ಡಿ.ಕೆ. ಶಿವಕುಮಾರ್ ವಿದ್ಯು ತ್ ಸಚಿವರಾಗಿದ್ದ ಸಂದರ್ಭ ಅವರಿಗೆ ಫೋನ್ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ಳಾ ರಯ ಸಾಯಿ ಗಿರಿಧರ್ ರೈ ಎಂಬಾತನಿಗೆ ಜೈಲು ಶಿಕ್ಷೆ ವಿಧಿಸಿ ಸುಳ್ಯ ನ್ಯಾಯಾಲಯ ತೀರ್ಪು ನೀಡಿದೆ.
ಸುಳ್ಯ ದಲ್ಲಿ ವಿದ್ಯು ತ್ ಕಡಿತದ ಬಗ್ಗೆ ಸಾಯಿ ಗಿರಿಧರ ರೈ 2016 ಫೆಬ್ರ ವರಿ 28 ರಂದು ವಿದ್ಯು ತ್ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ಅವರಿಗೆ ಫೋನ್ ಮಾಡಿ ಅವಾಚ್ಯ ಶಬ್ದ ಗಳಿಂದ ನಿಂದಿಸಿದರ ವಿರುದ್ಧ ಗಿರಿಧರ ರೈ ವಿರುದ್ಧ ದೂರು ನೀಡಲಾಗಿತ್ತು. ಕೇಸು ದಾಖಲಿಸಿಕೊಂಡ ಪೊಲೀಸರು ರಾತ್ರೋ ರಾತ್ರಿ ಗಿರಿಧರ್ ರೈ ಮನೆಗೆ ತೆರಳಿದ್ದರು. ಮನೆ ಬಾಗಿಲು ತೆರೆಯದಿದ್ದಾಗ ಹಂಚು ಸರಿಸಿ ಒಳ ಪ್ರವೇಶಿಸಿ ಅವರನ್ನು ಬಂಧಿಸಲಾಗಿತ್ತು.
ಘಟನೆಯ ಕುರಿತಂತೆ ಅವಾಚ್ಯ ಶಬ್ದಗಳಿಂದ ನಿಂದನೆ, ಜೀವ ಬೆದರಿಕೆ, ಮಾನ ಹಾನಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ನಾಲ್ಕು ಅಪರಾಧಗಳಡಿ ಪ್ರಕರಣ ದಾಖಲಿಸಲಾಗಿತ್ತು.

ಕಳೆದ ವರ್ಷ ಅಕ್ಟೋಬರ್ 5ರಂದು ಡಿ ಕೆ ಶಿವಕುಮಾರ್ ಸುಳ್ಯಕ್ಕೆ ಬಂದು ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ಹೇಳಿದ್ದರು. ಈ ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು ಇಂದು ಸುಳ್ಯ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸೋಮಶೇಖರ್ ರವರು ತೀರ್ಪು ಪ್ರಕಟಿಸಿದರು.
ನಾಲ್ಕು ಅಪರಾಧಗಳಲ್ಲಿಯೂ 2 ವರ್ಷ ಜೈಲು ಶಿಕ್ಷೆ ಮತ್ತು ಒಂದು ಪ್ರಕರಣದಲ್ಲಿ 5 ಸಾವಿರ ದಂಡ, ದಂಡ ತೆರಲು ತಪ್ಪಿದ್ದಲ್ಲಿ ಒಂದು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಲಾಗಿದ್ದು, 4 ಅಪರಾಧಗಳ ಶಿಕ್ಷೆಗಳನ್ನು ಏಕಕಾಲದಲ್ಲಿ ಅನುಭವಿಸುವಂತೆ ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿಗೆ ಮೇಲ್ಮನವಿ ಸಲ್ಲಿಸಲು ಒಂದು ತಿಂಗಳು ಕಾಲಾವಕಾಶ ನೀಡಲಾಗಿದೆ.






