• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪಶ್ಚಿಮ ಬಂಗಾಳದಲ್ಲಿ ಬಿಎಸ್ಎಫ್ ಸಿಬ್ಬಂದಿಗೆ ಪ್ರವೇಶ ಬೇಡ: ಸಿಎಂ ಮಮತಾ ಬ್ಯಾನರ್ಜಿ ಪೊಲೀಸರಿಗೆ ಸೂಚನೆ

Any Mind by Any Mind
December 10, 2021
in ದೇಶ
0
ಪಶ್ಚಿಮ ಬಂಗಾಳದಲ್ಲಿ ಬಿಎಸ್ಎಫ್ ಸಿಬ್ಬಂದಿಗೆ ಪ್ರವೇಶ ಬೇಡ: ಸಿಎಂ ಮಮತಾ ಬ್ಯಾನರ್ಜಿ ಪೊಲೀಸರಿಗೆ ಸೂಚನೆ
Share on WhatsAppShare on FacebookShare on Telegram

ಗಡಿ ರಾಜ್ಯಗಳಲ್ಲಿ ಬಿಎಸ್‌ಎಫ್ ಅಧಿಕಾರ ವ್ಯಾಪ್ತಿಯನ್ನು ವಿಸ್ತರಿಸುವ ಕೇಂದ್ರದ ನಿರ್ಧಾರವನ್ನು ಖಂಡಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯ ಪೊಲೀಸರ ಅನುಮತಿಯಿಲ್ಲದೆ ಬಿಎಸ್‌ಎಫ್ ಸಿಬ್ಬಂದಿ ಗ್ರಾಮಗಳಿಗೆ ಪ್ರವೇಶಿಸಕೂಡದು ಎಂದು ಸೂಚಿಸಿದ್ದರು.

ADVERTISEMENT

ಈ ಕುರಿತು ರಾಜ್ಯಪಾಲ ಜಗದೀಪ್ ಧಂಖರ್ ಅವರು ಸಿಎಂ ಮಮತಾಗೆ ಪತ್ರ ಬರೆದು, “ನಿಮ್ಮ ನಿಲುವು ಒಕ್ಕೂಟ ವ್ಯವಸ್ಥೆ ಹಾಗೂ ರಾಷ್ಟ್ರೀಯ ಭದ್ರತೆಗೆ ಅಪಾಯಕಾರಿಯಾಗಿದೆ. ಸಾಮರಸ್ಯ ಮತ್ತು ಸಹಕಾರದ ವಾತಾವರಣವನ್ನು ಸೃಷ್ಟಿಸಲು ಬಿಎಸ್‌ಎಫ್ ಕಾರ್ಯನಿರ್ವಹಣೆಯ ಕುರಿತು ತಮ್ಮ ನಿಲುವನ್ನು ಮರುಪರಿಶೀಲಿಸಬೇಕು’’ ಎಂದು ತಿಳಿಸಿದ್ದಾರೆ.

 

ರಾಜ್ಯಪಾಲರ ಪತ್ರಕ್ಕೆ ಪ್ರತಿಕ್ರಿಯಿಸಿರುವ ಟಿಎಂಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕುನಾಲ್ ಘೋಷ್, ರಾಜ್ಯಪಾಲ ಧಂಖರ್ ಅವರು ಬಿಜೆಪಿ ವಕ್ತಾರರಂತೆ ವರ್ತಿಸುವುದನ್ನು ಮೊದಲು ನಿಲ್ಲಿಸಬೇಕು. ರಾಜ್ಯಪಾಲರು ತಮ್ಮ ಹುದ್ದೆಯ ಘನತೆಯನ್ನು ಕಾಪಾಡಬೇಕು. ಒಕ್ಕೂಟ ವ್ಯವಸ್ಥೆಯ ಬಗ್ಗೆ ಮಾತನಾಡುವ ರಾಜ್ಯಪಾಲರು ಪಶ್ಚಿಮ ಬಂಗಾಳದಿಂದ ಡಾರ್ಜಿಲಿಂಗ್ ಬೆಟ್ಟಗಳನ್ನು ಬೇರ್ಪಡಿಸುವ ಕುರಿತು ಬಿಜೆಪಿ ಶಾಸಕರೊಬ್ಬರ ಬೇಡಿಕೆಯ ಬಗ್ಗೆ ಅವರ ನಿಲುವು ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಬಾಂಗ್ಲಾದೇಶ ಮತ್ತು ಪಾಕಿಸ್ತಾನದೊಂದಿಗೆ ತಮ್ಮ ಗಡಿಯನ್ನು ಹಂಚಿಕೊಳ್ಳುವ ರಾಜ್ಯಗಳಾದ ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪಂಜಾಬ್‌ಗಳಲ್ಲಿ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ವ್ಯಾಪ್ತಿಯನ್ನು 15 ಕಿ.ಮೀ ನಿಂದ 50 ಕಿ.ಮೀ ವರೆಗೆ ವಿಸ್ತರಿಸಿ ಗೃಹ ಸಚಿವಾಲಯ ಇತ್ತೀಚೆಗೆ ಆದೇಶ ಹೊರಡಿಸಿತ್ತು.

ಪಶ್ಚಿಮ ಬಂಗಾಳ ಮತ್ತು ಪಂಜಾಬ್ ಎರಡೂ ಸರ್ಕಾರಗಳು ಕೇಂದ್ರದ ಕ್ರಮವನ್ನು ವಿರೋಧಿಸಿ ವಿಧಾನಸಭೆಯಲ್ಲಿ ಈ ಕುರಿತು ನಿರ್ಣಯಗಳನ್ನು ಅಂಗೀಕರಿಸಿವೆ. ನಾಡಿಯಾ ಜಿಲ್ಲೆಯ ಕೃಷ್ಣಾನಗರದಲ್ಲಿ ನಡೆದ ಆಡಳಿತ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಮಮತಾ, ಭದ್ರತಾ ಚೆಕ್‌ಪೋಸ್ಟ್‌ಗಳಲ್ಲಿ (ನಾಕಾ) ಹೆಚ್ಚು ಕಟ್ಟುನಿಟ್ಟಾಗಿ ಶೋಧ ನಡೆಸುವಂತೆ ಜಿಲ್ಲಾ ಪೊಲೀಸರಿಗೆ ಸೂಚಿಸಿದರು. “ಬಾಂಗ್ಲಾದೇಶದ ಗಡಿಯು ಕರೀಂಪುರದಿಂದ ಪ್ರಾರಂಭವಾಗುತ್ತದೆ ಮತ್ತು ನೀವು ಈ ಪ್ರದೇಶದಲ್ಲಿನ ಎಲ್ಲ ಚಟುವಟಿಕೆಗಳ ಮೇಲೆ ಕಣ್ಣಿಡಬೇಕು. ನಿಮ್ಮ ಅನುಮತಿಯಿಲ್ಲದೆ ಯಾವುದೇ ಚಟುವಟಿಕೆಯನ್ನು ಬಿಎಸ್‌ಎಫ್‌ ನಡೆಸುವುದಿಲ್ಲ ಎಂಬುದನ್ನು ನೀವು ಖಚಿತಪಡಿಸಿಕೊಳ್ಳಬೇಕು. ಕಾನೂನು ಮತ್ತು ಸುವ್ಯವಸ್ಥೆ ರಾಜ್ಯದ ವಿಷಯವಾಗಿದ್ದು, ಸಾಮಾನ್ಯ ನಾಗರಿಕರ ಮೇಲೆ ಯಾವುದೇ ರೀತಿಯ ದಬ್ಬಾಳಿಕೆಯನ್ನು ನಾನು ಸಹಿಸುವುದಿಲ್ಲ,”ಎಂದು ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮಮತಾ ನಿಲುವಿನ ಬಗ್ಗೆ ಟ್ವೀಟ್‌ ಮಾಡಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಎಸ್‌ಎಫ್ ಮತ್ತು ರಾಜ್ಯ ಪೊಲೀಸರ ನಡುವೆ ಬಿರುಕು ಮೂಡಿಸುತ್ತಿದ್ದಾರೆ. ಈ ರೀತಿಯಾದರೆ ರಾಜ್ಯದ ಮುಖ್ಯಮಂತ್ರಿಯಾಗುವಾಗ ಮಾಡಿದ ಪ್ರಮಾಣಕ್ಕೆ ಬದ್ಧರಾಗಿ, ಭಾರತದ ಸಂವಿಧಾನದ ಮೇಲೆ ನಂಬಿಕೆ ಮತ್ತು ನಿಷ್ಠೆಯನ್ನು ಹೇಗೆ ಹೊಂದುತ್ತಾರೆ? ಹಾಗೂ ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ಹೇಗೆ ಎತ್ತಿಹಿಡಿಯುತ್ತಾರೆ ಎಂಬುದು ನನಗೆ ಆಶ್ಚರ್ಯವಾಗಿದೆ,” ಎಂದು ಕುಟುಕಿದ್ದಾರೆ.

I wonder how, the Chief Minister of a State, bound by the oath taken by her, to bear true faith and allegiance towards the Constitution of India & supposed to uphold the sovereignty and integrity of India; could repeatedly malign @BSF_India, who are assigned to do just that.

— Suvendu Adhikari (Modi Ka Parivar) (@SuvenduWB) December 9, 2021
Tags: BJPBSFMamata BanerjeePoliceWestbengalನರೇಂದ್ರ ಮೋದಿಪಶ್ಚಿಮ ಬಂಗಾಳಪೊಲೀಸಬಿಎಸ್ಎಫ್ಬಿಜೆಪಿಮಮತಾ ಬ್ಯಾನರ್ಜಿಸಿಎಂ
Previous Post

ತಮ್ಮ ಹಕ್ಕಿಗಾಗಿ ಸಂಘಟಿತರಾದ ಕಾರ್ಮಿಕರನ್ನು ಕೆಲಸದಿಂದ ವಜಾಮಾಡಿದ ಐಟಿಐ; 80 ಕಾರ್ಮಿಕರು ಬೀದಿಗೆ

Next Post

ಬಿಜೆಪಿ ಸದಸ್ಯರೊಂದಿಗೆ ವಾಗ್ವಾದ ನಡೆಸಿದ ಡಿಎಂಕೆ ಸಂಸದ ದಯಾನಿಧಿ ಮಾರನ್

Related Posts

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ...

Read moreDetails
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Next Post
ಬಿಜೆಪಿ ಸದಸ್ಯರೊಂದಿಗೆ ವಾಗ್ವಾದ ನಡೆಸಿದ ಡಿಎಂಕೆ ಸಂಸದ ದಯಾನಿಧಿ ಮಾರನ್

ಬಿಜೆಪಿ ಸದಸ್ಯರೊಂದಿಗೆ ವಾಗ್ವಾದ ನಡೆಸಿದ ಡಿಎಂಕೆ ಸಂಸದ ದಯಾನಿಧಿ ಮಾರನ್

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada