• Home
  • About Us
  • ಕರ್ನಾಟಕ
Wednesday, October 1, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

DK Suresh: ರಾಷ್ಟ್ರೀಯ ಜಲ ನೀತಿಯಲ್ಲಿ ಕುಡಿಯುವ ನೀರಿನ ಯೋಜನೆಗೆ ಆದ್ಯತೆ: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

ಪ್ರತಿಧ್ವನಿ by ಪ್ರತಿಧ್ವನಿ
July 25, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಕನ್ನಡಿಗರ ಕುಡಿಯುವ ನೀರಿನ ಯೋಜನೆಗಳಿಗೆ ಅವಕಾಶ ಕಲ್ಪಿಸಿ
ನಂದಿನಿ ಗುಣಮಟ್ಟದಲ್ಲಿ ರಾಜಿ ಇಲ್ಲ
ಹೈನುಗಾರಿಕೆ ಮೂಲಕ ನಿರುದ್ಯೋಗಿ ಯುವಕರ ಸ್ವಾವಲಂಬನೆ

ADVERTISEMENT

“ಕುಡಿಯುವ ನೀರಿನ ಯೋಜನೆಗೆ ಪ್ರಥಮ ಆದ್ಯತೆ ಎಂಬುದು ರಾಷ್ಟ್ರೀಯ ಜಲ ನೀತಿಯ ಮೂಲ ಉದ್ದೇಶವಾಗಿದೆ. ಕನ್ನಡಿಗರ ಕುಡಿಯುವ ನೀರಿನ ಯೋಜನೆಗೆ ಅವಕಾಶ ಕಲ್ವಿಸಬೇಕು” ಎಂದು ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದರು. ದೊಡ್ಡಬಳ್ಳಾಪುರದ ಬಮುಲ್ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗೆ ಸುರೇಶ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

“ಮಹದಾಯಿ ವಿಚಾರವಾಗಿ ಗೋವಾ ತಗಾದೆ ತೆಗೆದಿರುವ ಬಗ್ಗೆ ಕೇಳಿದಾಗ, “ಮಹದಾಯಿ ವಿಚಾರ ಈಗಾಗಲೇ ನ್ಯಾಯಾಧಿಕರಣದಲ್ಲಿ ತೀರ್ಮಾನವಾಗಿದ್ದು, ನಮ್ಮ ಪಾಲಿನ ನೀರು ಎಷ್ಟು ಎಂದು ಸ್ಪಷ್ಟವಾಗಿದೆ. ಗೋವಾದವರು ಅನಗತ್ಯವಾಗಿ ನಮ್ಮ ಕುಡಿಯುವ ನೀರಿನ ಯೋಜನೆ ತಡೆಯುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮಾನ್ಯ ಪ್ರಧಾನಮಂತ್ರಿಗಳು ಹಾಗೂ ಕೇಂದ್ರ ಜಲಶಕ್ತಿ ಸಚಿವರು ಸಂಬಂಧ ಪಟ್ಟ ಮುಖ್ಯಮಂತ್ರಿಗಳ ಜತೆ ಚರ್ಚಿಸಿ, ನ್ಯಾಯಾಧಿಕರಣದ ತೀರ್ಪಿನಂತೆ ನಮ್ಮ ಪಾಲಿನ ನೀರನ್ನು ಬಳಸಿಕೊಳ್ಳಲು ಅನುವು ಮಾಡಿಕೊಡಬೇಕು. ಕನ್ನಡಿಗರಿಗೆ ಗೋವಾ ಜತೆ ಉತ್ತಮ ಬಾಂಧವ್ಯವಿದೆ. ಅನಗತ್ಯವಾಗಿ ಈ ರೀತಿ ಗೊಂದಲ ಸೃಷ್ಟಿಸಿ ಈ ಬಾಂಧವ್ಯವನ್ನು ಹಾಳುಮಾಡುವುದು ಒಳ್ಳೆಯದಲ್ಲ. ಉತ್ತರ ಕರ್ನಾಟಕ ಭಾಗದ ಜನರ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ನಮ್ಮ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಬದ್ಧರಾಗಿದ್ದಾರೆ. ಇದಕ್ಕೆ ಸಹಕಾರ ನೀಡಬೇಕು ಎಂದು ನಾನು ಒತ್ತಾಯ ಮಾಡುತ್ತೇನೆ” ಎಂದು ತಿಳಿಸಿದರು.

ಲೋಕಸಭೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ರಾಹುಲ್ ಗಾಂಧಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ರಾಹುಲ್ ಗಾಂಧಿ ಅವರೇ ಹೇಳಿರುವಾಗ, ಮತ್ತೆ ನಾನೇನು ಹೇಳುವುದಿದೆ” ಎಂದು ತಿಳಿಸಿದರು.

ಗುಣಮಟ್ಟದಲ್ಲಿ ನಂದಿನಿ ರಾಜಿಯಾಗುವುದಿಲ್ಲ:

“ಬಮುಲ್ ಅಧ್ಯಕ್ಷನಾದ ಬಳಿಕ ನಾನು ದೊಡ್ಡಬಳ್ಳಾಪುರಕ್ಕೆ ಭೇಟಿ ಮಾಡಿ, ಇಲ್ಲಿನ ರೈತರು ಹಾಗೂ ಹಾಲು ಒಕ್ಕೂಟಗಳ ಪದಾಧಿಕಾರಿಗಳ ಜೊತೆ ಚರ್ಚಿಸಿ, ಇಲ್ಲಿನ ಸಮಸ್ಯೆ ಅರಿಯಲು ಬಂದಿದ್ದೇನೆ. ಮೂರು ಜಿಲ್ಲೆಯ ನಾಯಕರು ನನಗೆ ಬಮುಲ್ ಜವಾಬ್ದಾರಿಯನ್ನು ವಹಿಸಿದ ನಂತರ ಹಾಲು ಉತ್ಪಾಕರ ಸಮಸ್ಯೆಗಳ ಬಗ್ಗೆ ಸಾಕಷ್ಟು ಚಿಂತನೆ ನಡೆಸಿದ್ದೇನೆ. ಬಮುಲ್ ನಲ್ಲಿ ನಿತ್ಯ 17-18 ಲಕ್ಷ ಲೀಟರ್ ಹಾಲು ಉತ್ಪಾದಿಸುತ್ತಿದ್ದು, ಹಾಲಿನ ಗುಣಮಟ್ಟ ನಿರ್ವಹಣೆ, ರೈತರಿಗೆ ಉತ್ತಮ ಬೆಲೆ ನೀಡುವುದು, ಗ್ರಾಹಕರ ಹಿತ ಕಾಯುವ ಜವಾಬ್ದಾರಿ ನಮ್ಮ ಮೇಲಿದೆ. ಬೆಂಗಳೂರು ಹಾಲು ಒಕ್ಕೂಟ ಸಹಕಾರ ತತ್ವದ ಮೇಲೆ ನಂಬಿಕೆ ಇಟ್ಟು ಎಲ್ಲರನ್ನು ವಿಶ್ವಾಸಕ್ಕೆ ಪಡೆಯಲಾಗಿದೆ. 1965ರಲ್ಲಿ ಕೃಷ್ಣಪ್ಪನವರು ಇದನ್ನು ಪ್ರಾರಂಭಿಸಿದ್ದು, ಅಲ್ಲಿಂದ ಇಲ್ಲಿಯವರೆಗೂ ಈ ಸಂಸ್ಥೆ ಮೈಲುಗಲ್ಲು ಹಾಕಿಕೊಂಡು ಬಂದಿದೆ” ಎಂದು ಹೇಳಿದರು.

