• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ರಾಜ್ಯದಲ್ಲಿ ಬಸವಳಿದ ಬಿಜೆಪಿಗೆ ಬೂಸ್ಟ್​ ನೀಡಲು ಅಮಿತ್​ ಷಾ ಸೂತ್ರ..!

ಕೃಷ್ಣ ಮಣಿ by ಕೃಷ್ಣ ಮಣಿ
April 21, 2023
in ಅಂಕಣ
0
ರಾಜ್ಯದಲ್ಲಿ ಬಸವಳಿದ ಬಿಜೆಪಿಗೆ ಬೂಸ್ಟ್​ ನೀಡಲು ಅಮಿತ್​ ಷಾ ಸೂತ್ರ..!
Share on WhatsAppShare on FacebookShare on Telegram

ನಾಮಪತ್ರ ಸಲ್ಲಿಕೆ ಹಾಗು ನಾಮಪತ್ರ ಪರಿಶೀಲನೆ ಕಾರ್ಯ ಮುಕ್ತಾಯವಾಗಿದೆ. ಇನ್ಮುಂದೆ ಎಲ್ಲಾ ರಾಜಕೀಯ ಪಕ್ಷಗಳು ಪ್ರಚಾರದ ಅಂಗಳಕ್ಕೆ ಧುಮುಕುತ್ತಿದ್ದು, ಬಿಜೆಪಿ ರಾಷ್ಟ್ರೀಯ ನಾಯಕರು ಈಗಾಗಲೇ ರಾಜ್ಯಕ್ಕೆ ದಂಡಯಾತ್ರೆ ಶುರು ಮಾಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಕರ್ನಾಟಕದಲ್ಲಿ ಬೀಡು ಬಿಟ್ಟಿದ್ದು, ಮತ ಸೆಳೆಯುವ ತಂತ್ರಗಾರಿಕೆ ಶುರು ಮಾಡಿದ್ದಾರೆ. ಬೀದರ್‌ನಲ್ಲಿ ಪ್ರಬುದ್ಧರ ಜೊತೆಗೆ ಸಂವಾದ ನಡೆಸಿದ್ದಾರೆ. ಖಾಸಗಿ ಹೊಟೇಲ್‌ನಲ್ಲಿ ಕೀ ವೋಟರ್ಸ್ ಜೊತೆ ಸಭೆ ನಡೆಸಿದ್ದು, ಜಿಲ್ಲೆಯ ವ್ಯಾಪಾರಿಗಳು, ಸಮುದಾಯದ ಮುಖಂಡರು, ಕೇಂದ್ರ ಸಚಿವ ಭಗವಂತ ಖುಬಾ, ಬಿಜೆಪಿ ಉತ್ತರ ಕ್ಷೇತ್ರದ ಅಭ್ಯರ್ಥಿ ಈಶ್ವರ ಸಿಂಗ್ ಠಾಕೂರ್ ಭಾಗಿಯಾಗಿದ್ದರು. ಪ್ರಚಾರ ಹಾಗು ಎದುರಾಳಿ ಅಭ್ಯರ್ಥಿ ಮಣಿಸಲು ಬೇಕಿರುವ ತಂತ್ರಗಾರಿಕೆಗಳ ಬಗ್ಗೆ ಚರ್ಚೆ ನಡೆಸಲಾಯ್ತು.

ADVERTISEMENT

ಅಮಿತ್​ ಷಾಗೆ ಮೊದಲೇ ಎದುರಾಯ್ತು ಅಪಶಕುನ..!

ಕೇಂದ್ರ ಗೃಹ ಸಚಿವ ಅಮಿತ್ ಷಾ ಕೂಡ ರಾಜ್ಯ ಪ್ರವಾಸ ಶುರುಮಾಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ವಿಜಯಪುರದಲ್ಲಿ ರೋಡ್ ಶೋ ಹಮ್ಮಿಕೊಂಡಿದ್ದರು. ದೇವನಹಳ್ಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಲು ಯೋಜಿಸಿದ್ದರು. ಆದರೆ ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆಯಾದ ಕಾರಣ ರೋಡ್​ ಶೋ ರದ್ದು ಮಾಡಲಾಗಿದೆ. ಕಾಂಗ್ರೆಸ್ ಹಿರಿಯ ನಾಯಕ ಕೆ.ಹೆಚ್ ಮುನಿಯಪ್ಪ ಕ್ಷೇತ್ರದಲ್ಲಿ ಸಂಚಲನ ಶುರು ಮಾಡುವ ಅಮಿತ್​ ಷಾ ಯೋಜನೆಗೆ ಆರಂಭದಲ್ಲೇ ವಿಘ್ನ ಎದುರಾಗಿದೆ. ರಾಜ್ಯ ಬಿಜೆಪಿ ನಾಯಕರ ಜೊತೆಗೆ ಅಮಿತ್‌ ಷಾ ಸಭೆ ನಡೆಸಲಿದ್ದು, ಕಾಂಗ್ರೆಸ್‌, ಜೆಡಿಎಸ್‌ ಅಭ್ಯರ್ಥಿಗಳ ವಿರುದ್ಧ ಪ್ರಚಾರ ಮಾಡುವುದು ಹೇಗೆ..? ಯಾವ ಯಾವ ಅಭ್ಯರ್ಥಿಗಳನ್ನು ಹೇಗೆ ನಿಯಂತ್ರಣ ಮಾಡಬೇಕು..? ಕಾಂಗ್ರೆಸ್‌ ನಾಗಾಲೋಟಕ್ಕೆ ನಿಯಂತ್ರಣ ಹಾಕುವುದು ಹೇಗೆ..? ಎನ್ನುವ ಲೆಕ್ಕಾಚಾರವನ್ನು ಅಮಿತ್‌ ಷಾ ಸೂಚಿಸಲಿದ್ದಾರೆ. ಇಂದು ರಾತ್ರಿ ತಾಜ್ ವೆಸ್ಟೆಂಡ್ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಲಿದ್ದು, ನಾಳೆ ಬೆಳಗ್ಗೆ ಮತ್ತೆ ಸಭೆ ನಡೆಸಿದ ಬಳಿಕ ದೆಹಲಿಗೆ ವಾಪಸ್‌ ಆಗಲಿದ್ದಾರೆ.

ಬಂಡಾಯ ಶಮನಕ್ಕೆ ಅಮಿತ್‌ ಷಾ ಕೊಡ್ತಾರಾ ಮದ್ದು..!

ಬಿಜೆಪಿಯಲ್ಲಿ ಟಿಕೆಟ್‌ ಸಿಗದೆ ಸಾಕಷ್ಟು ಕ್ಷೇತ್ರಗಳಲ್ಲಿ ಬಂಡಾಯದ ಬಿರುಗಾಳಿ ಎದ್ದಿದ್ದು ಅಮಿತ್‌ ಷಾ ಮದ್ದು ಕೊಡುವ ಬಗ್ಗೆ ಭಾರೀ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಟಿಕೆಟ್ ವಂಚಿತರು ಬಂಡಾಯವಾಗಿ ಸ್ಪರ್ಧೆ ಮಾಡಿರುವುದು ಹಾಗು ಈಗಾಗಲೇ ಟಿಕೆಟ್‌ ಸಿಗದ ಕಾರಣಕ್ಕೆ ಪಕ್ಷ ತೊರೆದವರನ್ನು ಮನವೊಲಿಸಿ ಮತ್ತೆ ಪಕ್ಷಕ್ಕೆ ಸೆಳೆಯುವುದು ಹೇಗೆ..? ಅವರಿಗೆ ಏನೆಲ್ಲಾ ಭರವಸೆಯನ್ನು ಕೊಡಬೇಕು ಒಂದು ವೇಳೆ ಮನವೊಲಿಕೆಗೆ ಬಗ್ಗದಿದ್ದರೆ ಏನು ಮಾಡಬೇಕು ಅನ್ನೋ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ. ಇದರ ಜೊತೆಗೆ ಕನಕಪುರ ಹಾಗು ಮೈಸೂರಿನ ವರುಣಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ಪಡೆ ಹೇಗಿದೆ. ಕಾಂಗ್ರೆಸ್‌ನ ಡಿ.ಕೆ ಶಿವಕುಮಾರ್‌ ಹಾಗು ಸಿದ್ದರಾಮಯ್ಯ ಅವರನ್ನು ಕಟ್ಟಿ ಹಾಕಲು ಇರುವ ಮಾರ್ಗಗಳು ಏನು..? ಸಿದ್ದರಾಮಯ್ಯ ಒಬ್ಬರನ್ನು ಕಟ್ಟಿ ಹಾಕಿದರೆ ಬಿಜೆಪಿಗೆ ಆಗುವ ಲಾಭಗಳು ಏನೇನು ಎನ್ನುವ ಬಗ್ಗೆ ಅಮಿತ್‌ ಷಾ ನಾಯಕರಿಗೆ ಮನವರಿಕೆ ಮಾಡಿಕೊಡಲಿದ್ದಾರೆ ಎನ್ನಲಾಗಿದೆ.

ಸವದಿ ಹಾಗು ಶೆಟ್ಟರ್​ ವಿರುದ್ಧ ರಣತಂತ್ರಕ್ಕೆ ತಯಾರಿ..

ಈಗಾಗಲೇ BJP ಇಂದ ಬಂಡಾಯ ಎದ್ದು ಕಾಂಗ್ರೆಸ್​ ಸೇರ್ಪಡೆ ಆಗಿರುವ ಜಗದೀಶ್​ ಶೆಟ್ಟರ್​ ಹಾಗು ಲಕ್ಷ್ಮಣ ಸವದಿಯಿಂದ ಬಿಜೆಪಿಗೆ ಲಿಂಗಾಯತ ಸಮುದಾಯ ತಿರಿಗಿ ಬೀಳುವ ಸಾಧ್ಯತೆಯಿದೆ. ಇದೇ ಕಾರಣಕ್ಕೆ ಲಿಂಗಾಯತ ಸಮುದಾಯದ ಸಭೆ ಮಾಡಲಾಗಿದ್ದು, ಅಮಿತ್​ ಷಾ ಜೊತೆಗೆ ಚರ್ಚೆ ನಡೆಸಿದ ಬಳಿಕ ಡ್ಯಾಮೇಜ್ ಕಂಟ್ರೋಲ್ ಮಾಡುವ ಸಂಬಂಧ ಯೋಜನೆಗಳನ್ನು ರೂಪಿಸಲಿದ್ದಾರೆ. ಈಗಾಗಲೇ ಮಾಜಿ ಸಿಎಂ ಕುಮಾರಸ್ವಾಮಿ ಬ್ರಾಹ್ಮಣ ಸಿಎಂ ಲೆಕ್ಕಾಚಾರದ ಬಗ್ಗೆ ನೀಡಿರುವ ಹೇಳಿಕೆ ಹಾಗು ಇತ್ತೀಚಿಗೆ ಬಿಜೆಪಿಯಲ್ಲಿ ನಡೆದಿರುವ ಬೆಳವಣಿಗೆಯಿಂದ ಲಿಂಗಾಯತ ಸಮುದಾಯ ಮುನಿಸಿಕೊಂಡ ಅನುಭವ ಆಗ್ತಿದ್ದು, ಒಂದು ವೇಳೆ ಲಿಂಗಾಯತ ಶಾಸಕರೇ ಸಿಎಂ ಆಗಲಿದ್ದಾರೆ ಎನ್ನುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದರೆ ಬಿಜೆಪಿಗೆ ಲಾಭ ಆಗುತ್ತಾ..? ಲಿಂಗಾಯತರೇ ಮುಖ್ಯಮಂತ್ರಿ ಎಂದಾಗ ಲಿಂಗಾಯತ ವೀರಶೈವ ಸಮುದಾಯದ ಮೇಲೆ ಪರಿಣಾಮ ಹೇಗಿರುತ್ತೆ ಅನ್ನೋ ಬಗ್ಗೆಯೂ ಚರ್ಚೆ ಮಾಡಲಿದ್ದಾರೆ ಎನ್ನಲಾಗಿದೆ. ಒಟ್ಟಾರೆ ಲಿಂಗಾಯತರ ಶೇಕಡವಾರು ಮತಗಳು ಬಿಜೆಪಿಗೆ ಕಡಿಮೆ ಆಗುವುದನ್ನು ತಡೆಯುವ ಬಗ್ಗೆಯೂ ಮಹತ್ವದ ಚರ್ಚೆ ನಡೆಸಲಾಗುತ್ತದೆ ಎಂದಿದ್ದಾರೆ.

ಕೃಷ್ಣಮಣಿ

Tags: Aam AadmiBJPCongress PartyJDSಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ವಿನಯ್​ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ

Next Post

ರಾಜ್ಯ ರಾಜಕಾರಣಿಗಳ ಒಳ ಸಂಬಂಧ..! ಚುನಾವಣೆ ನೆಪಮಾತ್ರ..

Related Posts

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
0

ವಿಕಾಸದ ಗುರಿಯತ್ತ ಸಾಗುತ್ತಿರುವ ನವ-ಡಿಜಿಟಲ್‌ ಭಾರತ ಎಲ್ಲ ಮಗ್ಗುಲುಗಳಲ್ಲೂ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದೆ. ದೇಶದ ಪ್ರಗತಿ ಅಥವಾ ಅಭಿವೃದ್ಧಿಯ ಕಲ್ಪನೆಯನ್ನು ಆರ್ಥಿಕ ಪರಿಭಾಷೆಯಿಂದ ಹೊರತುಪಡಿಸಿ ವಿಶ್ಲೇಷಿಸುವಾಗ ಸಹಜವಾಗಿ...

Read moreDetails
ಕುಟುಂಬ ರಾಜಕಾರಣ: ಭಾರತೀಯ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ಭೀಕರ ದಾಳಿ! 

ಕುಟುಂಬ ರಾಜಕಾರಣ: ಭಾರತೀಯ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ಭೀಕರ ದಾಳಿ! 

January 26, 2026

ಬೆಂಗಳೂರಿನ ಹೃದಯಭಾಗದಲ್ಲೊಂದು ಅತ್ಯಾಕರ್ಷಕ ಹಾಗೂ ಸುಸಜ್ಜಿತ ಸಿನಿಮಾ ಮಲ್ಟಿಪ್ಲೆಕ್ಸ್ “AMB ಸಿನಿಮಾಸ್”(ಕಪಾಲಿ ಮಾಲ್)

January 22, 2026
Eshwar Khandre: ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಆಯ್ಕೆಯಾದ ಸಚಿವ ಈಶ್ವರ ಖಂಡ್ರೆ..!!

Eshwar Khandre: ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಆಯ್ಕೆಯಾದ ಸಚಿವ ಈಶ್ವರ ಖಂಡ್ರೆ..!!

January 21, 2026

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

January 20, 2026
Next Post
ರಾಜ್ಯ ರಾಜಕಾರಣಿಗಳ ಒಳ ಸಂಬಂಧ..! ಚುನಾವಣೆ ನೆಪಮಾತ್ರ..

ರಾಜ್ಯ ರಾಜಕಾರಣಿಗಳ ಒಳ ಸಂಬಂಧ..! ಚುನಾವಣೆ ನೆಪಮಾತ್ರ..

Please login to join discussion

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada