ಟೀಮ್ ಇಂಡಿಯಾ(Team India)ದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್(Ravichandran Ashwin) ಕೌಂಟುಬಿಕ ತುರ್ತು ಕಾರಣದಿಂದಾಗಿ 3ನೇ ಟೆಸ್ಟ್(Test) ಪಂದ್ಯದಿಂದ ಹೊರಗುಳಿದಿದ್ದಾರೆ.
ರಾಜ್ಕೋಟ್(Rajkot) ನಲ್ಲಿ ಇಂಗ್ಲೆಂಡ್(England) ವಿರುದ್ಧ ನೆಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ 2ನೇ ದಿನವಾದ ಶುಕ್ರವಾರ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ರವಿಚಂದ್ರನ್ ಅಶ್ವಿನ್, ಎದುರಾಳಿ ತಂಡದ ಆರಂಭಿಕ ಬ್ಯಾಟರ್ ಝಾಕ್ ಕ್ರಾಲಿ ಅವರ ವಿಕೆಟ್ ಪಡೆದು ತಂಡಕ್ಕೆ ನೆರವಾಗುವ ಜೊತೆಗೆ ತಮ್ಮ ಟೆಸ್ಟ್ ಕ್ರಿಕೆಟ್ ಜೀವನದಲ್ಲಿ 500 ವಿಕೆಟ್ಗಳನ್ನು ಪಡೆದು ಮಹತ್ವದ ಸಾಧನೆ ಮಾಡಿದ್ದರು. ಅಲ್ಲದೇ ಈ ಸಾಧನೆ ಮಾಡಿದ ವಿಶ್ವದ 9ನೇ ಹಾಗೂ ಭಾರತದ 2ನೇ ಆಟಗಾರರ ಎಂಬ ಹೆಗ್ಗಳಿಕೆಗೂ ಅಶ್ವಿನ್ ಭಾಜನರಾಗಿದ್ದರು. ಆದರೆ ಇದೇ ಸಂಭ್ರಮದಲ್ಲಿದ್ದ ಆರ್. ಅಶ್ವಿನ್ ಕೌಟುಂಬಿಕ ತುರ್ತು ಕಾರಣದಿಂದಾಗಿ ಪಂದ್ಯದಿಂದ ಹೊರ ನಡೆದಿರುವುದು ಟೀಮ್ ಇಂಡಿಯಾಕ್ಕೆ ದೊಡ್ಡ ಹಿನ್ನಡೆಯನ್ನುಂಟು ಮಾಡಿದೆ.
![](https://pratidhvani.com/wp-content/uploads/2024/02/ಆಶ್ವಿನ್-2-1024x575.png)
ಇನ್ನೂ ಮೂರನೇ ಟೆಸ್ಟ್ ಪಂದ್ಯದಿಂದ ರವಿಚಂದ್ರನ್ ಅಶ್ವಿನ್ ಹೊರ ನಡೆದಿರುವ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಬಿಸಿಸಿಐ(BCCI), “ಕೌಟುಂಬಿಕ ತುರ್ತು ಪರಿಸ್ಥಿತಿಯ ಕಾರಣದಿಂದ ಅಶ್ವಿನ್ 3ನೇ ಟೆಸ್ಟ್ ಪಂದ್ಯದಿಂದ ಹೊರ ನಡೆದಿದ್ದು, ಈ ಸಮಯದಲ್ಲಿ ಬಿಸಿಸಿಐ ಹಾಗೂ ತಂಡ ಅವರಿಗೆ ಸಂಪೂರ್ಣ ಬೆಂಬಲ ನೀಡಲಿದೆ” ಎಂದು ತಿಳಿಸಿದೆ.
ಟೆಸ್ಟ್ ಕ್ರಿಕೆಟ್ ನಲ್ಲಿ 500 ವಿಕೆಟ್ಗಳ ಸಾಧನೆ ಮಾಡಿದ ರವಿಚಂದ್ರನ್ ಅಶ್ವಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಸೇರಿದಂತೆ ಭಾರತೀಯ ಕ್ರಿಕೆಟ್ ನ ಹಲವು ದಿಗ್ಗಜ ಆಟಗಾರರು ಹಾಗೂ ಕೋಟ್ಯಾಂತರ ಅಭಿಮಾನಿಗಳು ಅಭಿನಂದನೆಯನ್ನು ಸಲ್ಲಿಸಿದ್ದರು. ಆದರೆ ಇದೀಗ ಏಕಾಏಕಿ ಅಶ್ವಿನ್ ಅವರು ಮೂರನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿರುವುದು ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರೀ ಬೇಸರವನ್ನುಂಟು ಮಾಡಿದ್ದು, ನಿಮ್ಮ ಕುಟುಂಬದವರ ಬಗ್ಗೆ ಕೇರ್ ಮಾಡಿ, ಎಲ್ಲವೂ ಶುಭವಾಗಲಿ, ನಿಮ್ಮ ಕುಟುಂಬದಲ್ಲಿ ಎಲ್ಲವೂ ಸೌಖ್ಯ ಎಂದು ಭಾವಿಸುವುದಾಗಿ ಕ್ರಿಕೆಟ್ ಪ್ರೇಮಿಗಳು ಕಾಮೆಂಟ್ ಮಾಡುತ್ತಿದ್ದಾರೆ.
#RavichandranAshwin #TeamIndia #BCCI #TestMatch #England