• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವರ್ಗಾವಣೆಗೆ ಮುನ್ನಾ ದಿನವೇ ಅಕ್ರಮ ಭೂ ಪರಿವರ್ತನೆ, ಆರ್‌ಟಿಸಿ ರದ್ದು ಪಡಿಸಿ ಭೂ ಮಾಫಿಯಾಗೆ ಕೊಡಲಿ ಪೆಟ್ಟು ನೀಡಿದ ರೋಹಿಣಿ ಸಿಂಧೂರಿ

Any Mind by Any Mind
June 10, 2021
in ಕರ್ನಾಟಕ
0
ವರ್ಗಾವಣೆಗೆ ಮುನ್ನಾ ದಿನವೇ ಅಕ್ರಮ ಭೂ ಪರಿವರ್ತನೆ, ಆರ್‌ಟಿಸಿ ರದ್ದು ಪಡಿಸಿ ಭೂ ಮಾಫಿಯಾಗೆ ಕೊಡಲಿ ಪೆಟ್ಟು ನೀಡಿದ ರೋಹಿಣಿ ಸಿಂಧೂರಿ
Share on WhatsAppShare on FacebookShare on Telegram

ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಹಾಗೂ ಶಾಸಕ ಸಾ.ರಾ.ಮಹೇಶ್ ನಡುವಿನ ತಿಕ್ಕಾಟ ಹೊಸದೇನಲ್ಲ. ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿ ಬಂದ ಆರಂಭದಿಂದಲೂ ಇವರಿಬ್ಬರ ನಡುವೆ ಜಟಾಪಟಿ ಶುರುವಾಗಿತ್ತು. ಕೊರೊನಾ ಸಂದರ್ಭದಲ್ಲೂ ಇವರ ವಾಕ್ ಸಮರ ನಡೆಯುತ್ತಲ್ಲೇ ಇತ್ತು. ಆದರೆ ದಿನ ಕಳೆದಂತೆ ಶಾಸಕರು ಹಾಗೂ ಐಎಎಸ್ ಅಧಿಕಾರಿ ನಡುವಿನ ಹಗ್ಗಜಗ್ಗಾಟಕ್ಕೆ ಭೂಮಾಫಿಯಾ ಕಾರಣ ಎಂಬ ಸಂಗತಿ ಬಹಿರಂಗಗೊಂಡಿತು. ನಂತರ ನಡೆದ ಎಲ್ಲಾ ಬೆಳವಣಿಗೆಗಳು ರೋಹಿಣಿ ಸಿಂಧೂರಿ ಅವರ ವರ್ಗಾವಣೆಗೂ ಕಾರಣವಾಯಿತು. ಆದರೆ, ರೋಹಿಣಿ ಸಿಂಧೂರಿ ವರ್ಗಾವಣೆಗೆ ಅವರ ಕಾರ್ಯವೈಖರಿ ಹಾಗೂ ಪಾಲಿಕೆ ಆಯುಕ್ತರಾಗಿದ್ದ ಶಿಲ್ಪಾನಾಗ್ ನಡುವಿನ ಆಂತರಿಕ ಕಿತ್ತಾಟ ಕಾರಣ ಎನ್ನಲಾಗಿತ್ತಾದರೂ, ಇದರ ಹಿಂದೆ ಭೂಮಾಫಿಯಾ ಕೈವಾಡ ಇದೆ ಎಂಬ ಮಾತುಗಳು ಕೇಳಿ ಬಂದಿತ್ತು. ಇದಕ್ಕೆ ಪೂರಕ ಎನ್ನುವಂತೆ ತಾವು ಭೂಒತ್ತುವರಿ ಮಾಡಿದ ಕುರಿತು ದಾಖಲೆ ನೀಡುವಂತೆ ಶಾಸಕ ಸಾ.ರಾ. ಮಹೇಶ್ ಅವರು ರೋಹಿಣಿ ಸಿಂಧೂರಿಗೆ ಸವಾಲು ಹಾಕಿದ್ದರು. ಶಾಸಕರ ಈ ಸವಾಲಿಗೆ ತಕ್ಕ ತಿರುಗೇಟು ನೀಡಿದ್ದ ರೋಹಿಣಿ, ಮೈಸೂರು ನಗರದ ಸುತ್ತಮುತ್ತಲ ಭೂ ಮಾಫಿಯ ಬಗ್ಗೆ ಖುದ್ದು ದಾಖಲೆ ಸಮೇತ ಮಾಹಿತಿ ಬಿಡುಗಡೆ ಮಾಡಿದ್ದಾರೆ. ಆ ಮೂಲಕ ಏಳೆಂಟು ತಿಂಗಳಿಂದ ಕ್ರಮ ಜರುಗಿಸದೇ ಏನು ಮಾಡುತ್ತಿದ್ದರು ಎಂದು ಟೀಕಿಸುತ್ತಿದ್ದವರಿಗೆ ತಿರುಗೇಟು ನೀಡಿದ್ದಾರೆ.

ADVERTISEMENT

ಪ್ರಮುಖವಾಗಿ ಮೈಸೂರಿನ ಲಿಂಗಾಬುದಿ ಕೆರೆ ಅಂಗಳದಲ್ಲಿ 2 ಎಕರೆ ಜಾಗದಲ್ಲಿ ರೆಸಾರ್ಟ್ ಆರಂಭಿಸಲು ಉದ್ದೇಶಿಸಿದ್ದದ್ದು, ಕಸಬಾ ಹೋಬಳಿ ಲಿಂಗಾಬುದಿ ಗ್ರಾಮದಲ್ಲಿ 1.39 ಎಕರೆ ವಿಸ್ತೀರ್ಣದ ಜಮೀನನ್ನು ವಸತಿ ಉದ್ದೇಶಕ್ಕೆ ಭೂ ಪರಿವರ್ತನೆಯನ್ನು ತಪ್ಪು ಮಾಹಿತಿ ನೀಡಿದ ಕಾರಣ ಭೂ ಪರಿವರ್ತನೆ ರದ್ದು ಪಡಿಸಿರುವುದು ಹಾಗೂ ದಟ್ಟಗಳ್ಳಿ ಗ್ರಾಮದ ಸರ್ವೆ ನಂ 123 ರ ಗೋಮಾಳ ಜಮೀನಿಗೆ ಸಂಬಂಧಿಸಿದ ದೂರಿನ ಬಗ್ಗೆ ಸೂಕ್ತ ಕ್ರಮ ಜರುಗಿಸಲಾಗಿದೆ ಎಂಬ ಮಾಹಿತಿ ಸಹ ನೀಡಿದ್ದರು.  ಮತ್ತೊಂದೆಡೆ ಮೈಸೂರಿನ ದಟ್ಟಗಳ್ಳಿಯಲ್ಲಿನ ಸಾರಾ ಕಲ್ಯಾಣ ಮಂಟಪ ರಾಜಕಾಲುವೆ ಮೇಲೆ ನಿರ್ಮಾಣ ಮಾಡಿದೆ. ಈ ಬಗ್ಗೆ ಸಮೀಕ್ಷೆ ನಡೆಸಲಾಗುತ್ತದೆ ಎಂದು ವರ್ಗಾಯಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸ್ಪೋಟಕ ಮಾಹಿತಿ ನೀಡಿದ್ದರು.‌ ಕೆ.ಆರ್. ನಗರದ ಮಾನ್ಯ ಶಾಸಕರ ಕೆಲ ಅಕ್ರಮ ಭೂ ವ್ಯವಹಾರಗಳ ಮೇಲೆ ಕಾನೂನಾತ್ಮಕ ಕ್ರಮ ಜರುಗಿಸಲು ಮುಂದಾದೆ. ಆದ್ದರಿಂದಲೇ ನನ್ನ ವಿರುದ್ಧ ಷಡ್ಯಂತ್ರ ನಡೆಸಿ, ಸುಳ್ಳು ಆರೋಪ ಮಾಡತೊಡಗಿದರು. ನಾನು ಜಿಲ್ಲಾಧಿಕಾರಿಯಾಗಿ ಬಂದ ದಿನದಿಂದ ಮತ್ತು ಈಗ ನಾನು ವರ್ಗಾವಣೆಯಾದ ನಂತರವೂ ಶಾಸಕರಾದ ಮಹೇಶ್, ನನ್ನ ವಿರುದ್ಧ ನಿರಂತರವಾಗಿ ಸುಳ್ಳು ಆರೋಪ ಮಾಡುತ್ತಲೇ ಇದ್ದಾರೆ. ಕಾನೂನು ಬಾಹಿರ ಕೃತ್ಯಗಳ ಬಗ್ಗೆ ಕ್ರಮ ಕೈಗೊಳ್ಳದಂತೆ ಅಧಿಕಾರಿಗಳನ್ನು ಬೆದರಿಸುವುದು ಮತ್ತು ಹೆದರಿಸುವುದಕ್ಕೆ ಸುಳ್ಳು ಆರೋಪದ ತಂತ್ರ ಬಳಸುತ್ತಿದ್ದಾರೆ. ನನ್ನ ವಿರುದ್ಧ ಆರೋಪಗಳ ಸುರಿಮಳೆಯ ಹಿಂದಿನ ಉದ್ದೇಶವು ಇದೇ. ಆದರೆ ಅವರ ಈ ಯಾವುದೇ ಆರೋಪ, ಬೆದರಿಕೆಗಳಿಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. 

ನನ್ನ ವರ್ಗಾವಣೆ ನಂತರವೂ ಅವರು ನನ್ನ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಆ ಮೂಲಕ ಸಾರ್ವಜನಿಕ ವಲಯದಲ್ಲಿ ನನಗೆ ಮಸಿ ಬಳಿಯುವುದು ಉದ್ದೇಶ. ಅದ್ದರಿಂದಲೇ ನಾನು ಅನಿವಾರ್ಯವಾಗಿ ಈ ಸ್ಪಷ್ಟನೆ ನೀಡಬೇಕಾಯಿತು. ನಗರದಲ್ಲಿನ ಕೆಲ ಭೂ ಅಕ್ರಮಗಳ ದಾಖಲೆಗಳನ್ನು ಪರಿಶೀಲಿಸಿ ಅದರ ಮಾಹಿತಿ ಪಡೆದು ವಿಚಾರಣೆ ನಡೆಸಲಾಯಿತು. ಮೇಲ್ನೋಟಕ್ಕೆ ಇಲ್ಲಿ ಅಕ್ರಮ ನಡೆದಿರುವುದು ಕಂಡು ಬಂದಿದೆ. ಆದ್ದರಿಂದ ಈ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿ ತಾರ್ಕಿಕ ತೀರ್ಮಾನಕ್ಕೆ ತೆಗೆದುಕೊಳ್ಳಬೇಕು. ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಹ, ಮೈಸೂರಿನ ಭೂ ಮಾಫಿಯ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯ ಮಾಡಿರುವುದನ್ನು ರೋಹಿಣಿ ಸಿಂಧೂರಿ ಇದೇ ವೇಳೆ ಉಲ್ಲೇಖಿಸಿದರು. ಮೈಸೂರು ನಗರ ಪಾಲಿಕೆ ಆಯುಕ್ತೆಯಾಗಿದ್ದ ಶಿಲ್ಪನಾಗ್, ರಾಜಕಾರಣಿಗಳ ಜತೆಗೆ ಕೈಜೋಡಿಸಿ ನನ್ನ ವಿರುದ್ಧ ಷಡ್ಯಂತ್ರ ನಡೆಸಿದರು. ನನ್ನನ್ನು ಇಲ್ಲಿಂದ ಎತ್ತಂಗಡಿ ಮಾಡಿಸುವುದೇ ಅವರ ರಾಜೀನಾಮೆ ನಾಟಕದ ಹಿಂದಿನ ಉದ್ದೇಶವಾಗಿತ್ತು ಎಂದು ರೋಹಿಣಿ ಸಿಂಧೂರಿ ಅಭಿಪ್ರಾಯಪಟ್ಟಿದ್ದರು.‌

ತಮ್ಮ ರಾಜೀನಾಮೆಗೆ ಭೂಮಾಫಿಯಾ ಕಾರಣ ಎಂಬ ರೋಹಿಣಿ ಸಿಂಧೂರಿ ದಾಖಲೆ ನೀಡಿದ ಬೆನ್ನಲ್ಲೇ ಇದೇ ವಿಷಯಕ್ಕೆ ಸಂಬಂಧಿಸಿದ ಆಡಿಯೋ ಕ್ಲಿಪ್ ಒಂದು ಬಿಡುಗಡೆಗೊಂಡಿದೆ. ಪತ್ರಿಕೆಯೊಂದರ ಸಂಪಾದಕರೊಂದಿಗೆ ಈ ಬಗ್ಗೆ ಮುಕ್ತವಾಗಿ ಮಾಹಿತಿ ನೀಡಿರುವ ರೋಹಿಣಿ ಸಿಂಧೂರಿ, ಮೈಸೂರಿನಲ್ಲಿ ನಡೆದಿರುವ ಭೂಒತ್ತುವರಿಗೆ ಶಾಸಕ ಸಾ.ರಾ. ಮಹೇಶ್ ಹಾಗೂ ಮುಡಾ ಅಧ್ಯಕ್ಷ ಎಚ್.ವಿ. ರಾಜೀವ್ ಶಾಮೀಲಾಗಿದ್ದಾರೆ. ಈ ಸಂಬಂಧ ತಾವು ಎಲ್ಲಾ ದಾಖಲೆಗಳ ಪರಶೀಲನೆ ನಡೆಸಿ ಕ್ರಮಕ್ಕೆ ಮುಂದಾಗಿದ್ದು, ಅಷ್ಟರಲ್ಲಿ ಎದುರಾದ ಕೊರೊನಾ ಎರಡನೇ ಅಲೆಯ ಹೊಡೆತದಿಂದ ಇದು ವಿಳಂಬವಾಯಿತು. ಆದರೆ ಇದೇ ಸಮಯವನ್ನು ಬಳಸಿಕೊಂಡ ಇವರಿಬ್ಬರು ನನ್ನನ್ನು ವರ್ಗಾವಣೆ ಮಾಡಿಸುವ ಪ್ರಯತ್ನಕ್ಕೆ ಕೈಹಾಕಿದರು ಎಂದು ಗಂಭೀರ ಆರೋಪ ಮಾಡಿದ್ದಾರೆ. 

ಮೈಸೂರಿನ ದಟ್ಟಗಳ್ಳಿಯಲ್ಲಿನ ಸಾ.ರಾ. ಕಲ್ಯಾಣ ಮಂಟಪ, ರಾಜಕಾಲುವೆ ಮೇಲೆ ನಿರ್ಮಾಣ ಮಾಡಿದೆ ಎಂಬ ರೋಹಿಣಿ‌ ಸಿಂಧೂರಿ ಅವರ ಆರೋಪವನ್ನು ಪ್ರಶ್ನಿಸಿ ಶಾಸಕ ಸಾ.ರಾ.ಮಹೇಶ್ ಇಂದಿನಿಂದ ಏಕಾಂಗಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿ ಎದುರು ಧರಣಿ ನಡೆಸಲು ತೀರ್ಮಾನಿಸಿರುವ ಅವರು, ರೋಹಿಣಿ ಸಿಂಧೂರಿ ಅವರು ಮಾಡಿರುವ ಆರೋಪದಂತೆ ಸಾರಾ ಚೌಲ್ಟ್ರಿ ರಾಜಕಾಲುವೆ ಮೇಲೆ ನಿರ್ಮಾಣವಾಗಿದ್ದರೆ ಅದನ್ನು ಸರ್ಕಾರದ ವಶಕ್ಕೆ ಪಡೆದುಕೊಳ್ಳಲಿ. ಈ ಆರೋಪ ಸತ್ಯವಾದರೆ ನಾನು ರಾಜಕೀಯ ಜೀವನದಿಂದಲೇ ನಿವೃತ್ತಿ ಘೋಷಿಸುತ್ತೇನೆ ಎಂದು ಸವಾಲು ಹಾಕಿರುವ ಅವರು, ಒಂದೊಮ್ಮೆ ಅವರ ಆರೋಪ ಸುಳ್ಳಾದರೆ ಅವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಒಟ್ಟಾರೆ ರೋಹಿಣಿ ಸಿಂಧೂರಿ ಹಾಗೂ ಸಾ.ರಾ. ಮಹೇಶ್ ನಡುವಿನ ಭೂ ಸಮರ, ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿದ್ದು ಇದು ಎಲ್ಲಿಗೆ ಬಂತು ನಿಲ್ಲುತ್ತೇ ಅನ್ನೋದನ್ನ ಕಾದು ನೋಡಬೇಕಿದೆ.   

Previous Post

ಲಸಿಕೆಗಾಗಿ ಕರವೇ ಸಾವಿರಾರು ಪ್ರತಿಭಟನೆ ರಾಜ್ಯಾದ್ಯಂತ ಅಭೂತಪೂರ್ವ ಯಶಸ್ಸು

Next Post

ಜೂನ್‌ 14 ರ ನಂತರ 11 ಜಿಲ್ಲೆ ಹೊರತು ಪಡಿಸಿ ಉಳಿದೆಡೆ ಲಾಕ್‌ಡೌನ್‌ ಸಡಿಲಿಕೆ, ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

Related Posts

DK Shivakumar Oath Taking Ceremony
Top Story

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಹೇಗಿರುತ್ತೆ : ಡಿಕೆ ಶಿವಕುಮಾರ್‌ ಏನಂದ್ರು..?

by ಪ್ರತಿಧ್ವನಿ
May 31, 2026
0

ಬೆಂಗಳೂರು : ಜೂನ್ 3ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಮುಗಿದ ಬಳಿಕ ರೇಸ್ ಕೋರ್ಸ್ ರಸ್ತೆ ಬಳಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ...

Read moreDetails
BREAKING NEWS : ಟಾಸ್‌ ಗೆದ್ದ RCB ; ಬೌಲಿಂಗ್‌ ಆಯ್ಕೆ ಮಾಡಿಕೊಂಡ ರಜತ್ ಪಾಟಿದಾರ್..

BREAKING NEWS : ಟಾಸ್‌ ಗೆದ್ದ RCB ; ಬೌಲಿಂಗ್‌ ಆಯ್ಕೆ ಮಾಡಿಕೊಂಡ ರಜತ್ ಪಾಟಿದಾರ್..

May 31, 2026
“ಸಿದ್ದರಾಮಯ್ಯ ಅವ್ರನ್ನ ಡೀಡ್ ನಲ್ಲಿನ ವೈಫಲ್ಯಕ್ಕಾಗಿ ಟೀಕಿಸಬಹುದು, ಆದ್ರೆ ಇಂಟೆಂಟ್ ಬಗ್ಗೆ ಸಂಶಯ ವ್ಯಕ್ತಪಡಿಸಿದ್ರೆ ಅನ್ಯಾಯ ಮಾಡಿದಂತೆ”

“ಸಿದ್ದರಾಮಯ್ಯ ಅವ್ರನ್ನ ಡೀಡ್ ನಲ್ಲಿನ ವೈಫಲ್ಯಕ್ಕಾಗಿ ಟೀಕಿಸಬಹುದು, ಆದ್ರೆ ಇಂಟೆಂಟ್ ಬಗ್ಗೆ ಸಂಶಯ ವ್ಯಕ್ತಪಡಿಸಿದ್ರೆ ಅನ್ಯಾಯ ಮಾಡಿದಂತೆ”

May 31, 2026
RCB‌ ಅಭಿಮಾನಿಗಳ ಸಂಭ್ರಮಕ್ಕೆ ಖಾಕಿ ಬ್ರೇಕ್‌ : ಬೆಂಗಳೂರಲ್ಲಿ ಆಯುಕ್ತರಿಂದ ಯಾವೆಲ್ಲ ರೂಲ್ಸ್..?

RCB‌ ಅಭಿಮಾನಿಗಳ ಸಂಭ್ರಮಕ್ಕೆ ಖಾಕಿ ಬ್ರೇಕ್‌ : ಬೆಂಗಳೂರಲ್ಲಿ ಆಯುಕ್ತರಿಂದ ಯಾವೆಲ್ಲ ರೂಲ್ಸ್..?

May 31, 2026
ಸಿದ್ದರಾಮಯ್ಯ ರಾಜ್ಯಸಭೆಯಲ್ಲಿದ್ದು ಲೋಹಿಯಾ ಕನಸುಗಳ ಸಾಕಾರಕ್ಕೆ ಶ್ರಮಿಸಬೇಕು : ಮೋಹನ್‌ ಕೊಂಡಜ್ಜಿ ಒತ್ತಾಯ..

ಸಿದ್ದರಾಮಯ್ಯ ರಾಜ್ಯಸಭೆಯಲ್ಲಿದ್ದು ಲೋಹಿಯಾ ಕನಸುಗಳ ಸಾಕಾರಕ್ಕೆ ಶ್ರಮಿಸಬೇಕು : ಮೋಹನ್‌ ಕೊಂಡಜ್ಜಿ ಒತ್ತಾಯ..

May 31, 2026
Next Post
ಜೂನ್‌ 14 ರ ನಂತರ 11 ಜಿಲ್ಲೆ ಹೊರತು ಪಡಿಸಿ ಉಳಿದೆಡೆ ಲಾಕ್‌ಡೌನ್‌ ಸಡಿಲಿಕೆ, ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ಜೂನ್‌ 14 ರ ನಂತರ 11 ಜಿಲ್ಲೆ ಹೊರತು ಪಡಿಸಿ ಉಳಿದೆಡೆ ಲಾಕ್‌ಡೌನ್‌ ಸಡಿಲಿಕೆ, ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada