• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ಭಾರತ ಸರ್ಕಾರದ ಮೇಲೆ ಭರವಸೆಯಿಲ್ಲ- ಬಾಂಗ್ಲಾ ಹಿಂದೂಗಳ ಆಕ್ರೋಶ

Shivakumar A by Shivakumar A
October 21, 2021
in ವಿದೇಶ
0
ಭಾರತ ಸರ್ಕಾರದ ಮೇಲೆ ಭರವಸೆಯಿಲ್ಲ- ಬಾಂಗ್ಲಾ ಹಿಂದೂಗಳ ಆಕ್ರೋಶ
Share on WhatsAppShare on FacebookShare on Telegram

ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯಗಳ ಮೇಲೆ ಹಾಗೂ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸೆಗೆ ಭಾರತ ಸರ್ಕಾರ ನೀಡಿರುವ ಪ್ರತಿಕ್ರಿಯೆ ಕುರಿತು ಅಲ್ಲಿನ ಹಿಂದೂ ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಬಾಂಗ್ಲಾದಲ್ಲಿ ಹಿಂದೂಗಳಿಗೆ ರಕ್ಷಣೆ ಸಿಗುತ್ತಿಲ್ಲವಾದರೂ, ಬಿಜೆಪಿ ಕಾಟಾಚಾರಕ್ಕೆ ಮಾತ್ರ ತನ್ನ ಸಹಾನುಭೂತಿ ತೋರುತ್ತಿದೆ. ಬಾಂಗ್ಲಾದೇಶ ಸರ್ಕಾರದ ಮೇಲೆ ಒತ್ತಡ ಹೇರುವ ಯಾವುದೇ ಪ್ರಯತ್ನ ಮಾಡುತ್ತಿಲ್ಲ ಎಂದು ಬಾಂಗ್ಲಾದೇಶ್ ಜಯಿತೊ ಹಿಂದೂ ಮೊಹಾಜೊತೆ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಗೋಬಿಂದ ಚಂದ್ರ ಪ್ರಮಾಣಿಕ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ADVERTISEMENT

ದುರ್ಗಾ ಪೂಜೆಯ ಪೆಂಡಾಲ್’ಗಳಲ್ಲಿ ಕುರಾನ್’ಗೆ ಅಪಚಾರವೆಸಗಲಾಗಿದೆ ಎಂಬ ಆರೋಪದಡಿ ಅಕ್ಟೋಬರ್ 13ರ ನಂತರ ಹಲವು ಕಡೆಗಳಲ್ಲಿ ಹಿಂದೂಗಳ ಮೇಲೆ ದಾಳಿ ನಡೆಸಲಾಗಿತ್ತು. ಸುಮಾರು ಆರು ದಿನಗಳ ಕಾಲ ನಿರಂತರವಾಗಿ ಹಲವೆಡೆ ಈ ದಾಳಿಗಳು ನಡೆದಿದ್ದವು. ಈ ದಾಳಿಗಳನ್ನು ಖಂಡಿಸಿ ಬಾಂಗ್ಲಾದೇಶದ ಹಲವು ಪ್ರಗತಿಪರ ಸಂಘಟನೆಗಳು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದವು. 

ಭಾರತದಲ್ಲಿಯೂ ಹಿಂದೂಪರ ಸಂಘಟನೆಗಳು ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದವು. ಭಜರಂಗದಳ, ವಿಶ್ವ ಹಿಂದೂ ಪರಿಷತ್, ಆರ್‌ಎಸ್ಎಸ್, ಹಿಂದೂ ಮಹಾಸಭಾ ಸೇರಿದಂತೆ ಹಲವು ಸಂಘಟನೆಗಳು ತೀವ್ರವಾಗಿ ಈ ದಾಳಿಗಳನ್ನು ಖಂಡಿಸಿದ್ದವು. ಆದರೆ, ಸರ್ಕಾರದ ಮಟ್ಟದಲ್ಲಿ ಯಾವ ರೀತಿ ಬಾಂಗ್ಲಾದೇಶದ ಮೇಲೆ ಒತ್ತಡ ಹೇರಲಾಗಿದೆ ಎಂದು ಗಮನಿಸಿದರೆ, ನಿರಾಶದಾಯಕ ಉತ್ತರ ಸಿಕ್ಕಿದೆ, ಎಂದು ಬಾಂಗ್ಲಾದೇಶದ ಹಿಂದೂ ಸಂಘಟನೆಗಳು ಆರೋಪಿಸಿವೆ. 

ಈ ಕುರಿತಾಗಿ ‘ದಿ ವೈರ್’ಗೆ ಸಂದರ್ಶನ ನೀಡಿರುವ ಗೋಬಿಂದ ಚಂದ್ರ ಪ್ರಮಾಣಿಕ್, ಕಳೆದ ಹಲವು ವರ್ಷಗಳಲ್ಲಿ ಬಾಂಗ್ಲಾದೇಶದ ಹಿಂದೂಗಳ ಮೇಲೆ ನಡೆದಿರುವ ದಾಳಿಗಳಲ್ಲಿ ಆಡಳಿತರೂಢ ಅವಾಮಿ ಲೀಗ್ ನಾಯಕರ ಕೈವಾಡ ಇರುವುದು ಬೆಳಕಿಗೆ ಬಂದಿದೆ. ಸರ್ಕಾರವು ಕೋಮುವಾದಿ ಶಕ್ತಿಗಳ ಬೆಂಬಲಕ್ಕೆ ನಿಂತಿರುವುದು ಈ ಹಿಂದೆಯೂ ಸಾಬೀತಾಗಿದೆ. ಹಾಗಾಗಿ ಇಲ್ಲಿ ಪದೇ ಪದೇ ಹಿಂದೂಗಳ ಮೇಲೆ ದಾಳಿಗಳು ನಡೆಯುತ್ತಲೇ ಇವೆ, ಎಂದಿದ್ದಾರೆ. 

“ಹಲವು ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿ, ಆರೋಪಿಗಳನ್ನು ಬಂಧಿಸಿದ್ದರೂ ಇಲ್ಲಿನ ಪರಿಸ್ಥಿತಿಯಲ್ಲಿ ಗಮನಾರ್ಹ ಬದಲಾವಣೆಯಾಗಿಲ್ಲ. ಅಕ್ಟೋಬರ್ 18-19ರಂದು ಕೂಡಾ ಹಿಂದೂಗಳ ಮೇಲೆ ದಾಳಿ ನಡೆಸಲಾಗಿದೆ. ಭಾರತದಲ್ಲಿ ಮುಸ್ಲಿಮರ ಮೇಲೆ ನಡೆಯುತ್ತಿರುವ ದಾಳಿಗೆ ಪ್ರತಿಯಾಗಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಸಿರುವ ಸಾಧ್ಯತೆಗಳಿವೆ ಎಂದು ಈಗಾಗಲೇ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ. ಆದರೆ, ಇದು ಸ್ವೀಕಾರಾರ್ಹವಾದ ಉತ್ತರವಲ್ಲ,” ಎಂದು ಅವರು ಹೇಳಿದ್ದಾರೆ. 

ಮುಂದುವರೆದು, ಬಹುತೇಕ ಅವಾಮಿ ಲೀಗ್ ನಾಯಕರು ಬಿಜೆಪಿ, ಆರ್‌ಎಸ್ಎಸ್ ಹಾಗೂ ವಿಶ್ವ ಹಿಂದೂ ಪರಿಷತ್ತನ್ನು ಭಯೋತ್ಪಾದಕ ಸಂಘಟನೆಗಳಂತೆ ಗುರುತಿಸುವ ಕಾರಣದಿಂದ, ಇಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಬಿಜೆಪಿಯನ್ನು ಇಷ್ಟಪಡದ ನಾಯಕರು ಸರ್ಕಾರದಲ್ಲಿ ಹೆಚ್ಚಾಗಿರುವುದರಿಂದ ಭಾರತ ಸರ್ಕಾರದ ಮಾತುಗಳಿಗೆ ಇಲ್ಲಿ ಬೆಲೆಯಿಲ್ಲದಂತಾಗಿದೆ. ಇತ್ತೀಚಿನ ದಿನಗಳಲ್ಲಿ ಆರ್‌ಎಸ್ಎಸ್ ಹಾಗು ವಿ ಹೆಚ್ ಪಿ ಕುರಿತಾಗಿ ಅವಾಮಿ ಲೀಗ್ ನಾಯಕರು ಬೃಹತ್ ಅಭಿಯಾನವನ್ನೇ ಆರಂಭಿಸಿರುವ ಕಾರಣ ಇಲ್ಲಿ ಹಿಂದೂಗಳ ವಿರುದ್ದ ಅಸಹನೆ ಹೆಚ್ಚಾಗಿದೆ, ಎಂದು ಗೋಬಿಂದ್ ಹೇಳಿದ್ದಾರೆ. 

“ಬಾಂಗ್ಲಾದೇಶದ ಹಿಂದೂಗಳು ಭಾರತ ಸರ್ಕಾರದ ನಡವಳಿಕೆಯ ವಿರುದ್ದ ತೀವ್ರವಾದ ಆಕ್ರೋಶವನ್ನು ಹೊಂದಿದ್ದಾರೆ. ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಭಾರತಕ್ಕೆ ನೇರವಾಗಿ ಎಚ್ಚರಿಕೆ ನೀಡುವ ಮಟ್ಟಿಗೆ ತಲುಪಿದ್ದರೂ, ಭಾರತ ಸರ್ಕಾರ ಇಲ್ಲಿನ ಹಿಂದೂಗಳ ಮೇಲಿನ ದಾಳಿಯನ್ನು ಕನಿಷ್ಟ ಖಂಡಿಸುವ ಹೇಳಿಕೆಯನ್ನೂ ನೀಡಿಲ್ಲ. ಬಾಂಗ್ಲಾ ಸರ್ಕಾರಕ್ಕೆ ಎಚ್ಚರಿಕೆಯನ್ನೂ ರವಾನಿಸಿಲ್ಲ. ಬದಲಾಗಿ, ಹಿಂದೂಗಳ ಮೇಲಿನ ದಾಳಿಗೆ ಕ್ರಮ ಕೈಗೊಂಡ ಶೇಖ್ ಹಸೀನಾ ಅವರಿಗೆ ಭಾರತದ ವಿದೇಶಾಂಗ ಇಲಾಖೆ ಅಭಿನಂದನೆ ತಿಳಿಸಿದೆ. ವಿಶ್ವ ಸಂಸ್ಥೆ ಹಾಗೂ ಅಮ್ನೆಸ್ಟಿ ಇಂಟರ್ನ್ಯಾಷನಲ್ ಸಂಸ್ಥೆ ಈ ದಾಳಿಯನ್ನು ತೀವ್ರವಾಗಿ ಖಂಡಿಸಿವೆ. ಇಂತಹ ಸಂದರ್ಭದಲ್ಲಿ ಭಾರತ ಸರ್ಕಾರದ ಮೌನ ನಿಜಕ್ಕೂ ಬೇಸರ ಮೂಡಿಸಿದೆ,” ಎಂದು ಗೋಬಿಂದ್ ಅವರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ. 

ಇನ್ನು ಭಾರತೀಯ ಮೂಲದ ಹಿಂದೂ ಸಂಸ್ಥೆಗಳ ಬಳಿ ಮನವಿ ಮಾಡಿದರೂ, ಅವರ ನೆರವು ದಕ್ಕದೇ ಇರುವುದು ಮತ್ತಷ್ಟು ನೋವಿಗೆ ಕಾರಣವಾಗಿದೆ ಎಂದು ಹೇಳಿರುವ ಗೋಬಿಂದ್ ಪ್ರಮಾಣಿಕ್, ಬಿಜೆಪಿ, ಆರ್ಎಸ್ಎಸ್ ಹಾಗೂ ವಿ ಹೆಚ್ ಪಿ ಸಂಸ್ಥೆಯೊಂದಿಗೆ ನಿರಂತರವಾಗಿ ನಾವು ಸಂಪರ್ಕದಲ್ಲಿ ಇದ್ದೇವೆ. ಬಾಂಗ್ಲಾ ಸರ್ಕಾರದ ಮೇಲೆ ಒತ್ತಡ ಹೇರಲು ಅವರಲ್ಲಿ ವಿನಂತಿಸಿಕೊಂಡಿದ್ದೇವೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ದಿವಂಗತ ಸುಷ್ಮಾ ಸ್ವರಾಜ್, ಆರ್ಎಸ್ಎಸ್’ನ ಹಿರಿಯ ನಾಯಕ ರಾಮ್ ಮಾಧವ್ ಅವರು ನಮ್ಮ ಕುರಿತಾಗಿ ಅಪಾರ ಸಹಾನುಭೂತಿ ಹೊಂದಿದ್ದರು. ಇತರರು ನಮ್ಮನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ನಮಗೆ ಅರ್ಥವಾಗದ ಯಾವುದೋ ಕಾರಣಕ್ಕಾಗಿ ಬಾಂಗ್ಲಾ ಸರ್ಕಾರದ ಮೇಲೆ ಒತ್ತಡ ಹೇರಲು ಹಿಂಜರಿಯುತ್ತಿದ್ದಾರೆ, ಎಂದು ಹೇಳಿದ್ದಾರೆ. 

ಪಶ್ಚಿಮ ಬಂಗಾಳದ ನಾಯಕರಾದ ದಿಲೀಪ್ ಘೋಷ್ ಹಾಗೂ ಸುವೆಂದು ಅಧಿಕಾರಿ ಅಲ್ಪ ಮಟ್ಟಿನ ಬೆಂಬಲವನ್ನು ನಮಗೆ ನಿಡಿದ್ದು ಖುಶಿ ತಂದಿದೆ. ಆದರೆ, ಭಾರತ ಸರ್ಕಾರದ ಮೇಲೆ ನಮಗೆ ಎಳ್ಳಷ್ಟೂ ಭರವಸೆ ಉಳಿದಿಲ್ಲ, ಎಂದು ಗೋಬಿಂದ್ ಅವರು ಹೇಳಿರುವುದು ಆರ್ಎಸ್ಎಸ್ ಹಾಗೂ ಬಿಜೆಪಿಯ ಹಿಂದೂ ಪ್ರೇಮಕ್ಕೆ ಹಿಡಿದಿರುವ ಕೈಗನ್ನಡಿಯಾಗಿದೆ. 

Tags: AttackBangladeshBJPCongress PartyHinduಬಿಜೆಪಿ
Previous Post

ಬಿಜೆಪಿ ನಾಯಕರ ಭಂಡವಾಳ ಹೊರ ತೆಗೆದರೆ ಅವರ ನಿಜವಾದ ಬಣ್ಣ ಬಯಲಾಗುತ್ತದೆ : HDKumarswamy ಗರಂ

Next Post

#BoycottFabIndia ಕರೆ; ಹಿಂದೂಸ್ಥಾನದ ಆತ್ಮಕ್ಕೆ ಧಕ್ಕೆ ತಂದ ಸಂಸದ ತೇಜಸ್ವಿ ಸೂರ್ಯ!

Related Posts

ಇಂಡೋನೇಷ್ಯಾದಲ್ಲಿ ಭಾರೀ ಅಗ್ನಿ ದುರಂತ: 20 ಮಂದಿ ಸಾ**
Top Story

ಇಂಡೋನೇಷ್ಯಾದಲ್ಲಿ ಭಾರೀ ಅಗ್ನಿ ದುರಂತ: 20 ಮಂದಿ ಸಾ**

by ಪ್ರತಿಧ್ವನಿ
December 9, 2025
0

ಇಂಡೋನೇಷ್ಯಾದಲ್ಲಿ(indonesia) ಭಾರೀ ಅಗ್ನಿ ದುರಂತ(Fire Accident) ಸಂಭವಿಸಿದ್ದು, ಇಪ್ಪತ್ತು ಜನರು ದಾರುಣವಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇಂದು ಮಧ್ಯಾಹ್ನ ಜರ್ಕಾತ್‌ನಲ್ಲಿನ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡುನೋಡುತ್ತಿದ್ದಂತೆ ಸಂಪೂರ್ಣ...

Read moreDetails
ಚಿಂತನೆ-ಆಚರಣೆಗಳ ನಡುವೆ  ಬೌದ್ಧಿಕ ಕಂದರ

ಚಿಂತನೆ-ಆಚರಣೆಗಳ ನಡುವೆ  ಬೌದ್ಧಿಕ ಕಂದರ

December 6, 2025
ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ‌ ರಷ್ಯಾ ರಕ್ಷಣಾ ಸಚಿವ ನಮನ

ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ‌ ರಷ್ಯಾ ರಕ್ಷಣಾ ಸಚಿವ ನಮನ

December 4, 2025
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
ಚಂಡಮಾರುತದ ಅಬ್ಬರಕ್ಕೆ ನಲುಗಿದ ಶ್ರೀಲಂಕಾ: ಭಾರತದಿಂದ ನೆರವು

ಚಂಡಮಾರುತದ ಅಬ್ಬರಕ್ಕೆ ನಲುಗಿದ ಶ್ರೀಲಂಕಾ: ಭಾರತದಿಂದ ನೆರವು

November 29, 2025
Next Post
#BoycottFabIndia ಕರೆ; ಹಿಂದೂಸ್ಥಾನದ ಆತ್ಮಕ್ಕೆ ಧಕ್ಕೆ ತಂದ ಸಂಸದ ತೇಜಸ್ವಿ ಸೂರ್ಯ!

#BoycottFabIndia ಕರೆ; ಹಿಂದೂಸ್ಥಾನದ ಆತ್ಮಕ್ಕೆ ಧಕ್ಕೆ ತಂದ ಸಂಸದ ತೇಜಸ್ವಿ ಸೂರ್ಯ!

Please login to join discussion

Recent News

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌
Top Story

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

by ಪ್ರತಿಧ್ವನಿ
December 14, 2025
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್
Top Story

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?
Top Story

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

by ಪ್ರತಿಧ್ವನಿ
December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್
Top Story

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

by ಪ್ರತಿಧ್ವನಿ
December 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

December 14, 2025
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada