮಧ್ಯವರ್ತಿಗಳಾಗಿ ಕೆಲಸ ಮಾಡಿದ್ದ ಸಣ್ಣ ಪುಟ್ಟ ಕೆಲವರನ್ನು ಬಂಧಿಸಿದಿರಿ. ಆದರೆ ನೂರಾರು ಕೋಟಿ ಹಣ ಯಾರ ಕೈ ಸೇರಿತು ಎನ್ನುವುದನ್ನು ಬಹಿರಂಗಗೊಳಿಸಲೇ ಇಲ್ಲ. ಹಣ ಪಡೆದ ದೊಡ್ಡ ತಲೆಗಳನ್ನು ಈ ಕ್ಷಣಕ್ಕೂ ಬಂಧಿಸಿಲ್ಲ. ನೆಪಕ್ಕೂ ಅವರನ್ನು ತನಿಖೆಗೆ ಒಳಪಡಿಸಿಲ್ಲ. ಒಂದು ನೋಟಿಸ್ ಕೂಡ ನೀಡಿಲ್ಲ. ಪಡೆದಿದ್ದ ಲಂಚದ ಹಣದಲ್ಲಿ ಶೇ 10 ರಷ್ಟನ್ನೂ ಇನ್ನೂ ವಶಪಡಿಸಿಕೊಂಡಿಲ್ಲ.

ಆದರೆ, ಹಗರಣದ ಬಗ್ಗೆ ಧ್ವನಿ ಎತ್ತಿದ್ದ ನಮ್ಮ ಪಕ್ಷದ ಶಾಸಕರಿಗೆ ನೋಟಿಸ್ ಮೇಲೆ ನೋಟಿಸ್ ನೀಡಿ ತನಿಖೆಯ ದಿಕ್ಕು ತಪ್ಪಿಸಲು ಹೆಣಗಾಡಿದಿರಿ.

ಹಲವಾರು ವಕೀಲರುಗಳು, ನಾಗರಿಕ ಸಂಘಟನೆಗಳು ಮತ್ತು ಭ್ರಷ್ಟಾಚಾರ ವಿರೋಧಿ ಹೋರಾಟಗಾರರು ಪಿಎಸ್‍ಐ ಹಗರಣದಲ್ಲಿ ಐದು ಮಂದಿ ಸಚಿವರ ನೇರ ಕೈವಾಡ ಇದೆ. ನೂರಾರು ಕೋಟಿ ಹಣ ಈ ಐದು ಮಂದಿ ಸಚಿವರ ಕಿಸೆ ಸೇರಿದೆ. ಮಾಜಿ ಮುಖ್ಯಮಂತ್ರಿಗಳೊಬ್ಬರ ಪುತ್ರ ಹಗರಣದಲ್ಲಿ ನೇರ ಭಾಗಿ ಆಗಿದ್ದು ಒಟ್ಟು 514 ಪಿಎಸ್‍ಐ ಹುದ್ದೆಗಳಲ್ಲಿ ಇವರ ಸೂಚನೆ ಮೇರೆಗೇ 63 ಕ್ಕೂ ಹೆಚ್ಚು ಅಭ್ಯರ್ಥಿಗಳ ನೇಮಕಾತಿ ನಡೆದಿದೆ ಎನ್ನುವ ನೇರ ಆರೋಪಗಳನ್ನು ಮಾಡಿದ್ದಾರೆ. ಆದರೆ ಸಿಐಡಿ ಮಾತ್ರ ಇದ್ಯಾವುದನ್ನೂ ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಈ ಕುರಿತು ಸಿಐಡಿಯು ಇದುವರೆಗೆ ಅವರುಗಳಿಗೆ ನೋಟೀಸ್ ನೀಡಿ ವಿಚಾರಣೆ ನಡೆಸಿಲ್ಲ. ಆದರೆ ಹಗರಣಗಳನ್ನು ಬೆಳಕಿಗೆ ತರಲು ಪ್ರಯತ್ನಿಸಿದ ನಮ್ಮ ಪಕ್ಷದ ಶಾಸಕರಿಗೆ ಮಾತ್ರ ಮೇಲಿಂದ ಮೇಲೆ ನೋಟಿಸ್ ನೀಡಿದ್ದೀರಿ. ಇದುವರೆಗೂ ಸಹ ವಿಧಾನಸೌಧ ಮುಂತಾದ ಕಡೆ ಕೂತಿರುವ ಹಗರಣದ ರೂವಾರಿಗಳನ್ನು ಮುಟ್ಟುವ ಕೆಲಸ ಮಾಡಿಲ್ಲ. ಏನಿದರ ಅರ್ಥ? ಯಾರನ್ನು ರಕ್ಷಿಸಲು ಈ ತನಿಖೆ ನಡೆಯುತ್ತಿದೆ.

ಇದನ್ನು ನೋಡಿದರೆ ಸರ್ಕಾರ ನೆಪಕ್ಕೆ ಮಾತ್ರ ಜನರ ಕಣ್ಣೊರೆಸಲು ಸಿಐಡಿ ತನಿಖೆ ನಡೆಸುತ್ತಿರುವಂತಿದೆ. ಒಂದೊಂದು ಹುದ್ದೆಗೂ ಪಡೆದ ಲಕ್ಷಗಟ್ಟಲೆ, ಕೋಟಿಗಟ್ಟಲೆ ಹಣ ಯಾರ ಕೈ ಸೇರಿದೆ? ಸರ್ಕಾರದ ದೊಡ್ಡ ತಲೆಗಳ ಸೂಚನೆ ಇಲ್ಲದೆ ಕೇವಲ ಕೆಳ ಹಂತದ ಅಧಿಕಾರಿಗಳು ನೂರಾರು ಕೋಟಿ ಹಣವನ್ನು ಸುಲಿಗೆ ಮಾಡಲು, ತಾವೇ ನುಂಗಿ ಹಾಕಲು ಸಾಧ್ಯವಿಲ್ಲ. ಇದುವರೆಗೂ ತಪ್ಪಿತಸ್ಥ ಅಧಿಕಾರಿಗಳನ್ನು ಪುರಸ್ಕಾರದ ರೀತಿಯಲ್ಲಿ ವರ್ಗಾವಣೆ ಮಾಡಿದ್ದು ಬಿಟ್ಟರೆ ಯಾರನ್ನೂ ಬಂಧಿಸಿಲ್ಲ. ಅವರು ಪಡೆದ ಹಣವನ್ನೂ ವಶಪಡಿಸಿಕೊಂಡಿಲ್ಲ. ಹೀಗಾಗಿ ದೊಡ್ಡ ತಲೆಗಳನ್ನು ರಕ್ಷಿಸಲಿಕ್ಕೆಂದೇ ಸಿಐಡಿ ತನಿಖೆ ನಡೆಸಿರುವುದು ಖಚಿತವಾಗುತ್ತಿದೆ. ತನಿಖೆಗೆ ನಿರ್ಭೀತವಾಗಿ, ಪಾರದರ್ಶಕವಾಗಿ ನಡೆಯುತ್ತಿಲ್ಲ ಎಂಬುದು ಮೇಲ್ನೋಟಕ್ಕೆ ಕಾಣುತ್ತಿದೆ. ಈ ರೀತಿಯ ತನಿಖೆಯಿಂದ ಕಳ್ಳರನ್ನು ಹುಡುಕಿ ಶಿಕ್ಷಿಸಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಅವರು ಪತ್ರದಲ್ಲಿ ತಿಳಿಸಿದ್ದಾರೆ.

Tags: BJPCongress PartyCovid 19PSI ಹಗರಣಕೋವಿಡ್-19ನರೇಂದ್ರ ಮೋದಿಬಿಜೆಪಿಮಂತ್ರಿವಜಾಗೊಳಿಸಿಸಿಎಂ ಬೊಮ್ಮಾಯಿಸಿದ್ದರಾಮಯ್ಯ
Previous Post

ಹರಿಯಾಣ ಮಾಜಿ ಸಿಎಂ ಚೌಟಾಲಾಗೆ ನಾಲ್ಕು ವರ್ಷ ಸಜೆ

Next Post

ಆರ್‌ಎಸ್‌ಎಸ್ ಈ ದೇಶದ್ದಾ? ಅವರೇನು ದ್ರಾವೀಡರ? : ಸಿದ್ದರಾಮಯ್ಯ

Related Posts

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ
Top Story

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

by ಪ್ರತಿಧ್ವನಿ
July 13, 2025
0

ಅನುಭಾವಿಗಳ ವಿಚಾರಧಾರೆಗಳನ್ನು ತಿಳಿಸಿಕೊಟ್ಟ ತಜ್ಞರು ದಾವಣಗೆರೆ, ಜುಲೈ 13: ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ದಾವಣಗೆರೆಯ ತ್ರಿಶೂಲ ಭವನದಲ್ಲಿ ಹಮ್ಮಿಕೊಂಡಿದ್ದ ಬುದ್ಧ, ಬಸವ ಮತ್ತು ಅಂಬೇಡ್ಕರ: ಹೊಸ...

Read moreDetails
ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

July 13, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

July 12, 2025
Next Post
ಆರ್‌ಎಸ್‌ಎಸ್ ಈ ದೇಶದ್ದಾ? ಅವರೇನು ದ್ರಾವೀಡರ? : ಸಿದ್ದರಾಮಯ್ಯ

ಆರ್‌ಎಸ್‌ಎಸ್ ಈ ದೇಶದ್ದಾ? ಅವರೇನು ದ್ರಾವೀಡರ? : ಸಿದ್ದರಾಮಯ್ಯ

Please login to join discussion

Recent News

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ
Top Story

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

by ಪ್ರತಿಧ್ವನಿ
July 13, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

July 13, 2025
ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada