ಜುಲೈ 18ರಂದು ನಡೆಯುವ ರಾಷ್ಟ್ರಪತಿ ಚುನಾವಣೆ ಸಂಬಂಧ NDA ಮೈತ್ರಿ ಕೂಟದ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.
ದ್ರೌಪದಿಯವರೊಂದಿಗೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಪ್ರಮುಖರು ನಾಮಪತ್ರ ಸಲ್ಲಿಕೆ ವೇಳೆ ಭಾಗಿಯಾಗಿದ್ದರು.
ಒಟ್ಟು ನಾಲ್ಕು ಸೆಟ್ಗಳ ನಾಮಪತ್ರವನ್ನ ಬಿಜೆಪಿ ಸಿದ್ದಪಡಿಸಿತ್ತು. ನಾಮಪತ್ರದಲ್ಲಿ ಪ್ರಧಾನಿ ನರೇಂದ್ರ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಸಾಕ್ಷಿಗಳಾಗಿ ಸಹಿ ಹಾಕಿದ್ದಾರೆ.
ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರೊಗಳಾದ ಬಸವರಾಜ್ ಬೊಮ್ಮಾಯಿ, ಯೋಗಿ ಆದಿತ್ಯನಾಥ್, ಭೂಪೇಂದರ್ ಪಟೇಲ್, ಬಿಜು ಜನತಾದಳದ ಸಂಸಿತ್ ಪಾತ್ರಾ, ವೈಎಸ್ಆರ್ ಕಾಂಗ್ರೆಸ್ಸಿನ ವಿಜಯ್ ಸಾಯಿ ರೆಡ್ಡಿ ಉಪಸ್ಥಿತರಿದ್ದರು.