• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯ ಸರ್ಕಾರದ್ದು ಸಾಧನೋತ್ಸವ ಅಲ್ಲ, ಅದು ಬಿಜೆಪಿಯ ಭ್ರಷ್ಟೋತ್ಸವ: ಡಿಕೆಶಿ ಕಿಡಿ 

ಪ್ರತಿಧ್ವನಿ by ಪ್ರತಿಧ್ವನಿ
July 26, 2022
in ಕರ್ನಾಟಕ, ರಾಜಕೀಯ
0
ಬಿಜೆಪಿಯವರನ್ನ ನೋಡಿ ಭ್ರಷ್ಟಾಚಾರ, ಲೂಟಿ ಮಾಡೋದನ್ನ ಕಲಿಯಬೇಕಾ? : ಡಿ.ಕೆ.ಶಿವಕುಮಾರ್‌
Share on WhatsAppShare on FacebookShare on Telegram

ಬಸವರಾಜ ನೇತೃತ್ವದ  ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿರುವುದು ಸಾಧನಾ ಸಮಾವೇಶವಲ್ಲ, ಬದಲಾಗಿ   ಭ್ರಷ್ಟೋತ್ಸವವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ  ಡಿಕೆ ಶಿವಕುಮಾರ್ ಆರೋಪಿಸಿದರು.

ADVERTISEMENT

ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಸಾಧನಾ ಸಮಾವೇಶ ನಡೆಸಲು ನಿರ್ಧಾರ ಮಾಡಿದೆ. ಸರ್ಕಾರ ಬಂದು ನಾಲ್ಕು ವರ್ಷ ಆಗಿದೆ.‌ ನಾಲ್ಕು ವರ್ಷದ ಸಾಧನೆ ಸಮಾವೇಶ ಅಲ್ಲ ಬದಲಾಗಿ ಇದು ಬಿಜೆಪಿಯ ಭ್ರಷ್ಟೋತ್ಸವವಾಗಿದೆ ಎಂದು ಕಿಡಿಕಾರಿದರು.

ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಭ್ರಷ್ಟಾಚಾರದ ರಾಜಧಾನಿ ಕರ್ನಾಟಕ ಆಗಿದೆ. ಇದು ನಿಮ್ಮ ಸಾಧನೆಯಾಗಿದೆ. ಪಿಎಂ ಹಾಗೂ ರಾಷ್ಟ್ರೀಯ ಮುಖಂಡರು ಹಾಡಿ ಹೊಗಳುತ್ತಿದ್ದರು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಉತ್ತಮ ಕೆಲಸ ಮಾಡಿದ್ದರೆ ಎಂದರು.

ರೈತರಿಗೆ ಏನು‌ ಲಾಭ ಆಯಿತು ಬಿಜೆಪಿ ಸರ್ಕಾರದಿಂದ? ಗೊಬ್ಬರ, ಔಷಧಿ ದರ ಮಿತಿ ಮೀರಿದೆ. ಹಾಲು ಮೊಸಲು, ಪನ್ನೀರು ಮೇಲೆ ಜಿಎಸ್ ಟಿ ಹಾಕುವ ಮೂಲಕ ಹೊಸ ದಾಖಲೆ ಸೃಷ್ಟಿ ಮಾಡಿದ್ದೀರಿ. ಇದರ ಹೊರತಾಗಿ ರೈತರಿಗೆ ಯಾವ ಅನುಕೂಲ ಆಗಿಲ್ಲ ಎಂದು ವಿವರಿಸಿದರು.

ಕೋವಿಡ್ ಸಂದರ್ಭದಲ್ಲಿ ಏನು ಸಹಾಯ ಮಾಡಲಾಗಿದೆ ರೈತರಿಗೆ, ಯುವರಿಗೆ ಎಷ್ಟು ಉದ್ಯೋಗ ನೀಡಿದ್ದೀರಿ? ಸರ್ಕಾರದ ಇಲಾಖೆಗಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ನಮ್ಮ ಒತ್ತಡದಿಂದಾಗಿ ಐಎಎಸ್ ಐಪಿಎಸ್ ಅಧಿಕಾರಿಗಳ ಬಂಧನ ಆಗಿದೆ.

ಪಬ್ ದಾಳಿಗೆ ಡಿಕೆಶಿ ಕಿಡಿ

ನೈತಿಕ ಪೊಲೀಸ್ ಹೆಸರಿನಲ್ಲಿ ಕಾರ್ಯಕರ್ತರ ವಸೂಲಿ ಬಾಜಿಗೆ ನೀವೇ ಪ್ರೋತ್ಸಾಹ ನೀಡಿದ್ದೀರಿ. ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಶುರುವಾಗಿದೆ ಎಂದು ಡಿಕೆಶಿ ಕಿಡಿಕಾರಿದರು. ಯುವಕರ ಜೀವನದಲ್ಲಿ ಏಕೆ ಮಧ್ಯಪ್ರವೇಶ ಮಾಡುತ್ತಿದ್ದೀರಿ. ಹೀಗಾದರೆ ಕಾನೂನು ಎಲ್ಲಿ ಸುವ್ಯವಸ್ಥೆ ಇರಲು ಸಾಧ್ಯ? 

ಪಠ್ಯ ಪರಿಷ್ಕರಣೆ ಹೆಸರಿನಲ್ಲಿ ಕುವೆಂಪು, ಶಿವಕುಮಾರ್ ಸ್ವಾಮೀಜಿ ಸೇರಿದಂತೆ ಹಲವರಿಗೆ ಅವಮಾನ ಮಾಡಲಾಗಿದೆ. ನೆರೆ ಸಂದರ್ಭದಲ್ಲೂ ಸಚಿವರು ಜಿಲ್ಲಾ ಪ್ರವಾಸ ಮಾಡಿಲ್ಲ. ಕೊನೆಗೆ ಸ್ವತಃ ಸಿಎಂ ಸೂಚನೆ ಕೊಡಬೇಕಾಯಿತು ಎಂದರು. ಗಂಗಾ ಕಲ್ಯಾಣ ಯೋಜನೆಯಲ್ಲಿ ಭ್ರಷ್ಟಾಚಾರ ನಡೆಸಿದ್ದೆ, ಈ ಬಗ್ಗೆ ವರದಿ ಬಂದರೂ ಏಕೆ ಕ್ರಮ ಕೈಗೊಂಡಿಲ್ಲ.

ಹನಿ‌ ನೀರಾವರಿ ವರ್ತಕರ ಸಂಘ 8 ಪರ್ಸೆಂಟ್ ಕುರಿತಾಗಿ ಪತ್ರವನ್ನು ಬರೆದಿದ್ದಾರೆ ರಾಜ್ಯಪಾಲರಿಗೆ. ಭ್ರಷ್ಟಾಚಾರದ ಬಗ್ಗೆ ಸ್ವತಃ ಬಿಜೆಪಿ ಪಕ್ಷದ ಶಾಸಕರೂ ಆರೋಪ ಮಾಡಿದರೂ ಏಕೆ ತನಿಖೆ ಮಾಡಿಲ್ಲ? ನೋಟಿಸ್ ಕೊಟ್ಟಿಲ್ಲ? ಎಂದು ಪ್ರಶ್ನಿಸಿದರು. ಸಿಎಂ ಆಗಬೇಕಾದರೆ 2,500 ಕೋಟಿ ಕೊಡಬೇಕು ಎಂದು ಹೇಳಿದ್ದರು, ಆದರೆ ಈ ಬಗ್ಗೆ ಏಕೆ ಕ್ರಮ ಆಗಿಲ್ಲ? ಸರ್ಕಾರ‌ ಜಾಣಕುರುಡು ಆಗಿದೆ ಎಂದು‌ ಆರೋಪಿಸಿದರು.

ಬಿಜೆಪಿಯಿಂದ ಯಾವ ವರ್ಗಕ್ಕೂ ಯಾವುದೇ ಸಹಾಯ ಆಗಿಲ್ಲ. ಭ್ರಷ್ಟೋತ್ಸವ ಕಾರಣಕ್ಕಾಗಿ ಯಾವುದೇ ರಾಷ್ಟ್ರೀಯ ನಾಯಕರು ಬರ್ತಾ ಇಲ್ಲ ಎಂದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಯಡಿಯೂರಪ್ಪನವರ ಹಾದಿಯಲ್ಲಿ ಸರ್ಕಾರ ನಡೆಸುತ್ತಿಲ್ಲ ಎಂದು ಹೇಳಲು ಈ ಕಾರ್ಯಕ್ರಮ ಮಾಡುತ್ತಿದ್ದಾರೆ : ಸಿದ್ದರಾಮಯ್ಯ

Next Post

ಸೋನಿಯಾ ಗಾಂಧಿಗೆ ಮತ್ತೆ ಸಮನ್ಸ್:‌ ನಾಳೆ 3ನೇ ಸುತ್ತಿನ ವಿಚಾರಣೆ

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
ಒಂದು ಕುಟುಂಬಕ್ಕೆ ಒಂದೇ ಟಿಕೆಟ್: ಕಾಂಗ್ರೆಸ್ ನಿಂದ ಮಹತ್ವದ ನಿರ್ಧಾರ?

ಸೋನಿಯಾ ಗಾಂಧಿಗೆ ಮತ್ತೆ ಸಮನ್ಸ್:‌ ನಾಳೆ 3ನೇ ಸುತ್ತಿನ ವಿಚಾರಣೆ

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada