ಬೆಂಗಳೂರು : ನಿನ್ನೆ ಹೊಟ್ಟೆನೋವೆಂದು ದೆಹಲಿ ಪ್ರಯಾಣ ರದ್ದುಗೊಳಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಂದು ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು ಮಾಜಿ ಸಿಎಂ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.

ನನ್ನ ಆರೋಗ್ಯ ಸ್ಥಿರವಾಗಿದೆ. ದೇವರು, ತಾಯಿ ಹಾಗೂ ಮಕ್ಕಳಿಗೆ ಏನು ನೀಡಬೇಕು ಅನ್ನೋದು ಗೊತ್ತಿರುತ್ತೆ. ನಾನು ಇಂದು ನನ್ನ ದೇವರನ್ನು ಭೇಟಿ ಮಾಡಲು ಹೊರಟಿದ್ದೇನೆ ಎಂದು ಹೇಳಿದ್ದಾರೆ .
ಚುನಾವಣೆಯ ಸಂದರ್ಭದಲ್ಲಿ ನನ್ನ ಕರ್ತವ್ಯ ನಾನು ಮಾಡಿದ್ದೇನೆ. ಹೈಕಮಾಂಡ್ ನನಗೆ ಒಬ್ಬರೇ ಬರುವಂತೆ ಹೇಳಿದಕ್ಕೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ.