• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ನೂತನ ಮುಖ್ಯ ಆರ್ಥಿಕ ಸಲಹೆಗಾರರಾಗಿ ಆಂಧ್ರ ಮೂಲದ ಡಾ.ಅನಂತ ನಾಗೇಶ್ವರನ್ ನೇಮಕ

Any Mind by Any Mind
January 28, 2022
in ಇದೀಗ
0
ನೂತನ ಮುಖ್ಯ ಆರ್ಥಿಕ ಸಲಹೆಗಾರರಾಗಿ ಆಂಧ್ರ ಮೂಲದ ಡಾ.ಅನಂತ ನಾಗೇಶ್ವರನ್ ನೇಮಕ
Share on WhatsAppShare on FacebookShare on Telegram

ಬಜೆಟ್ ಮಂಡನೆಗೆ ಮೂರು ದಿನಗಳ ಮೊದಲು, ಆಂಧ್ರ ಮೂಲದ ಡಾ.ವಿ. ಅನಂತ ನಾಗೇಶ್ವರನ್ ಅವರನ್ನು ನೂತನ ಮುಖ್ಯ ಆರ್ಥಿಕ ಸಲಹೆಗಾರರನ್ನಾಗಿ  ಕೇಂದ್ರ ಸರ್ಕಾರ ನೇಮಕ ಮಾಡಿದೆ. 

ADVERTISEMENT

ಇದುವರೆಗೂ ಮುಖ್ಯ ಆರ್ಥಿಕ ಸಲಹೆಗಾರರಾಗಿದ್ದ ಕೃಷ್ಣಮೂರ್ತಿ ಸುಬ್ರಮಣಿಯನ್ ಅವರು ಮೂರು ವರ್ಷಗಳ ಅವಧಿ ಡಿಸೆಂಬರ್ 7ಕ್ಕೆ ಕೊನೆಗೊಂಡಿತ್ತು.  ಅವರ ಸೇವೆಯನ್ನು ವಿಸ್ತರಿಸಿರಲಿಲ್ಲ. ಹೀಗಾಗಿ ಹುದ್ದೆ ತೆರವಾಗಿತ್ತು.

ಆರ್ಥಿಕ ಸಲಹೆಗಾರರಾಗಿ ಬಹುತೇಕ ದಕ್ಷಿಣ ರಾಜ್ಯದವರೇ ನೇಮಕಗೊಳ್ಳುತ್ತಿದ್ದಾರೆ. ಅನಂತ ನಾಗೇಶ್ವರನ್ ಅವರ ನೇಮಕದೊಂದಿಗೆ ಆ ಸಂಪ್ರದಾಯ ಮುಂದುವರೆದಿಂತಿದೆ. ನೂತನ ಮುಖ್ಯ ಆರ್ಥಿಕ ಸಲಹೆಗಾರರ ನೇಮಕ ಮಾಡಿರುವ ವಿಷಯವನ್ನು ಕೇಂದ್ರ ಸರ್ಕಾರ ಟ್ವಿಟ್ಟರ್ ಮೂಲಕ ಪ್ರಕಟಿಸಿದೆ.  “ಸರ್ಕಾರವು ಡಾ ವಿ ಅನಂತ ನಾಗೇಶ್ವರನ್ ಅವರನ್ನು ಮುಖ್ಯ ಆರ್ಥಿಕ ಸಲಹೆಗಾರರನ್ನಾಗಿ ನೇಮಿಸಿದೆ ಮತ್ತು ಇಂದು ಅವರು ಅಧಿಕಾರ ವಹಿಸಿಕೊಂಡಿದ್ದಾರೆ.”

ಪ್ರಸಿದ್ಧ ಬರಹಗಾರ, ಪ್ರಾಧ್ಯಾಪಕ ಮತ್ತು ಆರ್ಥಿಕ ಸಲಹೆಗಾರರಾಗಿರುವ ಡಾ ನಾಗೇಶ್ವರನ್ ಅವರು ಭಾರತ ಮತ್ತು ವಿದೇಶಗಳಲ್ಲಿ ಹಲವಾರು ಮ್ಯಾನೆಜ್ಮೆಂಟ್ ಕಾಲೇಜುಗಳಲ್ಲಿ ಬೋಧನೆ ಮಾಡಿದ್ದಾರೆ. ಮುಖ್ಯ ಆರ್ಥಿಕ ಸಲಹೆಗಾರರಾಗಿ ನೇಮಕಗೊಳ್ಳುವ ಮೊದಲು, ಅವರು ಐಎಫ್‌ಎಂಆರ್ ಗ್ರಾಜುಯೇಟ್ ಸ್ಕೂಲ್ ಆಫ್ ಬ್ಯುಸಿನೆಸ್‌ನ ಡೀನ್ ಆಗಿದ್ದರು ಮತ್ತು ಆಂಧ್ರಪ್ರದೇಶದ ಕ್ರಿಯಾ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದ ಸಂದರ್ಶಕ ಪ್ರಾಧ್ಯಾಪಕರಾಗಿದ್ದರು. 

ಇದಕ್ಕು ಮುನ್ನ ಅವರು 2019 ರಿಂದ 2021 ರವರೆಗೆ ಭಾರತದ ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯ ಸದಸ್ಯರಾಗಿದ್ದರು. ಅಹಮದಾಬಾದ್‌ನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಿಂದ ಸ್ನಾತಕೋತ್ತರ ಡಿಪ್ಲೊಮಾ  ಮತ್ತು ಅಮ್ಹೆರ್ಸ್ಟ್‌ನಲ್ಲಿರುವ ಮ್ಯಾಸಚೂಸೆಟ್ಸ್ ವಿಶ್ವವಿದ್ಯಾಲಯದಿಂದ ಹಣಕಾಸು ವಿಷಯದಲ್ಲಿ ಡಾಕ್ಟರೇಟ್ ಪಡೆದಿದ್ದಾರೆ.

ವಿಶೇಷ ಎಂದರೆ ಬಜೆಟ್  ಮಂಡನೆಯ ಪೂರ್ವದಲ್ಲಿ ಮುಖ್ಯ ಆರ್ಥಿಕ ಸಲಹೆಗಾರರ ಸ್ಥಾನ ತೆರವಾಗಿದ್ದಿದು ಇದೇ ಮೊದಲು. ಸಾಮಾನ್ಯವಾಗಿ ವಿತ್ತ ಸಚಿವರೇ ಬಜೆಟ್ ಮಂಡನೆ ಮಾಡಿದರೂ ಬಹುತೇಕ ಬಜೆಟ್ ಸಿದ್ದತೆಯಲ್ಲಿ ಮುಖ್ಯ ಆರ್ಥಿಕ ಸಲಹೆಗಾರರ ಪಾತ್ರ ಪ್ರಧಾನವಾಗಿರುತ್ತದೆ. 

ನಿರ್ಮಲಾ ಸೀತಾರಾಮನ್ ಅವರು ವಿತ್ತ ಸಚಿವರಾದ ನಂತರ ಈ ಪ್ರಧಾನ ಪಾತ್ರ ನಿಧಾನವಾಗಿ ತಗ್ಗುತ್ತಾ ಬಂದಿದೆ. ಈ ಹಿಂದೆ ಆರ್ಥಿಕ ಇಲಾಖೆ ಕಾರ್ಯದರ್ಶಿ ಸುಭಾಷ್ ಚಂದ್ರ ಗಾರ್ಗ್ ಅವರೊಂದಿಗೆ ಭಿನ್ನಾಭಿಪ್ರಾಯ ಇದ್ದ ಕಾರಣ ಬೇರೆ ಇಲಾಖೆಗೆ ವರ್ಗಾಹಿಸಲಾಗಿತ್ತು. ನಂತರ ಸುಭಾಷ್ ಚಂದ್ರ ಗಾರ್ಗ್ ಸ್ವಯಂ ನಿವೃತ್ತಿ ಪಡೆದಿದ್ದರು.

ಮುಖ್ಯ ಆರ್ಥಿಕ ಸಲಹೆಗಾರರು ನೇಮಕವಾಗಿರುವುದರಿಂದ ಸಂಪ್ರದಾಯದಂತೆ ಜನವರಿ 31ರಂದು ಸಂಸತ್ತಿನಲ್ಲಿ 2021-22ನೇ ವಿತ್ತೀಯ ವರ್ಷದ ಆರ್ಥಿಕ ಸಮೀಕ್ಷೆಯನ್ನು ಡಾ.ನಾಗೇಶ್ವರನ್ ಅವರೇ ಮಂಡಿಸಲಿದ್ದಾರೆ. ಆದರೆ, ಸಮೀಕ್ಷೆ ತಯಾರಿಕೆಯಲ್ಲಿ ಯಾರ ಪಾತ್ರ ಇದೆ ಎಂಬುದು ಸ್ಪಷ್ಟವಾಗಿಲ್ಲ. ಕೃಷ್ಣಮೂರ್ತಿ ಸುಬ್ರಮಣಿಯನ್ ಅವರ ಅವಧಿ ಡಿಸೆಂಬರ್ 7ಕ್ಕೆ ಮುಗಿದಿದೆ.

ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಖ್ಯ ಆರ್ಥಿಕ ಸಲಹೆಗಾರರ ಹುದ್ದೆಯು ನಾಮಮಾತ್ರಕ್ಕೆ ಎಂಬಂತಿದೆ. ಈ ಹಿಂದೆ ಅಪನಗದೀಕರಣ (ನೋಟ್ ಬ್ಯಾನ್) ಜಾರಿ ಮಾಡಿದಾಗ ಆಗ ಮುಖ್ಯ ಆರ್ಥಿಕ ಸಲಹೆಗಾರರಾಗಿದ್ದು ಸುಬ್ರಮಣಿಯನ್ ಅವರೊಂದಿಗೆ ಸಮಾಲೋಚನೆ ಮಾಡಿರಲೇ ಇಲ್ಲ. ಹಲವು ವಿಷಯಗಳಲ್ಲಿ ಭಿನ್ನಾಭಿಪ್ರಾಯ ಇದ್ದ ಕಾರಣ ಸುಬ್ರಮಣಿಯನ್ ಅವರು ಅವಧಿಗೆ ಮುನ್ನವೇ ಹುದ್ದೆ ತೊರೆದಿದ್ದರು.

ಆರ್ಥಿಕ ಸಮೀಕ್ಷೆಯು ದೇಶದ ಆರ್ಥಿಕ ಸ್ಥಿತಿ-ಗತಿಗಳ ಕನ್ನಡಿಯಾಗಿರುತ್ತಿತ್ತು. ಹಿಂದಿನ ವರ್ಷದ ಸಾಧನೆಗಳು ಭವಿಷ್ಯದಲ್ಲಿ ಸಾಗುವ ಪಥಗಳನ್ನು ಮುನ್ನೋಟವಾಗಿರುತ್ತಿತ್ತು. ಆರ್ಥಿಕ ಸಮೀಕ್ಷೆಯು ಸರ್ಕಾರದ ಆರ್ಥಿಕ ನೀತಿಯನ್ನು ವಿಶ್ಲೇಷಣೆಯೂ ಆಗಿರುತ್ತಿತ್ತು. ಸರ್ಕಾರದ ಲೋಪಗಳನ್ನು ಎತ್ತಿ ತೋರಿಸುವ, ಉತ್ತಮ ಯೋಜನೆಗಳನ್ನು ಶ್ಲಾಘಿಸುವ ಕಟುವಿಮರ್ಶೆಯೂ ಆಗಿರುತ್ತಿತ್ತು. ಇತ್ತೀಚೆಗೆ ಆರ್ಥಿಕ ಸಮೀಕೆಯು ಈ ಎಲ್ಲಾ ಗುಣಲಕ್ಷಣಗಳನ್ನು ಕಳೆದುಕೊಂಡಿದ್ದು, ವಿತ್ತ ಸಚಿವರ ಬಜೆಟ್ ಭಾಷಣದ ಹೆಚ್ಚುವರಿ ಭಾಗವಾಗಿರುತ್ತದೆ.

Previous Post

ಕೋವಿಡ್ ನಿರ್ವಹಣೆಯಲ್ಕಿ ಅತ್ಯಂತ ಯಶಸ್ವಿಯಾಗಿ ತಂತ್ರಜ್ಞಾನ ಬಳಸಿಕೊಂಡ ರಾಜ್ಯ ಕರ್ನಾಟಕ

Next Post

ರಮೇಶ್ ಜಾರಕಿಹೊಳಿ ಹೆಡಮುರಿ ಕಟ್ಟಲು ಬಿಜೆಪಿ ವರಿಷ್ಠರೇ ಖೆಡ್ಡಾ ತೋಡಿದರೆ?

Related Posts

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”
ಇದೀಗ

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

by ಪ್ರತಿಧ್ವನಿ
January 18, 2026
0

ಬೆಂಗಳೂರು :  ಅಭಿವೃದ್ಧಿ ಶೂನ್ಯ, ಭ್ರಷ್ಟಾಚಾರ ಪೂರ್ಣ - ಇದೇ ಕಾಂಗ್ರೆಸ್ ಸಾಧನೆ! ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ದಿನದಿಂದ ದಿನಕ್ಕೆ ತನ್ನದೇ ದಾಖಲೆ...

Read moreDetails
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
Next Post
ರಮೇಶ್ ಜಾರಕಿಹೊಳಿ ಹೆಡಮುರಿ ಕಟ್ಟಲು ಬಿಜೆಪಿ ವರಿಷ್ಠರೇ ಖೆಡ್ಡಾ ತೋಡಿದರೆ?

ರಮೇಶ್ ಜಾರಕಿಹೊಳಿ ಹೆಡಮುರಿ ಕಟ್ಟಲು ಬಿಜೆಪಿ ವರಿಷ್ಠರೇ ಖೆಡ್ಡಾ ತೋಡಿದರೆ?

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada