ಬಿಬಿಎಂಪಿ ವ್ಯಾಪ್ತಿಯಲ್ಲಿ ಮುಸ್ಲಿಂಮರ ಮಟನ್ ಸ್ಟಾಲ್, ಕಸಾಯಿಖಾನೆ ಮುಚ್ಚಲು ನೋಟಿಸ್ ಕೊಟ್ಟಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇವಲ ಮುಸ್ಲೀಮರನ್ನೇ ಯಾಕೆ ಟಾರ್ಗೆಟ್ ಮಾಡ್ತಿರಾ. ಒಂದು ಧರ್ಮ, ಒಂದು ಜಾತಿ ಟಾರ್ಗೆಟ್ ಮಾಡಬೇಡಿ. ಎಲ್ಲರ ಮೇಲೂ ಕಾನೂನು ಕ್ರಮ ಕೈಗೊಳ್ಳುವಂತಿದ್ದರೆ ಮಾಡಿ ಎಂದಿದ್ದಾರೆ.
ಮೈಸೂರಿನ ಟಿ. ನರಸೀಪುರದಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಕಾನೂನು ಎಲ್ಲರಿಗೂ ಒಂದೇ. ರಾಜಕೀಯ ಲಾಭಕ್ಕಾಗಿ ಒಂದು ಧರ್ಮವನ್ನ ಟಾರ್ಗೆಟ್ ಮಾಡಬೇಡಿ. ಮುಸ್ಲಿಂ, ಕ್ರಿಶ್ಚಿಯನ್, ಹಿಂದೂ ಯಾರೆ ತಪ್ಪು ಮಾಡಿದ್ರು ಕ್ರಮ ತಗೊಳ್ಳಿ. ಒಂದು ವರ್ಗವನ್ನ ಟಾರ್ಗೆಟ್ ಮಾಡಿದರೆ ಮತ ದೃವೀಕರಣ ಆಗತ್ತೆ ಎಂಬ ಭ್ರಮೆಯಲ್ಲಿ ಬಿಜೆಪಿ ಇದೆ. ಅದು ಅಸಾಧ್ಯ. ಈಗಾಗಲೇ ಅವರಿಗೆ ತಿರುಗುಬಾಣ ಆಗಿದೆ.
ಹಿಂದಿ ರಾಷ್ಟ್ರ ಭಾಷೆ ಚರ್ಚೆ ವಿಚಾರವಾಗಿ ಮಾತನಾಡಿದ ಅವರು, ಸಂವಿಧಾನ 15 ಭಾಷೆಗಳಿಗೆ ಅಧಿಕೃತ ಭಾಷೆ ಎಂಬ ಮಾನ್ಯತೆ ನೀಡಿದೆ. ಹಿಂದಿ ಕೂಡ ಒಂದು ಭಾಷೆ. ಹಿಂದಿ ರಾಷ್ಟ್ರ ಭಾಷೆ ಅಂತ ಎಲ್ಲಿಯೂ ಹೇಳಿಲ್ಲ. ಅಮಿತ್ ಷಾ ಅವರು ಹಿಂದಿಯನ್ನು ಸಂಪರ್ಕ ಭಾಷೆಯಾಗಿ ಬಳಸಬೇಕು ಅಂದಿರುವ ಕಾರಣಕ್ಕಾಗಿ ಬಿಜೆಪಿಯವರು ಓಲೈಕೆ ಮಾಡುತ್ತಿದ್ದಾರೆ.

ಸಿದ್ದರಾಮಯ್ಯ ಸೋನಿಯಾ ಗಾಂಧಿ ಗುಲಾಮ ಎಂಬ ಸಿ.ಟಿ. ರವಿ ಹೇಳಿಕೆ ವಿಚಾರ. ಪ್ರಜಾಪ್ರಭುತ್ವದಲ್ಲಿ ಯಾರು ಯಾರಿಗೂ ಗುಲಾಮರಲ್ಲ. ಅಮಿತ್ ಷಾ ಓಲೈಸಿ ಮಾತನಾಡಿದ್ದಕ್ಕೆ ಸಿಟಿ.ರವಿಯನ್ನ ಗುಲಾಮ ಎಂದಿದ್ದು. ಸೋನಿಯಾ ಗಾಂಧಿ ಹಿಂದಿ ರಾಷ್ಟ್ರೀಯ ಭಾಷೆ ಅಂದಿದ್ದಾರಾ ? ರಾಹುಲ್ ಗಾಂಧಿ ಆ ರೀತಿ ಮಾತನಾಡಿದ್ದಾರಾ ಪ್ರಜಾಪ್ರಭುತ್ವದಲ್ಲಿ ಯಾರಿಗೆ ಯಾರೂ ಗುಲಾಮರಲ್ಲ ಎಂದಿದ್ದಾರೆ.
ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಕಾಂಗ್ರೆಸ್ಗೆ ನೈತಿಕತೆ ಇಲ್ಲ ಎಂಬ ಸಚಿವ ಅಶೋಕ್ ಹೇಳಿಕೆ ವಿಚಾರ ಟೀಕಿಸಿದ ಸಿದ್ದರಾಮಯ್ಯ, . ನಮ್ಮ ಸರ್ಕಾರ ಇದ್ದಾಗ ಅಶೋಕ ಏನ್ ಮಾಡ್ತಾ ಇದ್ದರು. ಆಗ ಬಿಜೆಪಿ ಪ್ರತಿಪಕ್ಷದಲ್ಲಿತ್ತು. ಆಗ ಯಾಕೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿಲ್ಲ. ಆಗ ಅಶೋಕ ತಮ್ನ ಬಾಯಿಗೆ ಕಡುಬು ಹಾಕಿಕೊಂಡಿದ್ದರೇ? ಸುಮ್ನೆ ಏನೇನೋ ಮಾತಾಡೋದಲ್ಲ. ನಮ್ಮ ಕಾಲದಲ್ಲೂ ಪಿಎಸ್ಐ ನೇಮಕಾತಿ ಆಯ್ತು. ಬೇರೆ ಬೇರೆ ನೇಮಕಾತಿಗಳಾದವು. ಆಗೆಲ್ಲ ಇಂತಹ ಭ್ರಷ್ಟಾಚಾರ ನಡೆದಿತ್ತ ? ಬಿಜೆಪಿಯವರು ಅಧಿಕಾರಕ್ಕೆ ಬಂದ ಮೇಲೆ ಭ್ರಷ್ಟಾಚಾರ, ಅಕ್ರಮಗಳು ಹೆಚ್ಚಾಗಿವೆ ಎಂದು ಹೇಳಿದ್ದಾರೆ.