• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚನ್ನ‘ಪಟ್ಟ’ಣ ‘ಕೈ’ವಶಕ್ಕೆ ಡಿಕೆ ಪ್ಲ್ಯಾನ್‌.. ಯೋಗೇಶ್ವರ್‌ಗೆ ಗಾಳ..!

ಕೃಷ್ಣ ಮಣಿ by ಕೃಷ್ಣ ಮಣಿ
October 21, 2024
in Top Story, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
ಚನ್ನ‘ಪಟ್ಟ’ಣ ‘ಕೈ’ವಶಕ್ಕೆ ಡಿಕೆ ಪ್ಲ್ಯಾನ್‌.. ಯೋಗೇಶ್ವರ್‌ಗೆ ಗಾಳ..!
Share on WhatsAppShare on FacebookShare on Telegram

ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣಾ ಟಿಕೆಟ್‌‌ ಮಿಸ್‌ ಆಗಿದ್ರಿಂದ, ಬಿಜೆಪಿಗೆ ಸಡ್ಡು ಹೊಡೆದಿರುವ ಸಿ.ಪಿ ಯೋಗೇಶ್ವರ್‌‌, ಹುಬ್ಬಳ್ಳಿಗೆ ತೆರಳಿ, ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಟಿಕೆಟ್‌ಗಾಗಿ ಬಾರಿ ಪೈಪೋಟಿ ನಡೆಸಿದ್ದ ಸಿ.ಪಿ ಯೋಗೇಶ್ವರ್, ಬಿಜೆಪಿಯಿಂದ ಟಿಕೆಟ್ ಸಿಗಲ್ಲ ಅನ್ನೋದು ಕನ್ಫರ್ಮ್‌ ಆಗುತ್ತಿದ್ದಂತೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಮುಂದಾಗಿದ್ದಾರೆ ಎನ್ನಲಾಗ್ತಿದೆ. ಹುಬ್ಬಳ್ಳಿಯ ಪಿಂಟೊ ರಸ್ತೆಯಲ್ಲಿರುವ ಹೊರಟ್ಟಿ ಮನೆಗೆ ಆಗಮಿಸಿ ರಾಜೀನಾಮೆ ಸಲ್ಲಿಸಿದ್ದಾರೆ. ಯೋಗೇಶ್ವರ್ ರಾಜೀನಾಮೆಯಿಂದ ಉಪಚುನಾವಣಾ ಕಣ ಕುತೂಹಲ ಮೂಡಿಸಿದೆ. ಕಾಂಗ್ರೆಸ್ ಸೇರುತ್ತಾರೋ‌ ಅಥವಾ ಪಕ್ಷೇತರ ಅಭ್ಯರ್ಥಿಯಾಗುತ್ತಾರೋ ಅನ್ನೋ ಕುತೂಹಲ ಹೆಚ್ಚಾಗಿದೆ.

ADVERTISEMENT

ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಲುವ ಮೂಲಕ ಬಿಜೆಪಿ ತೊರೆಯುವ ಮುನ್ಸೂಚನೆ ನೀಡಿರುವ ಸಿ ಪಿ ಯೋಗೇಶ್ವರ್‌‌ಗೆ ಗಾಳ ಹಾಕಲು ಕಾಂಗ್ರೆಸ್ ಮುಂದಾಗಿದೆ. ಸಿ.ಪಿ ಯೋಗೇಶ್ವರ್‌‌ ಅವರನ್ನು ಕಾಂಗ್ರೆಸ್‌ಗೆ ಕರೆ ತರುವ ಕಸರತ್ತು ಈಗಾಗಲೇ ಶುರುವಾಗಿದ್ದು, ಮಾಗಡಿ ಶಾಸಕ ಬಾಲಕೃಷ್ಣ ಹಾಗೂ ಮದ್ದೂರು ಶಾಸಕ ಕದಲೂರು ಉದಯ್ ಮೂಲಕ ಮಾತುಕತೆ ಮುಂದುವರಿದಿದೆ. ಯೋಗೇಶ್ವರ್‌‌ ಒಪ್ಪಿದರೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಚನ್ನಪಟ್ಟಣ ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗಿದೆ. ಯೋಗೇಶ್ವರ್‌‌ ಕಾಂಗ್ರೆಸ್‌‌ ಸೇರಲು ಸಿಎಂ ಸಿದ್ದರಾಮಯ್ಯ ಹಾಗು ಡಿ.ಕೆ ಶಿವಕುಮಾರ್‌ ಕೂಡ ಗ್ರೀನ್ ಸಿಗ್ನಲ್‌ ಕೊಟ್ಟಿದ್ದಾರೆ ಎನ್ನಲಾಗಿದೆ. ಚನ್ನಪಟ್ಟಣ ಗೆಲುವಿಗಾಗಿ ತೆಗೆದುಕೊಳ್ಳುವ ಯಾವುದೇ ತೀರ್ಮಾನಕ್ಕೂ ಬೆಂಬಲ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾಗಿದೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಗರದಲ್ಲಿ ಈ ಬಗ್ಗೆ ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸಂಪರ್ಕದಲ್ಲಿ ಇದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನನ್ನ ಜೊತೆ ಯಾರೂ ಸಂಪರ್ಕದಲ್ಲಿ ಇಲ್ಲ, ಕುಮಾರಸ್ವಾಮಿಗೆ ಏನೇನೋ ಮಾಹಿತಿ ಬರುತ್ತಿರಬಹುದು. ಜಾತ್ಯತೀತ ಜನತಾ ದಳದವರು, ಬೇರೆ ಬೇರೆ ಪಾರ್ಟಿ ಸಂಪರ್ಕ ಇರಬಹುದು. ನನ್ನ ಜೊತೆಗೆ ಯೋಗೇಶ್ವರ್ ಸಂಪರ್ಕದಲ್ಲಿ ಇಲ್ಲ. ಬೈ ಎಲಕ್ಷನ್ ಗೆಲ್ಲಲು ಅಸೆಂಬ್ಲಿಗಿಂತ ಹೆಚ್ಚಿನ ಕಾನ್ಫಿಡೆನ್ಸ್‌ನಲ್ಲಿ ಇದ್ದಿವಿ ಎಂದಿದ್ದಾರೆ. ಆದರೆ ಚನ್ನಪಟ್ಟಣ ಗೆಲ್ಲಲು ಸುರೇಶ್‌‌ ಅಭ್ಯರ್ಥಿ ಮಾಡಲು ಮುಂದಾಗಿದ್ದ ಡಿ.ಕೆ ಶಿವಕುಮಾರ್‌, ಇದೀಗ ಯೋಗೇಶ್ವರ್‌ ಕಡೆಗೆ ಗಮನ ನೆಟ್ಟಿದ್ದಾರೆ ಎನ್ನಲಾಗ್ತಿದೆ.

ಚನ್ನಪಟ್ಟಣ ಟಿಕೆಟ್ ಸಿಗದಿದ್ದಕ್ಕೆ ಸಿಡಿದೆದ್ದ ಸೈನಿಕನನ್ನು ಸಮಾಧಾನ ಮಾಡಲು ಬಿಜೆಪಿ ಮುಂದಾಗಿಲ್ಲ. ಬಿಜೆಪಿ MLC ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ ನೀಡಲು ಬಸವರಾಜ ಹೊರಟ್ಟಿ ನಿವಾಸಕ್ಕೆ ತೆರಳಿದರೂ ಯಾರೊಬ್ಬರೂ ಭೇಟಿ ಮಾಡುವ ಪ್ರಯತ್ನ ಮಾಡಿಲ್ಲ. ಅಂದರೆ ಯೋಗೇಶ್ವರ್‌‌ ಹೋದರೆ ಹೋಗಲಿ ಎನ್ನುವ ನಿರ್ಧಾರಕ್ಕೆ ಬಂದಿದ್ದು, ರಾಜೀನಾಮೆ ಬಳಿಕ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧೆ ಮಾಡ್ತೇನೆ ಎಂದಿದ್ದಾರೆ. ಕಾಂಗ್ರೆಸ್‌ ಪಕ್ಷದ ಮೂಲಕ ಚುನಾವಣೆ ಅಖಾಡಕ್ಕೆ ಇಳಿದರೆ ಸಾಕಷ್ಟು ಲಾಭ ಇದೆ ಅನ್ನೋದನ್ನು ಈಗಾಗಲೇ ಯೋಗೇಶ್ವರ್‌ ಅರಿತಿದ್ದು, ಮುಂದಿನ ದಿನಗಳಲ್ಲಿ ಯಾವ ನಿರ್ಧಾರ ಹೊರ ಬೀಳಲಿದೆ ಅನ್ನೋದನ್ನು ಕಾದು ನೋಡ್ಬೇಕು.

Tags: BJPCongress PartyCP Yogeshwarcp yogeshwar blames dk shivakumarcp yogeshwar newscp yogeshwar on dk shivakumarcp yogeshwar slams dk shivakumarcp yogeshwar taunts dk shivakumarcp yogeshwar today newscp yogeshwar vs dk shivakumarDCM DK ShivakumarDK Shivakumardk shivakumar about cp yogeshwardk shivakumar and cp yogeshwardk shivakumar cp yogeshwar ticketdk shivakumar latest newsdk shivakumar newsdk shivakumar speechdk shivakumar today newsಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಂಜೆ ಪರಿಷತ್‌ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ್‌ ರಾಜೀನಾಮೆ; ಪಕ್ಷೇತರವಾಗಿ ಸ್ಪರ್ಧೆ!

Next Post

ಯೋಗೇಶ್ವರ್‌‌ ನಡೆಗೆ ಬಿಜೆಪಿ ಶಾಕ್‌.. ಹೈಕಮಾಂಡ್‌ ಬುಲಾವ್‌

Related Posts

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
0

ಮುಂಬೈ: ಮಹಾರಾಷ್ಟ್ರದMaharashtra )ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್(Ajit Pawar ) ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ಅಜಿತ್ ಪವಾರ್(Ajit Pawar )ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ...

Read moreDetails
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
Next Post
ಯೋಗೇಶ್ವರ್‌‌ ನಡೆಗೆ ಬಿಜೆಪಿ ಶಾಕ್‌.. ಹೈಕಮಾಂಡ್‌ ಬುಲಾವ್‌

ಯೋಗೇಶ್ವರ್‌‌ ನಡೆಗೆ ಬಿಜೆಪಿ ಶಾಕ್‌.. ಹೈಕಮಾಂಡ್‌ ಬುಲಾವ್‌

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada