ಜನವರಿ 14, 2025ರ ಸಂಕ್ರಾಂತಿಯಂದು ಮಕ್ಕಳ ಮತ್ತು ಮಹಿಳಾ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಆಗಿತ್ತು. ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುವ ಕೆಲಸ ಮಾಡಿದ್ದರು. ಇತ್ತೀಚಿಗಷ್ಟೇ ಲಕ್ಷ್ಮೀ ಹೆಬ್ಬಾಳ್ಕರ್ ಬಹಿರಂಗವಾಗಿ ಕಾಣಿಸಿಕೊಂಡಿದ್ದರು. ಆದರೆ ಬರೋಬ್ಬರಿ 3 ತಿಂಗಳ ನಂತರ ಅಪಘಾತಕ್ಕೆ ಕಾರಣವಾದ ಲಾರಿ ಚಾಲಕನ ಬಂಧನ ಆಗಿದೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರಿಗೆ ಅಪಘಾತ ಎಸಗಿ ಎಸ್ಕೇಪ್ ಆಗಿದ್ದ ಆರೋಪಿಯನ್ನು ಕೊನೆಗೂ ಅರೆಸ್ಟ್ ಮಾಡಲಾಗಿದೆ. ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಅಪಘಾತ ಎಸಗಿದ ಲಾರಿ ಚಾಲಕನನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ಗ್ರಾಮದ ಮಧುಕರ ಸೋಮವಂಶಿ ಬಂಧಿತ ಲಾರಿ ಚಾಲಕ. ಅಪಘಾತ ಎಸಗಿದ ಲಾರಿಯನ್ನೂ ಜಪ್ತಿ ಮಾಡಿದ್ದಾರೆ ಕಿತ್ತೂರು ಠಾಣೆ ಪೊಲೀಸರು.
ಜನವರಿ 14 ರಂದು ಬೆಳಗಿನ ಜಾವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ ಕಾರಿಗೆ ಲಾರಿಯನ್ನು ತಾಗಿಸಿ ಪರಾರಿಯಾಗಿದ್ದ ಚಾಲಕ. ಕಿತ್ತೂರು ಸಮೀಪದ ಅಂಬಡಗಟ್ಟಿಯಲ್ಲಿ ಅಪಘಾತ ನಡೆದಿತ್ತು. ಘಟನೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆನ್ನಿಗೆ ಗಂಭೀರ ಗಾಯವಾಗಿತ್ತು. ಕಿತ್ತೂರು ಠಾಣೆಯಲ್ಲಿ ದೂರು ದಾಖಲಿಸಿದ್ದ ಸಚಿವೆ ಹೆಬ್ಬಾಳ್ಕರ್ ಕಾರು ಚಾಲಕ ಶಿವಪ್ರಸಾದ್.

ದೂರು ಆಧರಿಸಿ ಪ್ರಕರಣದ ವಿಚಾರಣೆ ಆರಂಭಿಸಿದ್ದ ಕಿತ್ತೂರು ಠಾಣೆ ಪೊಲೀಸರು, ಹಿರೇಬಾಗೇವಾಡಿ ಟೋಲ್ ಬಳಿಯ ಸಿಸಿ ಟಿವಿ ದೃಶ್ಯಾವಳಿ ಆಧರಿಸಿ 69 ಲಾರಿ ಚಾಲಕರ ವಿಚಾರಣೆ ಮಾಡಲಾಗಿತ್ತು. ಮೊದಲು ಅಪಘಾತ ಎಸಗಿಲ್ಲ ಎಂದಿದ್ದ ಚಾಲಕ ಮಧುಕರ ಸೋಮವಂಶಿ, ಆ ಬಳಿಕ ಅಪಘಾತದಲ್ಲಿ ಭಾಗಿಯಾದ ವಾಹನದ ಬಣ್ಣ ಎಫ್ಎಸ್ಎಲ್ಗೆ ರವಾನೆ ಮಾಡಿದ್ದರು. ಜೊತೆಗೆ ಘಟನೆ ವೇಳೆ ಫೋನ್ ಕಾಲ್ ಡಿಟೇಲ್ ಆಧರಿಸಿ ಆರೋಪಿ ಬಂಧನ ಮಾಡಲಾಗಿದೆ.