“ವ್ಯವಸ್ಥೆಗೆ ತಕ್ಕಂತೆ ಮಾರುಕಟ್ಟೆ ವಿಸ್ತರಣೆ ಮಾಡಿಕೊಳ್ಳಬೇಕು. ಮಾರುಕಟ್ಟೆಯಲ್ಲಿ ಸ್ಪರ್ಧೆ ಹೆಚ್ಚಾಗಿದ್ದು, ಎಲ್ಲರ ಹಿತ ಕಾಯಲು ದೊಡ್ಡಬಳ್ಳಾಪುರದ ಬಮುಲ್ ಕೇಂದ್ರಕ್ಕೆ ಭೇಟಿ ನೀಡಿದ್ದೇನನೆ. ಪ್ರತಿ ವಿಭಾಗದಲ್ಲಿ ಯಾವ ರೀತಿ ಬದಲಾವಣೆ ತರಬಹುದು ಎಂದು ಚಿಂತನೆ ಮಾಡಿದ್ದೇವೆ. ನಂದಿನಿ ಪರಿಶುದ್ಧ ಹಾಲು. ಬೆಲೆ ಕಡಿಮೆ ಎಂದು ಇದನ್ನು ಬಳಸಲು ಹಿಂಜರಿಯುತ್ತಾರೆ. ನಾವು ಸಂರಕ್ಷಕ ರಾಸಾಯನಗಳನ್ನು ಬಳಸಿದರೆ ಹಾಲಿನ ಬಾಳಿಕೆ ಅವಧಿ ವಿಸ್ತರಿಸಬಹುದು. ಆದರೆ ಜನರ ಆರೋಗ್ಯದ ದೃಷ್ಟಿಯಿಂದ ಅಂದು ಸಂಗ್ರಹಿಸಿದ ಹಾಲನ್ನು ಅಂದೇ ಮಾರುಕಟ್ಟೆಗೆ ಕಳುಹಿಸುವ ವ್ಯವಸ್ಥೆ ಹೊಂದಿದ್ದೇವೆ. ನಂದಿನಿ ಉತ್ಪನ್ನಗಳನ್ನು ಹೆಚ್ಚು ಬಳಸಿ ಸಹಕಾರ ನೀಡಬೇಕು” ಮನವಿ ಮಾಡಿದರು.

“ಮಾರುಕಟ್ಟೆಯಲ್ಲಿ ಸ್ಪರ್ಧೆ ನೀಡಲು ಅನೇಕ ಮಾರ್ಗಗಳಿವೆ. ಆದರೆ ನಾವು ಗುಣಮಟ್ಟ, ಆರೋಗ್ಯ ವಿಚಾರದಲ್ಲಿ ರಾಜಿಯಾಗದೇ ಕೆಲಸ ಮಾಡುತ್ತಿದ್ದೇವೆ. ನಂದಿನಿ ಮೂಲಕ 160ಕ್ಕೂ ಹೆಚ್ಚು ಉತ್ಪನ್ನಗಳನ್ನು ಮಾರುಕಟ್ಟೆಗೆ ಪರಿಚಯಿಸಲಾಗಿದ್ದು, ಇಷ್ಟು ಉತ್ಪನ್ನಗಳಿವೆ ಎಂದು ಬಹುತೇಕ ಜನರಿಗೆ ಗೊತ್ತೇ ಇಲ್ಲ. ನಂದಿನಿ ತುಪ್ಪವನ್ನು ತಿರುಪತಿ ತಿರುಮಲ ದೇವಾಲಯ, ವಿದೇಶಗಳಿಗೆ ರಫ್ತಾಗುತ್ತಿದೆ. ನಾನು ಅಧ್ಯಕ್ಷನಾದ ಬಳಿಕ ಕಳೆದ ಒಂದೂವರೆ ತಿಂಗಳಲ್ಲಿ ಮಾರುಕಟ್ಟೆ ವ್ಯಾಪಾರಸ್ಥರು, ಹೊಟೇಲ್ ಸಂಸ್ಥೆಗಳು, ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ. ಸಧ್ಯ ಮಾರುಕಟ್ಟೆಯಲ್ಲಿ ಕಲಬೆರಕೆ ಪನ್ನೀರ್ ಹೆಚ್ಚಾಗಿದ್ದು, ಕಡಿಮೆ ಬೆಲೆಗೆ ಸಿಗುತ್ತದೆ ಎಂದು ಅನೇಕರು ಅದನ್ನೇ ಖರೀದಿ ಮಾಡುತ್ತಿದ್ದಾರೆ. ಇದರಿಂದ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಿ ಆಸ್ಪತ್ರೆಗೆ ಹೆಚ್ಚು ಹಣ ಖರ್ಚು ಮಾಡಬೇಕಾಗುತ್ತದೆ” ಎಂದರು.

ಹೈನುಗಾರಿಕೆ ಮೂಲಕ ನಿರುದ್ಯೋಗಿ ಯುವಕರಿಗೆ ಸ್ವಾವಲಂಬನೆ:

“ಸಂಸ್ಥೆಯ ಆಡಳಿತ ಮಂಡಳಿ ನನಗೆ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ. ನಗರೀಕರಣದ ಪರಿಣಾಮದಿಂದಾಗಿ ದೊಡ್ಡಬಳ್ಳಾಪುರದಲ್ಲಿ ಹಾಲು ಉತ್ಪಾದನೆ ಪ್ರಮಾಣ ಕಡಿಮೆಯಾಗುತ್ತಿದೆ. ಈ ಮಧ್ಯೆ ನಾವು ಹಾಲಿನ ಉತ್ಪಾದನೆ ಹೆಚ್ಚಿಸಬೇಕು. ಪ್ರಸ್ತುತ ಪರಿಸ್ಥಿತಿಯಲ್ಲಿ ಬಹುತೇಕ ಯುವಕರು ನಿರುದ್ಯೋಗಿಗಳಾಗಿದ್ದು, ಇದಕ್ಕೆ ಪರಿಹಾರ ಹೈನುಗಾರಿಕೆ. ಯುವಕರು ಇದರಲ್ಲಿ ತೊಡಗಿಸಿಕೊಂಡರೆ ಸ್ವಾವಲಂಬಿಗಳಾಗಬಹುದು. ಈ ಭಾಗದ ರೈತರು, ಯುವಕರಿಗೆ ಇದು ನೆರವಾಗಲಿದೆ. ದೊಡ್ಡಬಳ್ಳಾಪುರ ತಾಲೂಕಿನಲ್ಲಿ 1 ಲಕ್ಷ ಲೀಟರ್ ಗೆ ಕುಸಿದಿದೆ. ಇಲ್ಲಿ ಕನಿಷ್ಠ 2.50 ಲಕ್ಷದಿಂದ 3 ಲಕ್ಷದವರೆಗೆ ಹಾಲು ಉತ್ಪಾದನೆಯಾಗಬೇಕು. ಇದಕ್ಕೆ ವಿಶೇಷ ಕಾರ್ಯಕ್ರಮ ರೂಪಿಸಲು ಚರ್ಚಿಸುತ್ತಿದ್ದೇನೆ. ಈ ಬಗ್ಗೆ ಜಿಲ್ಲಾ ಸಹಕಾರಿ ಬ್ಯಾಂಕ್ ಜೊತೆ ಚರ್ಚಿಸಿದ್ದು ಹಸು ಖರೀದಿಗೆ ನೀಡುವ ಸಾಲ ಸೌಲಭ್ಯವನ್ನು 1 ಲಕ್ಷದಿಂದ 2 ಲಕ್ಷಕ್ಕೆ ಏರಿಸುವಂತೆ ತಿಳಿಸಿದ್ದೇನೆ. ಮೆಗಾ ಡೈರಿ ಮಾಡುವವರಿಗೆ 15 ಲಕ್ಷದವರೆಗೆ ಸಾಲ ನೀಡುವ ಅವಕಾಶವಿದೆ. ಇದರ ಬಗ್ಗೆ ಹೆಚ್ಚು ಪ್ರಚಾರ ಮಾಡಿ ಜನರಿಗೆ ಮಾಹಿತಿ ನೀಡಲಾಗುವುದು” ಎಂದು ತಿಳಿಸಿದರು.

Tags: congress dk sureshD K Sureshdk sureshdk suresh angrydk suresh arrestdk suresh congresdk suresh congressdk suresh dksdk suresh ed inquirydk suresh fightdk suresh interviewsdk suresh latest newsdk suresh livedk suresh newsdk suresh news todaydk suresh nominationdk suresh reactsdk suresh reacts dksdk suresh shivakumardk suresh speaksdk suresh speechdk suresh tennisdk suresh today newsdk suresh videosdk suresh vs modiDKSureshmp dk suresh
Previous Post

ಕೆಕೆಆರ್‌ಡಿಬಿ 2025- 26 ನೇ ಸಾಲಿನ 5 ಸಾವಿರ ಕೋಟಿ ರು ಮೊತ್ತದ ಕ್ರಿಯಾ ಯೋಜನೆಗೆ ರಾಜ್ಯಪಾಲರ ಅಂಕಿತ

Next Post

ಅಭಿವೃದ್ಧಿ ಕಾರ್ಯ ತ್ವರಿತಗೊಳಿಸಲು ಅಧಿಕಾರಿಗಳಿಗೆ ಸಚಿವ ಕೆ.ಜೆ.ಜಾರ್ಜ್ ಸೂಚನೆ

Related Posts

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !
ಇತರೆ / Others

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

by ಪ್ರತಿಧ್ವನಿ
September 30, 2025
0

ಇಂದು ನಗರದಲ್ಲಿನ ಚಂದ್ರ ಲೇಔಟ್‌ನಲ್ಲಿ Sunya IAS ನೂತನ ಸೆಂಟರ್‌ ಉದ್ಘಾಟನೆಗೊಂಡಿತು. ಚಂದ್ರ ಬಡಾವಣೆಯಲ್ಲಿ Civil Services Training Institutions ಗಳಿಗೆ ಹೆಸರುವಾಸಿಯಾಗಿದೆ. ರಾಜ್ಯ ಬೇರೆ ಬೇರೆ...

Read moreDetails
NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

September 30, 2025
UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

September 30, 2025
ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

September 30, 2025
ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ,  ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ, ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

September 30, 2025
Next Post
ಅಭಿವೃದ್ಧಿ ಕಾರ್ಯ ತ್ವರಿತಗೊಳಿಸಲು ಅಧಿಕಾರಿಗಳಿಗೆ ಸಚಿವ ಕೆ.ಜೆ.ಜಾರ್ಜ್ ಸೂಚನೆ

ಅಭಿವೃದ್ಧಿ ಕಾರ್ಯ ತ್ವರಿತಗೊಳಿಸಲು ಅಧಿಕಾರಿಗಳಿಗೆ ಸಚಿವ ಕೆ.ಜೆ.ಜಾರ್ಜ್ ಸೂಚನೆ

Recent News

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !
Top Story

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

by ಪ್ರತಿಧ್ವನಿ
September 30, 2025
ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ,  ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !
Top Story

ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ, ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

by ಪ್ರತಿಧ್ವನಿ
September 30, 2025
ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!
Top Story

ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!

by ಪ್ರತಿಧ್ವನಿ
September 29, 2025
ಕಲ್ಯಾಣ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ
Top Story

ಕಲ್ಯಾಣ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

by ಪ್ರತಿಧ್ವನಿ
September 28, 2025
ನಟ ವಿಜಯ್‌ : ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ಸಂತಾಪ, ಪರಿಹಾರದ ವಾಗ್ದಾನ
Top Story

ನಟ ವಿಜಯ್‌ : ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ಸಂತಾಪ, ಪರಿಹಾರದ ವಾಗ್ದಾನ

by ಪ್ರತಿಧ್ವನಿ
September 29, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

September 30, 2025
NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

September 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada