• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

D.K ಶಿವಕುಮಾರ್​ ಅಕ್ರಮಕ್ಕೆ ಸಾಥ್​ ಕೊಡ್ತಿದ್ದಾರಾ ಸಿಎಂ ಸಿದ್ದರಾಮಯ್ಯ..?

Any Mind by Any Mind
November 24, 2023
in ಕರ್ನಾಟಕ
0
D.K ಶಿವಕುಮಾರ್​ ಅಕ್ರಮಕ್ಕೆ ಸಾಥ್​ ಕೊಡ್ತಿದ್ದಾರಾ ಸಿಎಂ ಸಿದ್ದರಾಮಯ್ಯ..?
Share on WhatsAppShare on FacebookShare on Telegram

ADVERTISEMENT

ಸಿಎಂ ಸಿದ್ದರಾಮಯ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಡಿ.ಕೆ ಶಿವಕುಮಾರ್​ ವಿರುದ್ಧದ ಪ್ರಕರಣವನ್ನು ವಾಪಸ್​ ಪಡೆದುಕೊಳ್ಳಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ಡಿಸಿಎಂ ಡಿ.ಕೆ ಶಿವಕುಮಾರ್​ ವಿರುದ್ಧ ಸಿಬಿಐ ತನಿಖೆಗೆ ವಹಿಸಿರುವ ಪ್ರಕರಣವನ್ನು ಹಿಂಪಡೆಯುವುದಕ್ಕೆ ಕಾಂಗ್ರೆಸ್ ಸರ್ಕಾರ ನಿರ್ಧಾರ ಮಾಡಿದೆ. ಪ್ರಕರಣ ಹಿಂಪಡೆಯುವ ಬಗ್ಗೆ ಗೃಹ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಿ ಸಿಬಿಐ ತನಿಖೆಗೆ ವಹಿಸಿರುವ ಆದೇಶ ಹಿಂಪಡೆಯುವ ಕುರಿತು ಚರ್ಚೆ ಮಾಡಲಾಗಿದೆ. ಗೃಹ ಇಲಾಖೆಯಿಂದ ಸಚಿವ ಸಂಪುಟಕ್ಕೆ ಬಂದಿದ್ದ ಪ್ರಸ್ತಾವನೆಗೆ ಒಪ್ಪಿಗೆ ಕೊಡಲಾಗಿದೆ. ಪ್ರಕರಣ ಹಿಂಪಡೆದು ರಾಜ್ಯ ಪೊಲೀಸ್ ಇಲಾಖೆಗೆ ಅಥವಾ ಲೋಕಾಯುಕ್ತ ಪೊಲೀಸರ ತನಿಖೆಗೆ ಹಸ್ತಾಂತರಿಸಲು ಚಿಂತನೆ ಮಾಡಲಾಗಿದೆ.

ಸಂಪುಟದಲ್ಲಿ ಏನೇನು ಚರ್ಚೆ ಆಯ್ತು..? ಅಂತಿಮ ನಿರ್ಧಾರ ಏನು..?

ರಾಜ್ಯ ಗೃಹ ಇಲಾಖೆಯಿಂದ ಸಚಿವ ಸಂಪುಟದ ಅನುಮೋದನೆ ಕಡತ ರವಾನೆ ಮಾಡಿದ್ದು, ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಯ್ತು. ಕ್ಯಾಬಿನೆಟ್ ಸಭೆ ಬಳಿಕ ಮಾತನಾಡಿದ ಕಾನೂನು ಸಚಿವ ಹೆಚ್​.ಕೆ ಪಾಟೀಲ್​, ಡಿ.ಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಬಗ್ಗೆ ಹಿಂದಿನ ಸರ್ಕಾರ ನಿರ್ಣಯ ಮಾಡಿತ್ತು. ಮುಖ್ಯಮಂತ್ರಿಗಳ ಮೌಖಿಕ ಆದೇಶ, ಕಾನೂನಾತ್ಮಕವಾಗಿ ಸ್ಪೀಕರ್​ರಿಂದ ನಿರ್ಣಯ ಪಡೆದುಕೊಳ್ಳದೇ ಸಿಬಿಐ ತನಿಖೆ ಕೊಟ್ಟಿದ್ದರು. ಹಿಂದಿನ ಅಡ್ವಕೇಟ್ ಜನರಲ್ ಹಾಗೂ ನಮ್ಮ ಸರ್ಕಾರದ ಅಡ್ವಕೇಟ್ ಜನರಲ್, ಅವರ ಅಭಿಪ್ರಾಯವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಸ್ಪೀಕರ್ ಅವರಿಂದ ಪರವಾನಗಿ ಪಡೆಯದೆ ಕಾನೂನು ಬಾಹಿರವಾಗಿ ಬಿಜೆಪಿ ಸರ್ಕಾರ ತೆಗೆದುಕೊಂಡ ಕ್ರಮ ಕಾನೂನಿನಿಗೆ ವಿರುದ್ಧ ಎಂದು ಪರಿಗಣಿಸಲಾಗಿದೆ. ಇದರ ಬಗ್ಗೆ ಎರಡು ಮೂರು ದಿನಗಳಲ್ಲಿ ಆದೇಶ ಮಾಡ್ತೀವಿ. ಆದೇಶ ಶುಕ್ರವಾರವೋ.. ಶನಿವಾರವೋ ಹೊರ ಬೀಳಲಿದೆ. ಹಿಂದಿನ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಕಾನೂನು ಬಾಹೀರ ಅಂತ ಸಂಪುಟದಲ್ಲಿ ನಿರ್ಣಯಿಸಿದ್ದೇವೆ ಎಂದಿದ್ದಾರೆ.

ಸಭೆಯಲ್ಲಿ ಗುಟ್ಟಾಗಿ ಚರ್ಚೆ ಮಾಡಿದ್ದು ಏನು..? ಯಾಕೆ..?

ಡಿ.ಕೆ ಶಿವಕುಮಾರ್​ ವಿರುದ್ಧದ ಕೇಸನ್ನು ಸಿಬಿಐಗೆ ಹಸ್ತಾಂತರ ಮಾಡಿದ್ದ ಬಿಜೆಪಿ ಸರ್ಕಾರ ನಿರ್ಧಾರವನ್ನು ವಾಪಸ್​ ಪಡೆಯುವ ಮುನ್ನ ಸಚಿವ ಸಂಪುಟದಲ್ಲಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಕೊಟ್ಟ ಅಭಿಪ್ರಾಯ ಆಧರಿಸಿ ಆದೇಶ ಹಿಂಪಡೆಯುವ ನಿರ್ಧಾರ ಮಾಡಲಾಯ್ತು. ನವೆಂಬರ್ 21ರಂದು ಅಭಿಪ್ರಾಯ ನೀಡಿದ್ದ ಶಶಿಕಿರಣ್ ಶೆಟ್ಟಿ ಅವರ ಅಭಿಪ್ರಾಯವನ್ನು, 2019ರಲ್ಲಿ ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕಾನೂನಾತ್ಮಕ ಅಂಶಗಳ ಕುರಿತು ಅಡ್ವೋಕೇಟ್ ಜನರಲ್ ಅವರ ಅಭಿಪ್ರಾಯ ಮಂಡಿಸಿದ್ದಾರೆ. ಇದೀಗ ಅಡ್ವೊಕೇಟ್​ ಜನರಲ್​ ವರದಿ ಆಧರಿಸಿ ಸಚಿವ ಸಂಪುಟ ನಿರ್ಧಾರ ತೆಗೆದುಕೊಂಡಿದೆ. ಡಿ.ಕೆ ಶಿವಕುಮಾರ್​ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಯಿಂದ ಹಿಂಪಡೆಯಲು ಸಂಪುಟ ಸದಸ್ಯರು ಸಹಮತ ವ್ಯಕ್ತಪಡಿಸಿದ್ದಾರೆ. ರಾಜಕೀಯ ಪ್ರೇರಿತ ಪ್ರಕರಣ ಅಂತ ಸಂಪುಟ ಸದಸ್ಯರು ಅಭಿಪ್ರಾಯ ಪಟ್ಟಿದ್ದಾರೆ. ಸಚಿವರ ಜೊತೆ ಅನೌಪಚಾರಿಕವಾಗಿ ಚರ್ಚೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 30 ನಿಮಿಷಗಳಿಗೂ ಹೆಚ್ಚು ಸಮಯ ಚರ್ಚೆ ಮಾಡಿದ್ದಾರೆ. ಈ ವೇಳೆ ಸಚಿವರ ಆಪ್ತ ಸಹಾಯಕರನ್ನು ಹೊರಗೆ ಕಳುಹಿಸಿ ಮಾತುಕತೆ ನಡೆಸಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ.

ಹೈಕೋರ್ಟ್​ ತಡೆಯಾಜ್ಞೆ ನೀಡದ ಪ್ರಕರಣದಲ್ಲಿ ಉರುಳಿಲ್ವಾ..?

2018 ರಲ್ಲಿ ಡಿಕೆಶಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು. 2019ರಲ್ಲಿ ಪ್ರಕರಣವನ್ನು ಸಿಬಿಐಗೆ ನೀಡಲು ಅಂದಿನ ಸಿಎಂ ಯಡಿಯೂರಪ್ಪ ಅನುಮೋದನೆ ನೀಡಿದ್ದರು. 25-09-2019ರಲ್ಲಿ ಸಿಬಿಐ ತನಿಖೆಗೆ ವಹಿಸಲು ಅಂದಿನ ಸರ್ಕಾರ ಆದೇಶ ಮಾಡಿತ್ತು.


ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್​ನಲ್ಲಿ ಡಿ.ಕೆ ಶಿವಕುಮಾರ್​ ರಿಟ್ ಅರ್ಜಿ ಸಲ್ಲಿಸಿದ್ದರು. ಆದರೆ ಏಪ್ರಿಲ್ 2023ರಲ್ಲಿ ರಿಟ್ ಅರ್ಜಿ ವಜಾಗೊಳಿಸಿತ್ತು ಕರ್ನಾಟಕ ಹೈಕೋರ್ಟ್. ಹೈಕೋರ್ಟ್​ ಏಕಸದಸ್ಯ ಪೀಠದ ತೀರ್ಪಿನ ವಿರುದ್ಧ ಡಿ.ಕೆ ಶಿವಕುಮಾರ್​​ ಮೇಲ್ಮನವಿ ಹೋಗಿದ್ದಾರೆ. ಅತ್ತ ಸುಪ್ರೀಂಕೋರ್ಟ್​ ಸೂಚನೆಯಂತೆ ಎರಡು ವಾರದಲ್ಲಿ ವಿಚಾರಣೆ ಪೂರ್ಣಗೊಳಿಸಲು ಹೈಕೋರ್ಟ್​ ವಿಭಾಗೀಯ ಪೀಠ ವಿಚಾರಣೆ ಚುರುಕುಗೊಳಿಸಿದೆ. ಈ ಸಮಯದಲ್ಲಿ ಸರ್ಕಾರದ ಈ ನಿರ್ಧಾರ ಎಷ್ಟು ಸಮಂಜಸ ಅನ್ನೋ ಪ್ರಶ್ನೆ ಕಾಡುತ್ತಿದೆ. ಒಂದು ವೇಳೆ ಬಿಜೆಪಿ ಸರ್ಕಾರ ಕಾನೂನು ಬಾಹೀರವಾಗಿ ನಿರ್ಧಾರ ತೆಗೆದುಕೊಂಡಿದ್ದರೆ ಅದನ್ನು ಕೋರ್ಟ್​ ಗಮನಕ್ಕೆ ತರಬಹುದಿತ್ತು ಅಲ್ಲವೇ..? ಡಿ.ಕೆ ಶಿವಕುಮಾರ್​ ಅವರ ಒತ್ತಡಕ್ಕೆ ಮಣಿದು ಸಿದ್ದರಾಮಯ್ಯ ಈ ರೀತಿಯ ನಿರ್ಧಾರ ತೆಗೆದುಕೊಂಡರೆ..? ಈ ಎಲ್ಲಾ ಪ್ರಶ್ನೆಗಳಿಗೂ ಸಿದ್ದರಾಮಯ್ಯನೇ ಉತ್ತರ ಕೊಡಬೇಕಿದೆ.

ಕೃಷ್ಣಮಣಿ

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಂಪುಟ ಸಭೆಯಿಂದ ಹೊರಗುಳಿದ ಡಿಸಿಎಂ ಅವರು ದೊಡ್ಡತನ; ಆದರೆ ಸಿಎಂ ಸಿದ್ದರಾಮಯ್ಯ..? : HDK

Next Post

ಬಿವೈ ವಿಜಯೇಂದ್ರಗೆ ನನ್ನ ಮನೆಗೆ ಬರಬೇಡ ಅಂತ ಹೇಳಿದ್ದೇನೆ : ಬಿಜೆಪಿ ಶಾಸಕ ಯತ್ನಾಳ್‌

Related Posts

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
0

ಕನ್ನಡದ ಮೊದಲ ದಿನಪತ್ರಿಕೆ ಮಂಗಳೂರ ಸಮಾಚಾರ ಕ್ರೈಸ್ತ ಧರ್ಮ ಪ್ರಚಾರಕ್ಕೆ ಸ್ವಿಟ್ಜ್ ರ್ ಲೆಂಡ್ ನಿಂದ ಭಾರತಕ್ಕೆ ಆಗಮಿಸಿದ ಮಿಶನರಿಗಳು ಬಾಸೆಲ್ ಮಿಶನ್ ಎಂಬ ಒಂದು ಸಂಸ್ಥೆಯನ್ನು...

Read moreDetails
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025
Next Post
ಬಿಜೆಪಿ ಪಕ್ಷ ಬಿಡೋದಕ್ಕೆ ಯತ್ನಾಳ್​​ ಮಾನಸಿಕವಾಗಿ ಸಿದ್ಧ ಆಗಿದ್ದಾರಾ..? 

ಬಿವೈ ವಿಜಯೇಂದ್ರಗೆ ನನ್ನ ಮನೆಗೆ ಬರಬೇಡ ಅಂತ ಹೇಳಿದ್ದೇನೆ : ಬಿಜೆಪಿ ಶಾಸಕ ಯತ್ನಾಳ್‌

Please login to join discussion

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada