ರಾಜ್ಯದಲ್ಲಿ ಲೋಕಸಭಾ ಚುನಾವಣೆ ಹತ್ತಿರದ ಬರುತ್ತಿದ್ದಂತೆ ದೊಡ್ಡ ದೊಡ್ಡ ರಾಜಕೀಯ ಬೆಳವಣಿಗೆಯಾಗುತ್ತಿದ್ದೆ. ಇದಕ್ಕೆ ಪೂರಕವಾಗಿರುವಂತೆ ಈಗ ಸಂಸದ ಸದಾನಂದ ಗೌಡ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಡಿವಿ ಸದಾನಂದ ಗೌಡರಿಗೆ ಬಿಜೆಪಿ ಅವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಇತ್ತೀಚೆಗೆ ವದಂತಿಗಳು ಹಬ್ಬಿದ್ದವು. ಆ ವಿಚಾರವಾಗಿ ಅಸಮಾಧಾನಗೊಂಡಿದ್ದ ಅವರು, ಪಕ್ಷದ ವರಿಷ್ಠರು ನಿಲುವು ತಿಳಿಸಬೇಕು ಎಂದು ಆಗ್ರಹಿಸಿದ್ದರು. ಈಗ ಅವರು ಹಾಸನದಲ್ಲಿ ರಾಜಕೀಯ ನಿವೃತ್ತಿಯಾಗುವುದಾಗಿ ಹೇಳಿದ್ದಾರೆ.
ಈ ಕುರಿತು ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ನನಗೆ 30 ವರ್ಷ ಎಲ್ಲವನ್ನೂ ಕೊಟ್ಟಿದೆ. ಬಿಎಸ್ ಯಡಿಯೂರಪ್ಪ ಬಿಟ್ಟರೆ ಇಷ್ಟು ಲಾಭ ಆಗಿರೋದು ನಾನೇ. ಸಿಎಂ, ಸಂಸದ, ಮೋದಿ ಜೊತೆ ಕ್ಯಾಬಿನೇಟ್ ಮಂತ್ರಿ, ಸಚಿವ ಸ್ಥಾನ, ವಿರೋಧಿ ಪಕ್ಷದ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷ ಎಲ್ಲವೂ ನನಗೆ ಸಿಕ್ಕಿದೆ. ಆದ್ದರಿಂದ ಚುನಾವಣಾ ರಾಜಕೀಯದಲ್ಲಿ ಮುಂದುವರೆಯಬಾರದು ಅಂತ ತೀರ್ಮಾನ ಎಂದು ಹೇಳಿದ್ದಾರೆ.

ಇಷ್ಟೇಲ್ಲಾ ಸ್ಥಾನಗಳನ್ನು ಪಕ್ಷದಿಂದ ನಾನು ಪಡೆದುಕೊಂಡಿದ್ದೇನೆ. ಇದಕ್ಕೂ ಮೀರಿ ನಾನು ಹೆಚ್ಚು ಆಸೆಪಟ್ಟರೆ, ಜನ ನನ್ನನ್ನು ಸ್ವಾರ್ಥಿ ಎಂದು ಕರೆಯುತ್ತಾರೆ ಎಂದು ಸದಾನಂದ ಗೌಡರು ಹೇಳಿದ್ದಾರೆ.





