• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಮೈಸೂರು ದಸರಾ | ಗಜಪಯಣಕ್ಕೆ ವಿದ್ಯುಕ್ತ ಚಾಲನೆ ; ಈ ಬಾರಿಯೂ ಅಂಬಾರಿ ಹೊರಲಿದ್ದಾನೆ ಅಭಿಮನ್ಯು

ಪ್ರತಿಧ್ವನಿ by ಪ್ರತಿಧ್ವನಿ
September 1, 2023
in ಇದೀಗ, ಕರ್ನಾಟಕ
0
ಮೈಸೂರು ದಸರಾ

ಮೈಸೂರು ದಸರಾ ಗಜಪಯಣಕ್ಕೆ ಸಚಿವರಾದ ಈಶ್ವರ ಖಂಡ್ರೆ, ಎಚ್.ಸಿ.ಮಹದೇವಪ್ಪ ಚಾಲನೆ

Share on WhatsAppShare on FacebookShare on Telegram

ಮೈಸೂರು ದಸರಾ ಗಜಪಯಣಕ್ಕೆ ಶುಕ್ರವಾರ (ಸೆಪ್ಟೆಂಬರ್ 1) ವಿದ್ಯುಕ್ತವಾಗಿ ಚಾಲನೆ ದೊರೆತಿದ್ದು ಐತಿಹಾಸಿಕ ದಸರಾ ಉತ್ಸವಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ.

ADVERTISEMENT

ಈ ಬಾರಿಯೂ ಅಭಿಮನ್ಯು ಆನೆಯೇ ಅಂಬಾರಿ ಹೊರುತ್ತೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಪ್ರಕಟಿಸಿದರು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಹುಣಸೂರು ತಾಲ್ಲೂಕಿನ ವೀರನಹೊಸಳ್ಳಿ ಗಜಪಯಣಕ್ಕೆ ಚಾಲನೆ ನೀಡಲಾಯಿತು. ಅಕ್ಟೋಬರ್ 15 ರಿಂದ ಅಕ್ಟೋಬರ್ 24 ರವರೆಗೆ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ನಡೆಯಲಿದೆ.

ಬೆಳಿಗ್ಗೆ 9.45 ರಿಂದ 10.15ರ ತುಲಾ ಲಗ್ನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಸಚಿವ ಎಚ್.ಸಿ ಮಹದೇವಪ್ಪ ಚಾಲನೆ ನೀಡಿದರು. ಮೊದಲ ಹಂತದಲ್ಲಿ 9 ಆನೆಗಳು ಆಗಮಿಸಲಿದ್ದು, ಕಬ್ಬು, ಬೆಲ್ಲ, ಫಲತಾಂಬೂಲ ಪೂಜಾ ಸಾಮಗ್ರಿಗಳ ಮೂಲಕ ಪೂಜೆ ಸಲ್ಲಿಕೆ ಮಾಡಲಾಯಿತು.

ನಾಗರಹೊಳೆ ಮತ್ತಿಗೋಡು ಆನೆ ಶಿಬಿರದಿಂದ ಅಭಿಮನ್ಯು, ಭೀಮ, ಮಹೇಂದ್ರ ಆಗಮಿಸುತ್ತಿದ್ದರೆ, ನಾಗರಹೊಳೆಯ ಬಳ್ಳೆ ಆನೆ ಶಿಬಿರದಿಂದ ಅರ್ಜುನ ಹಾಗೂ ದುಬಾರೆ ಆನೆ ಶಿಬಿರದಿಂದ ಧನಂಜಯ, ಗೋಪಿ, ವಿಜಯ ಆನೆಯನ್ನು ಅಂತಿಮಗೊಳಿಸಲಾಗಿದೆ. ಇನ್ನು ಬಂಡೀಪುರದ ರಾಮಪುರ ಶಿಬಿರದಿಂದ ಪಾರ್ಥ ಸಾರಥಿ, ಭೀಮನಕಟ್ಟೆ ಆನೆ ಶಿಬಿರದಿಂದ ವರಲಕ್ಷಿ ಆನೆ ಮೊದಲ ಹಂತದಲ್ಲಿ ಆಗಮಿಸಲಿವೆ.

ಮೈಸೂರು ದಸರಾ ಗಜಪಯಣಕ್ಕೆ ಚಾಲನೆ ದೊರೆತ ಬಳಿಕ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ಕಾಡಿನಿಂದ ನಾಡಿಗೆ ಆನೆಗಳು ತೆರಳುತ್ತವೆ. ಕಂಜನ್ ಈ ಬಾರಿ ದಸಾರಗೆ ಹೊಸ ಆನೆ ಸೇರ್ಪಡೆಯಾಗಿದೆ. ಒಂದುವರೆ ತಿಂಗಳು ದಸರಾ ಗಜಪಡೆಗಳು ತಾಲೀಮಿನಲ್ಲಿ ಭಾಗಿಯಾಗುತ್ತದೆ. ನಿಶಾನೆ ಆನೆಯನ್ನ ಇನ್ನೂ ನಿರ್ಧಾರ ಮಾಡಿಲ್ಲ. ನಾಡ ಅದಿದೇವತೆ ಚಾಮುಂಡಿ ತಾಯಿಯ ಆಶೀರ್ವಾದ ಎಲ್ಲರ ಮೇಲೆ ಇರಲಿ. ಈ ಬಾರಿಯೂ ಅಭಿಮನ್ಯು ಆನೆಯೇ ಅಂಬಾರಿ ಹೊರುತ್ತೆ ಎಂದರು.

ಚಾಲನೆ ನೀಡಿ ಮಾತನಾಡಿದ ಸಚಿವ ಎಚ್.ಸಿ ಮಹದೇವಪ್ಪ, ಈ ಬಾರಿ ವಿಜೃಂಭಣೆ ,ಅದ್ಧೂರಿಯಾಗಿ ಮೈಸೂರು ದಸರಾ ಆಚರಣೆ ಮಾಡುತ್ತೇವೆ. ಇದಕ್ಕಾಗಿ 30 ಕೋಟಿ ರೂ. ಅನುದಾನ ಕೇಳಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ಗಜಪಯಣಕ್ಕೆ ವಿದ್ಯುಕ್ತ ಚಾಲನೆ ಕೊಟ್ಟಿದ್ದೇವೆ. ಭಾರತದ ಸಂವಿಧಾನ ಎಲ್ಲಾ ಪ್ರಜೆಗಳಿಗೆ ಧಾರ್ಮಿಕ ಆಚರಣೆಗೆ ಅವಕಾಶ ಕೊಟ್ಟಿದೆ. ನಾಡದೇವತೆ ಚಾಮುಂಡೇಶ್ವರಿಯಲ್ಲಿ ನಂಬಿಕೆ ಇರುವ ರಾಜ್ಯ ನಮ್ಮದು. 9 ಆನೆಗಳನ್ನು ಸಂಪ್ರಾದಯಕವಾಗಿ ಸ್ವಾಗತ ಮಾಡಿದ್ದೇವೆ. 2004 ರಲ್ಲಿ ಆನೆಗಳು ನಡೆದು ಬರುತ್ತಿದ್ದವು. ಆನೆಗಳ ಹಿತದೃಷ್ಟಿಯಿಂದ ಲಾರಿಯಲ್ಲಿ ಆನೆಗಳನ್ನು ಕರೆ ತರಲಾಗುತ್ತದೆ. ಈಗ 9 ಆನೆಗಳು ಇದರ ಜೊತೆಗೆ ಇನ್ನೂ 5 ಆನೆಗಳು ಬಂದು ಸೇರುತ್ತದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಮಟ್ಟದ ಸಭೆ ಮಾಡಿದ್ದೆವು. ಸಿಎಂ ಸಿದ್ದರಾಮಯ್ಯ ಅದ್ದೂರಿ ದಸರಾ ಮಾಡಲು ಹೇಳಿದ್ದಾರೆ. ಮುಂದೆ ಕಾರ್ಯಕಾರಿ ಸಮಿತಿ ರಚನೆ ಮಾಡುತ್ತೇವೆ. ದೇಶದ ಚಾರಿತ್ರಿಕ ಹಿನ್ನೆಲೆ ಇರುವ ವಿಜಯ ನಗರ ಸಾಮ್ರಾಜ್ಯ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತ, ಸಂವಿಧಾನ ಆಶಯ, ಸ್ವಾತಂತ್ರ್ಯದ ಉದ್ದೇಶ ಜೊತೆಗೂಡಿ ದಸರಾ ಆಚರಣೆ ಮಾಡುತ್ತೇವೆ. ದೇಶ ವಿದೇಶಗಳಿಂದ ದಸರೆಗೆ ಜನ ಬರ್ತಾರೆ. ಆದ್ದರಿಂದ ಈ ಬಾರಿ ಅದ್ದೂರಿ ದಸರಾ ಆಚರಣೆ ಮಾಡುತ್ತೇವೆ. ಎಲ್ಲಾ ಆನೆಗಳಿಗೂ ಸ್ವಾಗತ ಎಂದು ಸಚಿವ ಮಹದೇವಪ್ಪ ಹೇಳಿದರು.

ಆನೆ ದಾಳಿಗೆ ಶಾರ್ಪ್ ಶೂಟರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಈಶ್ವರ್ ಖಂಡ್ರೆ, ಪ್ರಕರಣದ ತನಿಖೆಗೆ ಆದೇಶ ನೀಡಿದ್ದೇನೆ. ಬಹಳ ದೊಡ್ಡ ದುರಂತ ಆಗಿದೆ. ಅರಣ್ಯ ಇಲಾಖೆಗೆ ದೊಡ್ಡ ಹಾನಿಯಾಗಿದೆ. ಸರ್ಕಾರದ ವತಿಯಿಂದ ಕುಟುಂಬಕ್ಕೆ ಪರಿಹಾರ ನೀಡಲಾಗುವುದು. ಸರ್ಕಾರ ಕುಟುಂಬಸ್ಥರ ಪರವಾಗಿ ನಿಲ್ಲುತ್ತದೆ ಎಂದು ತಿಳಿಸಿದರು.

Tags: AbhimanyuElephant MarchEshwar KhandreHC mahadevappaMysuru Dasaraಈಶ್ವರ ಖಂಡ್ರೆಎಚ್‌.ಸಿ ಮಹಾದೇವಪ್ಪಗಜಪಯಣಮೈಸೂರು ದಸರಾ
Previous Post

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರದಲ್ಲಿ ಇಳಿಕೆ | 158 ರೂ. ಕಡಿತಗೊಳಿಸಿದ ಕೇಂದ್ರ

Next Post

ಕಾವೇರಿ ವಿವಾದ | ತಮಿಳುನಾಡು ಅರ್ಜಿ ವಿಚಾರಣೆ 6ಕ್ಕೆ ಮುಂದೂಡಿಕೆ

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
Next Post
ಕಾವೇರಿ ವಿವಾದ

ಕಾವೇರಿ ವಿವಾದ | ತಮಿಳುನಾಡು ಅರ್ಜಿ ವಿಚಾರಣೆ 6ಕ್ಕೆ ಮುಂದೂಡಿಕೆ

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada