• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

‘ಸಿನಿಮಾ ಮಂದಿಗೆ ವಾರ್ನ್​ ಅಂತಾ ಆದ್ರೂ ಅನ್ಕೊಳಿ..’ ಡಿಕೆಶಿ ಹೇಳಿಕೆಗೆ ಎಲ್ಲೆಡೆ ಆಕ್ರೋಶ

ಕೃಷ್ಣ ಮಣಿ by ಕೃಷ್ಣ ಮಣಿ
March 2, 2025
in ಕರ್ನಾಟಕ, ರಾಜಕೀಯ, ಸಿನಿಮಾ
0
‘ಸಿನಿಮಾ ಮಂದಿಗೆ ವಾರ್ನ್​ ಅಂತಾ ಆದ್ರೂ ಅನ್ಕೊಳಿ..’ ಡಿಕೆಶಿ ಹೇಳಿಕೆಗೆ ಎಲ್ಲೆಡೆ ಆಕ್ರೋಶ
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ ನಡೆಯುತ್ತಿರೋ ಚಲನಚಿತ್ರೋತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಸ್ಟಾರ್ ನಟ-ನಟಿಯರು ಗೈರಾದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್​ ಬೇಸರ ವ್ಯಕ್ತಪಡಿಸಿದ್ರು.. ನಿಮ್ಮ ನಟ್ಟು ಬೋಲ್ಟ್ ಟೈಟ್ ಮಾಡೋದು ಗೊತ್ತು. ಇದನ್ನು ವಾರ್ನ್​ ಅಂತಾ ಆದ್ರೂ ಅಂದ್ಕೊಳಿ, ಮನವಿ ಅಂತಾ ಆದ್ರೂ ಅನ್ಕೊಳಿ ಅಂತ ಎಚ್ಚರಿಸಿದ್ರು.. ಇದೇ ವಿಚಾರಕ್ಕೆ ಮಾತಾಡಿರೋ ಆರ್ ಅಶೋಕ್, ನಿಮ್ಮ ಸಚಿವ ರಾಜಣ್ಣ ಅವರ ನಟ್ ಬೋಲ್ಟನ್ನೇ ಟೈಟ್ ಮಾಡೋಕೆ ಆಗಿಲ್ಲ. ಇನ್ನು ಯಶ್, ಸುದೀಪ್, ದರ್ಶನ್ ಅವರ ನಟ್ ಬೋಲ್ಟನ್ನೂ ಟೈಟ್ ಮಾಡೋಕೆ ಆಗುತ್ತಾ..? ಅವರ ಸಿನಿಮಾಗಳೇನು ನಿಮ್ಮ ಆಶೀರ್ವಾದಿಂದ ಗೆದ್ದಿದ್ದಾವಾ..? ಎಂದು ತಿರುಗೇಟು ಕೊಟ್ಟಿದ್ದಾರೆ.

ADVERTISEMENT

ಕೊಪ್ಪಳದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಡಿ.ಕೆ ಶಿವಕುಮಾರ್ ಬೆದರಿಕೆ ವಿಚಾರಕ್ಕೆ ತಿರುಗೇಟು ಕೊಟ್ಟಿದ್ದು, ಅದರ ಬಗ್ಗೆ ಮಾತನಾಡೋ ಅವಶ್ಯಕತೆ ಇಲ್ಲ. ಯಾರು ಬೆಂಬಲ ಕೊಟ್ಟಿದ್ದಾರೋ ಬಿಟ್ಟಿದ್ದಾರೋ ಅನ್ನೋದಲ್ಲ. ಅವರಿಗೆ ರಾಜ್ಯದ ಜನ 138 ಸ್ಥಾನ ಕೊಟ್ಟಿದ್ದಾರೆ. ನಟ್ ಬೋಲ್ಟ್ ಸರಿಮಾಡಲು ಜನ ಅಧಿಕಾರ ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.

ಡಿ.ಕೆ ಶಿವಕುಮಾರ್​​ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದು, ಸಿನಿಮಾ ರಂಗದಲ್ಲಿ ಇರುವ ಕಲಾವಿದರು, ನಿರ್ದೇಶಕರು, ನಿರ್ಮಾಪಕರಿಗೆ ಸಮಾಜದ ಆಗು ಹೋಗುಗಳ ಬಗ್ಗೆ ಪ್ರಜ್ಞೆ ಇದೆ. ಯಾವ ಸಂದರ್ಭದಲ್ಲಿ ಯಾವ ಹೋರಾಟ ಕೈ ಜೋಡಿಸಬೇಕೆಂಬುದು ಅವರ ವೈಯಕ್ತಿಕ ವಿಚಾರ. ರಾಜಕೀಯವಾಗಿ ಒಂದು ಪಕ್ಷದ ಜೊತೆ ಗುರುತಿಸಿಕೊಳ್ಳೋದಕ್ಕೆ ಬಹುಶಃ ಕಲಾವಿದರು ಹಿಂದೆ ಸರಿದಿರಬಹುದು. ಹಾಗಾಗಿ ಈ ರೀತಿ ನಟ್ ಬೋಲ್ಟ್ ಟೈಟ್ ಮಾಡ್ತೀನಿ ಅನ್ನೋದು ಸರಿಯಲ್ಲ. ಈ ವಿಷಯಗಳನ್ನ ಬಿಟ್ಟು ಎಲ್ಲರನ್ನ ಗೌರವಯುತವಾಗಿ ನಡೆದುಕೊಳ್ಳುವುದು ಕಲಿಯಬೇಕು ಎಂದಿದ್ದಾರೆ.

ರಾಜಕಾರಣಿಗಳ ಮಕ್ಕಳು ಚಿತ್ರರಂಗದಿಂದ ವಾಪಸ್ ರಾಜಕೀಯಕ್ಕೆ ಬಂದ ವಿಚಾರವಾಗಿ ಮಾತನಾಡಿ, ಡಿಸಿಎಂ ಡಿ.ಕೆ ಶಿವಕುಮಾರ್​ಗೆ ತಿರುಗೇಟು ನೀಡಿದ ನಿಖಿಲ್ ಕುಮಾರಸ್ವಾಮಿ, ಕುಮಾರಣ್ಣ ವೃತಿ ಪ್ರಾರಂಭ ಮಾಡಿದ್ದು ಸಿನಿಮಾ ಹಂಚಿಕೆದಾರಾಗಿ. ಚಿತ್ರ ಪ್ರದರ್ಶನದ ವೇಳೆ ಹಲವಾರು ಸಿನಿಮಾಗಳನ್ನ ನಾನು ನೋಡಿದ್ದೇನೆ. 200 ಕ್ಕೂ ಹೆಚ್ಚು ಸಿನಿಮಾಗಳ ವಿತರಣೆ ಮಾಡಿ ಯಶಸ್ವಿ ವಿತರಕರಾಗಿ ಕೆಲಸ ಮಾಡಿದ್ದಾರೆ. ಆ ಹಿನ್ನೆಲೆಯಲ್ಲಿ ನನಗೂ ಸಹ ನನ್ನ ವೃತಿ ಬದುಕು, ರಾಜಕಾರಣ ಹೊರತುಪಡಿಸಿ ಸಿನಿಮಾ ರಂಗದಲ್ಲಿ ಪ್ರಾರಂಭ ಮಾಡಬೇಕು ಅಂತ ಕನಸು ಕಲ್ಪನೆ ಹೊತ್ತಿದ್ದೆ. ಬಹಳ ವರ್ಷಗಳ ತಯಾರಿ ಮಾಡ್ಕೊಂಡು ಜಾಗ್ವಾರ್ ಸಿನಿಮಾ ಮೂಲಕ ಎಂಟ್ರಿ ಕೊಟ್ಟೆ. ಹಾಗಾಗಿ ಸಿನಿಮಾ ರಂಗ ನಮಗೆ ಹೊಸದೇನು ಅಲ್ಲ ಎಂದಿದ್ದಾರೆ.

ನಟ್ ಬೋಲ್ಟ್ ಸರಿ ಮಾಡ್ತೇನೆ ಅಂತ ಧಮ್ ಕೊಡೋದು ಸರಿಯಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಸಿನಿಮಾ ಕಲಾವಿದರ ನಟ್ ಬೋಲ್ಟ್ ಸರಿ ಮಾಡ್ತೇನೆ ಅನ್ನೋ ಡಿ.ಕೆ ಶಿವಕುಮಾರ್​​ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ. ಪಾದಯಾತ್ರೆ ವೇಳೆ ಕಲಾವಿದರು ಬೆಂಬಲಿಸಿಲ್ಲ ಅನ್ನೋದನ್ನ ಒಪ್ಪೋಣ, ಹೋರಾಟಕ್ಕೆ ಬರಬೇಕೋ ಬೇಡವೋ ಅನ್ನೋದು ಅವರಿಗೆ ಬಿಟ್ಟ ವಿಚಾರ. ನಾವು ಅದನ್ನು ಹೇಳೋ ಅವಶ್ಯಕತೆ ಇಲ್ಲ. ಗೋಕಾಕ್ ವರದಿ ಜಾರಿ ಹೋರಾಟದ ಸಂದರ್ಭದಲ್ಲಿ ರಾಜಕುಮಾರ್ ಸ್ವಯಂ ಪ್ರೇರಿತರಾಗಿ ಧುಮುಕಿದ್ದರು. ಅವರೇ ಹೋರಾಟದ ನೇತೃತ್ವ ತೆಗೆದುಕೊಂಡಿದ್ದರು. ಕನ್ನಡ ಚಲನಚಿತ್ರ ರಂಗದ ಕಲಾವಿದರು ಇದರ ಬಗ್ಗೆ ವಿಚಾರ ಮಾಡಬೇಕು. ಅವರು ಹೊರಟಕ್ಕೆ ಬರದೇ ಇದ್ದಲ್ಲಿ ಜನರೇ ತೀರ್ಮಾನಿಸ್ತಾರೆ. ಕನ್ನಡ ಚಲನಚಿತ್ರ ಕಲಾವಿದರ ಬಗ್ಗೆ ಕನ್ನಡಿಗರೇ ತೀರ್ಮಾನ ಕೈಗೊಳ್ತಾರೆ. ಹೊರಾಟಕ್ಕೆ ಬನ್ನಿ ಅಂತ ಬೆದರಿಕೆ ಹಾಕೋದು ಸರಿಯಲ್ಲ ಎಂದಿದ್ದಾರೆ.

Tags: DCM DK Shivakumardcm dk shivakumar newsDK Shivakumardk shivakumar angry with film industrydk shivakumar latest newsdk shivakumar newsdk shivakumar r ashokdk shivakumar speechdk shivakumar today newsdk shivakumar vs r ashokdk shivakumar warning sandalwood actorkarnataka dcm dk shivakumarr ashok about sandalwood actorsr ashok on dk shivakumarr ashok slams dk shivakumarr ashok vs dk shivakumarsandalwood actorssandalwood news
Previous Post

ಡಿಕೆಗೆ ಮೊದಲು MLA ಟಿಕೆಟ್ ಕೊಡಿಸಿದ್ದೇ ನಾನು..! ಅವರು ಸಿಎಂ ಆಗೋದನ್ನ ತಡೆಯಲು ಸಾಧ್ಯವಿಲ್ಲ : ವೀರಪ್ಪ ಮೊಯ್ಲಿ 

Next Post

ಹಾಲುಮತ ವರ್ಸಸ್​ ಮುಖ್ಯಮಂತ್ರಿ ಸೀಟ್​.. ಬೆಚ್ಚಿ ಬೀಳೋ ಮಾಹಿತಿ ಬಿಚ್ಚಿಟ್ಟ ಸ್ವಾಮೀಜಿ

Related Posts

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..
Top Story

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..

by ಪ್ರತಿಧ್ವನಿ
May 17, 2026
0

ಬೆಂಗಳೂರು : ಪಂಜಾಬ್​ ಕಿಂಗ್ಸ್​ ವಿರುದ್ಧ ನಡೆದ ಐಪಿಎಲ್​ 2026ರ 61ನೇ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಭರ್ಜರಿ ಪ್ರದರ್ಶನ ನೀಡಿದ್ದು ಗೆಲುವಿನ ರಣಕೇಕೆ ಹಾಕಿದೆ...

Read moreDetails
ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

May 17, 2026
ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

May 17, 2026
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

May 17, 2026
Next Post
ಹಾಲುಮತ ವರ್ಸಸ್​ ಮುಖ್ಯಮಂತ್ರಿ ಸೀಟ್​.. ಬೆಚ್ಚಿ ಬೀಳೋ ಮಾಹಿತಿ ಬಿಚ್ಚಿಟ್ಟ ಸ್ವಾಮೀಜಿ

ಹಾಲುಮತ ವರ್ಸಸ್​ ಮುಖ್ಯಮಂತ್ರಿ ಸೀಟ್​.. ಬೆಚ್ಚಿ ಬೀಳೋ ಮಾಹಿತಿ ಬಿಚ್ಚಿಟ್ಟ ಸ್ವಾಮೀಜಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada