• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಅರವಿಂದ ಕೇಜ್ರಿವಾಲ್ ಈಗ ಸತ್ಯೇಂದ್ರ ಜೈನ್ ರಾಜೀನಾಮೆ‌ ಪಡೆಯುವರೇ?

ಯದುನಂದನ by ಯದುನಂದನ
June 2, 2022
in ದೇಶ, ರಾಜಕೀಯ
0
ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಅರವಿಂದ ಕೇಜ್ರಿವಾಲ್ ಈಗ ಸತ್ಯೇಂದ್ರ ಜೈನ್ ರಾಜೀನಾಮೆ‌ ಪಡೆಯುವರೇ?
Share on WhatsAppShare on FacebookShare on Telegram

ಪಂಜಾಬಿನ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ 1% ಕಮಿಷನ್ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದ್ದೇ ತಡ ಅಲ್ಲಿನ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಭಗವಂತ್ ಮಾನ್ ತಮ್ಮ ಸಂಪುಟ ಸಹುದ್ಯೋಗಿಯನ್ನು ಕಿತ್ತುಹಾಕಿದ್ದರು. ಈಗ‌ ಅಕ್ರಮ ಹಣ ಸಂಪಾದನೆ ಆರೋಪದ ಮೇರೆಗೆ ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಮೇಲೆ ಜಾರಿ ನಿರ್ದೇಶನಾಲಯದ ತನಿಖೆ ನಡೆಯುತ್ತಿದೆ‌. ಸತ್ಯೇಂದ್ರ ಜೈನ್ ಅವರಿಗೆ ಜಾಮೀನು ಸಿಗದೆ ಜೈಲಿನಲ್ಲಿದ್ದಾರೆ. ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಸಚಿವ ಸಂಪುಟ ಸಹೋದ್ಯೋಗಿ ಸತ್ಯೇಂದ್ರ ಜೈನ್ ಅವರನ್ನು ಕಿತ್ತುಹಾಕುವರೇ? ಆ ಮೂಲಕ ‘ಭ್ರಷ್ಟಾಚಾರವನ್ನು ಬಿಲ್ ಕುಲ್ ಸಹಿಸುವುದಿಲ್ಲ’ ಎಂದು ಆಗಾಗ ಹೇಳುವ ಕೇಜ್ರಿವಾಲ್ ತಮ್ಮದೇ ಮಾತಿಗೆ ಬುದ್ಧರಾಗಿರುವರೇ? ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

ADVERTISEMENT

ಅರವಿಂದ ಕೇಜ್ರಿವಾಲ್ ಬಗ್ಗೆ ಇಂತಹ ಪ್ರಶ್ನೆಗಳು ಹುಟ್ಟಲು ಹಿನ್ನೆಲೆಯೂ ಇದೆ.‌ ಅವರು ಭ್ರಷ್ಟಾಚಾರ ವಿರೋಧಿ ಆಂದೋಲನದ ಮೂಲಕವೇ ಸಾರ್ವಜನಿಕ ಜೀವನ ಪ್ರವೇಶಿಸಿದವರು. ಬಳಿಕ  ಆರಂಭಿಸಿದ ಆಮ್ ಆದ್ಮಿ ಪಕ್ಷ ಕಟ್ಟಿ ರಾಜಕೀಯ ಆರಂಭಿಸಿದವರು. ಹೆಸರಿನಲ್ಲೇ ‘ಜನಸಾಮಾನ್ಯ’ ಎಂಬ ವಿಶೇಷಣವುಳ್ಳ ಪಕ್ಷದ ರಾಷ್ಟ್ರೀಯ ಸಂಚಾಲಕರಾಗಿ ಅರವಿಂದ್ ಕೇಜ್ರಿವಾಲ್ ಭ್ರಷ್ಟಾಚಾರದ ಬಗ್ಗೆ ಗಂಟೆಗಟ್ಟಲೆ ಭಾಷಣ ಮಾಡಿದ್ದಾರೆ. ದೆಹಲಿ ಮುಖ್ಯಮಂತ್ರಿಯಾಗಿ ದೆಹಲಿಯಲ್ಲಿ ಭ್ರಷ್ಟಾಚಾರ ನಿಗ್ರಹಿಸಿದ್ದೇನೆ.‌ ಸೋರಿಕೆ ಆಗುತ್ತಿದ್ದ ಸಂಪನ್ಮೂಲವನ್ನು ತಡೆದು ಕಲ್ಯಾಣ ಕಾರ್ಯಕ್ರಮ ನೀಡಿದ್ದೇನೆ ಎಂದು ಬೀಗುತ್ತಾರೆ. ಇದೇ ಧಾಟಿಯಲ್ಲಿ ಮಾತನಾಡಿ ಪಂಜಾಬಿನಲ್ಲಿ ಅಧಿಕಾರ ಹಿಡಿದಿದ್ದಾರೆ.‌ ಹಾಗಾಗಿ ಅದೇ ಪಂಜಾಬ್ ಮಾದರಿಯಲ್ಲಿ ಮೊದಲು ‘ಮನೆಯೊಳಗನ್ನು ಸ್ವಚ್ಛಗೊಳಿಸುವರೇ?’ ಎಂಬ ಪ್ರಶ್ನೆ ಮೂಡಿಬರುತ್ತಿದೆ.

ಈ ಬಗ್ಗೆ ಅರವಿಂದ ಕೇಜ್ರಿವಾಲ್ ಮೌನ ಮುರಿದಿದ್ದಾರೆ. ‘ನಾನು ಈ ಪ್ರಕರಣವನ್ನು ವೈಯಕ್ತಿಕವಾಗಿ ಅಧ್ಯಯನ ಮಾಡಿದ್ದೇನೆ. ಇದೊಂದು ಸಂಪೂರ್ಣ ಸುಳ್ಳು ಪ್ರಕರಣ. ನಾವು ಭ್ರಷ್ಟಾಚಾರವನ್ನು ಸಹಿಸುವುದಿಲ್ಲ, ಭ್ರಷ್ಟಾಚಾರದಲ್ಲಿ ತೊಡಗುವುದಿಲ್ಲ. ನಮ್ಮದು ಪ್ರಾಮಾಣಿಕ ಸರ್ಕಾರ. ರಾಜಕೀಯ ಕಾರಣಗಳಿಂದ ಸತ್ಯೇಂದ್ರ ಜೈನ್ ಅವರನ್ನು ಗುರಿಯಾಗಿಸಿಕೊಳ್ಳಲಾಗಿದೆ’ ಎಂದು ಹೇಳಿದ್ದಾರೆ. ಜೊತೆಗೆ ‘ನ್ಯಾಯಾಂಗದ ಮೇಲೆ ನಂಬಿಕೆ ಇದೆ. ಬಂಧಿತ ಸಚಿವ ಸತ್ಯೇಂದ್ರ ಜೈನ್ “ಸತ್ಯದ ಮಾರ್ಗ” ಅನುಸರಿಸುತ್ತಾರೆ. ಸ್ವಚ್ಛವಾಗಿ ಹೊರಬರುತ್ತಾರೆ’ ಎಂದು ಕೂಡ ಹೇಳಿದ್ದಾರೆ.

ವಿಜಯ್ ಸಿಂಗ್ಲಾ ಬಂಧನದ ನಂತರ ರ್‍ಯಾಲಿ ಉದ್ದೇಶಿಸಿ ಭಾಷಣ ಮಾಡುತ್ತಿದ್ದ ಅರವಿಂದ ಕೇಜ್ರಿವಾಲ್ ಅವರು, ತನಿಖಾ ಏಜನ್ಸಿಗಳ ಬಗ್ಗೆ ನಂಬಿಕೆ ಇದೆ.‌ ಪಂಜಾಬಿನ ಆಮ್ ಆದ್ಮಿ ಪಕ್ಷದ ಸರ್ಕಾರವು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದಿದ್ದರು. ದೆಹಲಿಯ ಸತ್ಯೇಂದ್ರ ಜೈನ್ ವಿಷಯದಲ್ಲಿ ಕೇಜ್ರಿವಾಲ್ ತಮ್ಮ ಸಚಿವರ ಮೇಲೆ ನಂಬಿಕೆ ಇಟ್ಟಿದ್ದಾರೆ. ತಮ್ಮ ಪಕ್ಷವು ಏಜೆನ್ಸಿಗಳಿಗಾಗಿ ಕಾಯುವುದಿಲ್ಲ, ಪ್ರಕರಣದಲ್ಲಿ ಅರ್ಹತೆ ಇದ್ದಲ್ಲಿ  ಕ್ರಮ ತೆಗೆದುಕೊಳ್ಳುತ್ತಿದ್ದೆವು ಎಂದು ಹೇಳಿದ್ದಾರೆ.

ಇನ್ನೊಂದೆಡೆ ಸತ್ಯೇಂದ್ರ ಜೈನ್ ಬಂಧನದ ನಂತರ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿ ‘ಸತ್ಯೇಂದ್ರ ಜೈನ್ ವಿರುದ್ಧ ಎಂಟು ವರ್ಷಗಳ ಹಿಂದಿನ ಸುಳ್ಳು ಪ್ರಕರಣವನ್ನು ಬಳಸಲಾಗುತ್ತಿದೆ. ಅವರಿಗೆ ಜಾರಿ ನಿರ್ದೇಶನಾಲಯವು ಹಲವು ಬಾರಿ ಸಮನ್ಸ್ ನೀಡಿದೆ. ಕೆಲವು ವರ್ಷಗಳವರೆಗೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದ ಕಾರಣ ಇಡಿ ಜೈನ್ ಅವರನ್ನು ಕರೆಸುವುದನ್ನು ನಿಲ್ಲಿಸಿತ್ತು. ಈಗ ಸತ್ಯೇಂದ್ರ ಜೈನ್ ಹಿಮಾಚಲ ಪ್ರದೇಶದ ಉಸ್ತುವಾರಿ ಆಗಿರುವುದರಿಂದ ಇಡಿ ಅವರನ್ನು ಗುರಿಯಾಗಿಸಿಕೊಂಡಿದೆ’ ಎಂದಿದ್ದಾರೆ.

ಅದೇ ಟ್ವೀಟ್‌ನಲ್ಲಿ, ‘ಹಿಮಾಚಲ ಪ್ರದೇಶವನ್ನು ಕಳೆದುಕೊಳ್ಳುವ ಭಯದಿಂದ ಬಿಜೆಪಿ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಲಾಗಿದೆ. ಇದು ಜೈನ್ ಅವರು ಚುನಾವಣೆ ನಡೆಯುವ ರಾಜ್ಯಕ್ಕೆ ಭೇಟಿ ನೀಡದಂತೆ ನೋಡಿಕೊಳ್ಳುವ ಪ್ರಯತ್ನವಾಗಿದೆ. ಆದರೆ ಪ್ರಕರಣ ಸುಳ್ಳಾಗಿರುವುದರಿಂದ ಸಚಿವರು ಶೀಘ್ರವೇ ಮುಕ್ತರಾಗಲಿದ್ದಾರೆ’ ಎಂದು ತಿಳಿಸಿದ್ದಾರೆ. ಇದಲ್ಲದೆ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರು ಪತ್ರಿಕಾಗೋಷ್ಠಿ ನಡೆಸಿ ಸತ್ಯೇಂದ್ರ ಜೈನ್ ಬಂಧನವನ್ನು ‘ರಾಜಕೀಯ ಪ್ರೇರಿತ’ ಎಂದು ಬಣ್ಣಿಸಿದ್ದಾರೆ.

ಬಹಳ ಕುತೂಹಲಕಾರಿ ಸಂಗತಿ ಎಂದರೆ ಇದೇ ಜನವರಿ 23ರಂದೇ ಡಿಜಿಟಲ್ ಮೂಲಕ ಮತನಾಡಿದ್ದ ಅರವಿಂದ್ ಕೇಜ್ರಿವಾಲ್, ‘ನರೇಂದ್ರ ಮೋದಿ ಸರ್ಕಾರವು ಪಂಜಾಬ್ ಚುನಾವಣೆಗೆ ಮುನ್ನ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಲು ಯೋಜಿಸುತ್ತಿದೆ. ನನಗೆ ಪಕ್ಷದ ಉನ್ನತ ನಾಯಕರು ಅಂತಹ ಸಾಧ್ಯತೆಯ ಬಗ್ಗೆ ಎಚ್ಚರವಹಿಸಿದ್ದಾರೆ. ಅಂತಹ ಯಾವುದೇ ಕ್ರಮಗಳನ್ನು ಎಎಪಿ ಸ್ವಾಗತಿಸುತ್ತದೆ ಮತ್ತು ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯ (ಇಡಿ), ಕೇಂದ್ರೀಯ ತನಿಖಾ ದಳ (ಸಿಬಿಐ) ಇತ್ಯಾದಿಗಳನ್ನು ಕಳುಹಿಸಬಹುದು ಮತ್ತು ಅವರನ್ನು ಸೇರಿದಂತೆ ಯಾರನ್ನಾದರೂ ಬಂಧಿಸಬಹುದು’ ಎಂದು ಪ್ರತಿಪಾದಿಸಿದ್ದರು.

ಇವೆಲ್ಲದರ ನಡುವೆ ಅರವಿಂದ ಕೇಜ್ರಿವಾಲ್ ಅವರು ಸತ್ಯೇಂದ್ರ ಜೈನ್ ರಕ್ಷಣೆಗೆ ನಿಂತಿದ್ದಾರೆ ಎಂದು ಬಿಜೆಪಿ ಮತ್ತು ಕಾಂಗ್ರೆಸ್‌ ಹೇಳುತ್ತಿವೆ. ದೆಹಲಿ ಸಿಎಂ ತಮ್ಮ ಆರೋಗ್ಯ ಸಚಿವರನ್ನು 6 ವರ್ಷಗಳಿಂದ ರಕ್ಷಿಸಿದ್ದಾರೆ ಕೂಡಲೇ ಜೈನ್ ಅವರನ್ನು ವಜಾಗೊಳಿಸಬೇಕೆಂದು ಒತ್ತಡ ಹೇರುತ್ತಿವೆ. ಪಂಜಾಬ್‌ನ ಮಾಜಿ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ವಜಾಗೊಳಿಸಿ ಬಂಧಿಸಿರುವುದನ್ನು ವಿರೋಧ ಪಕ್ಷಗಳು ಒತ್ತಿಹೇಳಿ ಜೈನ್‌ ಅವರಿಗೂ ಅದೇ ಚಿಕಿತ್ಸೆಯನ್ನು ನೀಡಬೇಕು ಎಂದು ವಾದಿಸುತ್ತಿವೆ‌‌. ಕಾಂಗ್ರೆಸ್ ಮತ್ತು ಬಿಜೆಪಿ ಒತ್ತಡ ಹೆಚ್ಚುತ್ತಿರುವುದು ಅರವಿಂದ ಕೇಜ್ರಿವಾಲ್ ಅವರನ್ನು ಅಗ್ನಿಪರೀಕ್ಷೆಗೆ ದೂಡಿವೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ನಮಗೆ ನಿಜಕ್ಕೂ ದೇವರು ಮತ್ತು ಧರ್ಮ ಬೇಕಿದೆಯೇ?

Next Post

ಬಿಬಿಎಂಪಿ ಚುನಾವಣಾ ಸಂಬಂಧ ಡಿಲಿಮಿಟೇಷನ್ ವರದಿ ಸಿದ್ಧ : 2011ರ ಜನಸಂಖ್ಯೆ ಅಧಾರದ ಮೇಲೆ ವಾರ್ಡ್ ವಿಂಗಡಣೆ !

Related Posts

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
0

ಮುಂಬೈ: ಮಹಾರಾಷ್ಟ್ರದMaharashtra )ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್(Ajit Pawar ) ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ಅಜಿತ್ ಪವಾರ್(Ajit Pawar )ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ...

Read moreDetails
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

January 27, 2026
Next Post
BBMP ಮೇಲೆ ACB ‘ಬೃಹತ್’ ದಾಳಿ : 27 ಕಡೆ ಏಕಕಾಲದಲ್ಲಿ ತಲಾಶ್

ಬಿಬಿಎಂಪಿ ಚುನಾವಣಾ ಸಂಬಂಧ ಡಿಲಿಮಿಟೇಷನ್ ವರದಿ ಸಿದ್ಧ : 2011ರ ಜನಸಂಖ್ಯೆ ಅಧಾರದ ಮೇಲೆ ವಾರ್ಡ್ ವಿಂಗಡಣೆ !

Please login to join discussion

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada