• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಿಮ್ಮ ವೈಫಲ್ಯ ಮುಚ್ಚಿಕೊಳ್ಳಲು ಇಲ್ಲಸಲ್ಲದ ಹೇಳಿಕೆ ನೀಡಬೇಡಿ: ಎಚ್‌ಡಿಕೆ ವಿರುದ್ಧ ಹಳ್ಳಿಹಕ್ಕಿ ಕಿಡಿ

Any Mind by Any Mind
January 5, 2023
in Top Story, ರಾಜಕೀಯ
0
ನಿಮ್ಮ ವೈಫಲ್ಯ ಮುಚ್ಚಿಕೊಳ್ಳಲು ಇಲ್ಲಸಲ್ಲದ ಹೇಳಿಕೆ ನೀಡಬೇಡಿ: ಎಚ್‌ಡಿಕೆ ವಿರುದ್ಧ ಹಳ್ಳಿಹಕ್ಕಿ ಕಿಡಿ
Share on WhatsAppShare on FacebookShare on Telegram


ಮೈಸೂರು: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ತಮ್ಮ ವೈಫಲ್ಯವನ್ನ ಮುಚ್ಚಿಕೊಳ್ಳಲು ಇಲ್ಲಸಲ್ಲದ ಹೇಳಿಕೆಗಳನ್ನ ನೀಡುತ್ತಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಕಿಡಿಕಾರಿದರು.

ADVERTISEMENT


ಮುಂಬೈಗೆ ಹುಡುಗಿಯರನ್ನ ಕಳುಹಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್‌.ಡಿ. ಕುಮಾರಸ್ವಾಮಿ ಅವರು ಎರಡು ಬಾರಿ ಸಿಎಂ ಆಗಿದ್ದವರು ಹಾಗೂ ರಾಜಕಾರಣದ ಕುಟುಂಬದಿಂದ ಬಂದವರು. ಅವರು ಇಂತಹ ಹೇಳಿಕೆ ಕೊಡುವಂತಹದ್ದು ಸರಿಯಲ್ಲ. ಅಲ್ಲದೇ ಹಲವು ಶಾಸಕರು ಮುಂಬೈಗೆ ಹೋಗಲು ಕಾರಣ ನೀವು ಹಾಗೂ ನಿಮ್ಮ ವೈಫಲ್ಯ. ಅದನ್ನೆಲ್ಲಾ ಮುಚ್ಚಿಕೊಳ್ಳಲು ಹಾಗೂ ಮಸಿ ಬಳಿಯಲು ಅಥವಾ ಹಿಟ್ ಅಂಡ್ ರನ್? ಹೇಳಿಕೆ ನೀಡಿದ್ದಾರೆ ಎಂದು ಟೀಕಿಸಿದರು.

ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌


ಅಲ್ಲದೇ ಈ ವಿಷಯದಲ್ಲಿ ಮಸಿ ಬಳಿದು ಹೋಗುವುದು ಸರಿಯಲ್ಲ. ಇದು ಒಬ್ಬ ನಾಯಕನ ಗುಣಲಕ್ಷಣವೂ ಅಲ್ಲ. ಹೀಗಾಗಿ ಯಾರು ಆ ಹೆಣ್ಣು ಮಕ್ಕಳು ಸಂಪೂರ್ಣ ಮಾಹಿತಿ ಕೊಡಿ ಎಂದು ಆಗ್ರಹಿಸಿದ ಅವರು, ಕುಮಾರಸ್ವಾಮಿ ಸಿನಿಮಾದವರು ಕಲ್ಪನಾ ಲಹರಿಯಲ್ಲಿ ಹೇಳಬಾರದು. ಹುಡುಗ ಹುಡುಗಿ ಮಿಕ್ಕಿದ್ದು ಪರದೆ ಮೇಲೆ ನೋಡಿ ಎನ್ನುತ್ತಾರೆ. ಹೀಗಾಗಿ ಕುಮಾರಸ್ವಾಮಿ ಹೇಳಿರುವುದು ಕಟ್ಟು ಕಥೆ, ಸುಳ್ಳಿನ ಕಂತೆ. ನಾನು ಪ್ರತ್ಯಕ್ಷದರ್ಶಿಯಾಗಿದ್ದೆ ಎಂದರು.


ಯಾರೋ ಪಿಂಪ್ ಮಾತು ಕೇಳಿ ಈ ರೀತಿ ಮಾತು ಸರಿಯಲ್ಲ ಎಂದ ಅವರು, ಯಾರದೋ ಮುಖಕ್ಕೆ ಮಸಿ ಬಳಿಯಲು ಈ ರೀತಿ ಹೇಳಿಕೆ ನೀಡಿದ್ದಾರೆ. ಈಗ ಇವುಗಳ ಬಗ್ಗೆ ಮಾತನಾಡುತ್ತಿರುವ ತಾವು ಮೂರು ವರ್ಷದಿಂದ ಏನು ಮಾಡುತ್ತಿದ್ದಿರಿ? ನಿಮ್ಮ ದುರಂಹಕಾರ, ಜಿಗುಪ್ಸೆ ಹಾಗೂ ನಿಮ್ಮ ವರ್ತನೆಯಿಂದ ಎಲ್ಲರೂ ಹೋದವರು. ಈಗ ಜವಾವ್ದಾರಿಯಿಲ್ಲದೆ ಮಾತನಾಡುತ್ತೀರಾ ಎಂದು ಕಿಡಿಕಾರಿದರು.


ಇದೇ ವೇಳೆ ಕನ್ನಡ ಸಾಹಿತ್ಯ ಸಮ್ಮೇಳನ ವಿಚಾರದ ಕುರಿತ ಪ್ರತಿಕ್ರಿಯೆ ನೀಡಿದ ಅವರು, ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಒಬ್ಬ ಅಯೋಗ್ಯ. ಇವೆರಲ್ಲಾ ಸೇರಿಕೊಂಡು ಕನ್ನಡ ಭಾಷೆಗೆ ಕೇಸರಿ ಬಣ್ಣ ಬಳೆಯುತ್ತಿದ್ದಾರೆ. ಮುಸ್ಲಿಮರನ್ನ ಸಮ್ಮೇಳನದಿಂದ ಹೊರಗಿಟ್ಟಿರುವುದು ತಪ್ಪು. ಮುಸ್ಲಿಂ ಸಮುದಾಯದಲ್ಲೂ ಖ್ಯಾತ ನಾಮ ಸಾಹಿತಿಗಳು, ಕವಿಗಳು ಇದ್ದಾರೆ‌. ಈ ಸಾಹಿತ್ಯ ಸಮ್ಮೇಳನವನ್ನ ನಾನು ಬಹಿಷ್ಕರಿಸುತ್ತಿದ್ದೇನೆ ಹಾಗೂ ಇದರ ಬದಲಾಗಿ ಬೆಂಗಳೂರಿನಲ್ಲಿ ನಡೆಯುವ ಜನ ಸಾಹಿತ್ಯ ಸಮ್ಮೇಳನಕ್ಕೆ ಹೋಗುತ್ತಿದ್ದೇನೆ ಎಂದ ಅವರು, ನಾಡಿನ ಎಲ್ಲಾ ಜನರು ಕನ್ನಡ ಸಾಹಿತ್ಯ ಸಮ್ಮೇಳನವಮ್ನ ಬಹಿಷ್ಕರಿಸಬೇಕು ಎಂದರು.


ಇನ್ನೂ ವಿಧಾನಸೌಧದಲ್ಲಿ ಹಣ ಪತ್ತೆ ವಿಚಾರದ ಬಗ್ಗೆ ಮಾತನಾಡಿದ ಅವರು, ಇಷ್ಟು ಭ್ರಷ್ಟಾಚಾರ ಹಿಂದೆ ಎಂದೂ ನೋಡಿರಲಿಲ್ಲ. ನಾನು ಬಹಳ ಜನ ಮಂತ್ರಿಗಳು, ಮುಖ್ಯಮಂತ್ರಿಗಳನ್ನು ನೋಡಿದ್ದೇನೆ ಮತ್ತು ಅವರುಗಳ ಜೊತೆಗೆ ಕೆಲಸ ಮಾಡಿದ್ದೇನೆ. ಆದರೆ ಇಂದು ಭ್ರಷ್ಟಾಚಾರ, ಸುಳ್ಳು, ಬಾಯಿಗೆ ಬಂದಂತೆ ಮಾತನಾಡುವುದು ಜಾಸ್ತಿಯಾಗಿದೆ ಎಂದು ಟೀಕಿಸಿದ ವಿಶ್ವನಾಥ್‌, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಹೇಳಿಕೆಯನ್ನು ಸಹ ಟೀಕಿಸಿದರು.

Tags: ಎಚ್‌. ವಿಶ್ವನಾಥ್‌ಎಚ್‌.ಡಿ. ಕುಮಾರಸ್ವಾಮಿಮೈಸೂರು
Previous Post

ಕುಕ್ಕರ್ ಬ್ಲಾಸ್ಟ್ ಪ್ರಕರಣ:ಮಂಗಳೂರಿನ‌ ಶಿಕ್ಷಣ ಸಂಸ್ಥೆಯೊಂದರ ಮೇಲೆ ಎನ್ ಐಎ ದಾಳಿ

Next Post

ರೈತರಿಗೆ ಅನುಕೂಲವಾಗುವಂತೆ ಶೂನ್ಯ ಬಡ್ಡಿ ದರದಲ್ಲಿ ಸಾಲ – ಡಾ. ಕೆ ವಿ ರಾಜೇಂದ್ರ

Related Posts

ಮಹತ್ವದ ಬೆಳವಣಿಗೆಯಲ್ಲಿ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ..
Top Story

ಮಹತ್ವದ ಬೆಳವಣಿಗೆಯಲ್ಲಿ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ..

by ಪ್ರತಿಧ್ವನಿ
April 14, 2026
0

ಬೆಂಗಳೂರು : ಸುಮಾರು ಎರಡು ದಶಕಗಳ ಕಾಲ 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ (Bihar CM) ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ರೈತರಿಗೆ ಅನುಕೂಲವಾಗುವಂತೆ ಶೂನ್ಯ ಬಡ್ಡಿ ದರದಲ್ಲಿ ಸಾಲ – ಡಾ. ಕೆ ವಿ ರಾಜೇಂದ್ರ

ರೈತರಿಗೆ ಅನುಕೂಲವಾಗುವಂತೆ ಶೂನ್ಯ ಬಡ್ಡಿ ದರದಲ್ಲಿ ಸಾಲ - ಡಾ. ಕೆ ವಿ ರಾಜೇಂದ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada