ಇನ್ಮುಂದೆ ಸಹಾಯ ಕೇಳಿ ಯಾರು ನನ್ನ ಬಳಿ ಬರಬೇಡಿ, ನಾನು ಯಾವುದೇ ಮದುವೆಗೆ ಬಂದರೂ ಮುಯ್ಯಿ ಕೂಡ ಹಾಕಲ್ಲ. ಚುನಾವಣೆ ಸೋಲಿನ ಬಳಿಕ ಹತಾಶೆಯಿಂದ ಮಾಜಿ ಶಾಸಕ ಸುರೇಶ್ ಗೌಡ ಹೇಳಿದ್ದಾರೆ. ಮದ್ದೂರು ಕ್ಷೇತ್ರದ ಕೊಪ್ಪದಲ್ಲಿ ನಡೆದ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಅವರು, ನಾಗಮಂಗಲ ಕ್ಷೇತ್ರದ ಪರಾಜಿತ ಅಭ್ಯರ್ಥಿ, ಮಾಜಿ ಶಾಸಕ ಸುರೇಶ್ ಗೌಡ. ನಂಬಿದವರಿಂದಲೇ ನನಗೆ ಮೋಸ ಆಗಿದೆ, ನಾನೀಗ ಸೋತಿದ್ದೇನೆ.
ಈ ಚುನಾವಣೆ ಸೋಲಿನಿಂದ ಬೇಜಾರಾಗಿ ನನ್ನ ಮನಸ್ಸು ಕಲ್ಲಾಗಿದೆ. ವೈಯಕ್ತಿಕ ಕಷ್ಟ ಹೇಳಿಕೊಂಡು ಯಾರು ಕೂಡ ನನ್ನ ಬಳಿ ಬರಬೇಡಿ. ಇನ್ನು ಮುಂದೆ ಯಾವುದೇ ಮದುವೆಗೆ ಬಂದರು ಮುಯ್ಯಿ ಕೂಡ ಹಾಕಲ್ಲ ಎಂದು ಮಾಜಿ ಶಾಸಕ ಸುರೇಶ್ ಗೌಡ ಹೇಳಿನೀಡಿದ್ದಾರೆ. ನಾನೀಗ ಚುನಾವಣೆ ಸೋತು ಕಷ್ಟದಲ್ಲಿದ್ದೇನೆ, ಆದರೂ ಬಂದು ಸಹಾಯ ಕೇಳ್ತೀರಾ. ಸೋತ ಹತಾಸೆಗೆ ಮತದಾರರ ಮೇಲೆ ಮಾಜಿ ಶಾಸಕ ಸುರೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.