• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜಿಲ್ಲಾ ಕನ್ನಡ ಭವನಕ್ಕೆ ಅನುದಾನ ಕೊಡದ ಚುನಾಯಿತ ಪ್ರತಿನಿಧಿಗಳು

ಪ್ರತಿಧ್ವನಿ by ಪ್ರತಿಧ್ವನಿ
March 15, 2023
in Top Story, ಇದೀಗ, ಕರ್ನಾಟಕ
0
ಜಿಲ್ಲಾ ಕನ್ನಡ ಭವನಕ್ಕೆ ಅನುದಾನ ಕೊಡದ ಚುನಾಯಿತ ಪ್ರತಿನಿಧಿಗಳು
Share on WhatsAppShare on FacebookShare on Telegram

ADVERTISEMENT

ಬೀದರ್: ಮಾ.15: ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ಕನ್ನಡ ಭವನ ಇರದ ಏಕೈಕ ಜಿಲ್ಲೆ ಬೀದರ್‌. ಜಾತಿ ಭವನಗಳಿಗೆ ಉದಾರವಾಗಿ ಕೊಡುವಷ್ಟು ಅನುದಾನ ಕನ್ನಡ ಭವನಕ್ಕೆ ಕೊಡುತ್ತಿಲ್ಲ. ಸರ್ಕಾರ ಹಾಗೂ ಚುನಾಯಿತ ಪ್ರತಿನಿಧಿಗಳು ನಿರಾಸಕ್ತಿ ವಹಿಸಿರುವ ಕಾರಣ ಕಟ್ಟಡ ಕಾಮಗಾರಿ ನನೆಗುದಿಗೆ ಬಿದ್ದಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ತಿಳಿಸಿದರು.

ಪರಿಷತ್ತಿನ ನಿಯೋಗ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲಕುಮಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರಿಗೆ ಲಿಖಿತ ಮನವಿ ಕೊಟ್ಟಿದೆ. ಆದರೆ, ಪ್ರಯೋಜನವಾಗಿಲ್ಲ ಎಂದು ನಗರದಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಅಸಮಾಧಾನ ಹೊರ ಹಾಕಿದರು.

ಚುನಾಯಿತ ಪ್ರತಿನಿಧಿಗಳು ಪತ್ರ ವ್ಯವಹಾರಗಳಲ್ಲೇ ಕಾಲಹರಣ ಮಾಡುತ್ತಿದ್ದಾರೆ. ಗಡಿ ಅಭಿವೃದ್ಧಿ ಪ್ರಾಧಿಕಾರದ ಮೂಲಕ ₹ 1 ಕೋಟಿ ಬಿಡುಗಡೆ ಮಾಡಲಾಗುವುದು ಎಂದು ಮತ್ತೆ ಭರವಸೆ ಕೊಡಲಾಗಿದೆ. ಇಷ್ಟು ದಿನ ಕಾದಿದ್ದೇವೆ. ಇನ್ನೊಂದು ವಾರ ಕಾಯುತ್ತೇವೆ. ನಂತರ ಬೀದಿಗಿಳಿದು ಭಿಕ್ಷೆ ಬೇಡಿ ಕನ್ನಡ ಭವನಕ್ಕೆ ಹಣ ಸಂಗ್ರಹಿಸುತ್ತೇವೆ’ ಎಂದು ತಿಳಿಸಿದರು.

ರಾಜಕಾರಣಿಗಳು ಕೊಟ್ಟಿಲ್ಲ ಹಣ

ಜಿಲ್ಲೆಯ ಔರಾದ್‌ ಹಾಗೂ ಭಾಲ್ಕಿಯಲ್ಲಿ ತಾಲ್ಲೂಕು ಕನ್ನಡ ಭವನಗಳ ಒಂದು ಹಂತದ ಕಟ್ಟಡ ಕಾಮಗಾರಿ ಪೂರ್ಣಗೊಂಡಿವೆ. ಹುಮನಾಬಾದ್‌ನಲ್ಲಿ ಶಾಸಕರು ಕನ್ನಡ ಭವನಕ್ಕೆ ನಿವೇಶನ ಒದಗಿಸಿದ್ದಾರೆ. ತಾಲ್ಲೂಕು ಕನ್ನಡ ಭವನಕ್ಕೆ ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರು ನೆರವು ನೀಡುವ ಭರವಸೆ ಕೊಟ್ಟಿದ್ದಾರೆ.

ಬೀದರ್‌ ಶಾಸಕ ರಹೀಂ ಖಾನ್ ₹ 25 ಲಕ್ಷ, ಕೇಂದ್ರ ಸಚಿವ ಭಗವಂತ ಖೂಬಾ ₹ 10 ಲಕ್ಷ, ರಘುನಾಥರಾವ್ ಮಲ್ಕಾಪುರೆ ₹ 10 ಲಕ್ಷ ಕೊಡುವ ಭರವಸೆ ನೀಡಿದ್ದರು. ಉಳಿದ ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರು ಸಹ ಕೇವಲ ಭರವಸೆ ಕೊಟ್ಟಿದ್ದಾರೆ. ಅನುದಾನ ಕೊಟ್ಟಿಲ್ಲ ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾ ಕನ್ನಡ ಭವನ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನ ಕೋರಿ ಅನೇಕ ವರ್ಷಗಳಿಂದ ಹೋರಾಟ ನಡೆಸಿರುವುದನ್ನು ಗಂಭೀರವಾಗಿ ಪರಿಗಣಿಸಿ ಕಲ್ಯಾಣ ಕರ್ನಾಟಕ ಸಾಂಸ್ಕೃತಿಕ ಸಂಘ ₹ 25 ಲಕ್ಷ ಬಿಡುಗಡೆ ಮಾಡಿದೆ. ಈ ಅನುದಾನದಲ್ಲಿ ಕಟ್ಟಡದ ಮೇಲೆ ಸಭಾಭವನ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ನುಡಿದಂತೆ ನಡೆದ ಹಾರಕೂಡ ಶ್ರೀಗಳು

ಹಾರಕೂಡದ ಚೆನ್ನವೀರ ಶಿವಾಚಾರ್ಯರು ಮಾತ್ರ ಕನ್ನಡ ಭವನಕ್ಕೆ ₹ 1ಲಕ್ಷ ದೇಣಿಗೆ ಕೊಟ್ಟು ನುಡಿದಂತೆ ನಡೆದುಕೊಂಡಿದ್ದಾರೆ. ಕನ್ನಡದ ಬಗ್ಗೆ ಕಾಳಜಿ ತೋರಿಸಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ತಿಳಿಸಿದರು.

ಜಿಲ್ಲಾ ರಂಗ ಮಂದಿರದಲ್ಲಿ ಆಯೋಜಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲೇ ಚೆನ್ನವೀರ ಶಿವಾಚಾರ್ಯರು ₹ 1 ಲಕ್ಷ ಕೊಡುವುದಾಗಿ ಘೋಷಣೆ ಮಾಡಿದ್ದರು. ಅದರಂತೆ ಕನ್ನಡ ಸಾಹಿತ್ಯ ಪರಿಷತ್ತಿಗೆ ಹಣವನ್ನೂ ಸಂದಾಯ ಮಾಡಿದ್ದಾರೆ ಎಂದು ಹೇಳಿದರು.

ಭಾಲ್ಕಿಯ ಹಿರೇಮಠದ ಬಸವಲಿಂಗ ಪಟ್ಟದ್ದೇವರು ಕಟ್ಟಡಕ್ಕೆ ಆರ್ಥಿಕ ನೆರವು ನೀಡುವ ಭರವಸೆ ನೀಡಿದ್ದಾರೆ. ಆದರೆ, ಈವರೆಗೆ ಹಣ ಕೊಟ್ಟಿಲ್ಲ. ಹಾರಕೂಡ ಶ್ರೀಗಳು ಹೊರತು ಪಡಿಸಿ ಉಳಿದ ಯಾವುದೇ ಮಠದವರು ಕನ್ನಡ ಭವನ ನಿರ್ಮಾಣಕ್ಕೆ ದೇಣಿಗೆ ನೀಡಿಲ್ಲ ಎಂದು ಎಂದು ಸ್ಪಷ್ಟಪಡಿಸಿದರು.

ಸಾಹಿತಿಯೊಬ್ಬರು ಕಿಡ್ನಿ ಮಾರಾಟ ಮಾಡಿ ಹಣ ಹೊಂದಿಸುವುದಾಗಿ ಸಮಾರಂಭದಲ್ಲೇ ಘೋಷಣೆ ಮಾಡಿದ್ದರು. ಇವರೆಲ್ಲ ಪುಕ್ಕಟ್ಟೆ ಪ್ರಚಾರ ಪಡೆದುಕೊಂಡರು ಹೊರತು ಕನ್ನಡ ಭವನ ನಿರ್ಮಾಣಕ್ಕೆ ನೆರವಾಗಲಿಲ್ಲ ಎಂದು ಬೇಸರ ತೋಡಿಕೊಂಡರು.

ಈಗಾಗಲೇ ಕಟ್ಟಡದ ಶೇಕಡ 80ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಕಟ್ಟಡದ ಒಳಗೆ ಟೈಲ್ಸ್‌ ಅಳವಡಿಸುವ ಹಾಗೂ ಬಣ್ಣ ಬಳಿಯುವ ಕಾಮಗಾರಿ ಬಾಕಿ ಇದೆ. ಕಟ್ಟಡ ಆವರಣದಲ್ಲಿ ಇನ್ನಷ್ಟು ಕಾಮಗಾರಿ ನಡೆಯಬೇಕಿದೆ ಎಂದರು. ಶಿವಕುಮಾರ ಕಟ್ಟೆ, ಶಿವಶಂಕರ ಟೋಕರೆ, ಎಂ.ಎಸ್‌.ಮನೋಹರ, ರೇವಣಸಿದ್ದಪ್ಪ ಜಲಾದೆ, ಬಾಬು ದಾನಿ, ರೂಪಾ ಪಾಟೀಲ, ಕಸ್ತೂರಿ ಪಟಪಳ್ಳಿ ಇದ್ದರು.

Tags: BidarbidarmlaBJPCongress Partykannadabhvanಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

70 ಕೆ.ಜಿ. ಗಾಂಜಾ ವಶ : ಮೂವರ ಬಂಧನ

Next Post

ದಿವಂಗತ ಧ್ರುವನಾರಾಯಣ್ ಅವರ ಪುತ್ರನಿಗಾಗಿ ಹೆಚ್.ಸಿ.ಮಹದೇವಪ್ಪ ಕ್ಷೇತ್ರ ತ್ಯಾಗ..!

Related Posts

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
0

ಸೋಷಿಯಲ್‌ ಮೀಡಿಯಾದಲ್ಲಿ ಆಕ್ಟೀವ್‌ ಆಗಿರುವ ನಟಿಯರಲ್ಲಿ ಖುಷಿ ಮುಖರ್ಜಿ (Khushi Mukherjee) ಕೂಡ ಒಬ್ಬರು. ಸದಾ ತುಂಡುಡುಗೆ ತೊಟ್ಟು ಸದ್ದು ಮಾಡುತ್ತಿರುವ ಬೆಡಗಿ ಎಂದೇ ಹೇಳಬಹುದು. ಇದೀಗ...

Read moreDetails

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
Next Post
ದಿವಂಗತ ಧ್ರುವನಾರಾಯಣ್ ಅವರ ಪುತ್ರನಿಗಾಗಿ ಹೆಚ್.ಸಿ.ಮಹದೇವಪ್ಪ ಕ್ಷೇತ್ರ ತ್ಯಾಗ..!

ದಿವಂಗತ ಧ್ರುವನಾರಾಯಣ್ ಅವರ ಪುತ್ರನಿಗಾಗಿ ಹೆಚ್.ಸಿ.ಮಹದೇವಪ್ಪ ಕ್ಷೇತ್ರ ತ್ಯಾಗ..!

Please login to join discussion

Recent News

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada