• Home
  • About Us
  • ಕರ್ನಾಟಕ
Saturday, October 25, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಚುನಾವಣೆ ಮುಗಿದಾಯ್ತು.. ಸರ್ಕಾರ ಬಂದಾಯ್ತು.. ಈಗಲೂ ಅನುಮಾನ ಯಾಕೆ..?

Krishna Mani by Krishna Mani
June 17, 2024
in Uncategorized, ದೇಶ, ರಾಜಕೀಯ, ವಿದೇಶ, ವಿಶೇಷ
0
ಚುನಾವಣೆ ಮುಗಿದಾಯ್ತು.. ಸರ್ಕಾರ ಬಂದಾಯ್ತು.. ಈಗಲೂ ಅನುಮಾನ ಯಾಕೆ..?
Share on WhatsAppShare on FacebookShare on Telegram

ಭಾರತದಲ್ಲಿ ಲೋಕಸಭಾ ಚುನಾವಣೆ ಮುಕ್ತಾಯ ಆಗಿದೆ. ಸರ್ಕಾರ ರಚನೆಯೂ ಆಗಿದೆ. INDIA ಒಕ್ಕೂಟ ಭರ್ಜರಿಯಾಗಿ ಯಶಸ್ಸು ಸಾಧಿಸಿದೆ. ಆದರೂ NDA ಒಕ್ಕೂಟ ಸಣ್ಣ ಪ್ರಮಾಣದ ಮುನ್ನಡೆ ಪಡೆದುಕೊಂಡು ಸರ್ಕಾರ ರಚನೆ ಮಾಡುವಲ್ಲಿ ಯಶಸ್ವಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವಕ್ಕೆ ಸೋಲಾಗಿದ್ದರೂ ಒಕ್ಕೂಟದ ನಾಯಕನಾಗಿ ಆಯ್ಕೆಯಾಗಿ ಮೂರನೇ ಬಾರಿಗೆ ಪ್ರಧಾನಿ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಆದರೆ ಈ ಬಾರಿ ಕಾಂಗ್ರೆಸ್‌ ನೇತೃತ್ವದ INDIA ಒಕ್ಕೂಟ EVM ಮಷೀನ್‌ ಬಗ್ಗೆ ಹೆಚ್ಚು ಆರೋಪ ಮಾಡಿಲ್ಲ. NDA ಒಕ್ಕೂಟದ ಮುನ್ನಡೆಗೆ EVM ತಿರುಚಿದ್ದು ಕಾರಣ ಎಂದು ಹೇಳಿಲ್ಲ. ಆದರೆ ವಿದ್ಯುನ್ಮಾನ ಮತದಾನ ಪದ್ದತಿಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ADVERTISEMENT

ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಇವಿಎಂ ಹ್ಯಾಕ್‌‌ ಮಾಡ್ತಿದೆ ಅಂತ ಕಾಂಗ್ರೆಸ್‌‌ನವ್ರು ಮಾಡ್ತಿದ್ದ ಗಂಭೀರ ಆರೋಪಕ್ಕೆ ಜಗತ್ತಿನ ಅತ್ಯಂತ ಶ್ರೀಮಂತ ವ್ಯಕ್ತಿ ದನಿಗೂಡಿಸಿದ್ದಾರೆ. ಎಲಾನ್‌ ಮಸ್ಕ್‌‌ ಹೇಳಿಕೆ ಭಾರತದ ಚುನಾವಣಾ ವ್ಯವಸ್ಥೆ ಬಗ್ಗೆ ಮರು ಚರ್ಚೆ ಹುಟ್ಟುಹಾಕುವಂತೆ ಮಾಡಿದೆ. ಭಾರತದಲ್ಲಿ ಇವಿಎಂ ಕುರಿತಂತೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದ ವೇಳೆಯಲ್ಲಿ ಪೋರ್ಟೋ ರಿಕೋದಲ್ಲಿ ನಡೆದ ಚುನಾವಣಾ ಅಕ್ರಮ ಪ್ರಸ್ತಾಪಿಸಿ ಎಲಾನ್ ಮಸ್ಕ್‌ ಇವಿಎಂ ವಿರುದ್ಧ ದನಿ ಎತ್ತಿದ್ದಾರೆ. ಟೆಸ್ಲಾ ಮುಖ್ಯಸ್ಥ ಎಲಾನ್ ಮಸ್ಕ್ ಮಾಡಿರುವ ಈ ಒಂದು ಟ್ವೀಟ್‌​ನಿಂದ ಭಾರತೀಯ ರಾಜಕಾರಣಿಗಳ ಮಧ್ಯೆ ಬಿಸಿಬಿಸಿ ಚರ್ಚೆ ಶುರುವಾಗಿದೆ.

ಭಾರತದ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತ ಯಂತ್ರ ಬಳಕೆ ಮಾಡದಂತೆಯೂ ಎಲಾನ್ ಮಸ್ಕ್‌ ಸಲಹೆ ನೀಡಿದ್ದಾರೆ. ಇವಿಎಂಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ. ‘ನಾವು ವಿದ್ಯುನ್ಮಾನ ಮತ ಯಂತ್ರಗಳನ್ನು ನಿರ್ಮೂಲನೆ ಮಾಡಬೇಕಿದೆ. ಮಾನವರು ಅಥವಾ ಕೃತಕ ಬುದ್ದಿಮತ್ತೆ ತಂತ್ರಜ್ಞಾನವು ಇವಿಎಂಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇದೆ. ಸಣ್ಣ ಪ್ರಮಾಣದಲ್ಲಿ ಈ ಸಾಧ್ಯತೆ ಇದ್ದರೂ ಕೂಡಾ, ಚುನಾವಣಾ ಫಲಿತಾಂಶದಲ್ಲಿ ಅದು ದೊಡ್ಡ ಪರಿಣಾಮ ಬೀರಬಲ್ಲದು’ ಎಂದಿದ್ದಾರೆ. ಆದ್ರೆ ಎಲಾನ್ ಮಸ್ಕ್‌ ಸಲಹೆಗೆ ಕೇಂದ್ರದ ಮಾಜಿ ಸಚಿವ ರಾಜೀವ್ ಚಂದ್ರಶೇಖರ್ ತಿರುಗೇಟು ನೀಡಿದ್ದು, ಮಸ್ಕ್ ವಾದದಲ್ಲಿ ಸತ್ಯಾಂಶ ಇಲ್ಲ ಎಂದಿದ್ದಾರೆ

ಮಸ್ಕ್​ ಅವರ ಅಭಿಪ್ರಾಯವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಭಾರತದಲ್ಲಿ ಇವಿಎಂಗಳನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಹಾಗಾಗಿ ಅವು ಸುರಕ್ಷಿತವಾಗಿದೆ. ‘ಇವಿಎಂಗೆ ಬ್ಲೂ ಟೂತ್, ವೈಫೈ, ಇಂಟರ್‌ನೆಟ್ ಯಾವುದೇ ಸಂಪರ್ಕವಿಲ್ಲ. ನಿರ್ಮಾಣ ಹಂತದ ಪ್ರೋಗ್ರಾಮಿಂಗ್ ನಿಯಂತ್ರಣಗಳನ್ನು ಬದಲಿಸಲು ಸಾಧ್ಯವೇ ಇಲ್ಲ. ಭಾರತವು ಅತ್ಯಂತ ಸುರಕ್ಷಿತವಾದ ಇವಿಎಂ ಯಂತ್ರಗಳನ್ನ ನಿರ್ಮಿಸಿದೆ. ಒಂದು ವೇಳೆ ಎಲಾನ್ ಮಸ್ಕ್‌ಗೆ ಮಾಹಿತಿ ಬೇಕಿದ್ದರೆ ನಾವು ಅವರಿಗೆ ಪಾಠ ಮಾಡಲು ಸಂತಸಪಡುತ್ತೇವೆ’ ಎಂದಿದ್ದಾರೆ. ಆದರೆ ಎಲಾನ್ ಮಸ್ಕ್ ಮಾಡಿರುವ ಟ್ವೀಟ್​ಗೆ ರೀಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ನಮ್ಮ ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯ ಬಗ್ಗೆ ಗಂಭೀರವಾದ ಕಳವಳಗಳು ಉಂಟಾಗುತ್ತಿದೆ ಎಂದು ಮಸ್ಕ್ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದಾರೆ.

ಭಾರತದಲ್ಲಿ ಇವಿಎಂಗಳು ಕಪ್ಪು ಪೆಟ್ಟಿಗೆಯಾಗಿದೆ. ಅವುಗಳನ್ನು ಪರಿಶೀಲಿಸಲು ಯಾರಿಗೂ ಅವಕಾಶವಿಲ್ಲ. ನಮ್ಮ ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯ ಬಗ್ಗೆ ಗಂಭೀರವಾದ ಕಳವಳಗಳು ಉಂಟಾಗುತ್ತಿವೆ. ಸಂಸ್ಥೆಗಳು ಹೊಣೆಗಾರಿಕೆಯ ಕೊರತೆಯಿಂದ ಪ್ರಜಾಪ್ರಭುತ್ವವು ನೆಪವಾಗಿ ಪರಿಣಮಿಸುತ್ತದೆ ಎಂದಿದ್ದಾರೆ. ಎಲನ್ ಮಸ್ಕ್ ಮಾಡಿರೋ ಟ್ವೀಟ್​ಗೆ ಅಖಿಲೇಶ್ ಯಾದವ್ ಪ್ರತಿಕ್ರಿಯಿಸಿ ಬೆಂಬಲ ಸೂಚಿಸಿದ್ದಾರೆ. ಬಿಜೆಪಿಯವರ ಬೆಂಬಲಕ್ಕೆ ಕಾರಣವೇನು ಅಂತ ಅಖಿಲೇಶ್ ಯಾದವ್ ಎಕ್ಸ್ ಮೂಲಕ ಪ್ರಶ್ನೆ ಮಾಡಿದ್ದಾರೆ. ತಂತ್ರಜ್ಞಾನ ಎಂದರೆ ಸಮಸ್ಯೆಗಳನ್ನು ಪರಿಹರಿಸುವುದು. ಅದು ಸಮಸ್ಯೆಗಳಿಗೆ ಕಾರಣವಾದರೆ ಅದರ ಬಳಕೆಯನ್ನು ನಿಲ್ಲಿಸಬೇಕು. ಇಂದು ಜಗತ್ತಿನ ಹಲವು ಚುನಾವಣೆಗಳಲ್ಲಿ ಇವಿಎಂ ಟ್ಯಾಂಪರಿಂಗ್ ಆಗುವ ಆತಂಕ ವ್ಯಕ್ತವಾಗುತ್ತಿದ್ದು, ಇವಿಎಂ ಟ್ಯಾಂಪರಿಂಗ್ ಅಪಾಯದ ಬಗ್ಗೆ ವಿಶ್ವದ ಖ್ಯಾತ ತಂತ್ರಜ್ಞಾನ ತಜ್ಞರು ಬಹಿರಂಗವಾಗಿಯೇ ಬರೆಯುತ್ತಿರುವಾಗ ಇವಿಎಂ ಬಳಸಲೇಬೇಕೆಂಬ ಆಗ್ರಹಕ್ಕೆ ಕಾರಣವೇನು ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಬೇಕು. ಭವಿಷ್ಯದ ಎಲ್ಲಾ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ಬಳಸಿ ನಡೆಸಬೇಕೆಂಬ ನಮ್ಮ ಬೇಡಿಕೆಯನ್ನು ನಾವು ಪುನರುಚ್ಚರಿಸುತ್ತೇವೆ ಎಂದಿದ್ದಾರೆ.

We should eliminate electronic voting machines. The risk of being hacked by humans or AI, while small, is still too high. https://t.co/PHzJsoXpLh

— Elon Musk (@elonmusk) June 15, 2024

ಭಾರತದಲ್ಲಿ ಚುನಾವಣೆ ವಿಚಾರ ತಣ್ಣಗಾಗಿದೆ. ಆದರೆ ಇವಿಎಂ ಹ್ಯಾಕಿಂಗ್‌‌ ಅನ್ನೋದು ಪ್ರಜಾಪ್ರಭುತ್ವಕ್ಕೆ ಮಾರಕ ಅನ್ನೋದು ಎಲ್ಲರೂ ಒಪ್ಪಲೇಬೇಕಾದ ಸಂಗತಿ. ಬ್ಯಾಲೆಟ್‌ ಪೇಪರ್‌ ಬಳಕೆಯಿಂದ ಕೆಲಸಗಳು ಸ್ವಲ್ಪ ದುಬಾರಿ ಆಗುತ್ತಿತ್ತು ಅನ್ನೋದನ್ನು ಬಿಟ್ಟರೆ ಬೇರೆ ಯಾವುದೇ ಸಮಸ್ಯೆ ಆಗುತ್ತಿರಲಿಲ್ಲ. ಸಮಾಜಕ್ಕೆ ಬ್ಯಾಲೆಟ್‌ ಪೇಪರ್‌ ಉತ್ತಮ ಅನ್ನೋ ಮಾತುಗಳು ಕೇಳಿ ಬರುತ್ತಿವೆ. ಜಗತ್ತಿನ ದೊಡ್ಡಣ್ಣ ಎನಿಸಿಕೊಂಡಿರುವ ಅಮೆರಿಕ ಕೂಡ ಬ್ಯಾಲೆಟ್‌ ಪೇಪರ್‌ನಲ್ಲೇ ಮತದಾನ ಮಾಡುತ್ತೆ ಅನ್ನೋದು ಗಮನಿಸಬೇಕಾದ ಸಂಗತಿ.

ಕೃಷ್ಣಮಣಿ

Tags: BJPCongress PartyElectionLokasabaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮದುವೆ ಮಾಡಿಕೊಳ್ಳುವುದಕ್ಕಾಗಿ ಅಪ್ರಾಪ್ತೆಯನ್ನೇ ಖರೀದಿಸಿದ್ದ 72ರ ವೃದ್ಧ

Next Post

ಪೋಕ್ಸೊ ಕೇಸ್ ನಲ್ಲಿ ಇಂದು ವಿಚಾರಣೆಗೆ ಹಾಜರಾಗಲಿದ್ದಾರೆ ಬಿ ಎಸ್ ಯಡಿಯೂರಪ್ಪ ! 

Related Posts

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 24, 2025
0

ಬೆಂಗಳೂರು ನಗರ ಜಿಲ್ಲೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿ ಆಸ್ತಿಗಳ ಬಿ ಖಾತೆ ಎ ಖಾತಾಗೆ ಪರಿವರ್ತನೆ ತಯಾರಿ ಬೆಂಗಳೂರು, ಅ.24: "ಭವಿಷ್ಯದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ)...

Read moreDetails
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

October 24, 2025
Next Post
ಬಂಡಾಯವೆದ್ದಿರುವ ದಾವಣಗೆರೆ ಕ್ಷೇತ್ರಕ್ಕೆ ಇಂದು ಬಿ‌.ಎಸ್. ಯಡಿಯೂರಪ್ಪ ಭೇಟಿ.

ಪೋಕ್ಸೊ ಕೇಸ್ ನಲ್ಲಿ ಇಂದು ವಿಚಾರಣೆಗೆ ಹಾಜರಾಗಲಿದ್ದಾರೆ ಬಿ ಎಸ್ ಯಡಿಯೂರಪ್ಪ ! 

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ
Top Story

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

by ಪ್ರತಿಧ್ವನಿ
October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

by ಪ್ರತಿಧ್ವನಿ
October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada