• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

S Janaki: ಗಾನಕೋಗಿಲೆ ಜಾನಕಿ ಅಮ್ಮನ ಅಗಲಿಕೆಗೆ ಗಣ್ಯರ ಸಂತಾಪ

ಪ್ರತಿಧ್ವನಿ by ಪ್ರತಿಧ್ವನಿ
July 12, 2026
in Top Story, ಕರ್ನಾಟಕ, ರಾಜಕೀಯ
0
S Janaki: ಗಾನಕೋಗಿಲೆ ಜಾನಕಿ ಅಮ್ಮನ ಅಗಲಿಕೆಗೆ ಗಣ್ಯರ ಸಂತಾಪ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ದಶಕಗಳ ಕಾಲ ತಮ್ಮ ಕಂಠಸಿರಿಯಿಂದ ಎಲ್ಲರ ಮನಗೆದ್ದ ಗಾನಕೋಗಿಲೆ ಎಸ್.ಜಾನಕಿ ಅವರ ನಿಧ‌ನಕ್ಕೆ ಸಿಎಂ ಡಿ.ಕೆ ಶಿವಕುಮಾರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

S Janaki Passes Away: ಗಾನ ಕೋಗಿಲೆ ಎಸ್.ಜಾನಕಿ ಬಗ್ಗೆ ಸಾ.ರಾ ಮಹೇಶ್ ಭಾವುಕ ಮಾತು.!

“ಭಾರತೀಯ ಚಿತ್ರರಂಗದ ಅಪ್ರತಿಮ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಖ್ಯಾತಿಯ ಬಹುಭಾಷಾ ಗಾಯಕಿ ಶ್ರೀಮತಿ ಎಸ್. ಜಾನಕಿ ಅವರ ನಿಧನದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ಕನ್ನಡ ಭಾಷೆ ಇರುವ ತನಕ ಎಸ್ ಜಾನಕಿ ಅವರ ಹಾಡುಗಳು ಅಜರಾಮರ. ಅವರ ದನಿಯಲ್ಲಿ ಕನ್ನಡ ಹಾಡುಗಳನ್ನು ಕೇಳಿ ಬೆಳೆದವರು ನಾವು. ಕನ್ನಡದ ಸೊಬಗಿಗೆ ಮಾಧುರ್ಯ ತುಂಬಿದವರು ಅವರು” ಎಂದು ಸಿಎಂ ಸ್ಮರಿಸಿದ್ದಾರೆ.

S Janaki Passes Away: ಎಸ್. ಜಾನಕಿ ಮಂಡ್ಯ, ಮೈಸೂರು ಜನರನ್ನು ಹೆಚ್ಚು ಪ್ರೀತಿಸುತ್ತಿದ್ರು..

“ಸರಳತೆಯ ಸಾಕಾರಮೂರ್ತಿ ಜಾನಕಮ್ಮನವರ ಅಪ್ರತಿಮ ಕಂಠಸಿರಿ ಕನ್ನಡ ನಾಡಿನ ಸಾಂಸ್ಕೃತಿಕ ಕ್ಷೇತ್ರದಲ್ಲಿ ಎಂದೆಂದಿಗೂ ಅಮರ. ಅವರು ಮೂಲತಃ ಆಂಧ್ರಪ್ರದೇಶದವರಾದರೂ ಕನ್ನಡದ ಮೇಲಿನ‌ ಅಭಿಮಾನಕ್ಕೆ ಮೈಸೂರಿನಲ್ಲಿ ನೆಲೆಸಿದ್ದರು. 20 ಕ್ಕೂ ಹೆಚ್ಚು ಭಾಷೆಗಳಲ್ಲಿ ಸುಮಾರು 48 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿರುವ ಹೆಗ್ಗಳಿಕೆ ಇವರದು.ಜಾನಕಮ್ಮನವರ ನಿಧನದಿಂದ ಸಂಗೀತ ಕ್ಷೇತ್ರದ ಮಹಾನ್ ಸ್ವರಮಾಧುರ್ಯ ಮೌನವಾದಂತಾಗಿದೆ” ಎಂದು ನೋವು ವ್ಯಕ್ತಪಡಿಸಿದ್ದಾರೆ.

S Janaki Passes Away: ಎಸ್. ಜಾನಕಿ ನೆನೆದು ಭಾವುಕರಾದ GT Devegowda

ಪದ್ಮ ಭೂಷಣ ಪ್ರಶಸ್ತಿ ಸೇರಿದಂತೆ ಅನೇಕ ರಾಷ್ಟ್ರೀಯ ಪ್ರಶಸ್ತಿ, ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಮತ್ತಿತರ ರಾಜ್ಯಗಳ ಪ್ರಶಸ್ತಿ ಇವರ ಮುಡಿಗೇರಿದ್ದವು. ಜಾನಕಮ್ಮನವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಅಭಿಮಾನಿಗಳು ಹಾಗೂ ಕುಟುಂಬಸ್ಥರಿಗೆ ನೀಡಲಿ ಎಂದು ಆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಡಿಕೆ ಶಿವಕುಮಾರ್‌ ಸಂತಾಪ ಸೂಚಿಸಿದ್ದಾರೆ.

ಇನ್ನು ಜಾನಕಿ ಅಮ್ಮನ ಅಗಲಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ನಿಧನದ ಸುದ್ದಿ ನೋವುಂಟು ಮಾಡಿದೆ. ಕನ್ನಡ ಭಾಷೆಯೂ ಸೇರಿದಂತೆ 20 ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ, 6 ದಶಕಗಳ ಕಾಲ‌ ತಮ್ಮ ಕಂಠಸಿರಿಯ ಮೂಲಕ ಸಂಗೀತ ಸೇವೆಗೈದ ಮೇರು ಪ್ರತಿಭೆಯೊಂದು ನಮ್ಮನ್ನಗಲಿರುವುದು ಕಲಾ ಜಗತ್ತಿಗಾಗಿರುವ ತುಂಬಲಾರದ ನಷ್ಟ ಎಂದಿದ್ದಾರೆ. ಜಾನಕಿಯಮ್ಮನವರ ಧ್ವನಿಯಿಲ್ಲದ ಚಿತ್ರಗಳೇ ಅಪರೂಪ ಎನ್ನುವ ಕಾಲವೊಂದಿತ್ತು, ಆ ಮಟ್ಟಿನ ಬೇಡಿಕೆಯನ್ನು ತಮ್ಮ ಅನನ್ಯ ಕಂಠದ ಮೂಲಕ ಸೃಷ್ಟಿಸಿದ್ದ ಸಂಗೀತಶಾರದೆಯ ವರಪುತ್ರಿ ಅವರು. ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಅವರ ಕುಟುಂಬವರ್ಗ ಮತ್ತು ಕೋಟ್ಯಂತರ ಸಂಗೀತ ಪ್ರಿಯರಿಗೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

S Janaki Passes Away: ಮೈಸೂರಿನಲ್ಲಿ ಸಚಿವ Dr. Yathindra Siddaramaiah ಹೇಳಿಕೆ..
Tags: DK ShivakumarKannadaMysuruS JanakisandalwoodsiddaramaiahSongs
Previous Post

ವಿಯೆಟ್ನಾಂನಲ್ಲಿ ಬೋಟ್ ದುರಂತ: 15 ಭಾರತೀಯ ಪ್ರವಾಸಿಗರ ದುರ್ಮ**

Next Post

ಬೆಂಗಳೂರು: ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಡೆಲಿವರಿ ಬಾಯ್ ಅಸ* ವರ್ತನೆ

Related Posts

‘ಈ ನಾಯಕಿ ಚಿತ್ರಗಳಿಗೆ ಹಾಡುವುದಿಲ್ಲ’ ಎಂದು ಜಾನಕಿ ನಿರ್ಧರಿಸಲು ಕಾರಣವೇನು? ವರ್ಷಗಳ ಬಳಿಕ ಬಹಿರಂಗವಾದ ಅಪರೂಪದ ಘಟನೆ
Top Story

‘ಈ ನಾಯಕಿ ಚಿತ್ರಗಳಿಗೆ ಹಾಡುವುದಿಲ್ಲ’ ಎಂದು ಜಾನಕಿ ನಿರ್ಧರಿಸಲು ಕಾರಣವೇನು? ವರ್ಷಗಳ ಬಳಿಕ ಬಹಿರಂಗವಾದ ಅಪರೂಪದ ಘಟನೆ

by ಪ್ರತಿಧ್ವನಿ
July 13, 2026
0

ಚಿತ್ರರಂಗದಲ್ಲಿ ದೊಡ್ಡ ದೊಡ್ಡ ಕಲಾವಿದರ ನಡುವೆಯೂ ವೃತ್ತಿಪರ ಭಿನ್ನಾಭಿಪ್ರಾಯಗಳು ಹಾಗೂ ಅಭಿರುಚಿಯ ವ್ಯತ್ಯಾಸಗಳು ಹೊಸದೇನಲ್ಲ. ಆದರೆ ದಕ್ಷಿಣ ಭಾರತದ ಇಬ್ಬರು ದಿಗ್ಗಜರಾದ ಮಹಾನಟಿ ಸಾವಿತ್ರಿ ಮತ್ತು ಗಾನಕೋಗಿಲೆ...

Read moreDetails
ಹ್ಯಾಟ್ರಿಕ್ ಹೀರೋ ಜನ್ಮದಿನ: ಶಿವಣ್ಣನ ಅಭಿಮಾನಿಗಳಿಗೆ ‘ಹೆಲ್ತ್ ಕಾರ್ಡ್’ ಜೊತೆ 4 ಚಿತ್ರಗಳ ಭರ್ಜರಿ ಅಪ್ಡೇಟ್!

ಹ್ಯಾಟ್ರಿಕ್ ಹೀರೋ ಜನ್ಮದಿನ: ಶಿವಣ್ಣನ ಅಭಿಮಾನಿಗಳಿಗೆ ‘ಹೆಲ್ತ್ ಕಾರ್ಡ್’ ಜೊತೆ 4 ಚಿತ್ರಗಳ ಭರ್ಜರಿ ಅಪ್ಡೇಟ್!

July 12, 2026
ಮೈಸೂರಿನಲ್ಲಿ ಉಳಿಯುವುದು ಎಸ್.ಜಾನಕಿಯವರ ಕೊನೆ ಆಸೆ: ಸಿಎಂ ಡಿ.ಕೆ ಶಿವಕುಮಾರ್

ಮೈಸೂರಿನಲ್ಲಿ ಉಳಿಯುವುದು ಎಸ್.ಜಾನಕಿಯವರ ಕೊನೆ ಆಸೆ: ಸಿಎಂ ಡಿ.ಕೆ ಶಿವಕುಮಾರ್

July 12, 2026
30 ದಿನಗಳು..50ಕ್ಕೂ ಹೆಚ್ಚು ನಿರ್ಧಾರಗಳು: ಹೇಗಿತ್ತು ಡಿ.ಕೆ ಶಿವಕುಮಾರ್ ಸರ್ಕಾರದ ಮೊದಲ ತಿಂಗಳು..?

ಬೆಂಗಳೂರು ದಕ್ಷಿಣದಲ್ಲೇ ಎರಡನೇ ವಿಮಾನ ನಿಲ್ದಾಣ: ಸಿಎಂ ಡಿ.ಕೆ ಶಿವಕುಮಾರ್

July 12, 2026
ಶಿವಣ್ಣ ಹುಟ್ಟುಹಬ್ಬಕ್ಕೆ ಬಿಗ್ ಅಪ್ಡೇಟ್‌: ಆರ್.ಚಂದ್ರು ಜೊತೆ ಹೊಸ ಸಿನಿಮಾ ಫಿಕ್ಸ್

ಶಿವಣ್ಣ ಹುಟ್ಟುಹಬ್ಬಕ್ಕೆ ಬಿಗ್ ಅಪ್ಡೇಟ್‌: ಆರ್.ಚಂದ್ರು ಜೊತೆ ಹೊಸ ಸಿನಿಮಾ ಫಿಕ್ಸ್

July 12, 2026
Next Post
ಬೆಂಗಳೂರು: ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಡೆಲಿವರಿ ಬಾಯ್ ಅಸ* ವರ್ತನೆ

ಬೆಂಗಳೂರು: ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಡೆಲಿವರಿ ಬಾಯ್ ಅಸ* ವರ್ತನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada