ರಾಜ್ಯದಲ್ಲಿ ಲೋಕಸಭೆ ಚುನಾವಣಾ ಕಾವು ರಂಗೇರಿದೆ. ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊದಲ ಬಾರಿಗೆ ರಾಜ್ಯದಲ್ಲಿ ಪ್ರಚಾರ ಮಾಡಲು ಆಗಮಿಸಿದ್ದಾರೆ. ಸಕ್ಕರೆ ನಾಡು ಮಂಡ್ಯದಿಂದ ಪ್ರಚಾರ ಆರಂಭ ಮಾಡಿರುವ ರಾಹುಲ್, ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಪರ ಅಬ್ಬರದ ಪ್ರಚಾರ ಮಾಡಿದ್ದಾರೆ.
ಮಂಡ್ಯದ ವಿವಿ ಆವರಣದಲ್ಲಿ ನಡೆದ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ರಾಜ್ಯ ನಾಯಕರು ಅಬ್ಬರದ ಪ್ರಚಾರ ನಡೆಸಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗಾಗಿ 5 ಗ್ಯಾರಂಟಿಗಳನ್ನ ಕೊಟ್ಟಿದೆ. ನಾವು ಪ್ರಮಾಣ ವಚನ ಸ್ವೀಕಾರ ಮಾಡಿದ ಕೂಡಲೇ ಕ್ಯಾಬಿನೆಟ್ ಸಭೆ ನಡೆಸಿ ಗ್ಯಾರಂಟಿ ಘೋಷಣೆ ಮಾಡಿದ್ದೇವೆ. ಆದ್ರೆ ನರೇಂದ್ರ ಮೋದಿ ಕಲೆದ 10 ವರ್ಷದಿಂದ ಏನು ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ರು..
ಸಮಾವೇಶದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಜಾಪ್ರಭುತ್ವ ಉಳಿಸೋ ಕೆಲಸ ಮಾಡಬೇಕಿದೆ. ನಾವು ಬಡವರು, ರೈತರ ಏಳಿಗೆಗಾಗಿ ಸರ್ಕಾರ ಮಾಡುತ್ತೇವೆ. ಆದ್ರೆ ಬಿಜೆಪಿ ಮಾತ್ರ ಪ್ರಜಾಪ್ರಭುತ್ವ ನಾಶ ಮಾಡುವ ಕೆಲಸ ಮಾಡ್ತಿದೆ. 25 ರಿಂದ 50 ಜನ ಉದ್ಯಮಿಗಳಿಗಾಗಿ ಬಿಜೆಪಿ ಸರ್ಕಾರ ನಡೆಸ್ತಿದೆ. ಚುನಾವಣಾ ಬಾಂಡ್ ಅನ್ನೋದು ಅತಿ ದೊಡ್ಡ ಹಗರಣ ಆಗಿದ್ದು, ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಬಾಂಡ್ ಬಗ್ಗೆ ಸಂದರ್ಶನ ನೀಡುವಾಗ ಕೈ ನಡುಗುತ್ತಿತ್ತು ಎಂದಿದ್ದಾರೆ.
ಜೆಡಿಎಸ್ – ಬಿಜೆಪಿ ಎ ಟೀಂ ಬಿ ಟೀಂ ಅಲ್ಲ, ಎರಡೂ ಸೇರ್ಕೊಂಡು ಎ ಟೀಂ ಆಗಿವೆ. ಮಂಡ್ಯದಿಂದ ಎ ಟೀಂ ಓಡಿಸುವ ಕೆಲಸ ಮಾಡಬೇಕಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅಬ್ಬರಿಸಿದ್ದಾರೆ. ಇನ್ನು ಕೇವಲ ಮಂಡ್ಯದಿಂದ ಮಾತ್ರ ಅಲ್ಲ, ಇಡೀ ರಾಜ್ಯದಿಂದಲೇ ಜೆಡಿಎಸ್ ಓಡಿಸುವ ಕೆಲಸ ಮಾಡಬೇಕಿದೆ. ಅದೇ ಕಾರಣದಿಂದ ರಾಹುಲ್ ಗಾಂಧಿ ಮಂಡ್ಯದಿಂದ ಪ್ರಚಾರ ಮಾಡಲು ಬಂದಿದ್ದಾರೆ. ಮಂಡ್ಯ ಗೆದ್ದರೆ ಇಂಡಿಯಾ ಗೆದ್ದಂತೆ ಎನ್ನುವ ವಿಶ್ವಾಸವಿದೆ ಎಂದು