ಕನಕಪುರ ತಾಲೂಕನ್ನು ಬೆಂಗಳೂರು ಜಿಲ್ಲೆಗೆ ಸೇರಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದರು. ಸದ್ಯ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಸೃಷ್ಟಿ ಮಾಡಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ, ಡಿಕೆಶಿ ಅವರ ರಿಯಲ್ ಎಸ್ಟೇಟ್ ಉದ್ಯಮ ವಿಸ್ತರಣೆಯಾಗಬೇಕು ಅದಕ್ಕೆ ಈತರ ಮಾಡ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಮೈಸೂರಿನಲ್ಲಿ ಶಾಸಕ ಬಿ.ವೈ.ವಿಜಯೇಂದ್ರ ಮಾತನಾಡಿ, ಡಿ.ಕೆ.ಶಿವಕುಮಾರ್ ಮಾಡಿದ್ದನ್ನೆಲ್ಲಾ ಯಾಕೆ ವಿರೋಧ ಮಾಡುತ್ತೀರಾ? ಡಿಸಿಎಂ ಡಿಕೆ ರಿಯಲ್ ಎಸ್ಟೇಟ್ ಉದ್ಯಮ ವಿಸ್ತರಣೆಯಾಗಬೇಕು. ಅದಕ್ಕೆ ಪಾಪ ರಾಮನಗರ ಬದಲಾಯಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಬಿಜೆಪಿ ನಾಯಕರು ಸೋಲಿನಿಂದ ಹತಾಶರಾಗಿದ್ದಾರೆಂಬ ಟೀಕೆ ವಿಚಾರ. ಬಿಜೆಪಿಗೆ ಸೋಲು ಹೊಸದಲ್ಲ. ನಾವು ಸೋಲಿನಿಂದ ಹತಶರಾಗಿಲ್ಲ. ಸಿಎಂ ಸಿದ್ದರಾಮಯ್ಯಗೆ ಬಿ ವೈ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
ಸರ್ಕಾರದ ಅಕ್ರಮಗಳ ಬಗ್ಗೆ ಮಾತನಾಡುತ್ತಿದ್ದೇವೆ.
ಇದನ್ನೇ ಹತಾಶೆ ಎಂದರೆ ಹೇಗೆ. ಪಂಚ ರಾಜ್ಯ ಚುನಾವಣೆಗಾಗಿ ರಾಜ್ಯ ಸರ್ಕಾರ ಹಣ ವಸೂಲಿ ಮಾಡುತ್ತಿದೆ. ಗುತ್ತಿಗೆದಾರರ ಮನೆಯಲ್ಲಿ ಸಿಕ್ಕ ಹಣ ಯಾರದ್ದು? ಇಡೀ ರಾಜ್ಯದ ಜನರ ಮುಂದೆ ಕಾಂಗ್ರೆಸ್ ಬೆತ್ತಲಾಗಿದೆ ಎಂದು ಪ್ರಶ್ನಿಸಿದ್ದಾರೆ.
5 ಗ್ಯಾರೆಂಟಿ ಯೋಜನೆಗಳಿಗೆ ಕೊಡಲು ಹಣವೇ ಇಲ್ಲ. ಅದಕ್ಕಾಗಿ ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಎರಡು ತಿಂಗಳಿನಿಂದ ಹಣವೇ ಬಂದಿಲ್ಲ. ರಾಜ್ಯದ ಬೊಕ್ಕಸ ಖಾಲಿಯಾಗುತ್ತಿದೆ. ಈಗ ಬಿಜೆಪಿ ಮೇಲೆ ಗೂಬೆ ಕೂರಿಸುವ ಕೆಲಸ ಆರಂಭವಾಗಿದೆ. ಬರ ಪರಿಹಾರವನ್ನು ಸರ್ಕಾರ ತಕ್ಷಣವೇ ಕೊಡಬೇಕು. ಕೇಂದ್ರದ ಹಣ ಬರುತ್ತದೆ. ಮೊದಲ ಇವರ ಹಣವನ್ನು ತಲುಪಿಸಲಿ. ಅದನ್ನು ಬಿಟ್ಟು ಕೇಂದ್ರದತ್ತ ಬೆರಳು ತೋರಿಸುವ ಕೆಲಸ ನಡೆಸಬಾರದು ಎಂದು ಬಿ ವೈ ವಿಜಯೇಂದ್ರ ಹೇಳಿದ್ದಾರೆ.