• Home
  • About Us
  • ಕರ್ನಾಟಕ
Thursday, August 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

DK Shivakumar: ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ಮಾಡುವವರನ್ನು ದೊಡ್ಡ ನಾಯಕರಂತೆ ಬಿಂಬಿಸುವುದು ಬೇಡ..!!

ಪ್ರತಿಧ್ವನಿ by ಪ್ರತಿಧ್ವನಿ
August 18, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಸಿಎಂರನ್ನು ಕೊಲೆಗಡುಕ ಎಂದವರ ವಿರುದ್ದ ಕ್ರಮಕ್ಕೆ ಸೂಚನೆ

ADVERTISEMENT

“ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯಮಂತ್ರಿಯವರು, ನಾನು ಸೇರಿದಂತೆ ಅನೇಕರನ್ನು ಟೀಕೆ ಮಾಡುತ್ತಿರುವವರ ಹೆಸರುಗಳನ್ನು ಸದನದಲ್ಲಿ ಪ್ರಸ್ತಾಪಿಸಿ ಅವರನ್ನು ದೊಡ್ಡ ನಾಯಕರಂತೆ ಬಿಂಬಿಸುವುದು ಬೇಡ” ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿರೋಧ ಪಕ್ಷಗಳ ಶಾಸಕರಿಗೆ ಕಿವಿಮಾತು ಹೇಳಿದರು.

ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಅವರು, ‘ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ನನ್ನ ಹಕ್ಕಿಗೆ ಚ್ಯುತಿ ತರುತ್ತಿದ್ದಾರೆ. ಹೀಗಾಗಿ ನಾನು ಹಕ್ಕುಚ್ಯುತಿ ನಿರ್ಣಯ ಮಂಡಿಸುತ್ತೇನೆ’ ಎಂದರು. ಈ ವೇಳೆ ವಿರೋಧ ಪಕ್ಷಗಳ ಶಾಸಕರು, ಕೆಲವರು ಮುಖ್ಯಮಂತ್ರಿಗಳನ್ನು ಕೊಲೆಗಡುಕ ಎಂದು ಹೇಳಿದ್ದರೂ ಸರ್ಕಾರ ಸುಮ್ಮನೆ ಕೂತಿದೆ ಎಂದು ಧ್ವನಿಗೂಡಿಸಿದರು.

ಈ ವೇಳೆ ಮಾತನಾಡಿದ ಡಿಸಿಎಂ ಶಿವಕುಮಾರ್ ಅವರು, “ಯಾರು ಯಾವ ಯಾವ ಹೇಳಿಕೆ ನೀಡಿದ್ದಾರೆ ಎಂದು ನಾನು ನೋಡಿದ್ದೇನೆ. ಮುಖ್ಯಮಂತ್ರಿಯವರನ್ನು ಕೊಲೆಗಡುಕ ಎಂದು ಹೇಳಿರುವುದನ್ನೂ ನೋಡಿದ್ದೇನೆ. ನನ್ನ ಬಗ್ಗೆಯೂ ಮಾತನಾಡಿದ್ದಾರೆ. ನಿಮ್ಮ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಗ್ಗೆ ಕೂಡ ಇಂದು ಬೆಳಗ್ಗೆ ಮಾತನಾಡಿದ್ದೂ, ಅದು ಕೂಡ ನನ್ನ ಮೊಬೈಲ್ ನಲ್ಲಿದೆ. ಈ ರೀತಿ ಹೇಳಿಕೆಗಳನ್ನು ನೀಡುತ್ತಿರುವವರ ಹೆಸರನ್ನು ವಿಧಾನಸಭೆಯಲ್ಲಿ ಹೇಳಿ ಅವರನ್ನು ನಾಯಕರನ್ನಾಗಿ ಮಾಡುವುದು ಬೇಡ. ಈ ವಿಚಾರವಾಗಿ ಗೃಹ ಸಚಿವರು ಹೇಳುವುದನ್ನು ಕೇಳೋಣ” ಎಂದರು.

“ತಮ್ಮ ಮೇಲೆ ಕೊಲೆ ಆರೋಪ ಮಾಡಿರುವ ಬಗ್ಗೆ ಮುಖ್ಯಮಂತ್ರಿಗಳಿಗೆ ಗೊತ್ತಿರಲಿಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ನಮ್ಮ ಶಾಸಕರಾದ ಶಿವಲಿಂಗೇಗೌಡ ಅವರು ಈ ವಿಚಾರ ಪ್ರಸ್ತಾಪಿಸಿದ್ದರು. ನಾನು ಸಿಎಂಗೆ ಈ ಬಗ್ಗೆ ವಿವರಿಸಿದೆ. ಅವರು ಬಳಸಿದ ಭಾಷೆ ಎಲ್ಲವನ್ನು ನೋಡಿದ್ದೇನೆ. ನಾನು ಗೃಹ ಸಚಿವನಲ್ಲದಿದ್ದರೂ ಅನೇಕರು ನನಗೆ ಈ ವಿಚಾರಗಳನ್ನು ಕಳುಹಿಸುತ್ತಿದ್ದಾರೆ. ಅದೇ ಸಭೆಯಲ್ಲಿ ಮುಖ್ಯಮಂತ್ರಿಗಳು ಗೃಹ ಸಚಿವರಿಗೆ ಯಾವ ನಿರ್ದೇಶನ ನೀಡಬೇಕೋ ನೀಡಿದ್ದಾರೆ. ಈ ವಿಚಾರವನ್ನು ಈ ಸದನದಲ್ಲಿ ಚರ್ಚೆ ಮಾಡುವುದು ಬೇಡ. ಗೃಹ ಸಚಿವರು ಈ ವಿಚಾರ ನಿಭಾಯಿಸುತ್ತಾರೆ” ಎಂದರು.

ಟಿಬಿ ಡ್ಯಾಂ ವಿಚಾರವಾಗಿ ನೀಡುವ ಉತ್ತರ ಮೂರು ರಾಜ್ಯಗಳ ಮೇಲೆ ಪರಿಣಾಮ:

ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಅವರು ತುಂಗಭದ್ರಾ ಅಣೆಕಟ್ಟಿನ ಆರು ಕ್ರೆಸ್ಟ್ ಗೇಟ್ ಗಳಲ್ಲಿ ದೋಷ ಕಾಣಿಸಿಕೊಂಡಿರುವ ಬಗ್ಗೆ ಕೇಳಿದಾಗ, ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. “ಮೊನ್ನೆ ನಮ್ಮ ಶಾಸಕರಾದ ಹಂಪನಗೌಡ ಬಾದರ್ಲಿ ಅವರು ಈ ವಿಚಾರ ಪ್ರಸ್ತಾಪಿಸಿದ್ದರು. ನಮ್ಮ ಜಿಲ್ಲಾ ಉಸ್ತುವಾರಿ ಮಂತ್ರಿಗಳು ಅಣೆಕಟ್ಟೆಗೆ ಭೇಟಿ ನೀಡಿದ್ದರು. ಇದು ಸೂಕ್ಷ್ಮ ವಿಚಾರ. ಹೀಗಾಗಿ ನಾನು ಅಂದೇ ಉತ್ತರ ನೀಡಲಿಲ್ಲ. ಅಣೆಕಟ್ಟೆಯ ವಿಚಾರ ಚರ್ಚೆ ಮಾಡಲು ತೆಲಂಗಾಣ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿಗಳ ಸಭೆಗೆ ಸಮಯ ಕೇಳಿದ್ದೆ. ಈ ವಿಚಾರವನ್ನು ನಿಯಮ 69 ರ ಅಡಿಯಲ್ಲಿ ಚರ್ಚೆಗೆ ಸೇರಿಸಲಾಗಿದೆ. ಈ ವಿಚಾರವಾಗಿ ಅನೇಕರು ಚರ್ಚೆ ಮಾಡಲು ಸಿದ್ಧರಿದ್ದು, ಈ ಚರ್ಚೆ ವೇಳೆ ನಾನು ವಿವರವಾದ ಉತ್ತರ ನೀಡುತ್ತೇನೆ. ಈ ಉತ್ತರ ನಮ್ಮ ರಾಜ್ಯದ 4 ಜಿಲ್ಲೆಗಳು ಸೇರಿದಂತೆ ಆಂಧ್ರ ಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮೇಲೆ ಪರಿಣಾಮ ಬೀರಲಿದೆ” ಎಂದು ತಿಳಿಸಿದರು.

ಖೈದಿಗಳ ಜೊತೆ ಸಂಪರ್ಕ ಚೆನ್ನಾಗಿರುವುದಕ್ಕೆ ಇದೇ ಸಾಕ್ಷಿ

ಶಾಸಕ ವೇದವ್ಯಾಸ ಕಾಮತ್ ಅವರು ಮಂಗಳೂರಿನ ಕಾರಾಗೃಹದಲ್ಲಿ ಮೊಬೈಲ್ ಜಾಮರ್ ಅಳವಡಿಸಿರುವ ಕಾರಣಕ್ಕೆ ಸುತ್ತಲಿನ ಪ್ರದೇಶಗಳ ಜನರು ಮೊಬೈಲ್ ಬಳಸಲು ಪರದಾಡುವಂತಾಗಿದೆ, ಆದರೆ ಜೈಲಿನ ಒಳಗೆ ನೆಟ್ ವರ್ಕ್ ದೊರೆಯುತ್ತಿದೆ ಎಂದು ವಿಚಾರ ಪ್ರಸ್ತಾಪಿಸಿದರು. ಈ ವೇಳೆ ಮಾತನಾಡಿದ ಶಿವಕುಮಾರ್ ಅವರು, “ಜಾಮರ್ ಅಳವಡಿಕೆಯಿಂದ ಜನರಿಗೆ ತೊಂದರೆಯಾಗುತ್ತಿರುವುದು ನಿಜ. ಆದರೆ, ಜೈಲಿನ ಒಳಗೆ ನೆಟ್ ವರ್ಕ್ ಸಿಗುತ್ತದೆ ಎಂದು ಇವರಿಗೆ ಹೇಗೆ ತಿಳಿದಿದೆ. ಜೈಲಿನ ಒಳಗೆ ಇವರಿಗೆ ಸಂಪರ್ಕ ಇದೆಯೇ?” ಎಂದು ಕಿಚಾಯಿಸಿದರು. ನಂತರ “ಗೃಹಸಚಿವರು ಇದಕ್ಕೆ ಉತ್ತರಿಸುತ್ತಾರೆ” ಎಂದು ವಿರೋಧ ಪಕ್ಷದ ಶಾಸಕರ ಕಾಲೆಳೆದರು.

Tags: DCM DK Shivakumardeputy cm dk shivakumarDK Shivakumardk shivakumar accidentdk shivakumar campdk shivakumar cmdk shivakumar convoydk shivakumar cycledk shivakumar cycle falldk shivakumar cycle ridedk shivakumar cyclingdk shivakumar kodi muttdk shivakumar latestdk shivakumar mandyadk shivakumar newsdk shivakumar next cmdk shivakumar on rcbdk shivakumar sm krishnadk shivakumar speechdk shivakumar today newsdk shivakumar video
Previous Post

Darshan: “ಡಿ ಬಾಸ್” ಹುಡುಕಾಟದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್​ನ ಕಳೆದುಕೊಂಡು ಬೇಸರಪಟ್ಟ ದರ್ಶನ್‌ ಅಭಿಮಾನಿಗಳು..

Next Post

DK Shivakumar: ಡಿಸಿಎಂ ಬೈಕ್ ರೈಡ್ ಗೆ ಸಿಎಂ ಗ್ರೀನ್ ಸಿಗ್ನಲ್ ತೋರೋ ಮೂಲಕ ಹೆಬ್ಬಾಳ ನೂತನ ಮೇಲ್ಸೇತುವೆ ಉದ್ಘಾಟನೆ

Related Posts

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
0

ಅಂದು ಮೈಸೂರಿನ ಮೂಡಾ ( MUDA ) ಭೂ ಹಗರಣಕ್ಕೆ ಸಿದ್ದರಾಮಯ್ಯ ಗೆ ಸಂಕಷ್ಟ ತಂದಿದ್ದ ಸ್ನೇಹಮಹಿ ಕೃಷ್ಣ ಇದೀಗ ಧರ್ಮಸ್ಥಳ ಗ್ರಾಮದ ಪ್ರಕರಣಕ್ಕೆ ಮತ್ತೆ ಎಂಟ್ರಿ...

Read moreDetails

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

August 21, 2025
Next Post

DK Shivakumar: ಡಿಸಿಎಂ ಬೈಕ್ ರೈಡ್ ಗೆ ಸಿಎಂ ಗ್ರೀನ್ ಸಿಗ್ನಲ್ ತೋರೋ ಮೂಲಕ ಹೆಬ್ಬಾಳ ನೂತನ ಮೇಲ್ಸೇತುವೆ ಉದ್ಘಾಟನೆ

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada