ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿ ಡ್ಯಾಮ್ ಒಡೆದು ಹೋಗಿದೆ, ಡ್ಯಾಮ್ನಲ್ಲಿ ನೀರು ನಿಲ್ಲಲ್ಲ ಅಂತ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಪಟ್ಟಣ ಪ್ರಚಾರ ಸಭೆಯಲ್ಲಿ ಮಾತನಾಡಿದ ಡಿಕೆಶಿ, ಬಿಜೆಪಿ ಕೆರೆಯಲ್ಲ, ಡ್ಯಾಮ್ ಒಡೆದು ಹೋಗಿದೆ, ನೀರು ನಿಲ್ಲಿಸೋಕೆ ಆಗಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆದ್ದರೇ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೆ. ಪ್ರಬುದ್ಧ ಮತದಾರರ ತೀರ್ಪು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕೊಡುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 140 ಸೀಟ್ ಗೆದ್ದು ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು.

30 ವರ್ಷಗಳಿಂದ ಪಕ್ಷ ಕಟ್ಟಿದ್ದ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಬಿಟ್ಟು ಬಂದಿದ್ದಾರೆ. ಲಕ್ಷ್ಮಣ ಸವದಿ, ಪುಟ್ಟಣ್ಣ ಸೇರಿ ಅನೇಕ ನಾಯಕರು ಕಾಂಗ್ರೆಸ್ಗೆ ಬಂದಿದ್ದಾರೆ. ಡಜನ್ಗಟ್ಟಲೇ ಹಾಲಿ ಶಾಸಕರು ಕಾಂಗ್ರೆಸ್ ಬರಲು ರೆಡಿಯಾಗಿದ್ದರು. ಆದರೆ ನಮ್ಮಲ್ಲಿ ಜಾಗ ಇರಲಿಲ್ಲ ಎಂದರು. ನಾವು ಅಧಿಕಾರಕ್ಕೆ ಬರುತ್ತೇವೆ. ಭಿನ್ನಮತೀಯರನ್ನ ವಾಪಾಸ್ ಸೇರಿಸಿಕೊಳ್ಳುತ್ತೇವೆ. ಬಿಜೆಪಿ ಒಡೆದ ಮನೆ, ಒಡೆದ ಪಕ್ಷ. ನಾವು ಜನರ ಸೇವೆಗೆ ಸಿದ್ದ, ಅವರು ಏನೇ ಪ್ರಯತ್ನ ಪಟ್ಟರೂ ನಾವು ಅಧಿಕಾರಕ್ಕೆ ಬರುತ್ತೇವೆ. ಶೆಟ್ಟರ್ ಸೋಲಿಸಲು ಬಿಜೆಪಿ ಪ್ರಯತ್ನ ಪಡುತ್ತೆ. ಕಾಂಗ್ರೆಸ್ ಪಕ್ಷದ ಬದ್ದತೆ, ಜನರು ಬದಲಾವಣೆ ಬಯಸಿದ್ದಾರೆ. ಅವರ ಬಿಜೆಪಿ ಪಕ್ಷದವರೇ ಪಕ್ಷ ಬಿಡಲು ಮುಂದಾಗಿದ್ದಾರೆ. ಲಿಂಗಾಯತ ಸಮಾಜ ಅವರ ಅರ್ಹತೆ, ಜನಸಂಖ್ಯೆಗೆ ತಕ್ಕಂತೆ ರಿಸರ್ವೇಷನ್ ಕೊಡಿ ಅಂತ ಕೇಳಿದೆ. ಸರ್ಕಾರಕ್ಕೆ ಧಿಕ್ಕಾರ ಹೇಳಿ ಪ್ರತಿಭಟನೆ ಕೂಡ ಮಾಡಿದ್ದಾರೆ ಅಂತ ಡಿಕೆ ಶಿವಕುಮಾರ್ ಹೇಳಿದರು







