• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಿಲ್ಲಾ ಕನ್ನಡ ಭವನಕ್ಕೆ ಅನುದಾನ ಕೊಡದ ಚುನಾಯಿತ ಪ್ರತಿನಿಧಿಗಳು

ಪ್ರತಿಧ್ವನಿ by ಪ್ರತಿಧ್ವನಿ
March 15, 2023
in Top Story, ಇದೀಗ, ಕರ್ನಾಟಕ
0
ಜಿಲ್ಲಾ ಕನ್ನಡ ಭವನಕ್ಕೆ ಅನುದಾನ ಕೊಡದ ಚುನಾಯಿತ ಪ್ರತಿನಿಧಿಗಳು
Share on WhatsAppShare on FacebookShare on Telegram

ADVERTISEMENT

ಬೀದರ್: ಮಾ.15: ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ಕನ್ನಡ ಭವನ ಇರದ ಏಕೈಕ ಜಿಲ್ಲೆ ಬೀದರ್‌. ಜಾತಿ ಭವನಗಳಿಗೆ ಉದಾರವಾಗಿ ಕೊಡುವಷ್ಟು ಅನುದಾನ ಕನ್ನಡ ಭವನಕ್ಕೆ ಕೊಡುತ್ತಿಲ್ಲ. ಸರ್ಕಾರ ಹಾಗೂ ಚುನಾಯಿತ ಪ್ರತಿನಿಧಿಗಳು ನಿರಾಸಕ್ತಿ ವಹಿಸಿರುವ ಕಾರಣ ಕಟ್ಟಡ ಕಾಮಗಾರಿ ನನೆಗುದಿಗೆ ಬಿದ್ದಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ತಿಳಿಸಿದರು.

ಪರಿಷತ್ತಿನ ನಿಯೋಗ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲಕುಮಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರಿಗೆ ಲಿಖಿತ ಮನವಿ ಕೊಟ್ಟಿದೆ. ಆದರೆ, ಪ್ರಯೋಜನವಾಗಿಲ್ಲ ಎಂದು ನಗರದಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಅಸಮಾಧಾನ ಹೊರ ಹಾಕಿದರು.

ಚುನಾಯಿತ ಪ್ರತಿನಿಧಿಗಳು ಪತ್ರ ವ್ಯವಹಾರಗಳಲ್ಲೇ ಕಾಲಹರಣ ಮಾಡುತ್ತಿದ್ದಾರೆ. ಗಡಿ ಅಭಿವೃದ್ಧಿ ಪ್ರಾಧಿಕಾರದ ಮೂಲಕ ₹ 1 ಕೋಟಿ ಬಿಡುಗಡೆ ಮಾಡಲಾಗುವುದು ಎಂದು ಮತ್ತೆ ಭರವಸೆ ಕೊಡಲಾಗಿದೆ. ಇಷ್ಟು ದಿನ ಕಾದಿದ್ದೇವೆ. ಇನ್ನೊಂದು ವಾರ ಕಾಯುತ್ತೇವೆ. ನಂತರ ಬೀದಿಗಿಳಿದು ಭಿಕ್ಷೆ ಬೇಡಿ ಕನ್ನಡ ಭವನಕ್ಕೆ ಹಣ ಸಂಗ್ರಹಿಸುತ್ತೇವೆ’ ಎಂದು ತಿಳಿಸಿದರು.

ರಾಜಕಾರಣಿಗಳು ಕೊಟ್ಟಿಲ್ಲ ಹಣ

ಜಿಲ್ಲೆಯ ಔರಾದ್‌ ಹಾಗೂ ಭಾಲ್ಕಿಯಲ್ಲಿ ತಾಲ್ಲೂಕು ಕನ್ನಡ ಭವನಗಳ ಒಂದು ಹಂತದ ಕಟ್ಟಡ ಕಾಮಗಾರಿ ಪೂರ್ಣಗೊಂಡಿವೆ. ಹುಮನಾಬಾದ್‌ನಲ್ಲಿ ಶಾಸಕರು ಕನ್ನಡ ಭವನಕ್ಕೆ ನಿವೇಶನ ಒದಗಿಸಿದ್ದಾರೆ. ತಾಲ್ಲೂಕು ಕನ್ನಡ ಭವನಕ್ಕೆ ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರು ನೆರವು ನೀಡುವ ಭರವಸೆ ಕೊಟ್ಟಿದ್ದಾರೆ.

ಬೀದರ್‌ ಶಾಸಕ ರಹೀಂ ಖಾನ್ ₹ 25 ಲಕ್ಷ, ಕೇಂದ್ರ ಸಚಿವ ಭಗವಂತ ಖೂಬಾ ₹ 10 ಲಕ್ಷ, ರಘುನಾಥರಾವ್ ಮಲ್ಕಾಪುರೆ ₹ 10 ಲಕ್ಷ ಕೊಡುವ ಭರವಸೆ ನೀಡಿದ್ದರು. ಉಳಿದ ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರು ಸಹ ಕೇವಲ ಭರವಸೆ ಕೊಟ್ಟಿದ್ದಾರೆ. ಅನುದಾನ ಕೊಟ್ಟಿಲ್ಲ ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾ ಕನ್ನಡ ಭವನ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನ ಕೋರಿ ಅನೇಕ ವರ್ಷಗಳಿಂದ ಹೋರಾಟ ನಡೆಸಿರುವುದನ್ನು ಗಂಭೀರವಾಗಿ ಪರಿಗಣಿಸಿ ಕಲ್ಯಾಣ ಕರ್ನಾಟಕ ಸಾಂಸ್ಕೃತಿಕ ಸಂಘ ₹ 25 ಲಕ್ಷ ಬಿಡುಗಡೆ ಮಾಡಿದೆ. ಈ ಅನುದಾನದಲ್ಲಿ ಕಟ್ಟಡದ ಮೇಲೆ ಸಭಾಭವನ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ನುಡಿದಂತೆ ನಡೆದ ಹಾರಕೂಡ ಶ್ರೀಗಳು

ಹಾರಕೂಡದ ಚೆನ್ನವೀರ ಶಿವಾಚಾರ್ಯರು ಮಾತ್ರ ಕನ್ನಡ ಭವನಕ್ಕೆ ₹ 1ಲಕ್ಷ ದೇಣಿಗೆ ಕೊಟ್ಟು ನುಡಿದಂತೆ ನಡೆದುಕೊಂಡಿದ್ದಾರೆ. ಕನ್ನಡದ ಬಗ್ಗೆ ಕಾಳಜಿ ತೋರಿಸಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ತಿಳಿಸಿದರು.

ಜಿಲ್ಲಾ ರಂಗ ಮಂದಿರದಲ್ಲಿ ಆಯೋಜಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲೇ ಚೆನ್ನವೀರ ಶಿವಾಚಾರ್ಯರು ₹ 1 ಲಕ್ಷ ಕೊಡುವುದಾಗಿ ಘೋಷಣೆ ಮಾಡಿದ್ದರು. ಅದರಂತೆ ಕನ್ನಡ ಸಾಹಿತ್ಯ ಪರಿಷತ್ತಿಗೆ ಹಣವನ್ನೂ ಸಂದಾಯ ಮಾಡಿದ್ದಾರೆ ಎಂದು ಹೇಳಿದರು.

ಭಾಲ್ಕಿಯ ಹಿರೇಮಠದ ಬಸವಲಿಂಗ ಪಟ್ಟದ್ದೇವರು ಕಟ್ಟಡಕ್ಕೆ ಆರ್ಥಿಕ ನೆರವು ನೀಡುವ ಭರವಸೆ ನೀಡಿದ್ದಾರೆ. ಆದರೆ, ಈವರೆಗೆ ಹಣ ಕೊಟ್ಟಿಲ್ಲ. ಹಾರಕೂಡ ಶ್ರೀಗಳು ಹೊರತು ಪಡಿಸಿ ಉಳಿದ ಯಾವುದೇ ಮಠದವರು ಕನ್ನಡ ಭವನ ನಿರ್ಮಾಣಕ್ಕೆ ದೇಣಿಗೆ ನೀಡಿಲ್ಲ ಎಂದು ಎಂದು ಸ್ಪಷ್ಟಪಡಿಸಿದರು.

ಸಾಹಿತಿಯೊಬ್ಬರು ಕಿಡ್ನಿ ಮಾರಾಟ ಮಾಡಿ ಹಣ ಹೊಂದಿಸುವುದಾಗಿ ಸಮಾರಂಭದಲ್ಲೇ ಘೋಷಣೆ ಮಾಡಿದ್ದರು. ಇವರೆಲ್ಲ ಪುಕ್ಕಟ್ಟೆ ಪ್ರಚಾರ ಪಡೆದುಕೊಂಡರು ಹೊರತು ಕನ್ನಡ ಭವನ ನಿರ್ಮಾಣಕ್ಕೆ ನೆರವಾಗಲಿಲ್ಲ ಎಂದು ಬೇಸರ ತೋಡಿಕೊಂಡರು.

ಈಗಾಗಲೇ ಕಟ್ಟಡದ ಶೇಕಡ 80ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಕಟ್ಟಡದ ಒಳಗೆ ಟೈಲ್ಸ್‌ ಅಳವಡಿಸುವ ಹಾಗೂ ಬಣ್ಣ ಬಳಿಯುವ ಕಾಮಗಾರಿ ಬಾಕಿ ಇದೆ. ಕಟ್ಟಡ ಆವರಣದಲ್ಲಿ ಇನ್ನಷ್ಟು ಕಾಮಗಾರಿ ನಡೆಯಬೇಕಿದೆ ಎಂದರು. ಶಿವಕುಮಾರ ಕಟ್ಟೆ, ಶಿವಶಂಕರ ಟೋಕರೆ, ಎಂ.ಎಸ್‌.ಮನೋಹರ, ರೇವಣಸಿದ್ದಪ್ಪ ಜಲಾದೆ, ಬಾಬು ದಾನಿ, ರೂಪಾ ಪಾಟೀಲ, ಕಸ್ತೂರಿ ಪಟಪಳ್ಳಿ ಇದ್ದರು.

Tags: BidarbidarmlaBJPCongress Partykannadabhvanಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

70 ಕೆ.ಜಿ. ಗಾಂಜಾ ವಶ : ಮೂವರ ಬಂಧನ

Next Post

ದಿವಂಗತ ಧ್ರುವನಾರಾಯಣ್ ಅವರ ಪುತ್ರನಿಗಾಗಿ ಹೆಚ್.ಸಿ.ಮಹದೇವಪ್ಪ ಕ್ಷೇತ್ರ ತ್ಯಾಗ..!

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
Next Post
ದಿವಂಗತ ಧ್ರುವನಾರಾಯಣ್ ಅವರ ಪುತ್ರನಿಗಾಗಿ ಹೆಚ್.ಸಿ.ಮಹದೇವಪ್ಪ ಕ್ಷೇತ್ರ ತ್ಯಾಗ..!

ದಿವಂಗತ ಧ್ರುವನಾರಾಯಣ್ ಅವರ ಪುತ್ರನಿಗಾಗಿ ಹೆಚ್.ಸಿ.ಮಹದೇವಪ್ಪ ಕ್ಷೇತ್ರ ತ್ಯಾಗ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada