ಚುನಾವಣಾ ಪ್ರಕ್ರಿಯೆಯಲ್ಲಿ ಹೆಚ್ಚಿನ ಮತದಾರರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಭಾರತದ ಚುನಾವಣಾ ಆಯೋಗ (ಇಸಿ) ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರನ್ನು ʼರಾಷ್ಟ್ರೀಯ ಪ್ರತಿನಿಧಿ (ಸಂಕೇತ)ʼ ಎಂದು ಮಂಗಳವಾರ (ಆಗಸ್ಟ್ 22) ನೇಮಕ ಮಾಡಿದೆ.
ದೆಹಲಿಯಲ್ಲಿ ಈ ಸಂಬಂಧ ತೆಂಡೂಲ್ಕರ್ ಮತ್ತು ಚುನಾವಣಾ ಸಮಿತಿ ಮಂಗಳವಾರ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದ್ದಾರೆ. ಮೂರು ವರ್ಷಗಳ ಒಪ್ಪಂದ ಇದಾಗಿದ್ದು, ತೆಂಡೂಲ್ಕರ್ ಮತದಾರರಲ್ಲಿ ಜಾಗೃತಿ ಮೂಡಿಸಲಿದ್ದಾರೆ.
“ಸಚಿನ್ ತೆಂಡೂಲ್ಕರ್ ಅವರ ಜೊತೆಗಿನ ಸಹಯೋಗವು ಮುಂಬರುವ ಚುನಾವಣೆಗಳಲ್ಲಿ ವಿಶೇಷವಾಗಿ 2024 ರ ಸಾರ್ವತ್ರಿಕ ಚುನಾವಣೆಗಳಲ್ಲಿ (ಲೋಕಸಭೆಗೆ) ಮತದಾರರ ಭಾಗವಹಿಸುವಿಕೆಯನ್ನು ಉತ್ತೇಜಿಸಲಿದೆ” ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.
ಚುನಾವಣಾ ಆಯೋಗ ಕಳೆದ ವರ್ಷ ನಟ ಪಂಕಜ್ ತ್ರಿಪಾಠಿ ಅವರನ್ನು ರಾಷ್ಟ್ರೀಯ ಪ್ರತಿನಿಧಿ ಎಂದು ನೇಮಕ ಮಾಡಿತ್ತು. ಈ ಹಿಂದೆ, 2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ, ಎಂ.ಎಸ್ ಧೋನಿ, ಅಮೀರ್ ಖಾನ್ ಮತ್ತು ಮೇರಿ ಕೋಮ್ ಅವರಂತಹ ದಿಗ್ಗಜರನ್ನು ಚುನಾವಣಾ ಆಯೋಗದ ರಾಷ್ಟ್ರೀಯ ಪ್ರತಿನಿಧಿಗಳಾಗಿದ್ದರು.