• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ಹಿಂದೆ ಡಿಕೆಶಿ ಕೈವಾಡ..?

ಕೃಷ್ಣ ಮಣಿ by ಕೃಷ್ಣ ಮಣಿ
July 30, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ಹಿಂದೆ ಡಿಕೆಶಿ ಕೈವಾಡ..?
Share on WhatsAppShare on FacebookShare on Telegram

ಮೈಸೂರಿನ ಮುಡಾ ಹಗರಣ ಕುರಿತು ಬಿಜೆಪಿ ಹಾಗು ಜೆಡಿಎಸ್‌ ಜಂಟಿಯಾಗಿ ಹೋರಾಟಕ್ಕೆ ಯೋಜನೆ ರೂಪಿಸಿವೆ. ಆಗಸ್ಟ್‌ 3 ರಿಂದ ಪಾದಯಾತ್ರೆ ಆರಂಭ ಆಗಲಿದೆ. ಆಗಸ್ಟ್‌ 10ರ ತನಕ ಪಾದಯಾತ್ರೆ ನಡೆಯಲಿದೆ. ಈ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಹಾಗು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಸಭೆಯನ್ನೂ ಮಾಡಲಾಗಿದೆ. ಆದರೆ ಈ ಹೋರಾಟ ಡಿಸಿಎಂ ಡಿ.ಕೆ ಶಿವಕುಮಾರ್‌ ಮೂಗಿನ ನೇರಕ್ಕೆ ನಡೆಯುತ್ತಿರುವ ಹೋರಾಟ ಎಂದು ಬಿಜೆಪಿ ನಾಯಕ ಯತ್ನಾಳ್‌ ನೇರವಾಗಿ ಆರೋಪ ಮಾಡಿದ್ದಾರೆ.

ADVERTISEMENT

ಸ್ವ ಪಕ್ಷೀಯ ನಾಯಕರ ವಿರುದ್ಧವೇ ವಾಗ್ದಾಳಿ ಮಾಡಿರುವ ಶಾಸಕ ಬಸನಗೌಡ ಪಾಟೀಲ್‌ಯತ್ನಾಳ್, ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದರೂರ ಗ್ರಾಮದಲ್ಲಿ ಮಾತನಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮುಡಾ ಹಗರಣದ ಕುರಿತು ಹೋರಾಟ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಡಿ.ಕೆ ಶಿವಕುಮಾರ್ ಅವರನ್ನ ಮುಖ್ಯಮಂತ್ರಿ ಮಾಡಲು ಹೋರಾಟ ಮಾಡುತ್ತಿದ್ದಾರೆ. ಇದನ್ನು ಬಹಿರಂಗ ಪಡಿಸಬೇಕು ಎಂದು ಆಗ್ರಹ ಮಾಡಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆದೇಶದಂತೆ ಬಿ.ವೈ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯರನ್ನ ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕೆ ಇಳಿಸಲು ಈ ಪಾದಯಾತ್ರೆ ನಡೆಯುತ್ತಿದೆ. ಪಾದಯಾತ್ರೆ ಹೊಂದಾಣಿಕೆ ರಾಜಕಾರಣ, ಡಿ.ಕೆ ಶಿವಕುಮಾರ್ ಉಪಕಾರ ತೀರಿಸಲು ಪಾದಯಾತ್ರೆ ಮಾಡಲಾಗ್ತಿದೆ. ಬಳ್ಳಾರಿಗೆ ಪಾದಯಾತ್ರೆ ವಿಚಾರಕ್ಕೂ ಪ್ರತಿಕ್ರಿಯೆ ನೀಡಿದ್ದು, ಕೇಂದ್ರದಿಂದ ಅನುಮತಿ ಪಡೆದು ಎಲ್ಲಿಂದ ಪಾದಯಾತ್ರೆ ಅನ್ನೋದು ತೀರ್ಮಾನ ಮಾಡಲಾಗುತ್ತದೆ ಎಂದಿದ್ದಾರೆ.

ವಾಲ್ಮೀಕಿ ನಿಗಮದ ಹಗರಣ ದೊಡ್ಡ ಹಗರಣ, ಸಮುದಾಯದ ಹಣ ನುಂಗಿದ್ದಾರೆ. ಯಾವುದೇ ಹೊಂದಾಣಿಕೆ ರಾಜಕಾರಣ ಮಾಡದೆ ನಾವು ಹೋರಾಟ ಮಾಡುತ್ತಿದ್ದೇವೆ. ಸರ್ಕಾರ ಗ್ಯಾರಂಟಿ ಯೋಜನೆ ತಡೆದಿರುವ ವಿಚಾರ, ಸರ್ಕಾರ ದಿವಾಳಿಯಾಗಿದೆ, ವರ್ಷಕ್ಕೆ 65 ಸಾವಿರ ಕೋಟಿ ಬೇಕು. 2 ಸಾವಿರ ಭಾಗ್ಯ ಲಕ್ಷ್ಮೀ ಹಣ ಕೂಡ 3 ತಿಂಗಳಿನಿಂದ ಬರುತ್ತಿಲ್ಲ. ಭಾಗ್ಯದ ಲಕ್ಷ್ಮಿ, ಲಕ್ಷ್ಮಿ ಅಕ್ಕಾ ಬೆಳಗಾವಿಯಲ್ಲೇ ಕೂತಿದ್ದಾರೆ. ಅಕ್ಕಾ ರೊಕ್ಕಾ ಕೊಡವ್ವಾ.. ಇಲ್ಲಾಂದ್ರೆ ಮನೆಗೆ ಹೋಗವ್ವಾ.. ಎಂದು ಹೋರಾಟ ಶುರು ಮಾಡಬೇಕಾಗುತ್ತದೆ ಎಂದಿದ್ದಾರೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್.

ಕೃಷ್ಣಮಣಿ

Tags: basavanagouda yatnalBJPCongress PartyDK Shivakumarಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಜಿ.ಟಿ ದೇವೇಗೌಡರ ಮನವೊಲಿಸಿದ ಕುಮಾರಸ್ವಾಮಿ.. ಇಂದು ಸಭೆ..

Next Post

ಮೋದಿ ಸರ್ಕಾರಕ್ಕೆ 2ನೇ ಬಾರಿ ಚಾರ್ಜ್‌ ಮಾಡಿದ ರಾಹುಲ್..!

Related Posts

2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು: AI ತಜ್ಞ
Top Story

2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು: AI ತಜ್ಞ

by ಪ್ರತಿಧ್ವನಿ
February 11, 2026
0

ಬುದ್ಧಿಮತ್ತೆ (AI) ಕ್ಷೇತ್ರದ ಪ್ರಮುಖ ತಜ್ಞರು ಜಾಗತಿಕ ಗಮನ ಸೆಳೆಯುತ್ತಿರುವ ಸಮಸ್ಯೆ ಕುರಿತು ಎಚ್ಚರಿಕೆಯನ್ನು ನೀಡಿದ್ದಾರೆ.ಲಾಟ್ವಿಯನ್ ಮೂಲದ ಕಂಪ್ಯೂಟರ್ ವಿಜ್ಞಾನಿ ಮತ್ತು ಲೂಯಿಸ್‌ವಿಲ್ಲೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ....

Read moreDetails
ಬೆಂಗಳೂರಿಗಾಗಿ ಕೆಂಪೇಗೌಡರ ಸೊಸೆ‌ ಲಕ್ಷ್ಮಿದೇವಿ ಮಾಡಿದ ಆತ್ಮತ್ಯಾಗ ಇದು!

ಬೆಂಗಳೂರಿಗಾಗಿ ಕೆಂಪೇಗೌಡರ ಸೊಸೆ‌ ಲಕ್ಷ್ಮಿದೇವಿ ಮಾಡಿದ ಆತ್ಮತ್ಯಾಗ ಇದು!

February 11, 2026
ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
Next Post
ಮೋದಿ ಸರ್ಕಾರಕ್ಕೆ 2ನೇ ಬಾರಿ ಚಾರ್ಜ್‌ ಮಾಡಿದ ರಾಹುಲ್..!

ಮೋದಿ ಸರ್ಕಾರಕ್ಕೆ 2ನೇ ಬಾರಿ ಚಾರ್ಜ್‌ ಮಾಡಿದ ರಾಹುಲ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada