ತುಮಕೂರು : ಇನ್ನೇನು ಎರಡೇ ದಿನಗಳಲ್ಲಿ ರಾಜ್ಯ ಉಸ್ತುವಾರಿ ಸಚಿವರ ಘೋಷಣೆಯಾಗಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ತುಮಕೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು , ಯಾರ ಮೇಲೆ ವಿಶ್ವಾಸ ಇದೆಯೋ ಅಂತಹ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸ್ಥಾನ ಸಿಗಲಿದೆ ಎಂದು ಹೇಳಿದ್ದಾರೆ.

ನಾನು ತುಮಕೂರು ಜಿಲ್ಲೆಯ ಉಸ್ತುವಾರಿಯನ್ನು ನಿಭಾಯಿಸಲು ಸಿದ್ಧನಿದ್ದೇನೆ ಎಂದು ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ .
ಹಾಲಿನ ಪ್ರೋತ್ಸಾಹ ಧನ ಕಡಿಮೆ ಮಾಡಿದ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಅವರು. ಒಕ್ಕೂಟಗಳು ಪ್ರೋತ್ಸಾಹ ಧನ ಕಡಿಮೆ ಮಾಡಿವೆ. ಆದರೆ ಸರ್ಕಾರದಿಂದ ಪ್ರೋತ್ಸಾಹಧನದಲ್ಲಿ ಯಾವುದೇ ಕಡಿಮೆ ಆಗೋದಿಲ್ಲ ಎಂದು ಹೇಳಿದ್ದಾರೆ.








